Breaking News

ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಚಾಮರಾಜನಗರ: ಡೆತ್ ನೋಟ್ ( ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ. ಗುರುಮೂರ್ತಿ ಮೃತಪಟ್ಟ ಯುವಕ. ನಾಲ್ವರು ಬಂದು ಗಲಾಟೆ ನಡೆಸಿ ಅವಮಾನಿಸಿದ್ದೆ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಕೆರೆಯಿಂದ ಶವ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಶ್ರವಣ, ಅಭಿ ಎಂಬುವವರ …

Read More »

ಬೆಂಗಳೂರಿನ 11 ಮಂದಿ ಸೇರಿ ಕರ್ನಾಟಕದ 13 ಮಂದಿ ವಿವರ ಲಭ್ಯ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ದೊಡ್ಡ ಪ್ರಮಾಣದ ವಿನಾಶ ಸೃಷ್ಠಿಯಾಗಿದೆ. ಈ ಮಧ್ಯೆ ರಾಜ್ಯದ ಹಲವರು ಸಂಕಷ್ಟಕ್ಕೆ ಸಿಲುಕಿದ್ದು, 13 ಮಂದಿ ವಿವರ ಲಭ್ಯವಾಗಿದೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವು ನೇಪಾಳ ಮತ್ತು ಟಿಬೆಟ್‌ನಲ್ಲಿ ಸಿಲುಕಿರುವವರ ಕನ್ನಡಿಗರ  ವಿವರಗಳನ್ನು ಸಂಗ್ರಹಿಸಿದೆ ಎಂದು ಮಾಹಿತಿ ಹಂಚಿಕೊಂಡಿದೆ. ‘ಮಾಹಿತಿ ಲಭ್ಯವಾಗಿರುವ ಕರ್ನಾಟಕದವರು ಬೇರೆ ರಾಜ್ಯಗಳ ಪ್ರವಾಸಿಗರನ್ನೂ ಒಳಗೊಂಡ ಗುಂಪುಗಳಲ್ಲಿ ಇದ್ದಾರೆ. ಬೆಂಗಳೂರಿನ 11 ಮಂದಿ, ಮೈಸೂರು ಹಾಗೂ ಧಾರವಾಡ ಜಿಲ್ಲೆಯ ತಲಾ …

Read More »

ರಾಜ್ಯದ 101 ತಾಲೂಕುಗಳಲ್ಲಿ ಬರ; ಸರ್ಕಾರ ಅಧಿಕೃತ ಘೋಷಣೆ – 1 ಲಕ್ಷದವರೆಗೆ ಸಾಲ ಮನ್ನಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಮುಂಗಾರು ಮಳೆ ಕೈಕೊಟ್ಟ ಕಾರಣ ರಾಜ್ಯದಲ್ಲಿ 101 ತಾಲೂಕುಗಳಲ್ಲಿ ಬರ ಇದೆ ಅಂತ ಸರ್ಕಾರ ಘೋಷಣೆ ಮಾಡಿದೆ. ಕಂದಾಯ ಸಚಿವರೂ ಆಗಿರುವ ಡಿಸಿಎಂ ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿ, 102ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ತೀವ್ರ ಬರ ಇದೆ. ರಾಜ್ಯದಲ್ಲಿ ವಾಡಿಕೆಯಂತೆ 666 ಮಿ.ಮೀ. ಮಳೆ ಆಗಬೇಕಿತ್ತು. ಆದರೆ, 465 ಮಿ.ಮೀ ಅಷ್ಟೆ ಮಳೆ ಆಗಿದೆ. 134 ಬರ ತಾಲೂಕುಗಳಿಗೆ ಅಧಿಕಾರಿಗಳ ಟೀಮ್ ಕಳಿಸಿದ್ದೆವು. 101 ರಲ್ಲಿ 89 ತಾಲೂಕಿನಲ್ಲಿ ತೀವ್ರ …

Read More »

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಆಸೀಫ್ ಸೇಠ್

ಬೆಳಗಾವಿ: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆಸೀಫ್ ಸೇರ್ ಅವರಿಗೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದರು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತ ಕೋಟಾದಡಿ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಆಸೀಫ್ ಸೇರ್ ಬಲವಾಗಿ ಒತ್ತಾಯಿಸಿದ್ದರು. ಸಚಿವ ಸ್ಥಾನಕ್ಕಾಗಿ ಅವರು ಹಲವು ಬಾರಿ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲೂ ಲಾಬಿ ನಡೆಸಿದ್ದರು. ಬೆಳಗಾವಿ ಸೇರಿದಂತೆ …

Read More »

ವಿದ್ಯುತ್ ಶಾಕ್ ತಗುಲಿ ಕೃಷ್ಣಾ ನದಿಗೆ ಬಿದ್ದ ಯುವಕ ನಾಪತ್ತೆ

ಬೆಳಗಾವಿ: ಮೋಟಾರ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ನಡೆದಿದೆ. ಬಸವರಾಜ ಐನಾಪುರ ಎಂಬಾತ ನೀರು ಪಾಲಾದ ಯುವಕ. ಖೇಮಲಾಪುರ ಗ್ರಾಮದಲ್ಲಿ ಹರಿಯುವ ಕೃಷ್ಣಾ ನದಿ ಪಕ್ಕದಲ್ಲಿ ಇಂದು ಬೆಳಗ್ಗೆ ಮೋಟಾರ್ ಪಂಪ್ ಸ್ಟಾರ್ಟ್ ಮಾಡಲು ತೆರಳಿದ್ದ. ಈ ಸಂದರ್ಭದಲ್ಲಿ ಬಸವರಾಜಗೆ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕ್ ನಿಂದ  ಕೃಷ್ಣಾ ನದಿಗೆ ಬಿದ್ದ ಯುವಕ ನಾಪತ್ತೆ ಆಗಿದ್ದಾನೆ.‌ …

Read More »

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ – 8 ಜನರ ವಿರುದ್ಧ FIR, ಖಾಕಿ ಹದ್ದಿನ ಕಣ್ಣು

ಬೆಂಗಳೂರು: ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಬಸವನಗುಡಿಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿ ಪ್ರಕರಣ ಸಂಬಂಧ ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬುಧವಾರ ಈದ್ ಮಿಲಾದ್ ಹಬ್ಬವಿದ್ದು, ಬೆಂಗಳೂರಿನ ನಾನಾ ಭಾಗಗಳಿಂದ ಮುಸ್ಲಿಮರು ಮೆರವಣಿಗೆಗಳಲ್ಲಿ ಬಂದು ಖುದ್ದೂಸ್ ಸಾಬ್ ಈದ್ಗಾ ಮೈದಾನಕ್ಕೆ ಸೇರುತ್ತಿದ್ದರು. ಬಸವನಗುಡಿಯ ಕೆ.ಆರ್ ರಸ್ತೆಯಲ್ಲಿ ಬನಶಂಕರಿ ಕಡೆಯಿಂದ ಮೆರವಣಿಗೆ ಮಾಡುತ್ತ ಬರುತ್ತಿದ್ದ ಗುಂಪು ಪುನೀತ್ ಕೆರೆಹಳ್ಳಿ ಆಫೀಸ್ …

Read More »

ಕೈಲಾಸ ಯಾತ್ರೆಗೆ ತೆರಳಿದ್ದ ಧಾರವಾಡದ ವ್ಯಕ್ತಿ ನೇಪಾಳ ಪ್ರವಾಹದಲ್ಲಿ ನಾಪತ್ತೆ

ಧಾರವಾಡ: ನೇಪಾಳ ಹಾಗೂ  ಚೀನಾ ಗಡಿ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ನಡುವೆ ಧಾರವಾಡ ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಅವರ ಸಂಪರ್ಕಕ್ಕೆ ಸಿಗದೇ ಇರುವುದರಿಂದ ಕುಟುಂಬಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಧಾರವಾಡದ ಸಿ.ಬಿ.ನಗರದ ರಾಕೇಶ್ ನಾಯಕ ಸದ್ಯ ನೇಪಾಳದಲ್ಲಿ ನಾಪತ್ತೆಯಾಗಿರುವವರು. ಮೂಲತಃ ಎಂಜಿನಿಯರ್ ಆಗಿರುವ ರಾಕೇಶ್ ಕಳೆದ 12 ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಆಗಸ್ಟ್ 12ರಂದು ಆಸ್ಟ್ರೇಲಿಯಾದಿಂದ ದೆಹಲಿಗೆ ಬಂದಿದ್ದ ರಾಕೇಶ್, ಅಲ್ಲಿಂದ ಇಶಾ ಫೌಂಡೇಶನ್ ತಂಡವನ್ನು …

Read More »

ಶಿವಮೊಗ್ಗದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದವರ ವಿರುದ್ಧ ಕೇಸ್ ದಾಖಲು – ಓರ್ವ ಬಂಧನ

ಶಿವಮೊಗ್ಗ: ಈದ್ ಮಿಲಾದ್  ಹಬ್ಬದ ಹಿನ್ನೆಲೆ ಶಿವಮೊಗ್ಗದ ) ಆರ್‌ಎಂಎಲ್ ನಗರದಲ್ಲಿ ನಿರ್ಮಿಸುತ್ತಿದ್ದ ಕಟೌಟ್ ಒಂದರ ಮೇಲೆ ನಿಂತು ಪ್ಯಾಲೆಸ್ತೀನ್ ಧ್ವಜ ) ಹಾರಿಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಮೂವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸುಮೋಟೋ  ಕೇಸ್ ದಾಖಲಾಗಿದೆ. ಶಿವಮೊಗ್ಗ ನಗರದ ನಿಹಾಲ್, ಉಮರ್ ಹಾಗೂ ಅಬ್ರಹಾರ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು, ನಿಹಾಲ್‌ನನ್ನ ವಶಕ್ಕೆ ಪಡೆದು, ವಿಚಾರಣೆ ಕೂಡ ನಡೆಸಿದ್ದಾರೆ. ಆ.25ರಂದು ಮಧ್ಯಾಹ್ನ …

Read More »

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕರ್ನಾಟಕದ ಪೈಲಟ್ ಸೇರಿ ಇಬ್ಬರು ದುರ್ಮರಣ

ಲಕ್ನೋ: ತರಬೇತಿ ವಿಮಾನವೊಂದು  ಪತನಗೊಂಡ ಪರಿಣಾಮ ಕರ್ನಾಟಕದ ಪೈಲಟ್  ಸೇರಿ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ  ಗುರುವಾರ ನಡೆದಿದೆ. ಗಂಗಾ ನದಿ ತೀರದ ಸಮೀಪದ ಹೊಲವೊಂದರಲ್ಲಿ ದುರಂತ ಸಂಭವಿಸಿದೆ. ಕಾನ್ಪುರದ ಗಾರ್ಗ್ ಏವಿಯೇಷನ್ ತರಬೇತಿ ಕೇಂದ್ರದಿಂದ ಬೆಳಗ್ಗೆ 11:30ಕ್ಕೆ ಟ್ವಿನ್ ಎಂಜಿನ್ ಹೊಂದಿರುವ ನಾಲ್ಕು ಆಸನಗಳ ತರಬೇತಿ ವಿಮಾನ ಟೇಕ್‌ಆಫ್ ಆಗಿತ್ತು. ತರಬೇತಿ ಕೇಂದ್ರಕ್ಕೆ ಹಿಂದಿರುಗುತ್ತಿದ್ದ ವೇಳೆ 11:50ರ ಸುಮಾರಿಗೆ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ …

Read More »

288 ಭಾರತೀಯರು ನಾಪತ್ತೆ, 21 ತಮಿಳಿಗರ ರಕ್ಷಣೆ – ರಾಜ್ಯವಾರು ಮಾಹಿತಿ ಹಂಚಿಕೊಂಡ ಎಂಇಎ

ನವದೆಹಲಿ: ನೇಪಾಳದಲ್ಲಿ ಉಂಟಾದ ರಣಭೀಕರ ಪ್ರವಾಹದಲ್ಲಿ 288 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆಂದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ  ಗುರುವಾರ ಮಾಹಿತಿ ಹಂಚಿಕೊಂಡಿದೆ. ಈ ದುರಂತದಲ್ಲಿ 270 ಮಂದಿ ಮೃತಪಟ್ಟಿದ್ದು, ಸಾವಿರಾರು ಜನ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ ನವದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ , ನಾಪತ್ತೆಯಾಗಿರುವ ಭಾರತೀಯರ ಪತ್ತೆಗೆ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ನೇಪಾಳದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಸಂಸ್ಥೆಗಳೊಂದಿಗೆ …

Read More »