ವರ್ಷಗಳ ವಿಳಂಬದ ಬಳಿಕ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಸಿದ್ಧ: ಆಗಸ್ಟ್ ಮಧ್ಯದಲ್ಲಿ ಕಾರ್ಯಾರಂಭ ಸಾಧ್ಯತೆ ಬೆಂಗಳೂರು: ಆರ್ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ 19.15 ಕಿ.ಮೀ. ಉದ್ದದ ನಮ್ಮ ಮೆಟ್ರೋದ ಬಹು ನಿರೀಕ್ಷಿತ ಹಳದಿ ಮಾರ್ಗ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು ಮಂಗಳವಾರ ಶಾಸನಬದ್ಧ ತಪಾಸಣೆ ಪ್ರಾರಂಭಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳುವ ಮುನ್ಸೂಚನೆ ಸಿಕ್ಕಿದೆ. ಆಗಸ್ಟ್ ಮಧ್ಯದಲ್ಲಿ ಸಾರ್ವಜನಿಕರಿಗೆ ತೆರದುಕೊಳ್ಳುವ ನಿರೀಕ್ಷೆಯಿದೆ. ಹಳದಿ ಮಾರ್ಗದ ಉದ್ಘಾಟನೆ ವರ್ಷಗಳಿಂದ …
Read More »ಅಂದು ವರ, ಇಂದು ಶಾಪ; ಇದು ಬಳ್ಳಾರಿ ನಾಲಾ ಕಥೆ – ವ್ಯಥೆ: ನಾಲೆಗೆ ಬಳ್ಳಾರಿ ಹೆಸರು ಬಂದಿದ್ದು ಹೇಗೆ, ಏನಿದರ ಇತಿಹಾಸ?
ಬೆಳಗಾವಿ: ಒಂದು ಕಾಲದಲ್ಲಿ ಬೆಳಗಾವಿ ಜನತೆಗೆ ವರವಾಗಿದ್ದ ಈ ನಾಲಾ ಈಗ ಶಾಪವಾಗಿ ಪರಿಣಮಿಸಿದೆ. ಪರಿಶುದ್ಧವಾಗಿ ಹರಿಯುತ್ತಿದ್ದ ನೀರನ್ನು ನಾವು ಕುಡಿಯುತ್ತಿದ್ದೆವು. ಈಗ ಚರಂಡಿ ನೀರು ಸೇರಿ ಗಬ್ಬು ನಾರುತ್ತಿದೆ. ಇನ್ನು ಹೂಳು ತುಂಬಿದ ಪರಿಣಾಮ ಸಾವಿರಾರು ಎಕರೆ ಜಮೀನಿಗೆ ನೀರು ನುಗ್ಗಿ, ಬೆಳೆ ಹಾನಿ ಆಗುತ್ತಿದೆ ಎಂದು ರೈತರು ಕಣ್ಣೀರು ಸುರಿಸುತ್ತಿದ್ದಾರೆ. ನಾವು ಹೇಳಲು ಹೊರಟಿರುವುದು ಬೆಳಗಾವಿಯಲ್ಲಿರುವ ಬಳ್ಳಾರಿ ನಾಲಾ ಕಥೆ – ವ್ಯಥೆ ಮತ್ತು ಕೆಲ ಕುತೂಹಲಕಾರಿ ಸಂಗತಿಗಳನ್ನು. …
Read More »ಉಡುಪಿಯಲ್ಲಿ ಭಕ್ತಿ, ಜ್ಞಾನ, ಸೇವೆ ಮೂರೂ ಸಮ್ಮಿಳಿತವಾಗಿದೆ: ರಾಜ್ಯಪಾಲ ಗೆಹ್ಲೋಟ್
ಉಡುಪಿ: ದೇಶದಲ್ಲಿ ಅಸಹಿಷ್ಣುತೆ, ಸಮಾಜದಲ್ಲಿ ಆತ್ಮ ವಿಸ್ಮೃತಿ ಭಾವನೆ ಹೆಚ್ಚುತ್ತಿದ್ದು ಯುವಜನತೆ ಭಕ್ತಿ, ಕರ್ತವ್ಯಪರತೆಯ ನೆಲೆಯಲ್ಲಿ ನಿರ್ಭಯ, ವಿವೇಕಶೀಲ ಕರ್ಮ ಯೋಗಿಗಳಾಗಬೇಕು ಎಂದು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆ.1ರಿಂದ ಸೆ.17ರ ತನಕ ನಡೆಯುವ ಶ್ರೀಕೃಷ್ಣ ಮಂಡಲೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀಕೃಷ್ಣ ಗೀತೆಯಲ್ಲಿ ಬೋಧಿಸಿದ ಜ್ಞಾನ, ಕರ್ಮ, ಭಕ್ತಿಯೋಗದಿಂದ ನಿಷ್ಕಾಮ ಭಾವ ಹೊಂದಿ ಫಲರಹಿತ ಚಿಂತನೆಯಿಂದ ಯಾವುದೇ ಕಾರ್ಯದಲ್ಲಿ ತೊಡಗಬೇಕು. ಆತ್ಮೋನ್ನತಿಗಾಗಿ ಜೀವನದ ಉದ್ದೇಶ …
Read More »ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು
ಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ ಲೇಔಟ್ ನಿವಾಸಿಯಾಗಿದ್ದ ಅರುಣ್ ಕುಮಾರ್ (24) ಮೃತ ಯುವಕ. ಜುಲೈ19ರಂದು ಐದಾರು ಯುವಕರು ಮಾರಕಾಸ್ತ್ರಗಳಿಂದ ನಡೆಸಿದ್ದ ಹಲ್ಲೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅರುಣ್ ಕುಮಾರ್, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರುಣ್ ಕುಮಾರ್, ಜುಲೈ 19 ರಂದು ರಾತ್ರಿ 10 …
Read More »ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಮತ್ತೊಮ್ಮೆ ವಜಾಗೊಳಿಸಿದ ವಿಶೇಷ ನ್ಯಾಯಾಲಯ
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡನೇ ಬಾರಿ ವಜಾಗೊಳಿಸಿ ಆದೇಶಿಸಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಮೊದಲು ಜಾಮೀನು ಕೋರಿ ಪ್ರಜ್ವಲ್ ಎರಡನೇ …
Read More »ಮಳೆ ಅಬ್ಬರ: ಇಂದು ಶಿವಮೊಗ್ಗ ಜಿಲ್ಲಾದ್ಯಂತ, ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ
ಮಳೆ ಅಬ್ಬರ: ಇಂದು ಶಿವಮೊಗ್ಗ ಜಿಲ್ಲಾದ್ಯಂತ, ಚಿಕ್ಕಮಗಳೂರಿನ ಕೆಲ ತಾಲೂಕುಗಳಲ್ಲಿ ಶಾಲೆಗೆ ರಜೆ ಶಿವಮೊಗ್ಗ: ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶನಿವಾರ (ಇಂದು) ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಅರೆಂಜ್ ಅಲರ್ಟ್ ಘೋಷಿಸಿದೆ. ಇದರಿಂದ, ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ …
Read More »ಕಾಲ್ತುಳಿತ ಪ್ರಕರಣ: ಅಧಿಕಾರಿಗಳ ಅಮಾನತು ಸಮರ್ಥಿಸಿಕೊಂಡ ರಾಜ್ಯ ಸರ್ಕಾರ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಜನರ ಗುಂಪು ಸೇರುವುದಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ವಿಫಲವಾಗಿರುವುದರಿಂದ ಐದು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಿರುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ಗೆೆ ತಿಳಿಸಿದೆ. ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಪಡಿಸಿರುವ ಕೇಂದ್ರೀಯ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ) ಆದೇಶ ಪ್ರಶ್ನಿಸಿ, ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ಹಾಗೂ ಸಿಎಟಿ ಆದೇಶದಲ್ಲಿ, ದುರ್ಘಟನೆಗೆ ತಾನೇ ಕಾರಣ ಎಂದಿರುವ ಅಂಶಗಳನ್ನು ತೆಗೆದು ಹಾಕುವಂತೆ ಕೋರಿರುವ ಆರ್ಸಿಬಿ …
Read More »‘ನನ್ನ ಬೆಳಗಾವಿಗಾಗಿ ನನ್ನ ಸಲಹೆ’: ಹೊಸ ಅಭಿಯಾನ ಆರಂಭಿಸಿದ ಪೊಲೀಸ್ ಕಮಿಷನರ್
ಬೆಳಗಾವಿ: ಉತ್ತಮ, ಸುರಕ್ಷಿತ ಬೆಳಗಾವಿ ನಗರ ನಿರ್ಮಾಣಕ್ಕೆ ಪೊಲೀಸ್ ಕಮಿಷನರ್ ಪಣ ತೊಟ್ಟಿದ್ದು, ಆ ನಿಟ್ಟಿನಲ್ಲಿ ಹೊಸ ಪ್ರಯೋಗಗಳಿಗೆ ಕೈ ಹಾಕಿದ್ದಾರೆ. ಪೊಲೀಸ್ ವೆಬ್ ಸೈಟ್ ನಲ್ಲಿ ಸಾರ್ವಜನಿಕರಿಗಾಗಿಯೇ ಒಂದು ಪೇಜ್ ತೆರೆದಿದ್ದಾರೆ. “ನನ್ನ ಬೆಳಗಾವಿಗಾಗಿ ನನ್ನ ಸಲಹೆ” ಎಂಬ ಘೋಷವಾಕ್ಯದಡಿ ಸಾರ್ವಜನಿಕರಿಗೆ ಸಲಹೆ ನೀಡುವಂತೆ ಕೋರಿದ್ದಾರೆ. ಇದರಿಂದ ಬೆಳಗಾವಿ ಪೊಲೀಸರು ಜನರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಹೌದು, ಬೆಳಗಾವಿ ಪೊಲೀಸ್ ಕಮಿಷನರ್ ಆಗಿ ಭೂಷಣ ಗುಲಾಬರಾವ್ ಬೊರಸೆ ಅಧಿಕಾರ ಸ್ವೀಕರಿಸುತ್ತಿದ್ದಂತೆ ಹೊಚ್ಚ …
Read More »ಮೃತ್ಯುಕೂಪದಂತೆ ತೋರುತ್ತಿದೆ ಲೋಂಡಾಫಾಟಾ ರಸ್ತೆ…!!! ಗುಂಡಿಗಳಲ್ಲಿ ಕಾಣೆಯಾದ ರಸ್ತೆ!!!
ಮೃತ್ಯುಕೂಪದಂತೆ ತೋರುತ್ತಿದೆ ಲೋಂಡಾಫಾಟಾ ರಸ್ತೆ…!!! ಗುಂಡಿಗಳಲ್ಲಿ ಕಾಣೆಯಾದ ರಸ್ತೆ!!! ಬೆಳಗಾವಿ ಪಣಜಿ ಮಾರ್ಗದ ದುರಾವಸ್ಥೆ ಅಪಘಾತಕ್ಕೆ ಆಹ್ವಾನ ನೀಡುತ್ತಿದೆ. ಅಪಾಯಕಾರಿ ರಸ್ತೆಯ ಪರಿಸ್ಥಿತಿಯ ವಿರುದ್ಧ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತಾದ ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಹೌದು, ಬೆಳಗಾವಿ ಪಣಜಿ ಹೆದ್ದಾರಿಯ ಲೋಂಡಾಫಾಟಾ ಹತ್ತಿರದ ರಸ್ತೆಯಲ್ಲಿ ಗುಂಡಿಗಳ ಸಾಮ್ರಾಜ್ಯವೇ ನಿರ್ಮಾಣವಾಗಿದ್ದು, ಪರಿಸ್ಥಿತಿ ಅತ್ಯಂತ ಭಯಂಕರವಾಗಿದೆ. ಮಳೆಯ ಹಿನ್ನೆಲೆ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿಗಳಲ್ಲಿ ನೀರು ತುಂಬಿಕೊಂಡಿದೆ. ಅಭಿವೃದ್ಧಿ …
Read More »ಸಚಿವ ಜಮೀರ ಅಹ್ಮದ ಮೇಲೆ ಗರಂ ಆದ ಶಾಸಕ ಅಶೋಕ ಮನಗೂಳಿ
ಸಚಿವ ಜಮೀರ ಅಹ್ಮದ ಮೇಲೆ ಗರಂ ಆದ ಶಾಸಕ ಅಶೋಕ ಮನಗೂಳಿ ಆಶ್ರಯ ಯೋಜನೆಯಲ್ಲಿ ಮನೆಯ ವಿತರಣೆ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ ಅಹ್ಮದ ಮೇಲೆ ಶಾಸಕರೊರ್ವರು ಕೋಪಗೊಂಡ ವಿಡಿಯೋ ವೈರಲ್ ಆಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಕಾಂಗ್ರೆಸ್ ಪಕ್ಷದ ಶಾಸಕ ಅಶೋಕ ಮನಗೂಳಿ ಕೋಪಗೊಂಡಿದ್ದಾರೆ. 23 ಗ್ರಾಮ ಪಂಚಾಯತಿಗೆ ಮನೆ ಹೇಗೆ ಹಂಚಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗ ಸಚಿವ ಜಮೀರ ಅಹ್ಮದ ಚೀಟಿ ಮೇಲೆ ಏನೊ ಬರೆದುಕೊಟ್ಟಿದ್ದಾರೆ. …
Read More »