ಬೆಳಗಾವಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಶಾಸನ 1994 (ಪಿ.ಸಿ.ಪಿ.ಎನ್.ಡಿ.ಟಿ 1994 ಕಾಯ್ದೆ) ನೂತನ ಜಿಲ್ಲಾ ಸಲಹಾ ಸಮಿತಿ ಸಭೆ ಇಂದು ಜರುಗಿತು. ಸಕಾರದ ಉಪ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಪ್ರಕಾರ ಮುಂದಿನ 3 ವರ್ಷಗಳ ಅವಧಿಗೆ ಬೆಳಗಾವಿ ಜಿಲ್ಲಾ ಮಟ್ಟದ ನೂತನ ಸಲಹಾ ಸಮಿತಿಯ ಸಭೆಯನ್ನು ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ …
Read More »ಶಿವಾನಂದ ನೀಲಣ್ಣವರ್ಗೆ ನ್ಯಾಯಾಂಗ ಬಂಧನ: ಹಿಂಡಲಗಾ ಜೈಲಿಗೆ ಶಿಪ್ಟ್
ಬೆಳಗಾವಿ: ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧದ 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಸಿಐಡಿ ಅಧಿಕಾರಿಗಳ ಹತ್ತು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಬಳಿಕ ಶಿವಾನಂದ ನೀಲಣ್ಣವರ್ ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಿವಾನಂದ ನೀಲಣ್ಣವರ್ ಅವರನ್ನು ಇಂದು 2ನೇ ಹೆಚ್ಚುವರಿ ಸತ್ರ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು. …
Read More »ಬೆಂಗಳೂರು: ಲಿವಿಂಗ್ ಟುಗೆದರ್ನಲ್ಲಿದ್ದ ಮಾಜಿ ಆರ್ಜೆ ಮನೀಷಾ ಆತ್ಮಹತ್ಯೆ; ಪ್ರಿಯಕರನ ವಿರುದ್ಧ 3 ಪುಟಗಳ ಡೆತ್ನೋಟ್!
ಬೆಂಗಳೂರು: ಮುಂಬೈ ಮೂಲದ ಮಾಜಿ ರೇಡಿಯೋ ಜಾಕಿ (RJ) ಮನೀಷಾ ಪ್ರಸಾದ್ (48) ಅವರು ಬೆಂಗಳೂರಿನ ತಮ್ಮ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 23 ರಂದು ಹೆಣ್ಣೂರು ಸಮೀಪದ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ಫ್ಲ್ಯಾಟ್ನಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳದಲ್ಲಿ 3 ಪುಟಗಳ ಡೆತ್ನೋಟ್ ಪತ್ತೆಯಾಗಿದ್ದು, ಲಿವಿಂಗ್ ಟುಗೆದರ್ನಲ್ಲಿದ್ದ ಪ್ರಿಯಕರ ಹರ್ಷವರ್ಧನ್ ಸಿಂಗ್ ಬನ್ಸಾಲ್ ನೀಡಿದ ಮಾನಸಿಕ ಕಿರುಕುಳವೇ …
Read More »ಧಾರವಾಡ ಶೂಟೌಟ್ ಕೇಸ್ ಭೇದಿಸಿದ ಖಾಕಿ: ಐವರು ಆರೋಪಿಗಳ ಬಂಧನ, ಪಿಸ್ತೂಲ್ ಹಾಗೂ ರಿವಾಲ್ವರ್ ಜಪ್ತಿ!
ಧಾರವಾಡ ಹೊರವಲಯದ ತಡಸಿನಕೊಪ್ಪ ಬಳಿಯ ಇಟಿಗಟ್ಟಿ ರಸ್ತೆ ಮಾರ್ಗದಲ್ಲಿ ಕಳೆದ ದಿನ ನಡೆದ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ಗಲಾಟೆ ನಡೆದು ಗಾಳಿಯಲ್ಲಿ ಗುಂಡು ಹಾರಿಸಿ ವ್ಯಕ್ತಿಯೊಬ್ಬನಿಗೆ ಗಾಯಗೊಳಿಸಿದ ಪ್ರಕರಣದಲ್ಲಿ ಐವರನ್ನ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲು ಅಂಗರಕ್ಷಕರು (ಬೌನ್ಸರ್ಸ್) ಗುಂಡು ಹಾರಿಸಿದ್ದಾರೆ ಎಂಬ ಮಾಹಿತಿ ಇತ್ತಾದರೂ, ಘಟನೆಯ ಬಳಿಕ ಪೊಲೀಸರಿಗೆ …
Read More »ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರದ ಪ್ರಮುಖ ಸಭೆ!
ನಮ್ಮ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಆಗಮಿಸುವ ಅಪಾರ ಸಂಖ್ಯೆಯ ಭಕ್ತಾದಿಗಳಿಗೆ ಸುಸಜ್ಜಿತ ಮೂಲಸೌಕರ್ಯ ಕಲ್ಪಿಸುವುದು ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿದೆ. ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಗೌರವಾನ್ವಿತ ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಉಪಸ್ಥಿತಿಯಲ್ಲಿ “ಶ್ರೀ ರೇಣುಕಾ ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರದ” ಮಹತ್ವದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಸವದತ್ತಿ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ …
Read More »ಬಾಗಲಕೋಟೆ ಶಹರ್ ಠಾಣೆ ಪೊಲೀಸರ ಭರ್ಜರಿ ಬೇಟೆ: ಅಂತರ್ ಜಿಲ್ಲಾ ಮನೆಗಳ್ಳನ ಬಂಧನ, 22 ಲಕ್ಷದ ಚಿನ್ನಾಭರಣ ವಶ!
ಬಾಗಲಕೋಟೆ ಜಿಲ್ಲೆಯ ಚೌಡಾಪೂರ ಗ್ರಾಮದಲ್ಲಿ ನಡೆದಿದ್ದ ಭಾರಿ ಮನೆ ಕಳ್ಳತನ ಪ್ರಕರಣವನ್ನು ಬಾಗಲಕೋಟೆ ಶಹರ ಪೊಲೀಸರು ಕೇವಲ ಕೆಲವೇ ದಿನಗಳಲ್ಲಿ ಯಶಸ್ವಿಯಾಗಿ ಭೇದಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದ್ದ ಈ ಪ್ರಕರಣದ ಅಂತರ್ ಜಿಲ್ಲಾ ಆರೋಪಿಯನ್ನು ಬಂಧಿಸಿ, ಆತನಿಂದ ಲಕ್ಷಾಂತರ ಮೌಲ್ಯದ ಚಿನ್ನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಕಳೆದ ಮಾರ್ಚ್ 19 ರಂದು ಚೌಡಾಪೂರ ಗ್ರಾಮದ ನಿವಾಸಿ ಪುಂಡಲಿಕಪ್ಪ ಪಾಟೀಲ್ ಅವರ ಮನೆಯ ಬೀಗ ಒಡೆದು ಕನ್ನ ಹಾಕಿದ್ದ …
Read More »ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್: ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್ನ ರೋಗಲಕ್ಷಣಗಳು ಕಂಡುಬಂದಿತ್ತು. ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ಗೆ ರವಾನಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆ ವ್ಯಕ್ತಿಗೆ ಯಾವುದೇ …
Read More »ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಲು ತೋರಿರುವ ಮುತ್ಸದ್ದಿತನ ಮೆಚ್ಚಬೇಕು: ರಂಭಾಪುರಿ ಶ್ರೀ
ಚಿಕ್ಕಮಗಳೂರು: ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡಲು ತೋರಿರುವ ಮುತ್ಸದ್ದಿತನ ಮೆಚ್ಚಬೇಕು ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ. ಬಾಳೆಹೊನ್ನೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, 2023ರಲ್ಲಿ ಕಾಂಗ್ರೆಸ್ (Congress) ಭರ್ಜರಿ ಗೆಲುವು ಸಾಧಿಸಿತ್ತು. ಅಧ್ಯಕ್ಷರು ಸಿಎಂ ಆಗೋದು ವಾಡಿಕೆ. ಹೈಕಮಾಂಡ್ ಅನುಭವಿ ಸಿದ್ದರಾಮಯ್ಯನವರಿಗೆ ಮೊದಲ ಅವಕಾಶ ನೀಡಿತ್ತು. 5 ವರ್ಷದಲ್ಲಿ ಇಬ್ಬರು ಎರಡೂವರೆ ವರ್ಷ ಅಂತ ನಿರ್ಣಯ ಮಾಡಿದ್ರು. ಡಿಕೆಶಿ ತಾಳ್ಮೆ-ಸಹನೆ ಕಳೆದುಕೊಳ್ಳದೆ ಗಂಗಾಧರ ಜಗ್ಗುರುಗಳ ಮೇಲೆ …
Read More »ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ
ಚಿತ್ರದುರ್ಗ: ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬುಲೆರೋ ವಾಹನ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4), ಪರುಶುರಾಮ (1.5) ಮೃತರು. …
Read More »ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ – ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಇಂದೇ ಜಾತಿಗಣತಿ ವರದಿ ಸ್ವೀಕರಿಸಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಕೊಠಡಿಯಲ್ಲಿ ವರದಿ ಸ್ವೀಕರಿಸಿದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್, ಆಯೋಗದ ಸದಸ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಸಿಎಂಗೆ ವರದಿ ಸಲ್ಲಿಸಿದರು. ವರದಿಯಲ್ಲಿ ಜನಸಂಖ್ಯೆ ಉಲ್ಲೇಖ ಮುಸ್ಲಿಂ ಶೇ.14 – 75 ರಿಂದ 80 ಲಕ್ಷ ವೀರಶೈವ ಲಿಂಗಾಯತ ಶೇ.11- …
Read More »
Laxmi News 24×7