ಚಾಮರಾಜನಗರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಯ ದಿನಾಂಕವನ್ನು ನಿಗದಿಗೊಳಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೆ ನಮ್ಮ ನಾಡಿನ ಹಿರಿಯರೊಂದಿಗೆ ಚರ್ಚೆ ನಡೆಸಲಾಗಿದೆ. ಕೊರೊನಾ ಹೆಮ್ಮಾರಿಯಿಂದ ಶಿಕ್ಷಣ ಇಲಾಖೆಗೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ತರಗತಿಗಳು ಹೇಗಿರಬೇಕು ಅಂತಾ ಚರ್ಚೆ ನಡೆಸುತ್ತಿದ್ದೇವೆ. ನಾಳೆ ಶಿಕ್ಷಕರ ಮತ್ತು ಪದವೀದರ ಕ್ಷೇತ್ರದ ಪರಿಷತ್ ಸದಸ್ಯರ ಜೊತೆ …
Read More »ಜೂನ್ 5ರಿಂದ ಈ ಬಾರಿ ಮಳೆಗಾಲ ಶುರು
ನವದೆಹಲಿ: ಈ ಬಾರಿಯ ನೈರುತ್ಯ ಮಾನ್ಸೂನ್ ಮಾರುತಗಳ ಆಗಮನ ವಿಳಂಬವಾಗಲಿದೆ ಎಂದು ಕೇಂದ್ರ ಹವಮಾನ ಇಲಾಖೆ ತಿಳಿಸಿದೆ. ಮಾನ್ಸೂನ್ ಆರಂಭಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಐಎಂಡಿ, ಜೂನ್ 1 ರ ಬದಲು 5ರಂದು ಮಾನ್ಸೂನ್ ಮಾರುತಗಳು ಕೇರಳ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮಾನ್ಸೂನ್ ಆರಂಭ ನಾಲ್ಕು ದಿನ ವಿಳಂಬವಾಗಲಿದೆ ಎಂದು ಅಂದಾಜಿಸಿದೆ. ಕಳೆದ ವರ್ಷವೂ ಜೂನ್ 6ರಂದು ದೇಶದಲ್ಲಿ ಮಾನ್ಸೂನ್ ಆರಂಭವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ …
Read More »ಹಾಸನದಲ್ಲಿ ಮತ್ತೆ ಮೂವರಿಗೆ ಕೊರೊನಾ- ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ
ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ ಮುಂಬೈನಿಂದ ವಾಪಸ್ ಬಂದವರಾಗಿದ್ದಾರೆ. ಈ ಹಿಂದೆ ಹಾಸನದಲ್ಲಿ ಒಂಬತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅವರೆಲ್ಲರೂ ಚನ್ನರಾಯಪಟ್ಟಣ ತಾಲೂಕಿನವರಾಗಿದ್ದು, ಮುಂಬೈಯಿಂದ ವಾಪಸ್ಸಾದವರಾಗಿದ್ದರು. ಇಂದು ಮತ್ತೆ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹಾಸನದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದೆ. ಮೂವರಲ್ಲಿ ಇಬ್ಬರು ಚನ್ನರಾಯಪಟ್ಟಣ ಮೂಲದ ತಂದೆ ಮತ್ತು ಮಗನಾಗಿದ್ದು, ಮುಂಬೈನಿಂದ ಸ್ವಂತ …
Read More »ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ
ಚಿಕ್ಕೋಡಿ: ಕರ್ತವ್ಯ ಮುಗಿಸಿ ಊರಿಗೆ ತೆರಳುತ್ತಿದ್ದ ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದ ಹತ್ತಿರ ಗುರುವಾರ ಸಂಭವಿಸಿದೆ. ಮೃತ ಪೇದೆ ರಮೇಶ ನಾಯಿಕ(೨೫) ಎಂದು ಗುರ್ತಿಸಲಾಗಿದೆ. ಈತನು ಕರ್ತವ್ಯ ಮುಗಿಸಿ ದ್ವಿಚಕ್ರ ವಾಹನದ ಮೂಲಕ ತನ್ನ ಊರು ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮಕ್ಕೆ ತೆರಳುವಾಗ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯ ನಾಗರಮುನ್ನೋಳ್ಳಿ ಗ್ರಾಮ ವ್ಯಾಪ್ತಿಯ ಬೆಳಗಲಿ ಕ್ರಾಸ್ …
Read More »ದೇಶದಲ್ಲಿ 81 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ – 2,649 ಮಂದಿ ಬಲಿ
ನವದೆಹಲಿ: ದಿನ ಕಳೆದಂತೆ ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ 81,997ಕ್ಕೆ ಏರಿದ್ದು, 2,649 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ 27,969 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ತುತ್ತಾಗಿದ್ದಾರೆ. ಕಿಲ್ಲರ್ ಕೊರೊನಾ ಈವರೆಗೆ ಮಹಾರಾಷ್ಟ್ರದಲ್ಲಿ 1,019 ಮಂದಿಯನ್ನು ಬಲಿಪಡೆದಿದ್ದು, ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. ಸುಮಾರು 6,059 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ …
Read More »ಗುತ್ತಿಗೆದಾರನಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದ ಆರೋಪಿಗಳ ಬಂಧನ
ರಾಯಚೂರು: ಶಕ್ತಿನಗರದ ರಾಘವೇಂದ್ರ ಕಾಲೋನಿಯಲ್ಲಿ ಗುತ್ತಿಗೆದಾರನಿಗೆ ಕೊಲೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದ ಆರೋಪಿಗಳು ಸೆರೆಸಿಕ್ಕಿದ್ದಾರೆ. ರಾಯಚೂರಿನ ರೌಡಿಶೀಟರ್ ಮಹ್ಮದ್ ಗೌಸ್ ತಂಡದ 12 ಜನರ ಬಂಧನವಾಗಿದ್ದು, ಮುಖ್ಯ ಆರೋಪಿ ಗೌಸ್ ತಲೆ ಮರೆಸಿಕೊಂಡಿದ್ದಾನೆ. ಮೇ 8ರಂದು ಆರ್ ಟಿಪಿಎಸ್, ವೈಟಿಪಿಎಸ್ ಗುತ್ತಿಗೆದಾರ ಕೇರಳ ಮೂಲದ ಹರ್ಷನ್ ಮನೆಗೆ ಮಹ್ಮದ್ ಗೌಸ್ ಹಾಗೂ 17 ಜನ ನುಗ್ಗಿ ಪಿಸ್ತೂಲ್, ಮಾರಕಾಸ್ತ್ರ ತೋರಿಸಿ ಹಣ ವಸೂಲಿ ಮಾಡಿದ್ದರು. ಹರ್ಷನ್ ರಿಂದ …
Read More »28 ದಿನಗಳ ಬಳಿಕ ತನ್ನ ಹಸುಗೂಸನ್ನು ಅಪ್ಪಿಕೊಂಡು ಮುದ್ದಾಡಿರುವ ಭಾವುಕ ಘಟನೆ ಸಿಲಿಕಾನ್ ಸಿಟಿಯ ದೊಡ್ಡಬಸ್ತಿಯಲ್ಲಿ
ಬೆಂಗಳೂರು: ಕೊರೊನಾ ಗೆದ್ದ ಮಹಿಳೆ 28 ದಿನಗಳ ಬಳಿಕ ತನ್ನ ಹಸುಗೂಸನ್ನು ಅಪ್ಪಿಕೊಂಡು ಮುದ್ದಾಡಿರುವ ಭಾವುಕ ಘಟನೆ ಸಿಲಿಕಾನ್ ಸಿಟಿಯ ದೊಡ್ಡಬಸ್ತಿಯಲ್ಲಿ ನಡೆದಿದೆ. ದೊಡ್ಡಬಸ್ತಿಯಲ್ಲಿ ರೋಗಿ ನಂಬರ್ 259 ಮಹಿಳೆ ಕೊರೊನಾದಿಂದ ಗುಣಮುಖರಾಗಿ ತನ್ನ ಮನೆಗೆ ವಾಪಸ್ಸಾಗಿದ್ದಾರೆ. ಡೆಲಿವರಿಯಾದ ನಾಲ್ಕೇ ದಿನದಲ್ಲಿ ತನ್ನ ಹಸುಗೂಸಿನಿಂದ ದೂರವಾಗಿದ್ದರು. ಮಗುವಿಗೆ ಎದೆಹಾಲು ಉಣಿಸಲಾಗದಂತಹ ಅಸಹಾಯಕ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ 28 ದಿನಗಳ ಬಳಿಕ, ಈ ಮಹಿಳೆ ಕೊರೊನಾ ಗೆದ್ದು ಮನೆಗೆ ಬಂದಿದ್ದು, ತನ್ನ …
Read More »ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಕೆರೆಯಂತಾದ ರಸ್ತೆ……….
ಮಂಗಳೂರು: ಕಳೆದ ಕೆಲದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲೂ ಭಾರೀ ಮಳೆ ಸುರಿದಿದೆ. ಎಡೆಬಿಡದೆ ಸುರಿದ ಮಳೆಯಿಂದಾಗಿ ದೇವಸ್ಥಾನದ ಬಳಿಯ ರಸ್ತೆ ಪೂರ್ತಿ ನೀರು ನಿಂತು ಕೆರೆಯಂತಾಗಿತ್ತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪ್ರವೇಶಿಸುವ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ನೀರು ಹರಿಯುವುದಕ್ಕೆ ಸಾಧ್ಯವಾಗದೇ ರಸ್ತೆ ಕೆರೆಯಂತಾಗಿತ್ತು. ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನ, ಕಾರು ಕೃತಕ ನೆರೆಗೆ ಭಾಗಶಃ ಮುಳುಗಿ ಹೋಗಿತ್ತು. ವಾಹನ ಸವಾರರು …
Read More »ಉಚಿತವಾಗಿ ಹಂಚುವ ರೇಷನ್ ಕಿಟ್ಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರ ಸೆರೆ
ಬೆಂಗಳೂರು, – ಕಾರ್ಮಿಕ ಇಲಾಖೆಯಿಂದ ಬಡವರಿಗೆ ಉಚಿತವಾಗಿ ಹಂಚುವ ರೇಷನ್ ಕಿಟ್ಗಳನ್ನು ಹಣಕ್ಕೆ ಮಾರಾಟ ಮಾಡುತ್ತಿದ್ದ ನಾಲ್ವರು ಆರ್ಟಿ ನಗರ ಪೊಲೀಸರ ಅತಿಥಿಗಳಾಗಿದ್ದಾರೆ. ಕಾರ್ಮಿಕ ಇಲಾಖೆಯ ರೇಷನ್ಕಿಟ್ಗಳನ್ನು ತಲಾ ಒಂದು ಕಿಟ್ಗೆ 150ರೂ. ಪಡೆದು ಕೆಲವರು ಮಾರಾಟ ಮಾಡುತ್ತಿದ್ದರು. ಆದರೆ, ಈ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಪಾಲಿಕೆ ಸದಸ್ಯರಿಗೆ ಮಾಹಿತಿ ಇರಲಿಲ್ಲ. ಆರ್ಟಿ ನಗರದಲ್ಲಿ ಮೆಟೆಡೋರ್ನಲ್ಲಿ ಕಾರ್ಮಿಕ ಇಲಾಖೆಯ ಕಿಟ್ಗಳನ್ನು ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ …
Read More »ಮದ್ಯೋದ್ಯಮಿ ಮಲ್ಯಗೆ ಭಾರತದಲ್ಲಿ ಜೈಲೂಟ ಫಿಕ್ಸ್..!
ಲಂಡನ್: ಮದ್ಯೋದ್ಯಮಿ ವಿಜಯ್ ಮಲ್ಯ ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಇಂಗ್ಲೆಂಡ್ (ಯುಕೆ) ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಲು ಇಲ್ಲಿನ ಹೈಕೋರ್ಟ್ ಅವಕಾಶ ಕಲ್ಪಿಸಲಿಲ್ಲ. ಭಾರತಕ್ಕೆ ತನ್ನನ್ನು ಹಸ್ತಾಂತರ ಮಾಡದಂತೆ ಕಳೆದ ತಿಂಗಳು ವಿಜಯ್ ಮಲ್ಯ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಬ್ರಿಟನ್ನ ಹೈಕೋರ್ಟ್ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಮಲ್ಯ ನಿರ್ಧರಿಸಿದ್ದರು. ಆದರೆ, ಮಲ್ಯ ಅವರಿಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಹೈಕೋರ್ಟ್ ಇಂದು ಅವಕಾಶ ನೀಡಿಲ್ಲ. ಈ …
Read More »
Laxmi News 24×7