Breaking News

ಕಾರ್ಮಿಕರ ಊಟದಲ್ಲಿಯೂ ರಾಜಕೀಯ : ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಾರ್ಮಿಕರಿಗೆ ಸಿದ್ದ ಆಹಾರ ಮತ್ತು ಆಹಾರ ಸಾಮಾಗ್ರಿಗಳನ್ನು ವಿತರಿಸುವ ಕಾರ್ಮಿಕ ಇಲಾಖೆಯ ಯೋಜನೆಯನ್ನು ಬಿಜೆಪಿ ರಾಜಕೀಯವಾಗಿ ದುರುಪಯೋಗಗೊಳಿಸುತ್ತಿದ್ದು ಪಾರದರ್ಶಕತೆ ಇಲ್ಲದೆ ನಡೆಯುತ್ತಿರುವ ಈ ಯೋಜನೆಯ ಬಗೆಗಿನ ದೂರುಗಳ ಬಗ್ಗೆ ತನಿಖೆ ನಡೆಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಒತ್ತಾಯಿಸಿದ್ದಾರೆ. ಕಟ್ಟಡ ನಿರ್ಮಾಣ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ನಿಧಿಯಿಂದ ನೀಡಲಾಗುತ್ತಿರುವ ಆಹಾರದ ಪೊಟ್ಟಣಗಳನ್ನು ಬಿಜೆಪಿ …

Read More »

ಸರಳವಾಗಿ ಅಂಬೇಡ್ಕರ್ ಜಯಂತಿ ಆಚರಿಸಲು ಡಿಸಿಎಂ ಕಾರಜೋಳ‌ ಮನವಿ

ಬೆಂಗಳೂರು. : ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಷ್ಟದಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ , ಭಾರತ ರತ್ನ, ಮಹಾ ಮಾನವತಾವಾದಿ ಡಾ. ಬಿ. ಆರ್ . ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಮುಂಭಾಗ ದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಶ್ರೀ‌ ಗೋವಿಂದ ಎಂ‌ ಕಾರಜೋಳ ಮತ್ತು ಇತರೇ …

Read More »

ಅನುಪಮಾ ಪರಮೇಶ್ವರನ್ ಎಫ್‍ಬಿ ಹ್ಯಾಕ್, ಫೋಟೋ ಮಾರ್ಫ್- ಗರಂ ಆದ ನಟಸಾರ್ವಭೌಮ ಬೆಡಗಿ

ಬೆಂಗಳೂರು: ಸಿನಿಮಾ ತಾರೆಯ ಫೋಟೋಗಳನ್ನು ಎಡಿಟ್ ಮಾಡಿ ವಿಕೃತಗೊಳಿಸುವುದನ್ನು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಇದಕ್ಕಾಗಿ ಹಲವು ನಟಿಯರು ಮುಜುಗರಕ್ಕೆ ಈಡಾಗಿರುವುದೂ ಉಂಟು. ಇದೀಗ ನಟ ಸಾರ್ವಭೌಮ ಬೆಡಗಿ ಸಹ ಇಂತಹದ್ದೇ ಕಷ್ಟಕ್ಕೆ ಸಿಲುಕಿಕೊಂಡಿದ್ದು, ಬೇರೆ ಯುವತಿಯ ದೇಹಕ್ಕೆ ಅನುಪಮಾ ಪರಮೇಶ್ವರನ್ ಮುಖವನ್ನು ಜೋಡಿಸಲಾಗಿದೆ ಇದನ್ನು ಕಂಡ ಅವರು ಆಶ್ಚರ್ಯಕ್ಕೊಳಗಾಗಿದ್ದಾರೆ. ಇಂಟರ್ನೆಟ್ ಜಾಲಾಡಿದರೆ ನೈಜ ಫೋಟೋಗಳಿಗಿಂತ ಫೇಕ್, ಎಡಿಟೆಡ್, ಮಾರ್ಫ್ ಮಾಡಿದ ಫೋಟೋಗಳು ಕಾಣುವುದೇ ಹೆಚ್ಚು. ಅದರಲ್ಲೂ ನಟ, ನಟಿಯರ ಫೋಟೋಗಳನ್ನು …

Read More »

ಚಿಕ್ಕಮಗಳೂರು:ಮಲೆನಾಡಲ್ಲಿ ಮಳೆ ಅಬ್ಬರ- ಬೃಹತ್ ಗಾತ್ರದ ಆಲಿಕಲ್ಲು ಪತ್ತೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಭಾನುವಾರ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ಭಾಗದಲ್ಲಿ ಧಾರಾಕಾರ ಮಳೆಯಾಗಿದರೆ ಕೊಪ್ಪ ಹಾಗೂ ಎನ್.ಆರ್.ಪುರದಲ್ಲಿ ಸಾಧಾರಣ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು, ಆಲಿಕಲ್ಲು ಸಮೇತ ವರುಣ ಅಬ್ಬರಿಸಿದ್ದಾನೆ. ಬೃಹತ್ ಗಾತ್ರದ ಆಲಿಕಲ್ಲನ್ನು ಹಿಡಿದು ಯುವಕರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟಿದ್ದಾರೆ. ಇತ್ತ ಶೃಂಗೇರಿಯ ಸುತ್ತಮುತ್ತಲೂ ಭಾರೀ ಮಳೆಯಾಗಿದೆ. ಮಳೆ ದೇವರೆಂದೇ ಖ್ಯಾತಿಯಾಗಿರುವ ಕಿಗ್ಗಾದ ಋಷ್ಯಶೃಂಗ …

Read More »

ಇನ್ಫೋಸಿಸ್ ಫೌಂಡೇಶನ್‍ನಿಂದ 220ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರದ ಕಿಟ್

ಹುಬ್ಬಳ್ಳಿ: ಸುಧಾಮೂರ್ತಿ ಅವರ ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಕಿಟ್‍ಗಳನ್ನು ಭಾನುವಾರ 220ಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಯಿತು. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್‍ಸಿಎಫ್‍ಸಿ) 8 ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 220ಕ್ಕೂ ಹೆಚ್ಚು ಕಾರ್ಮಿಕರು, ಲಾರಿ ಚಾಲಕರು, ಕ್ಲೀನರ್‌ಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಇಸ್ಕಾನ್‍ನ ಸಾಯಿನಾಥ್ ವಿತರಿಸಿದರು ಇನ್ಫೋಸಿಸ್ ಫೌಂಡೇಶನ್ ನೀಡಿರುವ ಆಹಾರ ಧಾನ್ಯಗಳ ಪ್ರತಿ ಕಿಟ್‍ನಲ್ಲಿ 5 ಕೆ.ಜಿ. ಅಕ್ಕಿ, …

Read More »

ವಿಜಯಪುರದಲ್ಲಿ ಕೊರೊನಾ ಸೋಂಕಿತ ವೃದ್ಧೆಯ ಪತಿ ಸಾವು

ವಿಜಯಪುರ: ಕೊರೊನಾ ಸೋಂಕಿತ ವೃದ್ಧೆಯ ಪತಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಸೋಂಕಿಗೆ ಬಲಿಯಾಗಿರಬಹುದೇ ಎನ್ನುವ ಪ್ರಶ್ನೆ ಎದ್ದಿದೆ. ಇಂದು ಮಧ್ಯಾಹ್ನ ವೃದ್ಧೆಗೆ ಪಾಸಿಟಿವ್ ಬಂದಿತ್ತು. ಈ ಬೆನ್ನಲ್ಲೇ ವೃದ್ಧೆಯ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಒಟ್ಟು 24 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದ್ದು ಇಂದು ರಾತ್ರಿ ವೃದ್ಧೆಯ ಪತಿ(69) ಮೃತಪಟ್ಟಿದ್ದಾರೆ. ಕೊರೊನಾಗೆ ವೃದ್ಧ ಮೃತಪಟ್ಟಿದ್ದಾರೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಸಾವಿಗೀಡಾದ ವ್ಯಕ್ತಿಯ ವೈದ್ಯಕೀಯ ಪರೀಕ್ಷೆಯ ವರದಿಗೆ ವಿಜಯಪುರ ಜಿಲ್ಲಾಡಳಿತ ಈಗ …

Read More »

ಲಾಕ್‍ಡೌನ್ ಉಲ್ಲಂಘಿಸಿ ಪ್ರವಾಸ- ರೆಸಾರ್ಟಿನಲ್ಲಿ ಮೋಜು, ಮಸ್ತಿ

ಮಡಿಕೇರಿ: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲ ವ್ಯಕ್ತಿಗಳು ಪ್ರವಾಸ ಕೈಗೊಂಡಿದ್ದು, ರೆಸಾರ್ಟಿನಲ್ಲಿ ಮೋಜು ಮಸ್ತಿ ನಡೆಸಿದ್ದಾರೆ. ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಿಸಲು ದೇಶವನ್ನು ಲಾಕ್‍ಡೌನ್ ಮಾಡಿ ಜನರು ಮನೆಯಲ್ಲಿರುವಂತೆ ಕೇಂದ್ರ ಸರ್ಕಾರ ಮನವಿ ಮಾಡಿಕೊಂಡಿದೆ. ವೈದ್ಯರು, ಪೊಲೀಸರು ಹಗಲು ರಾತ್ರಿ ಎನ್ನದೆ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಬೆಂಗಳೂರಿನ ಜನರಿಗೆ ಮಾತ್ರ ಇದೆಲ್ಲಕ್ಕಿಂತ ಮೋಜು ಮಸ್ತಿ ಪ್ರವಾಸವೇ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕೆಲ …

Read More »

ಸಚಿವ, ಶಾಸಕರಿಂದಲೇ ಲಾಕ್‍ಡೌನ್ ನಿಯಮ ಉಲ್ಲಂಘನೆ – ರೈತ ಸಂಘದಿಂದ ದೂರು

ಚಾಮರಾಜನಗರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಆದರೆ ಇದೀಗ ಜಿಲ್ಲೆಯಲ್ಲಿ ಸಚಿವ ಮತ್ತು ಶಾಸಕರು ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚಾಮರಾಜನಗರ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಮತ್ತು ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಇಬ್ಬರು ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಜಿಲ್ಲಾ ರೈತ ಸಂಘದಿಂದ ಎಸ್‍ಪಿಗೆ ಇವರ ವಿರುದ್ಧ ದೂರು ನೀಡಿದ್ದಾರೆ. ದೂರಿನಲ್ಲಿ ಏನಿದೆ? ನೂರಾರು ಬೆಂಬಲಿಗರೊಂದಿಗೆ …

Read More »

ರಾಯಬಾಗದ ಕ್ಯಾನ್ಸರ್ ಪೀಡಿತ ಮಹಿಳೆ ಸಮಸ್ಯೆಗೆ ತುರ್ತು ಸ್ಪಂದನೆ: ಬಿ.ಎಸ್.ಯಡಿಯೂರಪ್

ಬೆಂಗಳೂರು –  ಕೊರೋನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದ ಕ್ಯಾನ್ಸರ್ ರೋಗಿಯೊಬ್ಬರಿಗೆ ವ್ಯವಸ್ಥೆಯಾಗಿದ್ದ ಆಪರೇಶನ್ ರದ್ದಾಗಿತ್ತು. ಈ ಕುರಿತು ರೋಗಿಯ ಸಂಬಂಧಿಯೊಬ್ಬರಿಂದ ಬಂದ ಮಾಹಿತಿ ಆಧರಿಸಿ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸೋಮವಾರವೇ ಆಪರೇಶನ್ ಗೆ ವ್ಯವಸ್ಥೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಶಿರಗೂರ ಗ್ರಾಮದ ಬಾಹುಸಾಬ ಲಕ್ಷ್ಮಣ್ ಕಾಂಬಳೆ ಎನ್ನುವವರು ಮುಖ್ಯಮಂತ್ರಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದರು. “ನಮ್ಮ ಮನೆಯ ಹಿರಿಯ ಮಹಿಳೆ ಕಮಲವ್ವ ಹಿಡಕಲ್ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. …

Read More »

ಖಾನಾಪುರ ಪೊಲೀಸರು ನಡೆಸಿದ ಮಿಂಚಿನ ದಾಳಿಯಲ್ಲಿ ಭಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಜಾಲಪತ್ತೆ

ಖಾನಾಪುರ: ಗೋವಾ ರಾಜ್ಯದಲ್ಲಿ ತಯಾರಿಸುವ ಭಟ್ಟಿ ಮದ್ಯವನ್ನು ಹಾಲಿನ ಟ್ಯಾಂಕರ್ ನಲ್ಲಿ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಖಾನಾಪುರ ಪೊಲೀಸರು ಇಬ್ಬರನ್ನು ಬಂಧಿಸಿ ಟ್ಯಾಂಕರ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಾಲು ಸರಬರಾಜು ಮಾಡಲು ಬೆಳಗಾವಿಯಿಂದ ಗೋವಾ ರಾಜ್ಯಕ್ಕೆ ತೆರಳಿದ್ದ ಬೆಳಗಾವಿಯ ಟ್ಯಾಂಕರ್ ಗೋವಾದಿಂದ ಬೆಳಗಾವಿಯತ್ತ ಬರುವಾಗ ಗೋವಾದ ಭಟ್ಟಿ ಮದ್ಯವನ್ನು ಮತ್ತು 8 ಬಾಕ್ಸ್ ಗೋವಾ ಮದ್ಯವನ್ನು ಹೊತ್ತು ತರುತ್ತಿದ್ದುದನ್ನು ಅರಿತ ಪೊಲೀಸರು ತಾಲ್ಲೂಕಿನ ಕಣಕುಂಬಿ …

Read More »