ಬಿಹಾರಿ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೊನಾ – ನಂಜನಗೂಡಂತೆ ಆಗುತ್ತಾ ಬೆಂಗ್ಳೂರಿನ ಹೊಗಸಂದ್ರ

ಬೆಂಗಳೂರು: ಕೊರೊನಾ ಕೇಸ್‍ನಲ್ಲಿ ಬೆಂಗಳೂರಿನ ಹೊಗಸಂದ್ರ ನಂಜನಗೂಡು ಆಗುತ್ತಿದಿಯಾ ಅನ್ನೋ ಆತಂಕ ಎದುರಾಗಿದೆ. ಕಾರಣ ಬಿಹಾರ ಮೂಲದ ಕಾರ್ಮಿಕನೊಬ್ಬನಿಂದಲೇ ಈ ಏರಿಯಾದಲ್ಲಿ ಒಂದೇ ದಿನ ಬರೋಬ್ಬರಿ 13 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಹಾರ ಮೂಲದ ಕಾರ್ಮಿಕ ಬೊಮ್ಮನಹಳ್ಳಿ ವಲಯಕ್ಕೆ ಬರುವ ಹೊಗಸಂದ್ರದಲ್ಲಿ ವಾಸಿಸುತ್ತಿದ್ದ. ಈತ ನಮ್ಮ ಮೆಟ್ರೋ ಕಾಮಗಾರಿಗೆ ಕೆಲಸ ಮಾಡುತ್ತಿದ್ದು, ಬರೋಬ್ಬರಿ 13 ಮಂದಿಗೆ ಕೊರೊನಾ ಹಬ್ಬಿರುವುದು ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಇಡೀ …

Read More »

ಬೆಂಗ್ಳೂರಿಗೆ ಲಾಕ್‍ಡೌನ್‍ನಿಂದ ಸದ್ಯಕ್ಕಿಲ್ಲ ರಿಲೀಫ್………

ಬೆಂಗಳೂರು: ಸರ್ಕಾರ ಮಹಾಮಾರಿ ಕೊರೊನಾ ವೈರಸ್ ಅನ್ನು ಹೊಡೆದೊಡಿಸಲು ಲಾಕ್‍ಡೌನ್ ಅಸ್ತ್ರವನ್ನು ಪ್ರಯೋಗಿಸಿದೆ. ಈ ಲಾಕ್‍ಡೌನ್ ಇಡೀ ದೇಶಾದ್ಯಂತ 3ರವರೆಗೂ ಮುಂದುವರಿಯಲಿದೆ. ಆದರೆ ಸಿಲಿಕಾನ್ ಸಿಟಿಗೆ ಮಾತ್ರ ಲಾಕ್‍ಡೌನ್‍ನಿಂದ ಮೇ 3ರಂದು ರಿಲೀಫ್ ಇಲ್ಲ. ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ರಾಜಧಾನಿ ಬೆಂಗಳೂರಲ್ಲಿ ದಾಖಲಾಗಿವೆ. ಈ ಕೊರೊನಾ ಪಾಸಿಟಿವ್ ಪ್ರಕರಣಗಳ ನಿಯಂತ್ರಣಕ್ಕೆ ಬಿಬಿಎಂಪಿ 19 ಕಂಟೈನ್‍ಮೆಂಟ್ ಝೋನ್‍ಗಳೆಂದು ವಿಂಗಡಿಸಿ, ಬಿಗಿ ಭದ್ರತೆ ಒದಗಿಸುತ್ತಿದೆ. ಆದರೆ ಈ ಕಂಟೈನ್‍ಮೆಂಟ್ ಝೋನ್‍ಗಳು ನಾರ್ಮಲ್ …

Read More »

ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. …

Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ. ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ …

Read More »

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ಕೊರೊನಾ ಎಫೆಕ್ಟ್ –

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ನಿಂದ ಈಗಾಗಲೇ ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡಾ.ರಾಜ್‍ಕುಮಾರ್ ಹುಟ್ಟುಹಬ್ಬಕ್ಕೂ ಕೊರೊನಾ ಎಫೆಕ್ಟ್ ತಟ್ಟಿದೆ. ಇಂದು ಡಾ.ರಾಜ್‍ಕುಮಾರ್ ಅವರಿಗೆ 92ನೇ ವರ್ಷದ ಹುಟ್ಟುಹಬ್ಬದ ದಿನ. ಆದರೆ ಕೊರೊನಾ ಲಾಕ್‍ಡೌನ್‍ನಿಂದ ಯಾವುದೇ ಅದ್ಧೂರಿ ಆಚರಣೆ ಇಲ್ಲ. ಆದ್ದರಿಂದ ಕುಟುಂಬಸ್ಥರು ಸರಳವಾಗಿ ಪೂಜೆ ಮಾಡಿ ಕಾರ್ಯ ಮಾಡಲಿದ್ದಾರೆ. ಹೀಗಾಗಿ ಇದೇ ಮೊದಲ ಬಾರಿಗೆ ಅಭಿಮಾನಿಗಳಿಲ್ಲದೆ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ನಟ …

Read More »

ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು : ಜಿಲ್ಲಾಧಿಕಾರಿ ಕೆ. ರಾಜೇಂದ್ರ

ಜಮಖಂಡಿ. ಏ. 23 : ಬಾಗಲಕೋಟೆ ಜಿಲ್ಲೆಯಲ್ಲಿ ಮೂರುದಿಂದ ಯಾವುದೆ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್‌ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತಿದ್ದೆವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು. ನಗರದ ಬಾರ್ಪೆಟ್‌ಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೋತೆ ಮಾತನಾಡಿದರು. ಜಿಲ್ಲೆ ರೆಡ್ ಜೋನ್‌ನಲ್ಲಿರುವದರಿಂದ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು …

Read More »

ಬೆಳಗಾವಿ -ಇಬ್ಬರು ನಕಲಿ ಪತ್ರಕರ್ತರ ಬಂಧನ…..

ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ನಿಝಾಮ್ ಅಬ್ದುಲ್ …

Read More »

ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ 

ಬೆಳಗಾವಿ – ಬೆಳಗಾವಿಯ ಹಿರಿಯ ಕನ್ನಡ ಹೋರಾಟಗಾರ,ಬೆಳಗಾವಿ ಜಿಲ್ಲಾ ಔದ್ಯೋಗಿಕ ಸಹಕಾರ ಬ್ಯಾಂಕಿನ ಮಾಜಿ ನಿರ್ದೇಶಕ ಶ್ಯಾಮಸುಂದರ ಢವಳಿ ಅವರು ಇಂದು  ಮಧ್ಯಾನ್ಹ ನಿಧನ ಹೊಂದಿದರು. ಅವರಿಗೆ 51 ವರ್ಷ ವಯಸ್ಸಾಗಿತ್ತು. ಪತ್ನಿಮತ್ತು ಇಬ್ಬರು ಪುತ್ರರನ್ನು ಬಿಟ್ಟು ಅಗಲಿದ್ದಾರೆ.  ಇಂದು ಸಂಜೆ ಖಾಸಬಾಗ ರುದ್ರಭೂಮಿಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ವಡಗಾವಿ, ಖಾಸಬಾಗದ ಅನೇಕ ಗಣ್ಯರು ಪಾಲ್ಗೊಂಡಿದ್ದರು.        1982 ರ ಗೋಕಾಕ ಚಳವಳಿಯಿಂದ ಇತ್ತೀಚಿನವರೆಗಿನ ಎಲ್ಲ ಕನ್ನಡ ಪರ ಹೋರಾಟಗಳಲ್ಲಿ ಪಾಲ್ಗೊಂಡಿದ್ದ ಅವರು ಬೆಳಗಾವಿ …

Read More »

ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ…

ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ. ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕ ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ …

Read More »

ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್, ಗುರುವಾರ ಮಾತ್ರ ಬೆಳಗಾವಿ ಜಿಲ್ಲೆಯಲ್ಲಿಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ

ಬೆಳಗಾವಿ: ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ನ ಮಾಹಿತಿ ಪ್ರಕಾರ ಇಂದು ಒಂದೇ ದಿನಕ್ಕೆ 18 ಕೊರೊನಾ ಸೋಂಕು ತಗುಲಿದವರು ಪತ್ತೆಯಾಗಿದ್ದಾರೆ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ಮಾತ್ರ ಒಂದು ಸೋಂಕಿತರಿರುವುದು ಧೃಡಪಟ್ಟಿಲ್ಲ. ಇದರಿಂದ ಜಿಲ್ಲೆಯ ಜನರು ನಿಟ್ಟಿಸಿರು ಬಿಡುವಂತಾಗಿದೆ. ಹೆಚ್ಚು ಸೋಂಕಿತರು ಪತ್ತೆಯಾದ ಪಟ್ಟಿಯಲ್ಲಿ ಬೆಳಗಾವಿ ಮೂರನೇ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಒಟ್ಟು 43 ಪ್ರಕರಣಗಳು ಪತ್ತೆಯಾಗಿದೆ. ಸೋಂಕಿತರಲ್ಲಿ ಮೂವರು ಡಿಶ್ಚಾರ್ಜ್ ಆಗಿದ್ದಾರೆ. ಒಬ್ಬರ ಮೃತ ಪಟ್ಟಿದ್ದಾರೆ. ಉಳಿದ …

Read More »