Breaking News

BIG BREAKING : ಬಾದಾಮಿಯಲ್ಲಿ ಕೊರೋನಾ ಕುಣಿತ..! ರಾಜ್ಯದಲ್ಲಿ ಇಂದು 19 ಮಂದಿಗೆ ಪಾಸಿಟಿವ್..!

ಬೆಂಗಳೂರು, ಮೇ 6- ಐತಿಹಾಸಿಕ ಸ್ಥಳ ಬಾದಾಮಿಯಲ್ಲೂ ಕೊರೊನಾ ಸೋಂಕು ಅಟ್ಟಹಾಸ ಮೆರೆದಿದೆ. ಅಲ್ಲಿನ 13 ಮಂದಿ ಸೇರಿದಂತೆ ರಾಜ್ಯದಲ್ಲಿ 19 ಹೊಸ ಪ್ರಕರಣಗಳು ದಾಖಲಾಗಿದ್ದು , ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ. ಕೊರೊನಾ ಹಾಟ್‍ಸ್ಪಾಟ್ ಆಗಿದ್ದ ಬೆಂಗಳೂರಿನಲ್ಲಿ ಇಂದು ಎರಡು ಹೊಸ ಪ್ರಕರಣಗಳು ಪತ್ತೆಯಾಗಿದ್ದು , ಮಂಗಮ್ಮನಪಾಳ್ಯದಲ್ಲಿ ನಿನ್ನೆ ಖಾಸಗಿ ಸಂಸ್ಥೆಯ ಡಿಲೆವೆರಿ ಬಾಯ್‍ಗೆ ಸೊಂಕು ತಗುಲಿದ್ದು , ಆತನಿಂದಲೇ ಇಂದು ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತ …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

ಬೆಂಗಳೂರು – ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಹಲವಾರು ರೀತಿಯ ವೃತ್ತಿನಿರತರಿಗೆ ಕರ್ನಾಟಕ ಸರಕಾರ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ಬುಧವಾರ ಮಾಹಿತಿ ನೀಡಿದ್ದಾರೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಮಡಿವಾಳರು ಸೇರಿದಂತೆ ಹಲವಾರು ವರ್ಗಗಳಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದಾರೆ. 7.75 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಪರಿಹಾರ …

Read More »

ಯಾವುದೋ ರಾಜ್ಯಕ್ಕೆ ಹೋಗಬೇಕಾದ 50ಕ್ಕೂ ಹೆಚ್ಚು ಕಾರ್ಮಿಕರು ಬೆಳಗಾವಿಗೆ,ಲಕ್ಷ್ಮಿ ಹೆಬ್ಬಾಳಕರ್ ಮಾನವೀಯತೆ

ಬೆಳಗಾವಿ – ವ್ಯವಸ್ಥೆ ಹಲವು ಬಾರಿ ಎಷ್ಟೊಂದು ಬೇಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತದೆ ಎನ್ನುವುದಕ್ಕೆ ಇಲ್ಲೊಂದು ತಾಜಾ ಉದಾಹರಣೆ ಇದೆ. ಸರಕಾರಿ ಕಾರ್ಮಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದೇ ತಪ್ಪಾಯಿತೇನೋ ಎನ್ನುವ ರೀತಿಯಲ್ಲಿದೆ ಈ ಘಟನೆ. ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಿಗೆ ತೆರಳಬೇಕಿದ್ದ ಕಾರ್ಮಿಕರು ಉಚಿತ ಬಸ್ ಹತ್ತಿ ಬೆಳಗಾವಿಗೆ ಬಂದಿದ್ದಾರೆ. ಟಿಕೆಟ್ ಪಡೆಯುವ ವ್ಯವಸ್ಥೆ ಇದ್ದಿದ್ದರೆ ಕಂಡಕ್ಟರ್ ಎಲ್ಲಿಗೆ ಎಂದು ಕೇಳುತ್ತಿದ್ದರು. ಆಗ ಅವರನ್ನು ಕೆಳಗಿಳಿಸಬಹುದಿತ್ತು. ಆದರೆ …

Read More »

ಲಾಕ್‌ಡೌನ್ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮ: ಶಾಸಕ ಸತೀಶ ಜಾರಕಿಹೊಳಿ

ಯಮಕನಮರಡಿ: ಲಾಕ್‌ಡೌನ್ ಸಂಕಷ್ಟದಲ್ಲಿರುವ ಜನರಿಗೆ ಆಹಾರ ಧಾನ್ಯ ಕಿಟ್ ವಿತರಣಾ ಕಾರ್ಯಕ್ರಮವನ್ನು ಇಂದು ಶಾಸಕ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿದರು. ಸತೀಶ ಜಾರಕಿಹೊಳಿ ಅಭಿಮಾನಿ ಬಳಗದ ವತಿಯಿಂದ ಸುಮಾರು ಏಳು ನೂರು ಬಡಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ವಿತರಿಸುವ ಕಾರ್ಯಕ್ರವನ್ನು ಇಲ್ಲಿನ ಗುರುಸಿದ್ಧ ಮಹಾಸ್ವಾಮಿಗಳ‌ ಸಭಾಭವನದಲ್ಲಿ ಶ್ರೀ ರಾಚ್ಯೋಟಿ ಶ್ರೀಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬಡಜನರ ಸಂಕಷ್ಟಕ್ಕೆ ನೆರವಾಗುವ ಈ ಕಾರ್ಯಕ್ಕೆ ಜನ ಕೆಪಿಸಿಸಿ ಕಾರ್ಯಾಧ್ಯಕ್ಷ ಕೂಡ ಆದ ಸತೀಶ …

Read More »

ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಸುಮಾರು 84500 ಕುಟುಂಬಗಳಿಗೆ ಹಸಿದವರಿಗೆ ಅನ್ನ ನೀಡಿದ ಮಹಾನ್ ದಾನಿಯಾಗಿದ್ದಾರೆ.

ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೊನಾ ವಿರುದ್ಧ ಸಮರ ಸಾರುತ್ತಿರುವ ಕೊರೊನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ವಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೊನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ …

Read More »

ಕಾರ್ಯಕ್ರಮದಲ್ಲಿ ಕೊರೊನಾ ಭಯವಿಲ್ಲದೇಸಾಮಾಜಿಕ ಅಂತರ ಕಾಣದೇ ಇರುವುದು ವಿಪರ್ಯಾಸ….

ಶಿವಮೊಗ್ಗ: ದುಡಿಯುವ ಕೈಗಳಿಗೆ ಕೆಲಸ ನೀಡಬೇಕೆನ್ನುವ ಗುರಿ ಒಂದು ಕಡೆಯಾದರೆ, ಲಾಕ್‍ಡೌನ್ ಕಾರಣದಿಂದ ಮತ್ತೊಂದು ಕಡೆ ಕೆಲಸವಿಲ್ಲದೇ ಜನರು ಕಂಗಾಲಾಗಿರುವುದು. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಈಗಾಗಲೇ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ಸಾವಿರಾರು ಜನರಿಗೆ ಕೆಲಸ ನೀಡಿರುವ ಇಲಾಖೆ ಇದೀಗ ಅಂತರ್ಜಲ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಿದೆ. ರಾಜ್ಯ ಸರ್ಕಾರ ಕೊರೊನಾ ಮಹಾಮಾರಿ ಅಟ್ಟಹಾಸದ …

Read More »

ಖಾಸಗಿ ಆಸ್ಪತ್ರೆಯಂತೆ ವಿಕ್ಟೋರಿಯದಲ್ಲೂ ಹೆರಿಗೆ ಸಾಧ್ಯವೇ? – ಸೋಂಕಿತ ಗರ್ಭಿಣಿಯ ಪತಿ ಪ್ರಶ್ನೆ

ಬೆಂಗಳೂರು: “ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಡಿ. ಇಂದು ಮಧ್ಯಾಹ್ನದ ನಂತರ ಡೆಲಿವರಿ ಅದರೆ ಒಕೆ. ಟೈಂ ಚೆನ್ನಾಗಿದೆ” ಹೀಗೆಂದು ಕೊರೊನಾ ಸೋಂಕು ಪೀಡಿತ ಗರ್ಭಿಣಿಯ ಪತಿ ವೈದ್ಯರ ಬಳಿ ಬೇಡಿಕೆ ಇಟ್ಟಿದ್ದಾರೆ. ಗರ್ಭಿಣಿಯನ್ನು(ರೋಗಿ ಸಂಖ್ಯೆ 652) ವಿಕ್ಟೋರಿಯಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಈ ನಡುವೆ ಈ ಮೊದಲು ಪರೀಕ್ಷಿಸಿದ ಖಾಸಗಿ ಆಸ್ಪತ್ರೆಯವರು ಡೆಲಿವರಿಗೆ ಮೇ 9 ರಂದು ದಿನಾಂಕ ನೀಡಿದ್ದಾರೆ. ಆದರೆ ಈಗ ಸೋಂಕು ಬಂದಿರುವುದರಿಂದ ಕೋವಿಡ್ …

Read More »

ಗಾಂಜಾ ಮತ್ತಲ್ಲಿ ತೇಲಾಡಿ ಬೆತ್ತಲಾಗಿ ಸ್ವಾಮೀಜಿ ಕಂಡು ಹುಬ್ಬಳ್ಳಿ ಜನರು ಬೆಚ್ಚಿಬಿದ್ದಿದ್ದಾರೆ.

ಹುಬ್ಬಳಿ/ಧಾರವಾಡ: ಗಾಂಜಾ ಮತ್ತಲ್ಲಿ ತೇಲಾಡಿ ಬೆತ್ತಲಾಗಿ ಸ್ವಾಮೀಜಿ ಕಂಡು ಹುಬ್ಬಳ್ಳಿ ಜನರು ಬೆಚ್ಚಿಬಿದ್ದಿದ್ದಾರೆ. ಹುಬ್ಬಳ್ಳಿ ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ವಿಡಿಯೋ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದೆ. ಮೋಹನ್ ಗುರು ಸ್ವಾಮೀಜಿ ಅವತಾರ ಕಂಡು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದು, ಆತನನ್ನು ಮಠದಿಂದ ಹೊರ ಕಳುಹಿಸಬೇಕೆಂಬ ಕೂಗು ಕೇಳಿ ಬಂದಿದೆ. ನಂಗಾನಾಚ್ ಮೋಹನ್ ಸ್ವಾಮಿ ರಾತ್ರಿ ಕಂಠಪೂರ್ತಿ ಕುಡಿದು, ಗಾಂಜಾ ಹೊಡೆದು ಬೆತ್ತಲಾಗಿ ಕುಸಗಲ್ ರಸ್ತೆಯ …

Read More »

ಗೋವಾದಲ್ಲಿ ಸಿಲುಕಿದ್ದ ಹತ್ತು ಸಾವಿರ ಮಂದಿ ಕರ್ನಾಟಕಕ್ಕೆ ವಾಪಸ್

ಕಾರವಾರ: ಲಾಕ್‍ಡೌನ್‍ನಿಂದ ಗೋವಾದಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತಮ್ಮ ಊರುಗಳಿಗೆ ತೆರಳಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದ್ದು, ಇಂದಿನಿಂದ ಗೋವಾದಿಂದ ಕರ್ನಾಟಕಕ್ಕೆ ಬರುವ ಜನರಿಗೆ ಕಾರವಾರ-ಗೋವಾ ಗಡಿಭಾಗದ ಮಾಜಾಳಿ ತಪಾಸಣಾ ಕೇಂದ್ರದಲ್ಲಿ ಪಾಸ್ ನೀಡುವ ಮೂಲಕ ತಮ್ಮ ಊರುಗಳಿಗೆ ತೆರಳಲು ಅನುಕೂಲ ಮಾಡಿಕೊಡಲಾಗುತ್ತಿದೆ. ಗೋವಾ ರಾಜ್ಯದಿಂದ ಕರ್ನಾಟಕಕ್ಕೆ ತೆರಳಲು ಹತ್ತು ಸಾವಿರ ಜನ ನೊಂದಣಿ ಮಾಡಿಕೊಂಡಿದ್ದು, ಇವರಿಗೆ ಕಾರವಾರ ಜಿಲ್ಲೆ ಹಾಗೂ ಬೆಳಗಾವಿ ಜಿಲ್ಲೆಯ ಮೂಲಕ ಪ್ರವೇಶ ನೀಡಲಾಗುತ್ತಿದೆ. ಜೊತೆಗೆ …

Read More »

ರಾಜ್ಯದಲ್ಲೇ ಅತ್ಯುತ್ತಮ ಕೋವಿಡ್ ಪ್ರಯೋಗಾಲಯ ಚಾಮರಾಜನಗರದಲ್ಲಿ ಸ್ಥಾಪನೆ: ಸುರೇಶ್ ಕುಮಾರ್

ಚಾಮರಾಜನಗರ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 1.79 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕೋವಿಡ್-19 ಪರೀಕ್ಷಾ ಪಿಸಿಆರ್ ಪ್ರಯೋಗಾಲಯ ರಾಜ್ಯದಲ್ಲಿಯೇ ಅತ್ಯುತ್ತಮ ಪ್ರಯೋಗಾಲಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಈ ಕೋವಿಡ್-19 ಪಿಸಿಆರ್ ಪ್ರಯೋಗಾಲಯಕ್ಕೆ 1.79 ಕೋಟಿ ರೂ. ಬಿಡುಗಡೆಯಾಗಿದೆ. ಐಸಿಎಂಆರ್ ನಿಯಮಾವಳಿಯ ಅನುಗುಣವಾಗಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ …

Read More »