ಕಲಬುರ್ಗಿ (ಜೂ.14): ಜಿಲ್ಲೆಗೆ ಭೇಟಿ ನೀಡಿರುವ ವೈದ್ಯಕೀಯ ಸಚಿವ ಕೆ.ಸುಧಾಕರ್ ಟೆಂಪಲ್ ರನ್ ನಡೆಸಿದರು. ಅಫಜಲಪುರ ತಾಲೂಕಿನ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಸುಧಾಕರ್ ಭೇಟಿ ನೀಡಿದರು. ರಾಜ್ಯ ಪ್ರವಾಸದಲ್ಲಿರುವ ಸುಧಾಕರ್ ಇಂದು ಬೆಳಿಗ್ಗೆಯೇ ದತ್ತಾತ್ರೇಯನ ಪಾದುಕೆ ದರ್ಶನ ಪಡೆದುಕೊಂಡಿದ್ದಾರೆ. ದತ್ತನ ಸನ್ನಿಧಿಯಲ್ಲಿ ಸಚಿವರಿಂದ ವಿಶೇಷ ಪೂಜೆ ನೆರವೇರಿಸಿ ವಿಶ್ವದಿಂದ ಕೊರೊನ ಹೆಮ್ಮಾರಿ ದೂರ ಆಗಲಿ, ಜನ ಈ ಸಂಕಷ್ಟದಿಂದ ದೂರ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ವೇಳೆ ಮಾತನಾಡಿದ ಸಚಿವರು, …
Read More »ಕೊರೋನಾ,ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.
ಬೆಳಗಾವಿ :ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಕೊರೋನಾ,ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಾಗ ಯಾವ ರೀತಿಯ ಭಯ ಇತ್ತೋ ಆ ಭಯ ಈಗ ನಿರ್ಭಯವಾಗಿದೆ.ಬೆಳಗಾವಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ,ಸೊಂಕಿತರ ಸಂಖ್ಯೆ 300 ಗಡಿ ದಾಟಿದರೂ ಜನ ನಿರ್ಭಿತರಾಗಿ ಓಡಾಡುತ್ತಿದ್ದಾರೆ. ಆರಂಭದಲ್ಲಿ,ಮಾಸ್ಕ್ ಹಾಕಿಕೊಂಡು,ಸೈನಿಟೈಸರ್ ಬಾಟಲಿಯನ್ನು ಜೇಬಿನಲ್ಲಿ ಇಟ್ಟು, ಸೋಶಿಯಲ್ ಡಿಸ್ಟನ್ಸ್ ಕಾಯ್ದುಕೊಂಡು, ಓಡಾಡಿದ್ದರು,ದಿನಕಳೆದಂತೆ ಸೊಂಕಿತರ ಸಂಖ್ಯೆ ಹೆಚ್ಚಾದರೂ ಜನರಲ್ಲಿದ್ದ ಭೀತಿ ಮಾತ್ರ ದೂರವಾಗಿದೆ. ಜನ ಆರಂಭದಲ್ಲಿ ಕೊರೋನಾ ಬಂದಿದೆ ಎಂದು ಹೆದರಿದ್ದರು,ಈಗ ಬೆಳಗಾವಿ ಜನರ ಓಡಾಟ,ಧೈರ್ಯ, …
Read More »ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ಡಿ.ಕೆ ಶಿವಕುಮಾರ್ರಿಂದ ವಿಶೇಷ ಹೋಮ-ಹವನ
ಬೆಂಗಳೂರು: ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಮುಂಜಾನೆ ನೂತನ ಕೆಪಿಸಿಸಿ ಆಡಿಟೋರಿಯಂನಲ್ಲಿ ವಿಶೇಷ ಹೋಮ-ಹವನ ನೆರವೇರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿರೋ ಹಿನ್ನೆಲೆಯಲ್ಲಿ ಮುಂದೆ ಯಾವುದೇ ವಿಘ್ನಗಳು ಎದುರಾಗದಂತೆ ಜ್ಯೋತಿಷಿ ಡಾ. ನಾಗರಾಜ್ ಆರಾಧ್ಯ ಹಾಗೂ ಅರ್ಚಕ ಮಹಂತೇಶ್ ಭಟ್ ನೇತೃತ್ವದಲ್ಲಿ ಹೋಮ ನಡೆಸಲಾಗಿದೆ. ಹೋಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಭಾಗಿಯಾಗಿದ್ದರು. ಗಣಪತಿ ಹೋಮ, ವಾಸ್ತು ಹೋಮ, ರಕ್ಷೋಜ್ಞ ಹೋಮ, ಭೂವರಹ ಹೋಮ, ನವಗ್ರಹ ಹೋಮ, …
Read More »ಬೆಂಗಳೂರು-ಬೆಳಗಾವಿ ರೈಲು ವೇಳಾಪಟ್ಟಿ ಬದಲಾವಣೆ
ಬೆಂಗಳೂರು: ಬೆಂಗಳೂರು-ಬೆಳಗಾವಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 13ರಿಂದಲೇ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ. ವಾರದಲ್ಲಿ ಮೂರು ದಿನ ಬೆಂಗಳೂರು-ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ರೈಲು ರೈಲು ಸಂಖ್ಯೆ 06598 ಬೆಳಗಾವಿಯಿಂದ ಬೆಳಗ್ಗೆ 8 ಗಂಟೆಗೆ ಪ್ರತಿ ಮಂಗಳವಾರ, ಗುರುವಾರ …
Read More »ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಹೊಸ ಆಶಾಕಿರಣ ಡಿ.ಕೆ.ಶಿವಕುಮಾರ ಪ್ರಮಾಣ ಎಂದು?
ಬೆಂಗಳೂರು – ಭರ್ಜರಿಯಾಗಿಯೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುವ ಉತ್ಸಾಹದಲ್ಲಿರುವ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ.ಶಿವಕುಮಾರ ಭಾನುವಾರ ಮೊದಲ ಹಂತದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಭಾನುವಾರ ಬೆಂಗಳೂರಿನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಹೋಮ, ಹವನ ನಡೆಯಲಿದೆ. ತಮ್ಮ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಗೆ ಯಾವುದೇ ರೀತಿಯ ವಿಘ್ನಗಳು ಎದುರಾಗದಿರಲಿ ಎಂದು ಮತ್ತು ಕಾಂಗ್ರೆಸ್ ಮತ್ತೊಮ್ಮೆ ಉಚ್ಛ್ರಾಯ ಸ್ಥಿತಿಗೆ ತಲುಪಲಿ ಎನ್ನುವ ಆಶಯದೊಂದಿಗೆ ಹೋಮ, ಹವನ ನಡೆಯಲಾಗುತ್ತಿದೆ. ಈಗಾಗಲೆ ಹೋಮ ಕುಂಡಗಳು …
Read More »ಪೌಷ್ಟಿಕ ಆಹಾರ ಕ್ರಮದಲ್ಲಿ ಬದಲಾವಣೆ ತರಲು ಸತತ ಪ್ರಯತ್ನ
ಬೆಂಗಳೂರಿನ ವಿಕಾಸಸೌಧದ ಕಛೇರಿಯಲ್ಲಿ, ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪೌಷ್ಟಿಕ ಆಹಾರದ ಕುರಿತು ಸುದೀರ್ಘವಾಗಿ ಚರ್ಚಿಸಿ, ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಾಯಿತು. ರಾಯಚೂರು, ಯಾದಗಿರಿ, ಕಲಬುರ್ಗಿ , ಬೀದರ ಜಿಲ್ಲೆಯಲ್ಲಿ ಸತತವಾಗಿ ಮಕ್ಕಳು, ಗರ್ಭಿಣಿಯರು ಹಾಗೂ ಕಿಶೋರಿಯರು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಅಪೌಷ್ಟಿಕತೆ ನಿವಾರಿಸಲು ಚರ್ಚಿಸಲಾಯಿತು ಹಾಗೂ ರಾಜ್ಯದಲ್ಲಿ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ, ಸದ್ಯ ಅಂಗನವಾಡಿ ಕೆಂದ್ರಗಳಲ್ಲಿ ನೀಡುತ್ತಿರುವ ಆಹಾರ ಕ್ರಮದಲ್ಲಿ ಬದಲಾವಣೆ ತರಲಾಗುವುದು. ಈಗಾಗಲೇ ಪರಿಣಿತರೊಂದಿಗೆ ಚರ್ಚಿಸಿದ್ದು, …
Read More »ಧರ್ಮಸ್ಥಳ: ಜೂ. 21ರಂದು ದೇವರ ದರ್ಶನ ಬದಲಾವಣೆ
ಬೆಳ್ತಂಗಡಿ: ಈ ವರ್ಷದ ಮೊದಲ ಸೂರ್ಯಗ್ರಹಣ ನಡೆಯುವ ಜೂ. 21ರಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಜೂ.21ರ ಬೆಳಗ್ಗೆ 5.30ರಿಂದ 9ರ ವರೆಗೆ ದೇವರ ದರ್ಶನ ಅವಕಾಶವಿದೆ. ಬೆಳಗ್ಗೆ 6ಕ್ಕೆ ದೇವರಿಗೆ ಅಭಿಷೇಕ ಪ್ರಾರಂಭಗೊಂಡು 9.30ಕ್ಕೆ ಮಹಾಪೂಜೆ ಜರುಗಲಿದೆ. ಆ ಬಳಿಕ ಸಂಜೆ 4 ಗಂಟೆಗೆ ದೇವಸ್ಥಾನ ಬಾಗಿಲು ತೆರಯಲಿದ್ದು ರಾತ್ರಿ 8.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ …
Read More »ನಟಿ ರಮ್ಯಾ ಕೃಷ್ಣ ಕಾರಿನಲ್ಲಿ 96 ಬಿಯರ್, 8 ಲಿಕ್ಕರ್ ಬಾಟಲಿ ಪತ್ತೆ; ವಶಪಡಿಸಿಕೊಂಡ ಪೊಲೀಸರು
ಕನ್ನಡ, ತಮಿಳು, ತೆಲುಗಿನ ಅನೇಕ ಸಿನಿಮಾದಲ್ಲಿ ನಟಿಸಿ ಖ್ಯಾತಿಗಳಿಸಿರುವ ರಮ್ಯಾ ಕೃಷ್ಣ ಅವರ ಕಾರಿನಲ್ಲಿ ಮದ್ಯದ ಬಾಟಲಿ ಸಿಕ್ಕಿದ್ದು, ತಮಿಳುನಾಡಿನ ಕಾನತ್ತೂರು ಪೊಲೀಸರು ವಶಕೊಂಡಿರುವ ಘಟನೆ ನಡೆದಿದೆ. ರಮ್ಯಾ ಕೃಷ್ಣ ಮತ್ತು ಅವರ ತಂಗಿ ವಿನಯ ಕೃಷ್ಣ ತಮ್ಮ ಇನೋವಾ ಕಾರಿನಲ್ಲಿ ಮಹಾಬಲಿಪುರಂನಿಂದ ಹಿಂತಿರುಗುತ್ತಿದ್ದರು. ಮುತ್ತುಕಾಡು ಚೆಕ್ಪೋಸ್ಟ್ನಲ್ಲಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಾರಿನಲ್ಲಿ 96 ಬಿಯರ್ ಬಾಟಲ್ ಸೇರಿದಂತೆ 8 ಲಿಕ್ಕರ್ ಬಾಟಲಿ ಸಿಕ್ಕಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. …
Read More »ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಯ್ತು ಎಣ್ಣೆ ಪಾರ್ಟಿ..!
ಹಾಸನ ; ಮದ್ಯದ ಅಮಲು ಮನುಷ್ಯ ರನ್ನು ಯಾವ ರೀತಿ ದಿಕ್ಕುತಪ್ಪಿಸುತ್ತದೆ ಹಾಗೂ ಜೀವಕ್ಕೆ ಎರವಾಗುತ್ತದೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ . ಅದೇ ರೀತಿ ಇಂದು ಮದ್ಯದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಲೆಗೈದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದ ಪ್ರವೀಣ್ ಕೊಲೆಯಾದ ಯುವಕ. ಅದೇ ಗ್ರಾಮದ ಸಂತೋಷ್ ಹತ್ಯೆಗೈದ …
Read More »ಬಡ ಬಾಲಕಿಯ ಕಷ್ಟಕ್ಕೆ ಸ್ಪಂದಿಸಿದ ಸುದೀಪ್: ಶಿಕ್ಷಣಕ್ಕೆ ನೆರವು
ನಟ ಕಿಚ್ಚ ಸುದೀಪ್ ತಮ್ಮ ನಟನೆಯ ಜೊತೆ-ಜೊತೆಗೆ ಸಾಮಾಜಿಕ ಕಾರ್ಯಗಳಿಂದಲೂ ಖ್ಯಾತರು. ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಲೇ ಇರುತ್ತಾರೆ. ಇದೀಗ ಬಡ ಹೆಣ್ಣು ಮಗುವೊಂದಕ್ಕೆ ಓದಿಗೆ ಸಹಾಯ ಒದಗಿಸಿದ್ದಾರೆ ಕಿಚ್ಚ ಸುದೀಪ್. ಬೆಂಗೂರಿನ ನಾಗದೇವನಹಳ್ಳಿಯ ನಿವಾಸಿ ಆರನೇ ತರಗತಿ ಓದುತ್ತಿರುವ ಕನಿಶಾ ಗೆ ಶಾಲೆಯ ಫೀಸು ತುಂಬಲು ಕಷ್ಟವಾಗಿತ್ತು. ಅಪ್ಪನಿಲ್ಲದೆ ತಾಯಿಯ ಆರೈಕೆಯಿಂದ ಬೆಳೆಯುತ್ತಿರುವ ಕನಿಶಾ ಸಂದೀಪಿನ ಶಾಲೆಯಲ್ಲಿ ಕಲಿಯುತ್ತಿದ್ದರು.ಆದರೆ ಲಾಕ್ಡೌನ್ನಿಂದಾಗಿ ತಾಯಿಗೆ ಸೂಕ್ತ ಸಮಯದಲ್ಲಿ ಹಣ ದೊರಕದೆ ಶಾಲೆಯ ಫೀಸು …
Read More »
Laxmi News 24×7