Breaking News

ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ …

Read More »

ಲಾಲ್‌ಬಾಗ್‌ಗೆ ಹೋಗುವ ಮುನ್ನ ತಿಳಿಯಿರಿ, ಪ್ರವೇಶ ಶುಲ್ಕ ಏರಿಕೆ

ಬೆಂಗಳೂರು, ನವೆಂಬರ್ 04: ಉದ್ಯಾನ ನಗರಿ ಬೆಂಗಳೂರಿನ ಲಾಲ್‌ಬಾಗ್‌ಗೆ ಹೋಗುವ ಮುನ್ನ ಇದನ್ನು ಓದಿ. ತೋಟಗಾರಿಕಾ ಇಲಾಖೆಯಿಂದ ನಿರ್ವಹಣೆ ಮಾಡಲಾಗುತ್ತಿರುವ ಲಾಲ್‌ಬಾಗ್‌ನ ಪ್ರವೇಶ ಶುಲ್ಕವನ್ನು ಭಾರೀ ಏರಿಕೆ ಮಾಡಲಾಗಿದೆ. ದಿನನಿತ್ಯ ಸಾವಿರಾರು ಜನರು ನಗರದ ಜಂಟಾಟದಿಂದ ತಪ್ಪಿಸಿಕೊಳ್ಳಲು ಲಾಲ್‌ಬಾಗ್‌ಗೆ ಭೇಟಿ ನೀಡುತ್ತಾರೆ. ಈಗ ಅವರು ಹೊಸ ದರವನ್ನು ಕಟ್ಟಿ ಪವೇಶ ಪಡೆಯಬೇಕಿದೆ. ತೋಟಗಾರಿಕಾ ಇಲಾಖೆ ಲಾಲ್‌ಬಾಗ್ ಪ್ರವೇಶ ಶುಲ್ಕವನ್ನು ಏರಿಕೆ ಮಾಡುವ ಮೂಲಕ ಪ್ರವಾಸಗರ ಜೇಬಿಗೆ ಕತ್ತರಿ ಹಾಕಿದೆ. ಸಾಮಾನ್ಯ …

Read More »

ಗ್ಯಾರಂಟಿ ಕಣ್ಣೊರೆಸುವ ತಂತ್ರ: ಸಚಿವ ಜಮೀರ್‌ ಆಯೋಗ್ಯ; ವಿಜಯೇಂದ್ರ ಟೀಕೆ

ಬಳ್ಳಾರಿ: ‘ರಾಜ್ಯದ ಅಭಿವೃದ್ಧಿ ಕುಸಿದಿದೆ. ಗ್ಯಾರಂಟಿಗಳು ಕಣ್ಣೊರೆಸುವ ತಂತ್ರಗಳಂತಾಗಿವೆ. ಇಂಥ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಹಭಾಸ್‌ಗಿರಿ ಹೇಳಬೇಕಿತ್ತಂತೆ. ಮೋದಿ ಅವರ ಪಾದ ದೂಳಿಗೂ ಸಿದ್ದರಾಮಯ್ಯ ಸಮವಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.   ಸಂಡೂರಿನಲ್ಲಿ ಭಾನುವಾರ ಯುವ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರೇ ಗ್ಯಾರಂಟಿಗಳ ಬಗ್ಗೆ ಛೀಮಾರಿ ಹಾಕಿದ್ದಾರೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ …

Read More »

ನ.25ರಿಂದ ಚಳಿಗಾಲದ ಅಧಿವೇಶನ: ವಕ್ಫ್ ಮಸೂದೆ ಮಂಡನೆ ಸಾಧ್ಯತೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 25 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 20 ರವರೆಗೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನದಲ್ಲಿ ಸರ್ಕಾರವು ವಿವಾದಾತ್ಮಕ ಒನ್ ನೇಷನ್ ಒನ್ ಎಲೆಕ್ಷನ್ ಮತ್ತು ವಕ್ಫ್ ಮಸೂದೆಗಳನ್ನು ಪರಿಚಯಿಸಲಿದೆ. ನವೆಂಬರ್ 23 ರಂದು ನಡೆಯಲಿರುವ ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಅಧಿವೇಶನದ ಮೇಲೆ ಗಮನಾರ್ಹ ಪರಿಣಾಮ ಬೀರಲಿವೆ. ಹರಿಯಾಣ ಸೋಲಿನಿಂದ ಚೇತರಿಸಿಕೊಂಡಿರುವ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) …

Read More »

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು. ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಶಹಾಪುರ: ಶನಿವಾರ(ನ.2) ಸಂಜೆ ತಾಲೂಕಿನ ದೋರನಹಳ್ಳಿ ಗ್ರಾಮ ಬಳಿ ಶಹಾಪುರ – ಯಾದಗಿರಿ ಹೆದ್ದಾರಿಯಲ್ಲಿ ವ್ಯಕ್ತಿಯೋರ್ವನ ಕಗ್ಗೊಲೆ ನಡೆದಿದ್ದು, ಕೊಲೆಯಾದ ವ್ಯಕ್ತಿ ತಾಲೂಕಿನ ಕನ್ಯಾಕೋಳೂರ ವ್ಯಾಪ್ತಿಯ ಜಾಪಾ ನಾಯಕ ತಾಂಡಾದ ನಿವಾಸಿ ತಿಪ್ಪಣ್ಣ ರಾಠೋಡ್(35) ಎಂದು ಗುರುತಿಸಲಾಗಿದೆ. ಆರೋಪಿಗಳು ಅದೇ ಜಾಪಾ ನಾಯಕ ತಾಂಡಾದ ನಿವಾಸಿಗಳಾಗಿದ್ದು, ಕುಮಾರ (36) ಹೇಮ್ಯಾ ಚವ್ಹಾಣ (36) ಹಾಗೂ ಲಕ್ಷ್ಮಣ ಚವ್ಹಾಣ (38) ಇವರೇ ಆರೋಪಿಗಳೆಂದು ಹೇಳಲಾಗಿದೆ. ಹತ್ಯೆಯಾದ ತಿಪ್ಪಣ್ಣ ಅವರ ಪತ್ನಿ ಮಂಜುಳಾ ನಗರ …

Read More »

ನವೆಂಬರ್ 4, 5 ರಂದುಸಿಎಂ, ಡಿಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಗ್ಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಬೆಂಗಳೂರಿನಿಂದ ಸೋಮವಾರ ಬೆಳಗ್ಗೆ 9 ಗಂಟೆಗೆ ಹೊರಟು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು 10 50ಕ್ಕೆ ಶಿಗ್ಗಾವಿ ತಲುಪಲಿದ್ದಾರೆ. ಹುಲಗೂರಿನಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ …

Read More »

ಕುಡುಗೋಲು, ಬಿಯರ್ ಬಾಟಲಿಯಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕುಡುಗೋಲು, ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. 13ಕ್ಕೂ ಹೆಚ್ಚು ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆಸಿ ರವಿ ತಿಮ್ಮನ್ನವರ ಕೊಲೆ ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »

ಸವಣೂರ ವಿಧಾನಸಭಾ ಕ್ಷೇತ್ರ ಪ್ರಚಾರದಲ್ಲಿ ಭಾಗವಹಿಸಿದ ಸತೀಶ್ ಜಾರಕಿಹೊಳಿ

ಶಿಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ಮುಖಂಡರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹ್ಮದ್ ಖಾನ್ ಪಠಾಣ ಪರ ಪ್ರಚಾರ ನಡೆಸುತ್ತಿರುವ ಮುಖಂಡರು, ‘ಜನಪರವಾದ ಐದು ಗ್ಯಾರಂಟಿ ಯೋಜನೆ ನೋಡಿ ಕಾಂಗ್ರೆಸ್‌ಗೆ ಮತ ನೀಡಿ’ ಎಂದು ಕೋರುತ್ತಿದ್ದಾರೆ. ಶಿಗ್ಗಾವಿ ಕ್ಷೇತ್ರದ ಚಾಕಾಪುರದಲ್ಲಿ ಭಾನುವಾರ ಪ್ರಚಾರ ನಡೆಸಿದ ಸಚಿವ ಸತೀಶ ಜಾರಕಿಹೊಳಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ …

Read More »

ಎಂಇಎಸ್‌ನಿಂದ ಕರಾಳ ದಿನ: 46 ಮಂದಿ ವಿರುದ್ಧ ದೂರು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ನಗರದಲ್ಲಿ ನ.1ರಂದು ಕರಾಳ ದಿನ ಆಚರಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ 46 ನಾಯಕರು ಸೇರಿ ಹಲವರ ವಿರುದ್ಧ ಇಲ್ಲಿನ ಮಾರ್ಕೆಟ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯೋತ್ಸವ ದಿನದಂದೇ ಎಂಇಎಸ್‌ನವರು ಪ್ರತಿವರ್ಷ ಕರಾಳ ದಿನ ಆಚರಿಸುತ್ತಾರೆ. ಈ ಬಾರಿ ಅದಕ್ಕೆ ಅನುಮತಿ ಕೋರಿ ಬಂದಿದ್ದ ಎಂಇಎಸ್‌ ನಿಯೋಗಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ‘ಯಾವ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ಕೊಡುವುದಿಲ್ಲ’ ಎಂದು ತಿಳಿಸಿದ್ದರು. ನಗರ ಪೊಲೀಸ್‌ …

Read More »

ರಾಜ್ಯೋತ್ಸವ ಮೆರವಣಿಗೆ ಯಶಸ್ವಿ: ‍ಪೊಲೀಸರ ಕಾರ್ಯಕ್ಕೆ ಪ್ರಶಂಸೆ

ಬೆಳಗಾವಿ: ನಗರದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ವೈಭವದಿಂದ ನಡೆದ ರೂಪಕ ವಾಹನಗಳ ಮೆರವಣಿಗೆ ಶುಕ್ರವಾರ ತಡರಾತ್ರಿ ಮುಕ್ತಾಯವಾಯಿತು. ಸತತ 24 ತಾಸಿಗೂ ಅಧಿಕ ಹೊತ್ತು ಪೊಲೀಸರು ಸಮರ್ಥವಾಗಿ ಕೆಲಸ ಮಾಡಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದರು. ರಾಜ್ಯೋತ್ಸವದ ಮುನ್ನಾದಿನವಾದ ಗುರುವಾರ ಮಧ್ಯರಾತ್ರಿಯೇ ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ‘ಕನ್ನಡ ಹಬ್ಬ’ದ ಆಚರಣೆಗೆ ಚಾಲನೆ ಸಿಕ್ಕಿತು. ಶುಕ್ರವಾರ ಬೆಳಿಗ್ಗೆಯಿಂದ ತಡರಾತ್ರಿಯವರೆಗೆ ಅದ್ದೂರಿ ಮೆರವಣಿಗೆ ನಡೆಯಿತು. ಬೆಳಗಾವಿ ಮಾತ್ರವಲ್ಲದೆ; ರಾಜ್ಯದ ವಿವಿಧ ಜಿಲ್ಲೆಗಳಿಂದ …

Read More »