ರಾಯಚೂರು: ಕಾಲುವೆಗೆ ಈಜಲು ಹೋದಾಗ ನಾಪತ್ತೆಯಾದ ಇಬ್ಬರು ಯುವಕರು ಶವವಾಗಿ ಪತ್ತೆಯಾದ ಯುವಕರ ಸಾವಿನ ಕುರಿತು ಸಂಶಯ ವ್ಯಕ್ತವಾಗಿ ಮಸ್ಕಿ ಠಾಣೆಯಲ್ಲಿ ದೂರು ದಾಖಲಾಗಿದೆ. ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ನಿವಾಸಿಗಳಾದ ಯಲ್ಲಾಲಿಂಗ ಹಾಗೂ ವೆಂಕಟೇಶ ಇಬ್ಬರು ಯುವಕರು ಮುದಗಲ್ನಿಂದ ಮಸ್ಕಿ ಪಟ್ಟಣಕ್ಕೆ ಕಾಂತಾರ ಸಿನಿಮಾ ನೋಡಲು ಬಂದಿದ್ದರು. ಆದ್ರೆ ಸಿನಿಮಾ ಟಿಕೆಟ್ ಸಿಗಲಿಲ್ಲವೆಂದು ಮಸ್ಕಿ ಪಟ್ಟಣದ ತುಂಗಭದ್ರಾ ಎಡದಂಡೆ ನಾಲೆಗೆ ಈಜಲು ತೆರಳಿದ್ದರು. ಈ ವೇಳೆ ಯಲ್ಲಾಲಿಂಗ ಹಾಗೂ …
Read More »ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ರಾಜ್ಯದಲ್ಲಿ ಶೇ.76.41 ಪೂರ್ಣ, ಬೆಂಗಳೂರಲ್ಲಿ 1.19 ಲಕ್ಷ ಮನೆಯಲ್ಲಿ ಸಮೀಕ್ಷೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಎರಡು ದಿನಗಳಲ್ಲಿ 1.19 ಲಕ್ಷ ಮನೆಗಳನ್ನು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆಯನ್ನು ಶನಿವಾರದಿಂದ ಪ್ರಾರಂಭಿಸಲಾಗಿದೆ. ಈವರೆಗೆ 1.19 ಲಕ್ಷ ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಭಾನುವಾರ 5 ನಗರ ಪಾಲಿಕೆಗಳಲ್ಲಿ ಸಂಜೆ 7 ಗಂಟೆಯವರೆಗೆ 95,024 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಶನಿವಾರ ಮೊದಲ ದಿನ 24,453 ಮನೆಗಳನ್ನು ಸಮೀಕ್ಷೆ ಮಾಡಲಾಗಿತ್ತು. ಭಾನುವಾರ ಸಂಜೆವರೆಗೆ …
Read More »1250 ಎಕರೆ ಇದ್ದ ಐತಿಹಾಸಿಕ ಹೆಗ್ಗೇರಿ ಕೆರೆಯ ವಿಸ್ತೀರ್ಣ 681 ಎಕರೆಗೆ ಕುಸಿತ: ಒತ್ತುವರಿ ತೆರವಿಗೆ ರೈತರ ಒತ್ತಾಯ
ಹಾವೇರಿ: ನಗರದ ಸಮೀಪ ಇರುವ ಹೆಗ್ಗೇರಿ ಕೆರೆ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಈ ಕೆರೆಯನ್ನು ನಳ ಮಹಾರಾಜ ಕಟ್ಟಿಸಿದ ಎಂಬ ಪ್ರತೀತಿ ಇದೆ. ಅಲ್ಲದೆ, ದಕ್ಷಿಣ ಭಾರತದ ರಾಜ ಮನೆತನಗಳಲ್ಲಿ ಒಂದಾದ ಚೋಳರ ಕಾಲದಲ್ಲಿ ಈ ಕೆರೆ ಕಟ್ಟಲ್ಪಟ್ಟಿತು ಎಂಬ ಇತಿಹಾಸವಿದೆ. ಆದರೆ, ಈ ಕೆರೆ ಈಗ ಒತ್ತುವರಿಗೆ ತುತ್ತಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಖಂಡ ಧಾರವಾಡ ಜಿಲ್ಲೆಯಿದ್ದಾಗಲೇ ಹೆಗ್ಗೇರಿ ಹಾವೇರಿ ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾಗಿತ್ತು. ಸಾಕಷ್ಟು ಪ್ರಮಾಣದ ನೀರು …
Read More »ಕೌಟುಂಬಿಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಕೌಟುಂಬಿಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದ್ದು, ಹಲ್ಲೆಗೊಳಗಾದ ಇಬ್ಬರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ಹೊರ ವಲಯ ಊರುಗಡೂರು(ಸೊಳೆಬೈಲು)ನಲ್ಲಿ ಶಬ್ಬಿರ್(32) ಹಾಗೂ ಶಹಬಾಜ್ (40) ಗಾಯಗೊಂಡವರು. ಶಬ್ಬಿರ್ನನ್ನು ಮೇಟ್ರೋ ಆಸ್ಪತ್ರೆಗೆ ದಾಖಲಿಸಿದರೆ, ಶಹಬಾಜ್ನನ್ನು ಮಲ್ನಾಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಶಬ್ಬೀರ್ ಸಹೋದರಿ ಸಲ್ಮೀಯಾ ಫರ್ದಿನ್ ಎಂಬ ವ್ಯಕ್ತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇದಕ್ಕೆ ಶಬ್ಬಿರ್ ವಿರೋಧ ವ್ಯಕ್ತಪಡಿಸಿದ್ದ. ಆದರೆ, ಸಲ್ಮೀಯಾ ಕೆಲ ತಿಂಗಳ ಹಿಂದೆ …
Read More »ಸಿಎಂ ಭೇಟಿಯಾದ ಐಫೋನ್ ತಯಾರಿಸುವ ಫಾಕ್ಸ್ಕಾನ್ ಕಂಪನಿಯ ಭಾರತದ ಮುಖ್ಯಸ್ಥ: ಹೂಡಿಕೆ ಬಗ್ಗೆ ಚರ್ಚೆ
ಬೆಂಗಳೂರು: ಐಫೋನ್ ತಯಾರಿಸುವ ಫಾಕ್ಸ್ಕಾನ್ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್ ವೂ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಐಫೋನ್ ಮತ್ತು ಅದರ ಬಿಡಿಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್ಕಾನ್ನ ರಾಬರ್ಟ್ ವೂ ಅವರು ಸಿಎಂ ಜೊತೆಗಿನ ಭೇಟಿಯ ವೇಳೆ, ರಾಜ್ಯದಲ್ಲಿ ಮತ್ತಷ್ಟು ಬಂಡವಾಳ ಹೂಡಿಕೆ ಸೇರಿದಂತೆ ಮತ್ತಿತರ ಸಂಗತಿಗಳ ಬಗ್ಗೆ ಚರ್ಚಿಸಿದರು. ವೂ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಫಾಕ್ಸ್ಕಾನ್ ಕಂಪನಿಯು ದೇವನಹಳ್ಳಿಯ …
Read More »ಸಿನಿಮಾ ಟಿಕೆಟ್ ಸಿಗದೆ ಈಜಲು ಕಾಲುವೆಗಿಳಿದ ಇಬ್ಬರು ಯುವಕರು ನೀರುಪಾಲು
ರಾಯಚೂರು: ಸಿನಿಮಾ ನೋಡಲು ಹೋಗಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಗೆ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. ಲಿಂಗಸೂಗೂರು ತಾಲೂಕಿನ ಮುದಗಲ್ ಪಟ್ಟಣದ ನಿವಾಸಿಗಳಾದ ಯಲ್ಲಾಲಿಂಗ (28), ವೆಂಕಟೇಶ ಮೋಚಿ (30) ಮೃತಪಟ್ಟ ಯುವಕರೆಂದು ಗುರುತಿಸಲಾಗಿದೆ. ಮಸ್ಕಿ ಪಟ್ಟಣದ ಬಳಗಾನೂರು ರಸ್ತೆಗೆ ಬರುವ ತುಂಗಭದ್ರಾ ಎಡದಂಡೆ ಕಾಲುವೆಗೆ ಈ ಇಬ್ಬರು ಈಜಲು ತೆರಳಿದ್ದರು. ಮುದಗಲ್ ಪಟ್ಟಣದ ನಾಲ್ವರು ಸ್ನೇಹಿತರು ಶನಿವಾರ ಮಸ್ಕಿ ಪಟ್ಟಣಕ್ಕೆ …
Read More »ಧರ್ಮಸ್ಥಳದ ಅಪಪ್ರಚಾರ ವಿರುದ್ಧ ಒಗ್ಗಟ್ಟಿನ ಹೋರಾಟ ಅವಶ್ಯಕ: ವಿದಿತ ಮುನಿ ಮಹಾರಾಜ್
ಹಾವೇರಿ: “ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಒಗ್ಗಟ್ಟಿನ ಹೋರಾಟದ ಅವಶ್ಯಕತೆ ಇದೆ” ಎಂದು 108 ಶ್ರೀ ವಿದಿತ ಮುನಿ ಮಹಾರಾಜ್ ಹೇಳಿದರು. ಹಾವೇರಿಯ ಜೈನ ಬಸದಿಯಲ್ಲಿ ಇಂದು ನಡೆದ 7ನೇ ದೀಕ್ಷಾ ಮಹೋತ್ಸವದಲ್ಲಿ ಅವರು ಪ್ರವಚನ ನೀಡಿದರು. “ಭಾರತದಲ್ಲಿ ಎಲ್ಲಾ ವರ್ಗದ ಜನರಿದ್ದಾರೆ. ಹಿಂದೂ ಎಂದರೆ ಹಿಂಸೆಯಿಂದ ದೂರ ಉಳಿದವನು ಎಂದರ್ಥ. ನಮ್ಮ ದೇಶದ ಸಂಸ್ಕೃತಿ ಸಂಪ್ರದಾಯ, ಆಚಾರ-ವಿಚಾರಗಳ ಬಗ್ಗೆ ನಾವು ಮೊದಲು ತಿಳಿದುಕೊಳ್ಳಬೇಕು. ನಮ್ಮ ಪೂರ್ವಜರಾದ ರಾಮ, …
Read More »ಕೌಟುಂಬಿಕ ಕಲಹದಿಂದ ನೊಂದು ಪತ್ನಿ ಎದುರೇ ನದಿಗೆ ಹಾರಿದ ಪತಿ: 3 ದಿನಗಳ ಬಳಿಕ ಶವ ಪತ್ತೆ
ಚಾಮರಾಜನಗರ: ದಾಂಪತ್ಯ ಕಲಹ ವಿಕೋಪಕ್ಕೆ ತಿರುಗಿ ಪತ್ನಿ ಎದುರೇ ಪತಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದಾಸನಪುರ ಸೇತುವೆಯಲ್ಲಿ ಶುಕ್ರವಾರ ಸಂಜೆ ನಡೆದಿತ್ತು. ಮೂರು ದಿನಗಳ ಶೋಧ ಕಾರ್ಯಾಚರಣೆಯ ಬಳಿಕ ಇಂದು (ಭಾನುವಾರ) ಮೃತದೇಹ ಸಿಕ್ಕಿದೆ. ಕೊಳ್ಳೇಗಾಲ ತಾಲೂಕಿನ ಕಜ್ಜಿಹುಂಡಿ ಗ್ರಾಮದ ಮಂಜುನಾಥ್(40) ಮೃತಪಟ್ಟವರು. ಬೆಳಕವಾಡಿ ಹೊಸಳ್ಳಿ ಗ್ರಾಮದ ರಾಜೇಶ್ವರಿ ಎಂಬವರ ಜೊತೆ ಕಳೆದ 13 ವರ್ಷಗಳ ಹಿಂದೆ ಮಂಜುನಾಥ್ ಮದುವೆಯಾಗಿತ್ತು. ದಂಪತಿಗೆ …
Read More »ನಾಳೆ ಚಿಂತಾಮಣಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್: ಬೃಹತ್ ವೇದಿಕೆ ನಿರ್ಮಾಣ, ಬಿಗಿ ಭದ್ರತೆ
ಚಿಕ್ಕಬಳ್ಳಾಪುರ: ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರ 75ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಂಧ್ರ ಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಾಳೆ ಜಿಲ್ಲೆಗೆ ಆಗಮಿಸುತ್ತಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ. ಚಿಂತಾಮಣಿ ನಗರದ ಹೊರವಲಯದ ಚಿನ್ನಸಂದ್ರ ಸಮೀಪ ಕಾರ್ಯಕ್ರಮ ನಡೆಯಲಿದೆ. ಸುಮಾರು 30 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ …
Read More »ಸಂಕೇಶ್ವರದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ 2025-26 ಸಾಲಿನ ಬಾಯ್ಲರ್ ಅಗ್ನಿ ಪ್ರದೀಪನ ಕಾರ್ಯಕ್ರಮ ಜರುಗಿತು.
ಸಂಕೇಶ್ವರದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ 2025-26 ಸಾಲಿನ ಬಾಯ್ಲರ್ ಅಗ್ನಿ ಪ್ರದೀಪನ ಕಾರ್ಯಕ್ರಮ ಜರುಗಿತು. ನಿಡಸೋಸಿಯ ಶ್ರೀ ಡಾ! ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಸಂಕೇಶ್ವರದ ಶಂಕರಲಿಂಗ ಮಠದ ಶ್ರೀ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಸ್ವಾಮೀಜಿಗಳು ವಿದ್ಯ ಸಾನಿದ್ಯವನ್ನು ವಹಿಸಿದರು. ಈ ವೇಳೆ ಕಾರ್ಖಾನೆ ಮಾರ್ಗದರ್ಶಕರಾದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ , ನಿಪ್ಪಾಣ್ಣಿ ಶಾಸಕಿ ಶಶಿಕಲಾ ಜೊಲ್ಲೆ, ಸೇರಿದಂತೆ ಮುಖಂಡರು ನಿರ್ದೇಶಕ ಮಂಡಳಿಯವರು ಹಾಜರಿದ್ದರು.
Read More »
Laxmi News 24×7