Breaking News

ವಿಷಾ ಸೇವಿಸಿ ರೈತ ಆತ್ಮಹತ್ಯೆ……..

: ವಡಗೇರಾ ತಾಲೂಕಿನ ಅನಕಸೂಗೂರು ಗ್ರಾಮದ ದೇವಪ್ಪ .ತಂಆಜಪ್ಪ ದೇವದುರ್ಗ ಕ್ರೀಮಿನಾಷಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತನ ಭಾವಚಿತ್ರ ವಡಗೇರಾ : ಸಾಲ ಬಾಧೆ ತಾಳಲಾರದೆ ವಿಷ ಕ್ರಿಮಿನಾಶಕ )ಸೇವಿಸಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ತಾಲೂಕಿನ ಅನಕಸೂಗೂರು ಗ್ರಾಮದಲ್ಲಿ ನಡೆದಿದೆ ಇದೇ ಗ್ರಾಮದ ದೇವಪ್ಪ ದೇವದುರ್ಗ ವ.(50) ಎಂಬುವರೇ ಆತ್ಮಹತ್ಯೆ ಮಾಡಿಕೊಂಡಿರುವ ರೈತ ಅನಕಸೂಗೂರು ಗ್ರಾಮದ ಸರ್ವೆ ನಂ 50ರಲ್ಲಿ ನಾಲ್ಕು …

Read More »

ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬನ ಕಿತಾಪತಿ

ಮೈಸೂರು: ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬ ಕಿತಾಪತಿ ಮಾಡಿರುವ ಘಟನೆ ಮೈಸೂರಿನ ಹೆಬ್ಬಾಳ ಬಡಾವಣೆಯಲ್ಲಿ ನಡೆದಿದೆ. ಕೊರೊನಾ ತಪಾಸಣೆಗೆ ಬಂದ ವ್ಯಕ್ತಿಯೋರ್ವ ಪರೀಕ್ಷೆ ವೇಳೆ ತನ್ನ ನಂಬರ್ ಬದಲಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಅವರ ನಂಬರ್ ಅನ್ನು ಜಿಲ್ಲಾಡಳಿತಕ್ಕೆ ಕೊಟ್ಟು ಯಾಮಾರಿಸಿದ್ದಾನೆ. ಇದಾದ ಬಳಿಕ ಆ ವ್ಯಕ್ತಿಯ ಕೊರೊನಾ ವರದಿ ಬಂದಿದ್ದು, ಆತನಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕೊರೊನಾ ದೃಢಪಟ್ಟ ವ್ಯಕ್ತಿ ನೀಡಿದ ನಂಬರ್ …

Read More »

ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸ:ನಿಡಸೋಸಿ ಗ್ರಾಮದಶಿವಲಿಂಗೇಶ್ವರ ಸ್ವಾಮೀಜಿ

ಚಿಕ್ಕೋಡಿ(ಬೆಳಗಾವಿ): ಮಳೆಗಾಲ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಸಿಗದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿರುತ್ತೆ. ಇಂಥ ಸಂದರ್ಭದಲ್ಲಿ ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸವನ್ನ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾಡುತ್ತಿದ್ದಾರೆ. ದಿನನಿತ್ಯ ಬೆಳಗ್ಗೆ ಹಾಗೂ ಸಂಜೆ ಶ್ರೀಗಳು ಬಂದರೆ ಅವರ ಸುತ್ತ ನೂರಾರು ಪಾರಿವಾಳಗಳು ಜಮಾವಣೆಗೊಳ್ಳುತ್ತವೆ. ಆ ಪಾರಿವಾಳಗಳಿಗೆ ಸ್ವಾಮಿಜಿ ಜೋಳ ಹಾಗೂ ಅಕ್ಕಿ ಕಾಳುಗಳನ್ನ ಹಾಕುತ್ತಿದ್ದಾರೆ. …

Read More »

ಇದು ಮದುವೆಯ ಸಮಯ’ – ಪ್ರೇಯಸಿ ಮಿಹೀಕಾ ಬಗ್ಗೆ ರಾಣಾ ಮೆಚ್ಚುಗೆಯ ಮಾತು

ಹೈದರಾಬಾದ್: ಬಾಹುಬಲಿ ಖ್ಯಾತಿಯ ರಾಜ ಬಲ್ಲಾಳದೇವ ರಾಣಾ ದಗ್ಗುಬಾಟಿಯವರು ಮುಂದಿನ ತಿಂಗಳು ತಮ್ಮ ಪ್ರೇಯಸಿ ಮಿಹೀಕಾ ಬಜಾಜ್ ಅವರ ಜೊತೆ ಮದುವೆಯಾಗಲಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ತಾನು ಪ್ರೀತಿ ಬಲೆಯಲ್ಲಿ ಸಿಲುಕಿದ್ದೇನೆ ಎಂದು ಟ್ವೀಟ್ ಮಾಡಿದ್ದ ರಾಣಾ, ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗುವುದಾಗಿ ತಿಳಿಸಿದ್ದರು. ಅದರಂತೆ ಲಾಕ್‍ಡೌನ್ ನಡುವೆ ಆಗಸ್ಟ್ 8ರಂದು ರಾಣಾ ಮತ್ತು ಮಿಹೀಕಾ ಅವರ ಮದುವೆಯನ್ನು ಕುಟುಂಬದವರು ಫಿಕ್ಸ್ ಮಾಡಿದ್ದರು. ಆದರೆ ಈ ಕೊರೊನಾ ಆರ್ಭಟದ ನಡುವೆಯೂ …

Read More »

ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ

ಹುಕ್ಕೇರಿ:  ತಾಲ್ಲೂಕಿನ ಬಸಾಪೂರ ಆರೋಗ್ಯ ಕೇಂದ್ರದಲ್ಲಿ  ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ ಮಾಡಲಾಯಿತು. ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಹಗಲಿರುಳ ಶ್ರಮ ಪಡುತ್ತಿರುವ  ಅಂಗನವಾಡಿ ಆಶಾ  ಕಾರ್ಯಕರ್ತರು, ಆರೋಗ್ಯ ಇಲಾಖೆ ಅಧಿಕಾರಿಗಳು , ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು  ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ ಪಾಟೀಲ ಹೇಳಿದರು. ಈ ಸಂದರ್ಭದಲ್ಲಿ ಕರಗುಪ್ಪಿ ಬಸಾಪೂರ ತಾಲ್ಲೂಕು ಪಂಚಾಯಿತಿ ಸದಸ್ಯ  ಸೋಮನಗೌಡ ಪಾಟೀಲ …

Read More »

ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.

ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ  ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು. ಜನರು ವೈಜ್ಞಾನಿಕವಾಗಿ ಯೋಚಿಸುವ ಮಟ್ಟದಲ್ಲಿದ್ದಾರೆ. ಮೂಲತಃ ಮಾಂಸಾಹಾರಿಯಾದ ಹಾವಿನ ಆಹಾರ ಹಾಲಲ್ಲ ಎಂಬ ಜಾಗೃತಿ ಮೂಡುತ್ತಿದೆ. ಹುತ್ತಕ್ಕೆ ಹಾಲೆರೆಯುವ ಬದಲು ಅದೇ ಹಾಲನ್ನು ಅಪೌಷ್ಟಿಕತೆಯಿಂದ ನರಳುವ ಮಕ್ಕಳು, ಅನಾಥರು ಹಾಗೂ ಬಡ ಜನರಿಗೆ ಹಂಚಿದರೆ ಪಂಚಮಿಗೆ ಅರ್ಥ ಬರುತ್ತದೆ ಮಾನವ ಬಂಧುತ್ವ ವೇದಿಕೆಯ ಸಂಚಾಲಕ …

Read More »

ನಜ್ಜುಗುಜ್ಜಾದ ಕಾರಿನಲ್ಲಿ ಆಟವಾಡುತ್ತಿದ್ದ ಬಾಲಕಿಯರಿಬ್ಬರು ಉಸಿರುಗಟ್ಟಿ ಸಾವು

ಚೆನ್ನೈ: ಮಕ್ಕಳನ್ನು ಕಾರಿನೊಳಗೆ ಬಿಟ್ಟು ತಂದೆ-ತಾಯಿ ಶಾಪಿಂಗ್ ಹೋಗಿ ಬರುವಾಗ ಉಸಿರುಗಟ್ಟಿ ಸಾವನ್ನಪ್ಪಿದ್ದನ್ನು ಕೇಳಿದ್ದೇವೆ. ಆದರೆ ಇಲ್ಲಿ ಮಕ್ಕಳೇ ನಜ್ಜುಗುಜ್ಜಾದ ಕಾರಿನ ಒಳಗಡೆ ಹೋಗಿ ಆಟವಾಡುತ್ತಿರುವಾಗ ಉಸಿರುಗಟ್ಟಿ ಮೃತಪಟ್ಟ ದುರಂತ ಘಟನೆಯೊಂದು ನಡೆದಿದೆ. ಹೌದು. ಈ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ದುರ್ದೈವಿ ಮಕ್ಕಳನ್ನು ರಾಜೇಶ್ವರಿ(4) ಹಾಗೂ ವನಿತಾ (7) ಎಂದು ಗುರುತಿಸಲಾಗಿದ್ದು, ಇಬ್ಬರೂ ಕಲದೀಪಮಂಗಲಂ ನಿವಾಸಿಗಳಾಗಿದ್ದಾರೆ. ಮೃತ ಮಕ್ಕಳಿಬ್ಬರು ಸ್ನೇಹಿತರಾಗಿದ್ದು, ಇವರ ತಂದೆ …

Read More »

ಮಗಳ ಪ್ರಿಯಕರನನ್ನ 17 ಬಾರಿ ಇರಿದು ಕೊಲೆ ಮಾಡಿದ್ದ ತಂದೆ.

ಚಿಕ್ಕಬಳ್ಳಾಪುರ: ಮಗಳ ಪ್ರಿಯಕರನನ್ನ 17 ಬಾರಿ ಇರಿದು ಕೊಲೆ ಮಾಡಿದ್ದ ತಂದೆ. ರೊಚ್ಚಿಗೆದ್ದ ಮೃತ ಯುವಕನ ಸಂಬಂಧಿಕರು ಆರೋಪಿಯ ಮನೆಯನ್ನ ಧ್ವಂಸ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಯಗವಮದ್ದಲಖಾನೆ ಗ್ರಾಮದಲ್ಲಿ ನಡೆದಿದೆ. ಹರೀಶ್ (25) ಕೊಲೆಯಾದ ಯುವಕ. ಈತನ ಪ್ರೇಯಸಿಯ ತಂದೆ ವೆಂಕಟೇಶ್ ಹಾಗೂ ಚಿಕ್ಕಪ್ಪ ಸೇರಿಕೊಂಡು ಶುಕ್ರವಾರ ತಡರಾತ್ರಿ 17 ಬಾರಿ ಇರಿದು ಕೊಲೆ ಮಾಡಿದ್ದರು. ಈಗಾಗಲೇ ಆರೋಪಿಗಳನ್ನು ಬಾಗೇಪಲ್ಲಿ ಪೊಲೀಸರು …

Read More »

ರಾಮಮಂದಿರ ಶಿಲಾನ್ಯಾಸಕ್ಕೆ ಭರ್ಜರಿ ಸಿದ್ಧತೆ………

ಲಕ್ನೋ: ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಿನಾಂಕ ನಿಗದಿಯಾಗಿದ್ದು, ಭರ್ಜರಿ ಸಿದ್ಧತೆಗಳು ಆರಂಭವಾಗಿದೆ. ಲಾಕ್‍ಡೌನ್ ನಡುವೆ ಐತಿಹಾಸಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಸಲಹೆಗಳನ್ನು ನೀಡಿದರು. ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದ ಸಿದ್ಧತೆಯ ನೇತೃತ್ವ ವಹಿಸಿಕೊಂಡಿದೆ. ಅಗಸ್ಟ್ ಐದರಂದು ಬೆಳಗ್ಗೆ 10:30 ರಿಂದ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ …

Read More »

ಸಂಡೆ ಲಾಕ್‍ಡೌನ್ ಹಿನ್ನೆಲೆ ಗ್ರಾಮಗಳತ್ತ ಹೊರಟ ಬೆಂಗ್ಳೂರಿಗರು……..

ಬೆಂಗಳೂರು: ಸಂಡೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದಿನಿಂದಲೇ ಜನರು ತಮ್ಮ ತಮ್ಮ ಸ್ವ ಗ್ರಾಮಗಳತ್ತ ಹೋಗುತ್ತಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಸಂಡೆ ಲಾಕ್‍ಡೌನ್ ಜಾರಿಯಾಗಲಿದೆ. ಹೀಗಾಗಿ ಬೆಂಗಳೂರಿಗರು ತುಮಕೂರು ರಸ್ತೆ ನವಯುಗ ಟೋಲ್ ಮುಖಾಂತರ ಜನರು ತಮ್ಮ ತಮ್ಮ ಗ್ರಾಮಗಳತ್ತ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ನವಯುಗ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದೆ.ಕಳೆದ ಲಾಕ್‍ಡೌನ್ ವೇಳೆಯಲ್ಲೂ ಬೆಂಗಳೂರು ಬಿಟ್ಟು ಸಾವಿರಾರು ಜನರು ಹೋಗುತ್ತಿದ್ದರು. ಇಂದು ಕೂಡ ಕಾರು, ಬೈಕ್‍ಗಳ ಮೂಲಕ …

Read More »