Breaking News

60 ವರ್ಷ ಮೇಲ್ಪಟ್ಟವರಿಗೆ ಹೋಂ ಐಸೋಲೇಷನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟು ಬೇರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಕಡ್ಡಾಯವಾಗಿ ಹೋಂ ಐಸೋಲೆಷನ್ ಮಾಡಲಾಗುವುದು. ಈ ಸಂಬಂಧ ಕಾನೂನು ಜಾರಿಗೆ ಚಿಂತನೆ ನಡೆದಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ. 60 ವರ್ಷ ಮೇಲ್ಪಟ್ಟವರು ಮನೆಯಿಂದ ಹೊರ ಬರಬಾರದು. ವಾಕಿಂಗ್‍ಗೂ ಬರುವಂತಿಲ್ಲ. ಅವರನ್ನ ಮನೆ ಒಳಗೆ ಇರಿಸುವುದಕ್ಕೆ ಶೀಘ್ರವಾಗಿ ಕಾನೂನು ರೂಪಿಸ್ತೇವೆ. ಜೊತೆಗೆ ಟೆಸ್ಟಿಂಗ್ ಹೆಚ್ಚಿಸ್ತೇವೆ. ಕೋವಿಡ್ ಟೆಸ್ಟ್ ಮಾಡಿಸಿದ 24 ಗಂಟೆಯೊಳಗೆ ರಿಪೋರ್ಟ್ ನೀಡಬೇಕು ಅಂತ …

Read More »

ಬಳ್ಳಾರಿ: ಜಿಲ್ಲೆಯಲ್ಲಿ ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು..

ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದೆ.   ಜಿಲ್ಲೆಯಲ್ಲಿ ಇಂದು ಒಂದೇ ದಿನ 139 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಕೇವಲ ಜಿಂದಾಲ್ ಒಂದರಲ್ಲೇ ಈವರೆಗೆ ಅಂದಾಜು 479 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆ ನೌಕರರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1307ಕ್ಕೆ ಏರಿಕೆಯಾಗಿದ್ದು, 580 ಮಂದಿ …

Read More »

ಅಂಧನಿಗೆ ದಾರಿ ಮಾಡಿಕೊಟ್ಟ ನಾಯಿ…………

ಮುಂಬೈ: ಹಲವು ಬಾರಿ ವಿಕಲಚೇತನರಿಗೆ ಯಾರೂ ಸಹಾಯ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ಅಂಧ ವ್ಯಕ್ತಿಗೆ ನಾಯಿ ಸಹಾಯ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ನೆಟ್ಟಿಗರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಾಯಿ ಅಂಧನಿಗೆ ಸಹಾಯ ಮಾಡುವ ವಿಡಿಯೋವನ್ನು ಪುಣೆಯ ಪೊಲೀಸ್ ಆಯಕ್ತರು ಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ. ಅಂಧ ವ್ಯಕ್ತಿಯೊಬ್ಬರು ನಡೆದು ಹೋಗುತ್ತಿರುವಾಗ ದಾರಿಯಲ್ಲಿ ಅಡ್ಡಲಾಗಿ ದೊಡ್ಡ ಕೋಲು ಬಿದ್ದಿರುತ್ತದೆ. ಇದನ್ನು …

Read More »

70 ವರ್ಷದ ಅಜ್ಜ, 7 ವರ್ಷದ ಮೊಮ್ಮಗಳು – 6 ದಿನ ರೇಪ್

ಚೆನ್ನೈ: 70 ವರ್ಷದ ಕಾಮುಕ ಅಜ್ಜನೊಬ್ಬ ಏಳು ವರ್ಷದ ಬಾಲಕಿಯನ್ನು ಅತ್ಯಾಚಾರಗೈದಿರುವ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಏನಿದು ಪ್ರಕರಣ?: ಸಂತ್ರಸ್ತ ಬಾಲಕಿ ಅಪ್ಪ-ಅಮ್ಮ ಹಾಗೂ ಅಣ್ಣನ ಜೊತೆಯಲ್ಲಿ ವಾಸವಾಗಿದ್ದಳು. ಬಾಲಕಿಯ ಪೋಷಕರು ಈರುಳ್ಳಿ ವ್ಯಾಪಾರ ಮಾಡಿಕೊಂಡಿದ್ದು, ಪ್ರತಿನಿತ್ಯ ಮಗನನ್ನು ಕರೆದುಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದರು. ಸೇಫ್ ಆಗಿರಲಿ ಎಂದು ಏಳು ವರ್ಷದ ಮಗಳನ್ನು ಅಜ್ಜನ ಬಳಿ …

Read More »

ಸಂಬಂಧಿಕರ ನಡುವಿನ ಜಗಳ ತಾರಕಕ್ಕೇರಿ ಶೂಟೌಟ್……

ಧಾರವಾಡ: ಆಸ್ತಿ ವಿಚಾರಕ್ಕೆ ಸಂಬಂಧಿಕರ ನಡುವಿನ ಜಗಳ ತಾರಕಕ್ಕೇರಿ ಶೂಟೌಟ್ ನಡೆದಿದ್ದು, ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿವಯೋಗಿ ಬಾವಿಕಟ್ಟಿ (44) ಮೃತ ವ್ಯಕ್ತಿ. ನಗರದ ಮದಿಹಾಳದ ಗಣೇಶನಗರದಲ್ಲಿ ಶನಿವಾರ ಕಳೆದ ತಡರಾತ್ರಿ ಘಟನೆ ನಡೆದಿದೆ. ಜಿಲ್ಲೆಯ ಶಿರೂರ ಗ್ರಾಮದ ಶ್ರೀ ಶೈಲ್ ಎಂಬಾತ ತನ್ನ ರಿವಾಲ್ವರ್‌ನಿಂದ ಶಿವಯೋಗಿಯನ್ನು ಶೂಟ್ ಮಾಡಿ ಕೊಲೆ ಮಾಡಿದ್ದಾನೆ. ಶಿರೂರ ಗ್ರಾಮದಲ್ಲಿ ಶ್ರೀಶೈಲ್ ಹಾಗೂ ಆತನ ಸಹೋದರಿ ಸುವರ್ಣಾಗೆ ಸಂಬಂಧಿಸಿದ ಆಸ್ತಿ …

Read More »

ಒಂದೇ ದಿನ 55ಖಾಕಿ ಗಳಿಗೆ ಕರೋನ್…….ನೀವು ಸೇಫ್ ಆಗಿ ಇದೀರಾ….?

ಬೆಂಗಳೂರು: ಕೊರೊನಾ ಮಹಾ ಸುನಾಮಿ ರಾಜ್ಯದ ಮೇಲೆ ಕಳೆದೊಂದು ವಾರದಿಂದ ನಿರಂತರವಾಗಿ ದೊಡ್ಡ ದಾಳಿ ಮಾಡುತ್ತಿದೆ. ಡೆಡ್ಲಿ ವೈರಸ್ ಪ್ರತಿ ದಿನವೂ ತನ್ನೆಲ್ಲಾ ಹಿಂದಿನ ದಾಖಲೆಗಳನ್ನು ಪುಡಿಗಟ್ಟಿ ಹೊಸ ಇತಿಹಾಸ ಬರೆಯುತ್ತಿದೆ. ನೋಡ ನೋಡುತ್ತಲೇ ಸೋಂಕಿತರ ಸಂಖ್ಯೆ 23,474ಕ್ಕೆ ಬಂದು ನಿಂತಿದೆ. ಇಂದು ಒಂದೇ ದಿನ 1,925 ಮಂದಿಯನ್ನ ಹೆಮ್ಮಾರಿ ವಕ್ಕರಿಸಿಕೊಂಡಿದೆ. ಬೆಂಗಳೂರಿನ ಅಂಕಿ ಅಂಶಗಳಂತೂ ಮಹಾನಗರವನ್ನ ಬಿಟ್ಟು ಹೋಗುವಂತೆ ಮಾಡಿದೆ. ಇಂದು ರಾಜಧಾನಿ ಬೆಂಗಳೂರಲ್ಲಿ ಹೊಸದಾಗಿ 1235 ಜನರ …

Read More »

ಕರುನಾಡ ಚಕ್ರವರ್ತಿಯ ಹುಟ್ಟುಹಬ್ಬಕ್ಕೆ ಕಿಚ್ಚನಿಂದ ಅಡ್ವಾನ್ಸ್ ಗಿಫ್ಟ್

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹುಟ್ಟುಹಬ್ಬಕ್ಕೆ ಇನ್ನೂ 7 ದಿನ ಬಾಕಿ ಇದ್ದು, ಅವರ ಅಭಿಮಾನಿಗಳು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿರುವುದು ಒಂದು ಕಡೆಯಾದರೆ ಇನ್ನೊಂದೆಡೆ ಕಿಚ್ಚ ಸುದೀಪ್ ಈಗಲೇ ವಿಶೇಷ ಗಿಫ್ಟ್ ನೀಡುವ ಮೂಲಕ ಶುಭ ಕೋರಿದ್ದಾರೆ. ನಟ ಶಿವರಾಜ್ ಕುಮಾರ್ ಕೊರೊನಾ ಕಾರಣದಿಂದಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಹುಟ್ಟುಹಬ್ಬದ ದಿನ ಮನೆಯಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ. …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹೇಗೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಿಂದ ಸೋಂಕಿನ ಸಂಖ್ಯೆಯ ಪ್ರಮಾಣ ಅಧಿಕವಾಗಿದೆ. ಪ್ರತಿನಿತ್ಯ ರಾಜ್ಯದ ಹೆಲ್ತ್ ಬುಲೆಟಿನ್ ಬೆಂಗಳೂರು ಹೊರತುಪಡಿಸಿದರೆ ಮಂಗಳೂರಿನಲ್ಲೇ ಹೆಚ್ಚಿನ ಪ್ರಕರಣಗಳನ್ನು ವರದಿ ಆಗುತ್ತಿವೆ. ಇನ್ನು ಇಂದು ಒಂದೇ ದಿನ 147 ಜನರಿಗೆ ಸೋಂಕು ಹಬ್ಬಿದ್ದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚು ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 147 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಈವರೆಗೆ 6 ಜನ ಬಲಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಕಾಟ ಬೆಂಬಿಡದೇ ಕಾಡುತ್ತಿದೆ.ಇಂದು ಮತ್ತೆ 11 ಜನ ಸೊಂಕಿತರು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 393 ಕ್ಕೇರಿದಂತಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ 11ಜನ ಸೊಂಕಿತರ ಪೈಕಿ ನಾಲ್ಕು ಜನ ಬೆಳಗಾವಿ ನಗರದವರಾಗಿದ್ದಾರೆ. ಒಬ್ಬರು ವೀರಭದ್ರ ನಗರ ಬೆಳಗಾವಿ ವಯಸ್ಸು (48) ಸಾವು ಇನ್ನೊಬ್ಬರು ಸುಭಾಷ್ ನಗರ ,ಅನಿಗೋಳ,ಹನುಮಾನ ನಗರದಲ್ಲಿ ತಲಾ ಒಂದು ಅಥಣಿ ತಾಲ್ಲೂಕು 5 ರಾಯಬಾಗ 1 …

Read More »

ಗೋಕಾಕ ರಸಗೊಬ್ಬರ ಮಳಿಗೆಯೊಂದರ ಮೇಲೆ ಕೃಷಿ ಇಲಾಖೆಯ ತಂಡ ದಾಳಿ,……………

ಗೋಕಾಕ: ರೈತರ ದೂರಿನ ಹಿನ್ನೆಲೆಯಲ್ಲಿ ತಾಲೂಕಿನ ಮಮದಾಪುರ ಗ್ರಾಮದ ರಸಗೊಬ್ಬರ ಮಳಿಗೆಯೊಂದರ ಮೇಲೆ ಕೃಷಿ ಇಲಾಖೆಯ ಚಿಕ್ಕೊಡಿ ವಿಭಾಗದ ಉಪನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿತು. ಜಿಲ್ಲಾಧಿಕಾರಿಗಳಿಗೆ ರೈತರು ನೀಡಿದ್ದ ದೂರನನ್ವಯ ದಾಳಿ ನಡೆಸಿದ ಅಧಿಕಾರಿಗಳು, ಅಂಗಡಿಯ ದಾಸ್ತಾನು ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಯೂರಿಯಾ ಹಾಗೂ ರಸಗೊಬ್ಬರಗಳನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುವುದು, ಪರವಾನಿಗೆ ಇಲ್ಲದ ರಸಗೊಬ್ಬರಗಳನ್ನು ಮಾರಾಟ ಮಾಡುವುದು. ರಸಗೊಬ್ಬರಗಳನ್ನು ಪರವಾನಿಗೆಯಲ್ಲಿ ಘೋಷಿಸದೇ ಇರುವ ಸ್ಥಳಗಳಲ್ಲಿಸಂಗ್ರಹಿಸಿಟ್ಟು …

Read More »