ಧಾರವಾಡ: ಜಿಲ್ಲೆಯ ಹೊಸಯಲ್ಲಾಪುರ ಪ್ರದೇಶ ಅದೇನು ಪಾಪಾ ಮಾಡಿದೇಯೋ ಗೊತ್ತಿಲ್ಲ. ಧಾರವಾಡ ಜಿಲ್ಲೆಯ ಮೊದಲ ಪಾಸಿಟಿವ್ ಪ್ರಕರಣ ಇದೇ ಏರಿಯಾದಲ್ಲಿ ಪತ್ತೆಯಾಗಿತ್ತು. ಈ ಕಾರಣಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಿ ಹೋಗಿದ್ದ ಈ ಪ್ರದೇಶವನ್ನು ವಾರದ ಹಿಂದಷ್ಟೇ ಕಂಟೋನ್ಮೆಂಟ್ ಝೋನಿನಿಂದ ಮುಕ್ತಗೊಳಿಸಿ, ಸಾಮಾನ್ಯ ವಲಯವನ್ನಾಗಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಗುರುವಾರ ಇದೇ ಏರಿಯಾದ ಕೋಳಿಕೆರೆಯ 35 ವರ್ಷದ ಮೆಣಸಿನಕಾಯಿ ವ್ಯಾಪಾರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ …
Read More »ಅಬಕಾರಿ ಸುಂಕ ಏರಿಕೆ – ಮದ್ಯ ಮಾರಾಟ ಇಳಿಕೆ……
ಬೆಂಗಳೂರು: ಸಿಎಂ ಯಡಿಯೂರಪ್ಪ ಮದ್ಯದ ಮೇಲೆ ಶೇ.17 ಅಬಕಾರಿ ಸುಂಕ ವಿಧಿಸಿದ ಬೆನ್ನಲ್ಲೇ ಬುಧವಾರಕ್ಕೆ ಹೋಲಿಸಿದ್ದಲ್ಲಿ ಮದ್ಯ ಮಾರಾಟ ಇಳಿಕೆಯಾಗಿದೆ. ಬುಧವಾರ ಒಟ್ಟು 230 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದ್ದರೆ ಗುರುವಾರ ಒಟ್ಟು 165 ಕೋಟಿ ರೂ. ಮದ್ಯ ಮಾರಾಟವಾಗಿದೆ ಎಂದು ಕೆಎಸ್ಬಿಸಿಎಲ್ (ಕರ್ನಾಟಕ ಪಾನೀಯ ನಿಯಮ) ತಿಳಿಸಿದೆ. ಇಂದು 152 ಕೋಟಿ ರೂ. ಮೌಲ್ಯದ 27.56 ಲಕ್ಷ ಲೀಟರ್ ಇಂಡಿಯನ್ ಮೇಡ್ ಲಿಕ್ಕರ್(ಐಎಂಎಲ್), 13 ಕೋಟಿ ಮೌಲ್ಯದ …
Read More »ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ.
ಚಿಕ್ಕಮಗಳೂರು: ಒಂದೂವರೆ ತಿಂಗಳ ಬಳಿಕ ಎಣ್ಣೆ ಸಿಕ್ಕ ಖುಷಿಗೆ ಮದ್ಯವ್ಯಸನಿಗಳು ಜಗತ್ತನ್ನೇ ಮರೆತು, ಮೈಮರೆತು ಎಣ್ಣೆಯ ನಶೆಯಲ್ಲಿ ತೇಲುತ್ತಿದ್ದಾರೆ. ಹೊಟ್ಟೆ ತುಂಬಾ ಕುಡಿದು ಎಲ್ಲೆಂದರಲ್ಲಿ ಬಿದ್ದರೂ ಕುಡುಕರಿಗೆ ಇನ್ನೂ ಸಮಾಧಾನ ಆಗಿಲ್ಲ ಅನಿಸುತ್ತಿದೆ. ಯಾಕಂದ್ರೆ ಮದ್ಯ ಪ್ರಿಯರು ಫುಲ್ ಟೈಟಾಗಿ ಮೈಮೇಲೆ ಜ್ಞಾನ ಇಲ್ಲದಂತೆ ಎದ್ದು-ಬಿದ್ದೋ ತೇಲ್ತಿರೋ ಘಟನೆ ಜಿಲ್ಲೆಯ ವಿವಿಧ ಭಾಗದಲ್ಲಿ ಇನ್ನೂ ನಿಂತಿಲ್ಲ. ಫುಲ್ ಟೈಟಾಗಿ ರಸ್ತೆ ಮಧ್ಯೆ ಪ್ರಜ್ಞೆ ತಪ್ಪಿ ಮಲಗುತ್ತಿರುವ ಸನ್ನಿವೇಶಗಳು ಕಡಿಮೆಯಾಗಿಲ್ಲ. ಕೊರೊನಾ …
Read More »15 ರಜೆ ಮುಗಿಸಿ ಕೆಲಸಕ್ಕೆ ಬಂದ ಮಹಿಳೆ – 2ನೇ ದಿನವೇ ಅನುಮಾನಾಸ್ಪದವಾಗಿ ಸಾವು
ಬೆಂಗಳೂರು: ಕಾರ್ಖಾನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಇಂಡ್ಲವಾಡಿ ರಸ್ತೆಯ ಸ್ಟ್ರೈಡ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಇಂಡ್ಲವಾಡಿ ಮೂಲದ ಮಂಜುಳಾ (26) ಮೃತ ಮಹಿಳೆ. ಮೃತ ಮಂಜುಳಾ ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ಬಂದಿದ್ದು, ನಂತರ ಸಾವನ್ನಪ್ಪಿದ್ದಾಳೆಂದು ಸಹೋದ್ಯೋಗಿಗಳು ತಿಳಿಸಿದ್ದಾರೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹದಿನೈದು ದಿನ ವಿತರಣೆ ಪಾಳಿಯಂತೆ ರಜೆಯಲ್ಲಿದ್ದು, ಬುಧವಾರ ಕೆಲಸಕ್ಕೆ ಹಾಜರಾಗಿದ್ದಳು. ಎಂದಿನಂತೆ …
Read More »ಇಂದು 12 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ
– ಬಾಗಕೋಟೆಯ ರೋಗಿ-607ರಿಂದ ಮೂವರಿಗೆ ಕೊರೊನಾ – ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಸಾವು – ಬೆಳಗಾವಿಯ 13ರ ಬಾಲಕಿಗೆ ಸೋಂಕು ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗುವಂತೆ ಕಾಣುತ್ತಿಲ್ಲ. ಇಂದು 12 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ದಾವಣಗೆರೆಯ 55 ವರ್ಷದ ಮಹಿಳೆ (ರೋಗಿ-694) ಕೊರೊನಾಗೆ ಇಂದು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಈವರೆಗೂ ಕೊರೊನಾದಿಂದ ನಾಲ್ವರು …
Read More »ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದಂತೆ ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ’
ಮಂಗಳೂರು: ಕೊರೊನಾ ವಿಶೇಷ ಪ್ಯಾಕೇಜ್ ಘೋಷಣೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೂವಿನ ಬೆಳೆಗೆ ಎಕರೆಗೆ 50 ಲಕ್ಷ ಎಲ್ಲಿ ಖರ್ಚು ಮಾಡಲಾಗುತ್ತೆ ಎಂಬ ಬಗ್ಗೆ ಸಿದ್ದರಾಮಯ್ಯ ಅಧ್ಯಯನ ಮಾಡಲಿ, ಸಿದ್ದರಾಮಯ್ಯನವರು ಯೋಚನೆ ಮಾಡಿ ಮಾತಾಡೋದು ಒಳ್ಳೆಯದು. ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ …
Read More »ನಿಯಮ ಉಲ್ಲಂಘಿಸಿ ರಸ್ತೆಗಿಳಿದ ಆಟೋಗಳು ಸೀಜ್………..
ಹುಬ್ಬಳ್ಳಿ: ಮೂರನೇ ಹಂತದ ಲಾಕ್ಡೌನ್ ವಿಸ್ತರಣೆಯಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಿದ್ದು, ಆಟೋ ಸಂಚಾರಕ್ಕೆ ಮಾತ್ರ ಅನುಮತಿ ನೀಡಿಲ್ಲ. ಆದರೂ ಕೂಡ ಅನಗತ್ಯವಾಗಿ ರಸ್ತೆಗೆ ಇಳಿಯುವ ಆಟೋಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುರೇಂದ್ರ ಹೊಳೆಣ್ಣವರ ನೇತೃತ್ವದಲ್ಲಿಂದು ಅನಾವಶ್ಯಕವಾಗಿ ರಸ್ತೆಗೆ ಇಳಿಯುವ ಆಟೋಗಳಿಗೆ ಸೀಜ್ ಮಾಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ಈಗಾಗಲೇ ಸುಮಾರು ಆಟೋಗಳನ್ನು ಸೀಜ್ ಮಾಡಿ ಈದ್ಗಾ ಮೈದಾನದಲ್ಲಿ ನಿಲ್ಲಿಸಲಾಗಿದೆ. ಈಗಾಗಲೇ ಸರ್ಕಾರ …
Read More »ವಿಶಾಖಪಟ್ಟಣಂ ವಿಷಾನಿಲ ದುರಂತದ ಬೆನ್ನಲ್ಲೇ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್
ರಾಯಗಢ: ವಿಶಾಖಪಟ್ಟಣಂನಲ್ಲಿ ವಿಷಾನಿಲ ಸೋರಿಕೆಯಾಗಿ 11 ಮಂದಿ ಸಾವನ್ನಪ್ಪಿ, ಸಾವಿರಾರು ಮಂದಿ ಅಸ್ವಸ್ಥಗೊಂಡ ಬೆನ್ನಲ್ಲೇ ಇದೀಗ ಛತ್ತೀಸಗಢದಲ್ಲೂ ಗ್ಯಾಸ್ ಲೀಕ್ ಆಗಿ 7 ಮಂದಿ ಅಸ್ವಸ್ಥಗೊಂಡಿರುವ ದುರ್ಘಟನೆ ನಡೆದಿದೆ. ಛತ್ತೀಸಗಢದ ರಾಯಗಢ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪೇಪರ್ ಮಿಲ್ ಅನ್ನು ಶುದ್ಧಿಕರಿಸುತ್ತಿದ್ದ ವೇಳೆ ವಿಷಾನಿಲ ಸೋರಿಕೆಯಾಗಿ ಏಳು ಮಂದಿ ಕಾರ್ಮಿಕರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯ ಬಗ್ಗೆ …
Read More »ಅನಿವಾಸಿ ಭಾರತೀಯರನ್ನ ಕರೆ ತರಲು ಮುಂದಾದ ಕೇಂದ್ರ- ಹೊರ ರಾಜ್ಯದ ಕನ್ನಡಿಗರನ್ನ ಮರೆತ ರಾಜ್ಯ ಸರ್ಕಾರ
ನವದೆಹಲಿ: ಕೇಂದ್ರ ಸರ್ಕಾರವು ಇಂದಿನಿಂದ ಆಪರೇಷನ್ ಏರ್ ಲಿಫ್ಟ್ ಮತ್ತು ಸಮುದ್ರ ಸೇತು ಹೆಸರಿನಲ್ಲಿ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯರನ್ನು ಕರೆತರುವ ಕೆಲಸ ಮಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಹೊರ ರಾಜ್ಯಗಳಲ್ಲಿರುವ ಕನ್ನಡಗರನ್ನು ಮರೆತಂತೆ ಭಾಸವಾಗುತ್ತಿದೆ. ಕೊರೊನಾ ಲಾಕ್ಡೌನ್ನಿಂದ ಅನ್ಯ ರಾಜ್ಯಗಳಲ್ಲಿ ಕನ್ನಡಿಗರು ಸಂಕಷ್ಟದಲ್ಲಿದ್ದು ದೆಹಲಿ, ಪಂಜಾಬ್, ಚಂಡೀಗಢ್, ಹರ್ಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕನ್ನಡಿಗರು ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರನ್ನು ವಾಪಸ್ ಕರೆತರುವ ಬಗ್ಗೆ …
Read More »ಮಾಸ್ಕ್ ಧರಿಸಿ ಮದುವೆ ಮಾಡಿಕೊಂಡ ವಧು-ವರ……..
ಹುಬ್ಬಳ್ಳಿ: ಲಾಕ್ಡೌನ್ ವೇಳೆ ಹುಬ್ಬಳ್ಳಿಯ ಹುಡುಗ ಸಿಂಧನೂರಿನ ಯುವತಿಯನ್ನು ಕೈ ಹಿಡಿಯುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು ಲಾಕ್ಡೌನ್ ಸಂದರ್ಭದಲ್ಲಿ ಮದುವೆಗಳಿಗೆ ಷರತ್ತುಬದ್ಧ ಅನುಮತಿ ನೀಡಿ, ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಆದರೂ ಕೂಡ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿಕೊಂಡೆ ಸಿಂಧನೂರಿನ ವಧುವನ್ನು ಹುಬ್ಬಳ್ಳಿಯ ಹುಡುಗ ಮದುವೆಯಾಗಿದ್ದಾರೆ. ಸಿಂಧನೂರಿನಲ್ಲಿ ಸಚೇತಿಯವರ ಮನೆಯಲ್ಲಿ ಸರಳವಾಗಿ ಮದುವೆಯ ಸಮಾರಂಭ ಜರುಗಿದ್ದು, ವಧು ಪೂನಂ ಸಚೇತಿ, ವರ …
Read More »
Laxmi News 24×7