Breaking News

ಮೂಡಲಗಿ ತಾಲ್ಲೂಕಿನ ಪಿಕೆಪಿಎಸ್ ಅಧ್ಯಕ್ಷರ ಸಭೆ:ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಶೀಘ್ರ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

  *ಬಿಡಿಸಿಸಿ ಬ್ಯಾಂಕಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಶೀಘ್ರ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* ಗೋಕಾಕ- ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಕ್ಷೇತ್ರದಿಂದ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮ ಮಾಡಲಾಗುವುದು. ನಾವು ಒಮ್ಮತದಿಂದ ಆಯ್ಕೆ ಮಾಡುವ ಅಭ್ಯರ್ಥಿಗಳಿಗೆ ತಮ್ಮೆಲ್ಲರ ಸಹಕಾರ ಅವಶ್ಯವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಾರ್ಯಾಲಯದಲ್ಲಿ …

Read More »

ಅಥಣಿ ತಾಲೂಕಿನ ಕಾಡಸಿದ್ದೇಶ್ವರ ಮಠದಲ್ಲಿ 21ನೇ ದಸರಾ ಮಹೋತ್ಸವ ಭಕ್ತಿಯಿಂದ ಆಚರಿಸಲಾಯಿತು.

ಅಥಣಿ ತಾಲೂಕಿನ ಕಾಡಸಿದ್ದೇಶ್ವರ ಮಠದಲ್ಲಿ 21ನೇ ದಸರಾ ಮಹೋತ್ಸವ ಭಕ್ತಿಯಿಂದ ಆಚರಿಸಲಾಯಿತು. ಅಖಂಡ ಭಾರತ ಸುಭದ್ರ ರಾಷ್ಟ್ರ ನಿರ್ಮಾಣ ಸಂಕಲ್ಪ ಮಾಡಿಕೊಂಡು ದಸರಾ ಮಹೋತ್ಸವದ ನಿಮಿತ್ಯ ನಿರಂತರ 11 ದಿನಗಳ ದೀಪೋತ್ಸವ ಕಾರ್ಯಕ್ರಮ ಇಲ್ಲಿಗೆ ಹಮ್ಮಿಕೊಂಡು ಅಖಂಡ ಭಾರತ ಸುಭದ್ರ ರಾಷ್ಟ್ರ ನಿರ್ಮಾಣಕೆ ಕರೆ ವಿಜಯ ದಶಮಿ ನಿಮಿತ್ಯ ಯುವಕರಿಗೆ ನೀಡಲಾಗಿದೆ, ಎಂದು ಆಶ್ರಮದ ಧರ್ಮಾಧಿಕಾರಿ ಡಾಕ್ಟರ್ ಕಾಡಯ್ಯ ಸ್ವಾಮೀಜಿ ಇವರು ಸಂಕಲ್ಪ ಮಾಡಿದರು. ಶ್ರೀ ಗುರು ಕಾಡಸಿದ್ದೇಶ್ವರ ಕಾಡೆಯ …

Read More »

ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

ಬೆಂಗಳೂರು, ಅಕ್ಟೋಬರ್​ 04: ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್​​ (Coldrif syrup) ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ (Ban) ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಪತ್ರ ಬರೆಯುವ ಮೂಲಕ ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಮಾರಾಟ ಮಾಡದಂತೆ ಸೂಚನೆ ನೀಡಿದೆ.ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಎಲ್ಲಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್​ಗಳಿಗೆ ಪತ್ರ ಬರೆಯಲಾಗಿದ್ದು, ಕೋಲ್ಡ್ರಿಫ್​​​ …

Read More »

ಉತ್ತರ ಕರ್ನಾಟಕ ಭಾಗದ ಪ್ರಮುಖ ರೈಲು ಯೋಜನೆಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುವುದು. ಅದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ರೈಲು ಯೋಜನೆಗಳಾದ ಹುಬ್ಬಳ್ಳಿ-ಅಂಕೋಲಾ, ಧಾರವಾಡ-ಬೆಳಗಾವಿ, ಗದಗ-ಯಲವಗಿ ಸೇರಿದಂತೆ ಎಲ್ಲ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದ ರೈಲ್ವೆ ಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಪಗ್ರೇಡ್​​ ಮಾಡಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ರೈಲ್ವೆ ಬೋರ್ಡ್​ಗೆ ಪ್ರಸ್ತಾವನೆ ಕಳುಹಿಸಿಕೊಡಲಾಗುವುದು. ಹುಬ್ಬಳ್ಳಿ – ಅಂಕೋಲಾ …

Read More »

ಬೆಳಗಾವಿಯಲ್ಲಿ ಕಲ್ಲು ತೂರಾಟ ಘಟನೆಗೆ ರಾಜ್ಯ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ: ಬಸವರಾಜ ಬೊಮ್ಮಾಯಿ

ಹಾವೇರಿ: ಬೆಳಗಾವಿಯಲ್ಲಿ ಕಲ್ಲು ತೂರಾಟ ಘಟನೆಗೆ ರಾಜ್ಯ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅರಾಜಕತೆ, ಹಿಂಸೆ ಮಾಡಬೇಕು ಅನ್ನೋದು ಒಂದು ವರ್ಗದ ಹುನ್ನಾರ. ಅದಕ್ಕೆ ಕೆಲವು ಶಕ್ತಿಗಳು ಬೆಂಬಲ ನೀಡುತ್ತಿದ್ದಾರೆ ಎಂದು ದೂರಿದರು. ಉತ್ತರಪ್ರದೇಶ ರಾಜ್ಯದಲ್ಲಿ ಈ ರೀತಿ ಇತ್ತು. ದಾವಣಗೆರೆ ಘಟನೆ ನಡೆದ ನಂತರ ಕರ್ನಾಟಕದಲ್ಲಿ ನಿಯಂತ್ರಣ ಮಾಡಬೇಕು ಅನ್ನೋ …

Read More »

ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿದೆ: ಸಿಎಂ

ಬೆಳಗಾವಿ: ”ಎನ್​ಡಿಆರ್​ಎಫ್​ ಅನುದಾನವನ್ನು ನಾವು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿಲ್ಲ. ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿಕೊಂಡಿದೆ. ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಯಶಸ್ವಿ ಆಗಿದ್ದರಿಂದ ಬಿಜೆಪಿಯವರಿಗೆ ತಳಮಳ ಶುರುವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಪ್ರತಿಪಕ್ಷದ ನಾಯಕ ಆರ್.ಅಶೋಕ್​ ಆರೋಪಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಉತ್ತರಿಸಿದ್ದಾರೆ. ”ಹರಿಯಾಣ, ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಅನುಕರಣೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ …

Read More »

ಕಾರ್ಯಕರ್ತರಿಗೆ ಇಂದು ಸಂಜೆ ‘ಕಾಂತಾರ’ ಪ್ರದರ್ಶನ: ಇಡೀ ಥಿಯೇಟರ್​ ಬುಕ್​ ಮಾಡಿದ ಪ್ರತಾಪ್ ಸಿಂಹ

ಮೈಸೂರು: ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ – ನಿರ್ದೇಶಕ ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್​ 1’ ಗುರುವಾರದಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಹುಭಾಷೆಗಳಲ್ಲಿ ಬಿಡುಗಡೆ ಆಗಿದೆ. ಎಲ್ಲೆಡೆ ಸಿನಿಮಾ ಸದ್ದು ಜೋರಾಗಿದ್ದು, ಮಾಜಿ ಸಂಸದ ಯಶಸ್ವಿ ಸಿನಿಮಾ ವೀಕ್ಷಿಸಲು ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಕಾಂತಾರ ಚಾಪ್ಟರ್​ 1 ವೀಕ್ಷಿಸಲು ಟಿಕೆಟ್ ಬುಕ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಪಕ್ಷದ ಕಾರ್ಯಕರ್ತರನ್ನು ಡಿಆರ್‌ಸಿಗೆ ಆಹ್ವಾನಿಸಿದ್ದಾರೆ. ಇಂದು ಸಂಜೆಯ 4 ಗಂಟೆಯ ಶೋಗೆ …

Read More »

ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನಿರ್ಮಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಉಪಕರಣಗಳನ್ನು, ಜೊತೆಗೆ ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಡಿ ನಿರ್ಮಿಸಲಾದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಹೊಸ ಆವರಣದಲ್ಲಿ …

Read More »

ಗೋಕಾಕ ತಾಲೂಕಿನ ಕಪರಟ್ಟಿಯಲ್ಲಿ ಮನಕಲುಕುವ ಘಟನೆ: ತ್ರಿಬಲ್ ಶಾಕ್

ಗೋಕಾಕ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನು ಸಹಿತ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಿಗ್ಗೆ ನಸುಕಿನ ಜಾವ ಸುಮಾರು 4 ಘಂಟೆಗೆ ಅನಾರೋಗ್ಯದಿಂದ 10 ನೇ ತರಗತಿಯಲ್ಲಿ ಓದುತ್ತಿದ್ದ ಸತೀಶ್ ಬಾಗನ್ನವರ (16) ಮೃತಪಟ್ಟಿದ್ದರು. ಈತನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಬದುಕುಳಿಯುವುದಿಲ್ಲ ಎಂದು ಇವನ ಅಣ್ಣ ಬಸವರಾಜ ಬಾಗನ್ನವರ (24) ಗೆ ತಿಳಿದಾಗ, ಇತನು ಸಹಿತ ಕುಸಿದು …

Read More »

ಪಟ್ಟಾಲೀಜ್ ಹೆಸರಿನಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸಾಗಿಸುತ್ತಿರುವ ಮರಳು

ರಾಮದುರ್ಗ : ಪಟ್ಟಾಲೀಜ್ ಹೆಸರಿನಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮರಳು ಸಾಗಿಸುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ಸುಭಾಷ ಬೆಳವಲ ಎಂಬುವವರ ಹೆಸರಿನಲ್ಲಿ ಲೀಜ್ ಆಗಿದೆ ಎಂದು ತಿಳಿದು ಬಂದಿದೆ. ಆದರೆ ಈ ಲೀಜ್ ಆಗಿ ಐದು ವರ್ಷ ಕಳೆಯುತ್ತ ಬಂದಿದ್ದು, ಮಳೆಗಾಳ ಹಾಗೂ ಬೇಸಿಗೆಯಲ್ಲಿ ಮರಳು ಸಿಗದೆ ಇದ್ದ ಸಂಧರ್ಭದಲ್ಲಿ ಈ ಸುಭಾಷ ಅವರು ಆಡಿದ್ದೆ ಆಟ, ಮಾಡಿದ್ದೇ …

Read More »