Breaking News

ರಾಜ್ಯಾದ್ಯಂತ ಭಾನುವಾರ ಕರ್ಫ್ಯೂ – ಏನಿರುತ್ತೆ? ಏನಿರಲ್ಲ?

ಬೆಂಗಳೂರು: ಸರ್ಕಾರ ಮೇ 31 ರವರೆಗೆ ಪ್ರತೀ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್‍ಡೌನ್‍ಗೆ ಆದೇಶ ನೀಡಿದೆ. 4.0 ವಿನಾಯಿತಿ ಲಾಕ್‍ಡೌನ್‍ನ ನಡುವೆ ಮೊದಲ ಭಾನುವಾರ ಬಂದಿದ್ದು, ಇಂದು ಸಂಜೆಯಿಂದಲೇ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜನರು ಮನೆಯಿಂದ ಹೊರಗೆ ಬಾರದಂತೆ ತಡೆಯಲು ಪೊಲೀಸ್ ಇಲಾಖೆ ನಿಯಮಗಳನ್ನು ರೂಪಿಸಿಕೊಂಡಿದೆ. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಸಂಪೂರ್ಣ ಲಾಕ್‍ಡೌನ್ ಇರಲಿದೆ. ಹಾಗಾದರೆ ಭಾನುವಾರ ರಾಜ್ಯದಲ್ಲಿ …

Read More »

ಚಿಕನ್ ಊಟ ಕೊಟ್ಟಿಲ್ಲವೆಂದು ಆಶಾಕಾರ್ಯಕರ್ತೆಯ ಕೈ ಮುರಿದ ಭೂಪ!

ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿಯೊಬ್ಬ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ರೇಣುಕಾ ಕುಡಕಿ ಗಾಯಗೊಂಡ ಆಶಾ ಕಾರ್ಯಕರ್ತೆಯಾಗಿದ್ದು ಇವರ ಮೇಲೆ ಸೋಮನಾಥ್ ಕಾಂಬಳೆ ಹಲ್ಲೆ ಮಾಡಿದ್ದಾನೆ. ಚಿಕನ್ ಊಟ ಕೊಡದಿದ್ದಕ್ಕೆ ಸಿಟ್ಟಿಗೆದ್ದ ಸೋಮನಾಥ್, ಆಶಾ ಕಾರ್ಯಕರ್ತೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಪರಿಣಾಮ ರೇಣುಕಾ ಅವರ ಕೈ ಮುರಿದು ಆಳಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. …

Read More »

ಕ್ವಾರಂಟೈನ್‍ಗೆ ಹೆದರಿ ವಿಷ ಸೇವಿಸಿದ್ದ ವ್ಯಕ್ತಿ ಸಾವು

ಬಾಗಲಕೋಟೆ: ಕ್ವಾರಂಟೈನ್‍ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ತುಕಾರಾಮ ಪವಾರ್ (40) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಯಾದಗಿರಿ ಜಿಲ್ಲೆ ಜುಮಲಾಪುರ ತಾಂಡಾದವರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಮೆ 16 ರಂದು ತುಕರಾಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇ15 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ತುಕರಾಮ ಊರಿಗೆ ಬಂದಿದ್ದರು. ಮೇ 16ರ ಬೆಳಗ್ಗೆ ವಿಷಯ ತಿಳಿದು ಆಶಾ ಕಾರ್ಯಕರ್ತೆಯರು, ಪಂಚಾಯ್ತಿಯವರು …

Read More »

ಧಾರವಾಡದಲ್ಲಿ ಇಂದು ಭಾರೀ ಗಾಳಿ ಹಾಗೂ ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಸಿದೆ.

ಧಾರವಾಡ: ಧಾರವಾಡದಲ್ಲಿ ಇಂದು ಭಾರೀ ಗಾಳಿ ಹಾಗೂ ಮಳೆಯಾಗಿದ್ದು, ಹಲವು ಅವಾಂತರ ಸೃಷ್ಟಿಸಿದೆ. ವರುಣನ ಅಬ್ಬರಕ್ಕೆ ನಗರದ ವಿವಿಧೆಡೆ ಮರಗಳು ಧರೆಗುರುಳಿದ್ದು, ಮರಗಳಡಿ ವಾಹನಗಳು ಸಿಲುಕಿ ಜಖಂ ಆಗಿವೆ. ನಗರದ ಸೈದಾಪುರ ಗೌಡರ ಓಣಿಯಲ್ಲಿ ಮನೆ ಮೇಲೆ ಮರ ಬಿದ್ದಿದ್ದು, ಸಿಬಿಟಿ ಬಳಿಯ ಅಂಜುಮನ್ ಕಾಂಪ್ಲೆಕ್ಸ್ ಎದುರು ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ರಸ್ತೆ ಸಂಚಾರಕ್ಕೆ ಅಡೆತಡೆಯಾಯಿತು. ನಗರದ ಟೊಲ್ ನಾಕಾ ರಸ್ತೆ ಮಳೆಯಿಂದ ಹಳ್ಳದಂತಾಗಿತ್ತು. ತುಂಬಿ ಹರಿಯುತ್ತಿರುವ ನೀರಿನಲ್ಲಿ …

Read More »

ದಕ್ಷಿಣ ಕನ್ನಡ, ಉಡುಪಿಯಲ್ಲಿ ರವಿವಾರ ರಂಜಾನ್ ಹಬ್ಬ……….

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ರಂಜಾನ್ ಆಚರಿಸುವಂತೆ ಖಾಝಿಗಳು ಕರೆ ನೀಡಿದ್ದಾರೆ. ಮಂಗಳೂರಿನ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿಯ ಖಾಝಿ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ತಮ್ಮ ಜಿಲ್ಲೆಯ ಜನತೆಗೆ ಭಾನುವಾರ ಆಚರಿಸುವಂತೆ ಹೇಳಿದ್ದಾರೆ. ಇಂದು ರಾತ್ರಿ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ. ಸಾಂದರ್ಭಿಕ ಚಿತ್ರ ಭಾನುವಾರವೇ ಈದುಲ್ ಫಿತ್ರ ಆಚರಿಸುವ ಸಾಧ್ಯತೆಗಳು ಹೆಚ್ಚಿದ್ದು, ಆದ್ರೆ ಸರ್ಕಾರ ಪ್ರತಿ ರವಿವಾರ ಸಂಪೂರ್ಣ ಲಾಕ್‍ಡೌನ್ …

Read More »

ಕೋಲಾರದ ಚಿನ್ನದ ಕಳ್ಳನಿಗೂ ಕೊರೊನಾ- ಬಂಧಿಸಿದ ಪೊಲೀಸರಿಗೂ ಸೋಂಕಿನ ಭೀತಿ…..

ಕೋಲಾರ: ಚಿನ್ನದ ಕಳ್ಳರು ನೂರಾರು ಅಡಿ ಆಳದ ಗಣಿ ಪ್ರದೇಶದಲ್ಲಿ ಸಿಲುಕಿ ಭಾರೀ ಸುದ್ದಿಯಾಗಿದ್ದರು. ಗಣಿಗೆ ಇಳಿದಿದ್ದ ಐವರಲ್ಲಿ ಇಬ್ಬರು ಮಣ್ಣಾದರೆ, ಮತ್ತೋರ್ವನ ಶವ ಪಾತಾಳ ಸೇರಿದೆ. ಇದೀಗ ಗಣಿಯಿಂದ ಪಾರಾಗಿ ಬಂದ ಕಳ್ಳನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಜಿಎಫ್ ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಇಳಿದ 5 ಜನರಲ್ಲಿ 3 ಜನ ಮೃತಪಟ್ಟರೆ, ಮತ್ತೊಬ್ಬನಿಗೆ ಕೊರೊನಾ ವಕ್ಕರಿಸಿದೆ. ಕೋಲಾರದ ಕೆಜಿಎಫ್ ನಲ್ಲಿ ಮೇ-13 ರಂದು ರಾತ್ರಿ ಕೆಜಿಎಫ್ ನಗರದ …

Read More »

ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ

ಬೆಂಗಳೂರು: ಕೊರೊನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಮಾಲ್ಡೀವ್ಸ್ ನ ಮಾಲೆಯಿಂದ 152 ಹಾಗೂ ಕತಾರ್ ನ ದೋಹಾದಿಂದ 182 ಜನ ಅನಿವಾಸಿ ಭಾರತೀಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು ಸೇರಿದಂತೆ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಶುಕ್ರವಾರ ಸಂಜೆ 6.50ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಒಟ್ಟು 152 ಪ್ರಯಾಣಿಕರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ …

Read More »

ಈಜಲು ನದಿಗೆ ದುಮುಕಿದ ಯುವಕ ನಾಪತ್ತೆ…………

ಯಾದಗಿರಿ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸುರಪುರ ತಾಲೂಕಿನ ಶೇಳ್ಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಚಂದಣ್ಣ ಗೊಂಡಿಕಾರ (35) ನಾಪತ್ತೆಯಾಗಿರುವ ಯುವಕ. ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಿರುವ ಕಾರಣ ಇಬ್ಬರು ಸ್ನೇಹಿತರೊಂದಿಗೆ ಚಂದಣ್ಣ ಗ್ರಾಮದ ಹತ್ತಿರದ ಕೃಷ್ಣಾನದಿಗೆ ಈಜಲು ತೆರಳಿದ್ದ. ಮೂವರಲ್ಲಿ ಇಬ್ಬರು ಈಜಿ ದಡ ಸೇರಿದ್ದಾರೆ. ಚಂದಣ್ಣ ನದಿಯಿಂದ ಹೊರ ಬರದೆ ನಾಪತ್ತೆಯಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ …

Read More »

ಮೇ 29ರ ಬದಲು ಜೂನ್ 4ಕ್ಕೆ ಕೊಡಗು ಸಂತ್ರಸ್ತರಿಗೆ ಮನೆ ಹಸ್ತಾಂತರ: ವಿ ಸೋಮಣ್ಣ

ಮಡಿಕೇರಿ: 2018ರ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿರ್ಮಾಣ ಮಾಡಿರುವ ಮನೆಗಳ ಹಸ್ತಾಂತರ ಕಾರ್ಯ ಮತ್ತೊಂದು ವಾರ ತಡವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ವಿ ಸೋಮಣ್ಣ, ಲಾಕ್‍ಡೌನ್ ಮುಂದುವರೆಯುವ ಬಗ್ಗೆ ಪ್ಲಾನ್ ಇರಲಿಲ್ಲ. ಹೀಗಾಗಿ ಮೇ 29ರಂದು ಸಂತ್ರಸ್ತರಿಗೆ ಮನೆ ಹಸ್ತಾಂತರಿಸಲು ನಿರ್ಧರಿಸಲಾಗಿತ್ತು. ಆದರೆ ಲಾಕ್‍ಡೌನ್ ಮೇ ಕೊನೆಯವರೆಗೆ ಇರುವುದರಿಂದ ಜೂನ್ 4ರಂದು ಮನೆ ಹಸ್ತಾಂತರಿಸಲಾಗುವುದು …

Read More »

ರಾಯಚೂರಿನಲ್ಲಿ ಹೊಸ ಹತ್ತು ಪ್ರಕರಣ ಪತ್ತೆ- 26ಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ

ರಾಯಚೂರು: ಜಿಲ್ಲೆಯಲ್ಲಿ ಇಂದು ಹತ್ತು ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮಹಾರಾಷ್ಟ್ರದ ನಂಟಿನಿಂದ ರಾಯಚೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 26 ಕ್ಕೇರಿದೆ. ದೇವದುರ್ಗ ತಾಲೂಕಿನ ಮಸರಕಲ್ ಕ್ವಾರಂಟೈನ್ ಕೇಂದ್ರದಲ್ಲಿದ್ದವರಲ್ಲಿ ಸೋಂಕು ಪತ್ತೆಯಾಗಿದೆ. ಇದರಲ್ಲಿ 1 ವರ್ಷ ಹಾಗೂ 4 ವರ್ಷದ ಗಂಡು ಮಕ್ಕಳು, 13 ವರ್ಷ ಹಾಗೂ 17 ವರ್ಷದ ಹೆಣ್ಣು ಮಕ್ಕಳಿದ್ದಾರೆ. ರೋಗಿ-1713 ರಿಂದ ರೋಗಿ-1722 ವರೆಗೆ ಕ್ರಮವಾಗಿ ರಾಯಚೂರಿನವರಲ್ಲಿ ಕೋವಿಡ್ 19 ಪಾಸಿಟಿವ್ ಕಾಣಿಸಿಕೊಂಡಿದೆ. …

Read More »