Breaking News

ಶಾಸಕರಿಗೆಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿ ಗೌರವಿಸಿದ್ದಾರೆ.

ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಕಾಲು ತೊಳೆದು, ಹೂವು ಹಾಕಿ ಬೆಂಬಲಿಗರು ಪಾದಪೂಜೆ ಮಾಡಿವ ಮೂಲಕ ಅಂಧಾಭಿಮಾನ ಮೆರೆದಿದ್ದಾರೆ. ಚಾಮರಾಜಪೇಟೆಯಲ್ಲಿ ಬಂಗಾರದ ಮನುಷ್ಯ ಜಮೀರಣ್ಣ ಅಭಿಮಾನಿಗಳ ಬಳಗದಿಂದ ಕಾರ್ಯಕ್ರಮ ಆಯೋಜಿಸಿ, ಪಾದಪೂಜೆ ಮಾಡಿ ಗೌರವಿಸಿದ್ದಾರೆ. ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ಮರೆತು ಒಟ್ಟೊಟ್ಟಾಗಿ ನಿಂತು ಪಾದಪೂಜೆ ಮಾಡಿದ್ದಾರೆ. ಅಲ್ಲದೆ ಬಂಗಾರದ ಮನುಷ್ಯ ಜಮೀರಣ್ಣ ಎಂಬ ಕಟೌಟ್‍ನ್ನು ಶಾಸಕ ಜಮೀರ್ ಅಹ್ಮದ್ ಕಡೆಯಿಂದಲೇ ಬಿಡುಗಡೆ ಮಾಡಿಸಿದ್ದಾರೆ. ಈ ವೇಳೆ …

Read More »

ಆಟೋ ಚಾಲಕನಿಗೆ ವಕ್ಕರಿಸಿದ ವೈರಸ್…. be alert alll.

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಸೋಂಕು ಆಟೋದಲ್ಲಿ ಸುತ್ತಾಡಿದ್ದು ಜನ ಭಯಭೀತಗೊಂಡಿದ್ದಾರೆ. ಆಟೋ ಚಾಲಕನಿಗೆ ಪಾಸಿಟಿವ್ ಬಂದಿದ್ದು, ಯಾರಿಗೆಲ್ಲಾ ಸೋಂಕು ಹಂಚಿದ್ದಾರೋ ಎಂಬ ಆತಂಕ ಮನೆ ಮಾಡಿದೆ. ಚಿತ್ರದುರ್ಗದ ಸ್ವಾಮಿವಿವೇಕಾನಂದ ನಗರದಲ್ಲಿ ಓರ್ವನಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಸದ್ಯ ಸೀಲ್‍ಡೌನ್‍ಗೆ ಒಳಗಾಗಿದೆ. 27 ವರ್ಷದ ಆಟೋ ಚಾಲಕನಿಗೆ ಸೋಂಕು ವಕ್ಕಿರಿಸಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಆಟೋ ಚಾಲಕ ತನ್ನ ಸಂಬಂಧಿಗಳ ಊರುಗಳಾದ ಕೊಪ್ಪಳದ ಗಂಗಾವತಿ ಹಾಗೂ ಸೊಂಡೂರಿನಲ್ಲಿ ಸುತ್ತಾಡಿದ್ದನು. ಕಳೆದ 15 …

Read More »

ಕೊರೋನಾಗೆ ಬಲಿಯಾದವರನ್ನು ಅಮಾನವೀಯವಾಗಿ ಅಂತ್ಯಕ್ರಿಯೆ ಮಾಡಿದ ಸಿಬ್ಬಂದಿ ಸಸ್ಪೆಂಡ್..!

ಬೆಂಗಳೂರು-ಕೊರೋನಾ ಸೋಂಕು ದೃಡಪಟ್ಟು ಮೃತಪಟ್ಟವರನ್ನು ಅತ್ಯಂತ ಅಮಾನವೀಯವಾಗಿ ಅಂತ್ಯ ಸಂಸ್ಕಾರ ನಡೆಸಿದ್ದ ಬಳ್ಳಾರಿ ಜಿಲ್ಲೆಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತು ಪಡಿಸಿದೆ. ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದರು.ಇದರಿಂದ ತಕ್ಷಣವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅಂತ್ಯಸಂಸ್ಕಾರ ಮಾಡಿದ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಪಡಿಸಿದೆ. ಇ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

Read More »

ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು

ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …

Read More »

ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ

ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …

Read More »

ಬೆಳಗಾವಿನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕರಿಸಿದರು.

ಬೆಳಗಾವಿ -: ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರ (ಜೂ.30) ಅಧಿಕಾರ ಸ್ವೀಕರಿಸಿದರು. ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು. ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ಆದರೆ ನಾನು ಮೂಲತಃ ಬೆಳಗಾವಿ ಜಿಲ್ಲೆಯವನಾಗಿರುವುದರಿಂದ ಕೆಲಸ ಸುಲಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗದಗ ಜಿಲ್ಲೆಯಲ್ಲಿ ಪ್ರವಾಹ ನಿರ್ವಹಿಸಿದ ಅನುಭವವಿದೆ. ಕೊರೊನಾ, ನೆರೆ, ಬರ ಸೇರಿದಂತೆ ಎಲ್ಲ ಪರಿಸ್ಥಿತಿಯನ್ನು ನಿಭಾಯಿಸಿದ ಅನುಭವವಿದೆ. ಅದು ಇಲ್ಲಿ …

Read More »

ಕಾರ್ಯನಿರ್ವಹಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ವರ್ಗಾವಣೆ,ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ

ಧಾರವಾಡ: ಕೊರೊನಾ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ. ದೀಪಾ ಚೋಳನ್ ಅವರು ಕಳೆದ ಎರಡು ವರ್ಷಗಳಿಂದ ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದರು. ರಾಜ್ಯ ಸರ್ಕಾರ ದೀಪಾ ಚೋಳನ್ ಅವರನ್ನು ಸರ್ವ ಶಿಕ್ಷಣ ಅಭಿಯಾದ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ. ಧಾರವಾಡ ನೂತನ ಜಿಲ್ಲಾಧಿಕಾರಿಗಳಾಗಿ ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು. ಇತ್ತ ಕೊರೊನಾ ದಿನೇ ದಿನೇ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಾವು ತಡೆಯುವ …

Read More »

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …

Read More »

ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ

ಚಿಕ್ಕೋಡಿ(ಬೆಳಗಾವಿ): ಒಂದು ಕಡೆ ಆ ಗ್ರಾಮಸ್ಥರಿಗೆ ಸರ್ಕಾರನೇ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ ಅಲ್ಲದೇ ಸರ್ಕಾರದ ಯೋಜನೆಯಡಿ ಆಶ್ರಯ ಮನೆಗಳನ್ನು ನಿರ್ಮಿಸಿ ಕೊಟ್ಟಿದೆ. ಆದರೆ ಈಗ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಸರ್ಕಾರದ ತೀರ್ಮಾನದಿಂದ ಇಡೀ ಪಟ್ಟಣದ ಜನರೇ ಬೀದಿಗೆ ಬರುವ ಸ್ಥಿತಿ ಬಂದಿದೆ. ಕಳೆದ 40 ವರ್ಷಗಳಿಂದ ನೆಮ್ಮದಿಯಿಂದ ಇದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿ ಗ್ರಾಮಸ್ಥರ ಜನರ ಪರಿಸ್ಥಿತಿ ಈಗ ಸರ್ಕಾರದ ಒಂದು …

Read More »