Breaking News

ಕರ್ನಾಟಕಕ್ಕೆ ಕಂಟಕವಾಗುತ್ತಿದ್ದಾರೆ ಹೊರರಾಜ್ಯ ಮತ್ತು ವಿದೇಶಗಳಿಂದ ಬಂದವರು..!

ಬೆಂಗಳೂರು, ಮೇ 16- ರಾಜ್ಯಕ್ಕೆ ಹೊರರಾಜ್ಯ ಮತ್ತು ದೇಶಗಳಿಂದ ಬಂದವರೇ ಕಂಟಕರಾಗಿ ಪರಿಣಮಿಸಿದ್ದಾರೆ. ಇದುವರೆಗಿನ ಪ್ರಕರಣಗಳಲ್ಲಿ ಹೊರಗಡೆಯಿಂದ ಬಂದ ಪ್ರಯಾಣಿಕರಿಗೆ ಹೆಚ್ಚು ಕೊರೊನಾ ಸೋಂಕು ತಗುಲಿರುವುದು ಅಂಕಿ-ಅಂಶಗಳಿಂದ ದೃಢಪಟ್ಟಿದೆ. ಗುಜರಾತ್‍ನಿಂದ ರಾಜ್ಯಕ್ಕೆ ಆಗಮಿಸಿದ 55 ಪ್ರಯಾಣಿಕರು, ಮುಂಬೈ ಮತ್ತು ಮಹಾರಾಷ್ಟ್ರದಿಂದ ಬಂದ 53, ರಾಜಸ್ತಾನದ 30, ದುಬೈನ 20, ಚೆನ್ನೈನ 4, ಒರಿಸ್ಸಾದ 2, ತೆಲಂಗಾಣದಿಂದ ಬಂದ 3 ಮಂದಿಗೆ ಹಾಗೂ ಲಂಡನ್‍ನಿಂದ ಬಂದ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. …

Read More »

ರಾಜ್ಯದಲ್ಲಿ ಇಂದು 23 ಜನರಲ್ಲಿ ಕೊರೊನಾ,ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, …

Read More »

ಎಣ್ಣೆಗಾಗಿ 1 ಕಿ.ಮೀ.ಗಟ್ಟಲೇ ಕ್ಯೂ – ಮದ್ಯದಂಗಡಿಗೆ ದಿನಕ್ಕೆ 500 ಟೋಕನ್ ಮಾತ್ರ””’

ಚೆನ್ನೈ: ಸುಪ್ರೀಂಕೋರ್ಟ್ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಡೆಹಿಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಮದ್ಯದಂಗಡಿಯನ್ನು ಮತ್ತೆ ಓವನ್ ಮಾಡಲು ಆದೇಶ ಹೊರಡಿಸಿದೆ. ಇದರಿಂದಾಗಿ ಫುಲ್ ಖುಷಿಯಾದ ಮದ್ಯ ಪ್ರಿಯರು ಕಿ.ಮೀ.ಗಟ್ಟಲೇ ಕ್ಯೂ ನಿಂತು ಎಣ್ಣೆ ಖರೀದಿಸಿದ್ದಾರೆ. ಕೆಲವಡೆ ಸರದಿಯಲ್ಲಿ ನಿಲ್ಲುವ ಬದಲು ಸಾಲಿನಲ್ಲಿ ಚಪ್ಪಲಿ ಇಟ್ಟು ಗುಂಪುಗೂಡಿ ನಿಂತ ದೃಶ್ಯಗಳು ಕಂಡು ಬಂದವು. ತಮಿಳುನಾಡಿನಲ್ಲಿ ಸರ್ಕಾರಿ ಮದ್ಯದಂಗಡಿಗಳನ್ನು ಮುಚ್ಚುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು. ಹೀಗಾಗಿ ರಾಜ್ಯ …

Read More »

ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು :ರಮೇಶ್ ಜಾರಕಿಹೋಳಿ

ಗೋಕಾಕ ನಗರದಲ್ಲಿ ಪತ್ರಿಕಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಜಾರಕಿಹೋಳಿ ಅವರು ಈಗಾಗಲೇ ಮೂರು ಹಂತದ ಲಾಕ್ ಡೌನ್ ಮುಗಿದಿದೆ ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು ಈಗಾಗಲೇ ಜನ ಈ ಒಂದು ಮಹಾಮಾರಿ ಕರೋನ್ ವೈರಸ್ ಬಗ್ಗೆ ತಿಳಿದು ಕೊಂಡಿದ್ದಾರೆ , ಆದರೆ ಸಾಮಾಜಿಕ ಅಂತರ್ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ಹೇಳುವ ನಿಯಮ ಗಳನ್ನಾ ಪಾಲಿಸಿ , ಕೆಲವೊಂದು ಸಡಿಲಿಕೆ ಗಳನ್ನ ನಾಲ್ಕನೇ ಹಂತದಲ್ಲಿ ಘೋಷಣೆ …

Read More »

ಸೋಮವಾರದಿಂದ ಕೆಲಸಕ್ಕೆ ಹಾಜರಾಗಿ- ಬಿಎಂಟಿಸಿಯಿಂದ ನೌಕರರಿಗೆ ಸೂಚನೆ…

ಬೆಂಗಳೂರು: ಸೋಮವಾರದಿಂದ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿಯಿಂದ ನೌಕರರಿಗೆ ಸೂಚಿಸಿದೆ ಎಂಬ ಮಾಹಿತಿ  ಲಭ್ಯವಾಗಿದೆ. ಸೋಮವಾರದಿಂದ ಬಸ್ ಸಂಚಾರ ಇರುತ್ತದೆ ಎಂದು ತಿಳಿಸಲಾಗಿದ್ದು, ಈ ಮೂಲಕ ಸೋಮವಾರದಿಂದ ಬಿಎಂಟಿಸಿ ಸಂಚಾರ ಆರಂಭವಾಗುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನೌಕರರಿಗೆ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣ, ಶಾಂತಿನಗರ ಸಾರಿಗೆ ಘಟಕ, ಶಾಂತಿ ನಗರ ಬಿಎಂಟಿಸಿ ಆಸ್ಪತ್ರೆ, ಯಶವಂತಪುರ ಬಿಎಂಟಿಸಿ ಘಟಕ, ಕೆಂಗೇರಿ ಟಿಟಿಎಂಸಿ ಹಾಗೂ ಹೆಣ್ಣೂರು ಘಟಕಗಳಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಶುಕ್ರವಾರ ಸುತ್ತೋಲೆ …

Read More »

ಹಣವಿಲ್ಲದೆ ಪರದಾಡ್ತಿದ್ದ ನಟಿಗೆ ಮೇಕಪ್ ಮ್ಯಾನ್ ಸಹಾಯ……..

ಮುಂಬೈ: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಅದೇ ರೀತಿ ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸೀರಿಯಲ್, ರಿಯಾಲಿಟಿ ಶೋಗಳಿಂದ ಖ್ಯಾತಿ ಪಡೆದಿರುವ ಸೋನಾಲ್ ವೆಂಗುರ್ಲೇಕರ್ ಕೊರೊನಾ ಸಮಯದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸ್ವಂತ ಸೋನಾಲ್ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಲಾಕ್‍ಡೌನ್‍ನಿಂದಾಗಿ ಮುಂದಿನ ತಿಂಗಳು ಜೀವನ ನಡೆಸಲು ನನ್ನ ಬಳಿ ಹೆಚ್ಚು …

Read More »

ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ

ಚಿಕ್ಕಮಗಳೂರು: ಫೇಸ್‍ಬುಕ್ ಲೈವ್ ಮೂಲಕ ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪಾಠ ಮಾಡುತ್ತಿರೋ ಜಿಲ್ಲೆಯ ಕಡೂರಿನ ಮಾಜಿ ಶಾಸಕ ವೈ.ಎಸ್.ವಿ.ದತ್ತರ ಸೇವೆಗೆ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಿದಾ ಆಗಿದ್ದಾರೆ. ದತ್ತ ಅವರಿಗೆ ಪತ್ರ ಬರೆಯುವ ಮೂಲಕ ಅವರ ಸೇವೆಗೆ ಧನ್ಯವಾದ ತಿಳಿಸಿದ್ದಾರೆ. ವೃತ್ತಿ ಹಾಗೂ ಮಕ್ಕಳ ಮೇಲಿರುವ ನಿಮ್ಮ ಪ್ರೀತಿಗೆ ನನ್ನದೊಂದು ಸಲಾಂ ಎಂದು ಪತ್ರದಲ್ಲಿ ಬರೆದಿದ್ದಾರೆ. ದತ್ತ ಮೇಷ್ಟ್ರು ಎಸ್‍ಎಸ್‍ಎಲ್‍ಸಿ ಮಕ್ಕಳಿಗೆ ಪ್ರತಿ ದಿನ ಸಂಜೆ 7.30 ರಿಂದ …

Read More »

ಬೆಳ್ಳಂಬೆಳಗ್ಗೆ ರಾಜ್ಯಕ್ಕೆ ಬಿಗ್ ಶಾಕ್- ಶಿವಾಜಿನಗರದಲ್ಲಿ ಮತ್ತೆ 14 ಮಂದಿಗೆ ಕೊರೊನಾ……….

ಬೆಂಗಳೂರು: ಕೊರೊನಾ ಹಾಟ್ ಸ್ಪಾಟ್ ಆಗಿರುವ ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಇದೀಗ ಮತ್ತೆ 14 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಹೌಸ್ ಕೀಪಿಂಗ್ ಜೊತೆ ದ್ವಿತೀಯ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳಿಗೆ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ 20 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು, ಇದರಲ್ಲಿ 14 ಮಂದಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶುಕ್ರವಾರ 22 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ 11 ಜನರಿಗೆ ಕೊರೊನಾ ದೃಢಪಟ್ಟಿತ್ತು. …

Read More »

ಕೊರೊನಾ ಸೋಂಕಿತ ಕೋಲಾರದಿಂದ ಎಸ್ಕೇಪ್, ಬೆಂಗಳೂರಲ್ಲಿ ಪ್ರತ್ಯಕ್ಷ………..

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಸೋಂಕಿತರ ಸಂಖ್ಯೆ 6ಕ್ಕೇರಿದೆ. ಸೋಂಕಿತ ಕೋರ್ಟ್ ಉದ್ಯೋಗಿಯ ಟ್ರಾವಲ್ ಹಿಸ್ಟರಿ ಮೂರು ನಗರಗಳ ನಿದ್ದೆಗೆಡಿಸಿದೆ. ಯಾಕೆಂದರೆ ಸೋಂಕಿತನೊಬ್ಬ ಎಸ್ಕೇಪ್ ಆಗಿದ್ದು, ಎಲ್ಲರ ಕಣ್ಣುತಪ್ಪಿಸಿ ಬೆಂಗಳೂರಿಗೆ ಬಂದುಬಿಟ್ಟಿದ್ದ. ಕೊನೆಗೆ ಆರೋಗ್ಯಾಧಿಕಾರಿಗಳು ಹುಡುಕಾಟ ನಡೆಸಿ ಎಸ್ಕೇಪ್ ಆಗಿದ್ದ ಸೋಂಕಿತನ್ನು ಲಾಕ್ ಮಾಡಿ, ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಐಸೋಲೇಶನ್ ಮಾಡಿ ನಿಟ್ಟುಸಿರು ಬಿಟ್ಟಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ವಾಸವಿದ್ದ ಮಂಡ್ಯ ಮೂಲದ ಕೋರ್ಟ್ ಉದ್ಯೋಗಿಯಲ್ಲಿ ಕೊರೊನಾ ಸೋಂಕು ಲಕ್ಷಣ ಕಂಡುಬಂದಿತ್ತು. ಗಂಟಲು …

Read More »

ಸರ್ಕಾರದ ಮುಂದೆ ಹೊಸ ಬೇಡಿಕೆಗಳನ್ನಿಟ್ಟ ಆಟೋ, ಟ್ಯಾಕ್ಸಿ ಚಾಲಕರ ಸಂಘ

ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಹೇರಲಾಗಿದ್ದ 3ನೇ ಹಂತದ ಲಾಕ್ ಡೌನ್ ಮೇ 17ಕ್ಕೆ ಅಂತ್ಯವಾಗಲಿದ್ದು, ನಾಳೆಯಿಂದ ಆಟೋ ಸಂಚಾರಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ರೂ ಆಟೋಗಳು ಮಾತ್ರ ರೋಡಿಗಿಳಿಯೋದು ಬಹುತೇಕ ಡೌಟ್ ಆಗಿದೆ. ಹಲವು ಆಟೋ ಚಾಲಕರು ಕರ್ತವ್ಯಕ್ಕೆ ಮರಳೋದು ಅನಿವಾರ್ಯ ಆದರೂ ಸುರಕ್ಷಿತ ದೃಷ್ಟಿಕೋನದಿಂದ ಇನ್ನೂ ಸ್ವಲ್ಪ ದಿನ ಆಟೋ ಸಂಚಾರ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಈ ಮಧ್ಯೆ ಆಟೋ ಚಾಲಕರ ಸಂಘಟನೆಗಳು, ಯೂನಿಯನ್ ಗಳು ಸರ್ಕಾರದ …

Read More »