Breaking News

ಕೊರೊನಾ ಮುಕ್ತ ಹೊಸಪೇಟೆ- ಜಿಲ್ಲೆಯಲ್ಲಿ 4 ಪ್ರಕರಣಗಳು ಮಾತ್ರ ಬಾಕಿ……..

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 11 ಕೊರೊನಾ ಪ್ರಕರಣಗಳು ಪತ್ತೆಯಾಗಿ ಆತಂಕ ಸೃಷ್ಟಿಯಾಗಿತ್ತು. ಇದೀಗ ಹೊಸಪೇಟೆಯಲ್ಲಿ ಮತ್ತೋರ್ವ ವ್ಯಕ್ತಿ ಡಿಸ್‍ಚಾರ್ಜ್ ಆಗಿದ್ದು, ಈ ಮೂಲಕ ಹೊಸಪೇಟೆ ನಗರ ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 17 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 11 ಹೊಸಪೇಟೆಯಲ್ಲೇ ಇದ್ದವು. ಆದರೆ ಇದೀಗ ಹೊಸಪೇಟೆಯ 11 ಜನ ಸಹ ಡಿಸ್‍ಚಾರ್ಜ್ ಆಗಿದ್ದು, ಕೊರೊನಾ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಟ್ಟು 13ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು …

Read More »

ಹಣ್ಣು, ತರಕಾರಿ ಬೆಳೆಗಾರರಿಗೆ 15 ಸಾವಿರ ರೂ.- ಬಿಎಸ್‍ವೈಯಿಂದ ಮತ್ತೆ 162 ಕೋಟಿ ಪ್ಯಾಕೇಜ್ ಪ್ರಕಟ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ತರಕಾರಿ, ಹಣ್ಣು ಬೆಳೆಗಾರರು ಹಾಗೂ ಕೈಮಗ್ಗ ಕಾರ್ಮಿಕರಿಗಾಗಿ ಒಟ್ಟು 162 ಕೋಟಿ ರೂ. ಪ್ಯಾಕೇಜ್ ಪ್ರಕಟಿಸಿದ್ದಾರೆ. ತರಕಾರಿ, ಹಣ್ಣು ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ 15 ಸಾವಿರ ರೂಪಾಯಿನಂತೆ ಒಟ್ಟು 137 ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಇದು 7 ಬಗೆಯ ಹಣ್ಣುಗಳು, 10 ತರಕಾರಿ ಬೆಳೆಗಳಿಗೆ ಸಿಮೀತವಾಗಿದೆ. …

Read More »

ಮನೆ ಬಾಗಿಲಿಗೆ ಕೋಲ್ಡ್ ಬಿಯರ್ ತಂದ ಮದ್ಯದ ಕಂಪನಿ ನಿರ್ದೇಶಕ………

ಲಂಡನ್: ಬ್ರಿಟನ್‍ನಲ್ಲಿ ಪಬ್‍ಗಳು ಬಂದ್ ಆಗಿವೆ. ಆದರೆ ಪೂರ್ವ ಲಂಡನ್‍ನ ವ್ಯಕ್ತಿಯೊಬ್ಬ ಬಿಯರ್ ಮಾರಲು ಉಪಾಯ ಹುಡುಕಿದ್ದು, ಕೆಗ್ಸ್ ಗಳನ್ನು ವ್ಯಾನ್‍ನಲ್ಲಿ ಪ್ಯಾಕ್ ಮಾಡಿಕೊಂಡು ಮನೆ ಮನೆಗೆ ಹಂಚುತ್ತಿದ್ದಾನೆ. ವ್ಯಾನ್ ಮೇಲೆ ‘ಟ್ಯಾಕ್ಟಿಕಲ್ ಬಿಯರ್ ರಿಸ್ಪಾನ್ಸ್ ಯುನಿಟ್’ ಎಂದು ಬರೆದುಕೊಂಡು ಫಾರೆಸ್ಟ್ ರೋಡ್ ಬ್ರೇವಿಂಗ್ ಕಂಪನಿಯ ನಿರ್ದೇಶಕ ಪೀಟರ್ ಬ್ರಾವ್ನ್ ಸ್ವತಃ ಬಿಯರ್ ಡೆಲಿವರಿ ಮಾಡಿ ಗ್ರಾಹಕರ ಎಣ್ಣೆ ದಾಹ ತಣಿಸುತ್ತಿದ್ದಾರೆ. ಬಾಕ್ಸ್, ಕ್ಯಾನ್ ಹಾಗೂ ಬಾಟಲಿಗಳ ಬದಲಿಗೆ ಬ್ರಾವ್ನ್ …

Read More »

BIG-BREAKINGಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶ

ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸುಮಾರು 2.10ಕ್ಕೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬಿಡದಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಜನವರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮ ಆರೋಗ್ಯದ ಕುರಿತು ಸ್ಪಷ್ಟನೆ ನೀಡಿದ್ದರು. ನನ್ನ ಆರೋಗ್ಯದ ಕುರಿತು ಹರಿದಾಡುತ್ತಿರುವ …

Read More »

ಟ್ರಸ್ಟ್ ಹೆಸರಲ್ಲಿ ಭಾರೀ ಮೋಸ- ಎಚ್ಚರಿಕೆ ನೀಡಿದ ಸಲ್ಮಾನ್ ಖಾನ್………..

ನವದೆಹಲಿ: ಸ್ಟಾರ್ ನಟರ ಹೆಸರಲ್ಲಿ ಮೋಸ ನಡೆಯುತ್ತಿರುವ ಪ್ರಕರಣಗಳು ಸಾಮಾನ್ಯ ಎಂಬಂತಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ಸೃಷ್ಟಿಸಿ ಕೆಲ ಜನ ಯಾಮಾರಿಸುತ್ತಿದ್ದರು. ಇದೀಗ ಬಡವರಿಗೆ ಹಾಗೂ ಯುವ ಕಲಾವಿದರಿಗೆ ಮೋಸ ಮಾಡಲು ಮುಂದಾಗಿದ್ದಾರೆ. ಅದೂ ಸಹ ಟ್ರಸ್ಟ್ ಗಳ ಹೆಸರಿನಲ್ಲಿ ಯಾಮಾರಿಸುತ್ತಿದ್ದು, ಭಾಯಿಜಾನ್ ಸಲ್ಮಾನ್ ಖಾನ್ ಅವರ ಸಲ್ಮಾನ್ ಖಾನ್ ಫಿಲಮ್ಸ್ ಹೆಸರಿನಲ್ಲಿ ಯುವ ಕಲಾವಿದರಿಗೆ ಮೋಸ ಮಾಡುತ್ತಿದ್ದಾರೆ. ಹೌದು ನಕಲಿ ಖಾತೆಗಳ ಮೂಲಕ ತಪ್ಪು ಮಾಹಿತಿ ನೀಡುತ್ತಿದ್ದ …

Read More »

ಬೀದಿಬದಿ ವ್ಯಾಪಾರಿಗಳಿಗೆ ಸಾಲ – 5 ಸಾವಿರ ಕೋಟಿ ರೂ. ಪ್ಯಾಕೇಜ್ ಪ್ರಕಟ

ನವದೆಹಲಿ: ಕೋವಿಡ್ 19 ನಿಂದ ಸಂಕಷ್ಟಕ್ಕೆ ಸಿಲುಕಿದ ಬೀದಿಬದಿ ವ್ಯಾಪಾರಿಗಳ ನೆರವಿಗೆ ಕೇಂದ್ರ ಸ್ಪಂದಿಸಿದ್ದು 5 ಸಾವಿರ ಕೋಟಿ ರೂ. ಸಾಲ ನೀಡಲಾಗುವುದು ಎಂದು ಹೇಳಿದೆ. ನರೇಂದ್ರ ಮೋದಿ ಪ್ರಕಟಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ಗೆ ಸಂಬಂಧಿಸಿದಂತೆ ಎರಡನೇ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ  ಹಲವು ಪ್ಯಾಕೇಜ್ ಗಳನ್ನು ಪ್ರಕಟಿಸಿದರು. ಮುಂದಿನ 1 …

Read More »

ಇಂದು 28 ಮಂದಿಗೆ ಕೊರೊನಾ – 987ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಕಬಂಧಬಾಹುಗಳು ಹರಡಿಕೊಳ್ಳುತ್ತಿದೆ. ಇಂದು ಒಂದೇ ದಿನ 28 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದ್ದು, ಈ ಪೈಕಿ 460 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಇನ್ನೂ 491 ಜನರು ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೂ 35 ಮಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ …

Read More »

ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ

ನವದೆಹಲಿ: ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ, ರೈತರಿಗೆ ಸಾಲದ ಬಡ್ಡಿಯಿಂದ ವಿನಾಯಿತಿ – ಇದು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದ ಪ್ಯಾಕೇಜ್ ಗಳ ಮುಖ್ಯಾಂಶಗಳು. ಕೈಗಾರಿಕೆ, ಉದ್ಯಮ, ರಿಯಲ್ ಎಸ್ಟೇಟ್, ಕಾರ್ಮಿಕರಿಗೆ ಪ್ಯಾಕೇಜ್ ಪ್ರಕಟಿಸಿದರೆ ಇಂದು ಬಡವರು, ಕೃಷಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರಿಗೆ ಸಂಬಂಧಿಸಿದಂತೆ ಪ್ಯಾಕೇಜ್ ಪ್ರಕಟ ಮಾಡಿದೆ. …

Read More »

ಸಣ್ಣ ವ್ಯಾಪಾರಿಗಳಿಗೆ 50 ಸಾವಿರ ಸಾಲ – ಶೇ.2ರಷ್ಟು ಬಡ್ಡಿ ಕೇಂದ್ರದಿಂದ ಪಾವತಿ

ನವದೆಹಲಿ: ಕೇಂದ್ರ ಸರ್ಕಾರ ಬೀದಿ ಬದಿಯ ವ್ಯಾಪಾರಿಗಳಿಗೆ ರಿಲೀಫ್ ನೀಡಿದಂತೆ ಸಣ್ಣ ವ್ಯಾಪಾರಿಗಳಿಗೆ ಸಹಾಯಹಸ್ತ ಚಾಚಿದೆ. ಮುದ್ರಾ ಶಿಶು ಯೋಜನೆಯ ಅಡಿಯಲ್ಲಿ ಗರಿಷ್ಟ 50 ಸಾವಿರ ರೂ. ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಅಡಿಯಲ್ಲಿ ಸಾಲ ಪಡೆದವರಿಗೆ 12 ಅವಧಿಗೆ ಶೇ.2 ರಷ್ಟು ಬಡ್ಡಿಯನ್ನು ಸರ್ಕಾರವೇ ಪಾವತಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಈ ಸಾಲಕ್ಕೆ ಅನುಮತಿ ನೀಡಿದೆ. ಪ್ರಧಾನಿ …

Read More »

ಕೊರೊನಾ’ ಎಂದು ಕೂಗಿ ವೈದ್ಯೆಗೆ ಕಿರುಕುಳ- ಅವಾಚ್ಯ ಶಬ್ದಗಳಿಂದ ನಿಂದಿಸಿದ ಸ್ಥಳೀಯರು

ನವದೆಹಲಿ: ಕೋವಿಡ್-19 ಐಸೋಲೇಷನ್ ವಾರ್ಡಿನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆಯೊಬ್ಬರು ತಮ್ಮ ಮನೆಗೆ ವಾಪಸ್ಸಾದಾಗ ಸ್ಥಳೀಯರು ಅವರನ್ನು ಹಿಗ್ಗಾಮುಗ್ಗ ನಿಂದಿಸಿದ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ. ಈ ಘಟನೆ ದಕ್ಷಿಣ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ನಡೆದಿದೆ. ಕುಂಜ್ ಪ್ರದೇಶದಲ್ಲಿ ಮಹಿಳೆ ಒಂಟಿಯಾಗಿ ನೆಲೆಸಿದ್ದಾರೆ. ಹೀಗಾಗಿ ಅವರು ಐಸೋಲೇಷನ್ ವಾರ್ಡಿನಿಂದ ಮನೆಗೆ ವಾಪಸ್ಸಾಗುತ್ತಿದ್ದಂತೆಯೇ ಸ್ಥಳೀಯರು ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದರು. ಅಷ್ಟೇ ಅಲ್ಲದೆ ಅವರನ್ನು ಕೂಡಿ ಹಾಕಿದ್ದರು. ಕೋವಿಡ್-19 ರೋಗಿಗಳ …

Read More »