Breaking News

ಲಾಕ್‍ಡೌನ್‍ನಿಂದ ಕಾಂಡಿಮೆಂಟ್ಸ್, ಬೇಕರಿಗಳಿಗೆ ವಿನಾಯ್ತಿ ನೀಡಿದ ರಾಜ್ಯ ಸರ್ಕಾರ

ಭಾರತ ಲಾಕ್‍ಡೌನ್ ನಡುವೆ ರಾಜ್ಯದಲ್ಲಿ ಬೇಕರಿ, ಕಾಂಡಿಮೆಂಟ್ಸ್, ಮಿಠಾಯಿ ಹಾಗೂ ಸಿಹಿ ತಿನಿಸುಗಳ ತಯಾರಿಕಾ ಘಟಕಗಳಿಗೆ ರಾಜ್ಯ ಸರ್ಕಾರ ವಿನಾಯ್ತಿ ನೀಡಿ ಇಂದು ಆದೇಶ ಹೊರಡಿಸಿದೆ. ಬೇಕರಿಯ ತಿಂಡಿ ತಿನಿಸುಗಳು, ಅವುಗಳಲ್ಲಿ ಪ್ರಮುಖವಾಗಿ ಬ್ರೆಡ್ ಹಾಗೂ ಬಿಸ್ಕೆಟ್‍ಗಳನ್ನ ರಾಜ್ಯದಲ್ಲಿ ಆಸ್ಪತ್ರೆಗಳಲ್ಲಿನ ರೋಗಿಗಳು ಹಾಗೂ ವಯಸ್ಸಾದವರು ಸೇರಿದಂತೆ ಮಕ್ಕಳು ಹಾಗೂ ಸಾಮಾನ್ಯ ಜನ ಸಹ ತಿನ್ನುತ್ತಾರೆ. ಹೀಗಾಗಿ ಬೇಕರಿ ತಿಂಡಿ ತಿನಿಸುಗಳ ಅವಶ್ಯಕತೆ ಇರುವ ಕಾರಣ ಬೇಕರಿ ಹಾಗೂ ಕಾಂಡಿಮೆಂಟ್ಸ್ ಗಳಿಗೆ …

Read More »

ಕೊರೊನಾ ಎಫೆಕ್ಟ್- ಮದ್ಯ ಸಿಗದಿದ್ದಕ್ಕೆ ಊಟ ಬಿಟ್ಟು ವ್ಯಕ್ತಿ ಸಾವು

ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವ ಊಟ ತ್ಯಜಿಸಿ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಗುಡಿಸರಗೂರು ಗ್ರಾಮದ ನಿವಾಸಿ ಗುಂಡೇಗೌಡ (32) ಮೃತ ವ್ಯಕ್ತಿ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಮದ್ಯ ಪ್ರಿಯರಿಗೆ ಎಣ್ಣೆ ಸಿಗದಂತಾಗಿದೆ. ಗುಂಡೇಗೌಡ ಮದ್ಯದಂಗಡಿ ಮುಚ್ಚಿದಾಗಿನಿಂದ ಎಣ್ಣೆಗಾಗಿ ಹುಡುಕಾಡ ನಡೆಸಿದ್ದ. ಆದರೆ ಮದ್ಯ ಸಿಗದೆ ಇದ್ದ ಕಾರಣ …

Read More »

ನಂ.1 ಆಗಲು ಚೀನಾದಿಂದ ಜೈವಿಕ ಅಸ್ತ್ರ- ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ನವದೆಹಲಿ: ಕೊರೊನಾ ವೈರಸ್ ಹರಡುವಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚೀನಾ ವಿರುದ್ಧ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಆಲ್ ಇಂಡಿಯಾ ಬಾರ್ ಅಸೊಶಿಯೇಶನ್, ಇಂಟರ್‍ನ್ಯಾಷನಲ್ ಕೌನ್ಸಿಲ್ ಆಫ್ ಜ್ಯೂರಿಸ್ಟ್ಸ್ ವತಿಯಿಂದ ಈ ದೂರು ದಾಖಲಿಸಿದ್ದು, ಅನಿರ್ದಿಷ್ಟ ಮೊತ್ತ ಪರಿಹಾರಕ್ಕೆ ಅರ್ಜಿಯಲ್ಲಿ ವಕೀಲ ಅದೀಶ್ ಸಿ.ಅಗ್ರವಾಲ್ ಆಗ್ರಹಿಸಲಾಗಿದೆ. ಕೊರೊನಾ ವಿಚಾರದಲ್ಲಿ ಚೀನಾ ಹೊಣೆಗಾರಿಕೆ ಮರೆತು ನಿಯಮಗಳ ಉಲ್ಲಂಘಿಸಿದೆ. ವಿಶ್ವಾದ್ಯಂತ ಕೊರೊನಾ ವೈರಸ್ ಹರಡಿದೆ, ಇದನ್ನು ತಡೆಯವ ವಿಚಾರದಲ್ಲಿ ನಿಷ್ಕ್ರಿಯತೆ …

Read More »

ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ.

ಕಾರವಾರ: ರಾಜ್ಯದಲ್ಲಿ ಸದ್ಯ ಕೊರೊನಾ ವೈರಸ್ ಭೀತಿ ಉಂಟು ಮಾಡಿರುವ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಇದೀಗ ಡೆಂಗ್ಯೂ ಆತಂಕ ಮೂಡಿಸಿದೆ. ಕಾರವಾರದ ಬೈತಖೋಲ ಬಂದರು ಪ್ರದೇಶದಲ್ಲಿನ ಮೀನುಗಾರಿಕಾ ಬೋಟ್ ಕಾರ್ಮಿಕನೋರ್ವನಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಕಳೆದ 11 ದಿನಗಳಿಂದ ಆಳ ಸಮುದ್ರ ಮೀನುಗಾರಿಕೆ ತೆರಳುವ ಬೋಟ್ ಗಳು ಬಂದರಿನಲ್ಲೇ ಲಂಗರು ಹಾಕಿ ನಿಂತಿದ್ದು, ಲಾಕ್ ಡೌನ್ ಆದ ಹಿನ್ನೆಲೆ ಬೋಟಿನ ಕಾರ್ಮಿಕರು ಊರಿಗೆ ತೆರಳಲಾಗದೇ ಅದರಲ್ಲೇ ವಾಸ್ತವ್ಯ ಹೂಡಿದ್ದಾರೆ. ಆದರೆ ಬೋಟುಗಳು …

Read More »

ಕೇವಲ ಹೇಳಿಕೆಗಳಿಗೆ ಸೀಮಿತವಾಗ್ಬೇಡಿ- ಶ್ರೀರಾಮುಲು ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

ರಾಮನಗರ: ಕೊರೊನಾ ತಡೆಗಾಗಿ ದೇಶಾದ್ಯಂತ ವಿಧಿಸಿರುವ ಲಾಕ್‍ಡೌನ್‍ನ 14ಕ್ಕೆ ನಿಲ್ಲಿಸ್ತಾರೋ ಇಲ್ವೋ ನನಗೆ ಗೊತ್ತಿಲ್ಲ. ಏರುತ್ತಿರುವ ಸೋಂಕಿತರ ಸಂಖ್ಯೆ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡ್ತಾರೋ ಗೊತ್ತಿಲ್ಲ. ಈ ವಿಚಾರವಾಗಿ ಸರ್ಕಾರದ ಸ್ಪಷ್ಟತೆ ಬಗ್ಗೆ ಗೊತ್ತಿಲ್ಲ. ಸರ್ಕಾರ ಏನ್ ಕ್ರಮ ತೆಗೆದುಕೊಳ್ಳುತ್ತೆ ಅನ್ನೋದನ್ನ ಗಮನಿಸ್ತಿದ್ದೇನೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣ ಕ್ಷೇತ್ರಗಳಲ್ಲಿ ಕೊರೊನಾ ತಡೆಗಾಗಿ ಜೆಡಿಎಸ್ ಪಕ್ಷದಿಂದ ನಿರ್ಮಿಸಿರುವ ಐದು …

Read More »

ಲಾಕ್‍ಡೌನ್ ಉಲ್ಲಂಘಿಸದವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು: ಮಹೇಶ್ ಕುಮಟಳ್ಳಿ

ಚಿಕ್ಕೋಡಿ(ಬೆಳಗಾವಿ): ಲಾಕ್‍ಡೌನ್ ಉಲ್ಲಂಘಿಸಿದವರಿಗೆ ಪೊಲೀಸರು ಹೊಡೆಯುವ ಬದಲು ಅವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಾಸ್ಯ ಚಟಾಕೆ ಹಾರಿಸಿದ ಕುಮಟಳ್ಳಿ, ನನಗೆ ಒಂದು ವಾಟ್ಸಾಪ್ ಮೆಸೇಜ್ ಬಂದಿತ್ತು. ಅದರಲ್ಲಿ ಮಹಿಳೆಯೋರ್ವಳು ಹೇಳುತ್ತಿದ್ದಳು, ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿದವರನ್ನ ಹಿಡಿದು ಲೂಸ್‍ಮೋಶನ್ ಮಾತ್ರೆ ಕೊಟ್ಟರೆ ಅವರು ಮನೆಯಲ್ಲೂ ಇರುತ್ತಾರೆ. ಮತ್ತೆ ದಿನನಿತ್ಯ ಕೈಗಳನ್ನ ತೊಳೆದುಕೊಳ್ಳುತ್ತಾರೆ ಎಂಬುದಾಗಿತ್ತು ಎಂದು ಶಾಸಕರು …

Read More »

ಜನಪ್ರತಿನಿಧಿಗಳು ತಮ್ಮ ತಮ್ಮ ವ್ಯಾಪ್ತಿಗೆ ಬರುವ ಸ್ಥಳಗಲ್ಲಿ ಪ್ರತಿದಿನ ಮನೆಗಳಿಗೆ ಭೇಟಿ ಬರಿ ಭಾಷಣ ಮಾಡಿ ಹೋಗುವುದಲ್ಲ: ರಮೇಶ ಜಾರಕಿಹೊಳಿ

ಮೂಡಲಗಿ: ಕೊರೋನಾ ಇಡೀ ಪ್ರಪಂಚಾದಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ನಿರ್ಮೂಲನೆ ಮಾಡುವಂತ ಕೆಲಸವಾಗಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.   ಅವರು ಸೋಮವಾರ ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೋನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ …

Read More »

ಕೊರೋನಾ ಸೋಂಕು‌ ಹರಡುವುದನ್ನು‌ ತಡೆಯುವ‌ ವಿಚಾರದಲ್ಲಿ‌ ಇನ್ನಷ್ಟು ಎಚ್ಚರಿಕೆ ಅಗತ್ಯ:H.D.D.

ಬೆಂಗಳೂರು, ಏ.6-ಕೊರೋನಾ ಸೋಂಕು‌ ಹರಡುವುದನ್ನು‌ ತಡೆಯುವ‌ ವಿಚಾರದಲ್ಲಿ‌ ಇನ್ನಷ್ಟು ಎಚ್ಚರಿಕೆ ಅಗತ್ಯ ಎಂದು‌ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ‌ ಬೇಕಾದ ಸಿದ್ಧತೆ ಮಾಡಿಕೊಳ್ಳುವುದರಲ್ಲಿ ಹಿಂದೆ ಬಿದ್ದಿದ್ದೇವೆ. ಮೆಡಿಕಲ್ ಕಿಟ್, ಔಷಧಿ ತರಿಸಿದ್ದಾರೆ. ಕೊರೊನಾ ಶಂಕಿತರಿಗೆ ಚಿಕಿತ್ಸೆ ಕೊಡುತ್ತಿದ್ದಾರೆ‌. ಮೂರನೇ ಹಂತ, ನಾಲ್ಕನೇ‌ ಹಂತ ಎನ್ನುತ್ತಿದ್ದಾರೆ. ಕಡಿಮೆಯಾದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲ ಮಾಡುತ್ತೇವೆ ಎಂದು ಸರ್ಕಾರ ಹೇಳಿದೆ ಎಂದರು.ಕೋವಿಡ್ -19 ಸುಮಾರು ಇನ್ನೂರು ದೇಶಗಳಲ್ಲಿ ಇದೆ. ಅತ್ಯಂತ …

Read More »

ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ.

  ಬೆಳಗಾವಿ:ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಅಮಿರ್ ಹಮ್ಜಾ ಬೀಡಿಕರ್ ಬಂಧಿತ ಆರೋಪಿ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏಳು ಕೊರೊನಾ ಸೋಂಕಿತರ ಮೇಲೆ ನಿಗಾ ಇಡಲಾಗಿದೆ. ಮೊದಲು ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂವರ ಬಗ್ಗೆ ಆಡಿಯೋ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಸಮಾಜಕ್ಕೆ ತಪ್ಪು ಸಂದೇಶ ಸಾರುವ …

Read More »

ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ ಮೇಲೆ ಎಫ ಐ ಆರ್ ದಾಖಲು

ಬೆಳಗಾವಿ- ಟೂರಿಸ್ಟ್ ವೀಜಾ ಪಡೆದು ಬೆಳಗಾವಿಯಲ್ಲಿ ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಬೆಳಗಾವಿಗೆ ಬಂದಿದ್ದ ಇಂಡೋನೇಶಿಯಾ ಜಮಾತಿನ ಹತ್ತು ಸದಸ್ಯರ ಮೇಲೆ ಪ್ರತ್ಯೇಕವಾಗಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಇಂಡೋನೇಶಿಯಾ ಮೂಲದ ಹತ್ತು ಜನ ಟೂರಿಸ್ಟ್ ವೀಜಾ ಪಡೆದು,ದೆಹಲಿಯ ಧರ್ಮ ಸಭೆಯಲ್ಲಿ ಭಾಗವಹಿಸಿ,ಬೆಳಗಾವಿಗೆ ಬಂದಿದ್ದರು ಕಾನೂನಿನ ಪ್ರಕಾರ ಅವರು ಮಿಶ್ನರಿ ವೀಸಾ ಪಡೆಯಬೇಕಾಗಿತ್ತು ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ …

Read More »