Breaking News

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ

ನಾಗರಮುನ್ನೊಳ್ಳಿ, ಬೆಳಕುಡ, ಕಬ್ಬೂರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಾಗರಮುನ್ನೊಳ್ಳಿ, ಬೆಳಕುಡ, ಹಾಗೂ ಕಬ್ಬೂರ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಮಾಹಿತಿ ಪಡೆದು, ಸಭೆ ಉದ್ದೇಶಿಸಿ ಮಾತನಾಡಿದರು. ಇಂದು ಇಡೀ ವಿಶ್ವ ಮಹಾಮಾರಿ ಕೊರೋನಾದಿಂದ ಬಳಲುತ್ತಿದೆ, ಈ ಹಿನ್ನೆಲೆಯಲ್ಲಿ …

Read More »

ಗೋಶಾಲೆಗಳಿಗೆ ಆರ್ಥಿಕ ಸಹಾಯ ನೀಡಿ – ಸಿಎಂಗೆ ಮನವಿ

ಮಂಗಳೂರು: ಗೋಶಾಲೆಗಳಿಗೆ ಆರ್ಥಿಕ ಸಹಾಯ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಟೇಟ್ ಎನಿಮಲ್ ವೆಲ್ಪೆರ್ ಬೋರ್ಡ್‍ನ ಸದಸ್ಯ ವಿನಯ್ ಶೆಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ. ಲಾಕ್‍ಡೌನ್‍ನಿಂದ ಗೋಶಾಲೆಗಳಿಗೆ ಬರುತ್ತಿದ್ದ ಸಾರ್ವಜನಿಕ ದೇಣಿಗೆ ಸಂಪೂರ್ಣ ನಿಂತು ಹೋಗಿದೆ. ಸರ್ಕಾರದ ಪರವಾಗಿ ಗೋವುಗಳನ್ನು ಸಾಕುತ್ತಿರುವ ಗೋಶಾಲೆಗಳಿಗೆ ಆರ್ಥಿಕ ಪರಿಹಾರ ನೀಡಬೇಕು ಎಂದು ವಿನಯ್ ಶೆಟ್ಟಿ ಕೇಳಿಕೊಂಡಿದ್ದಾರೆ. ಅಕ್ರಮ ಗೋಸಾಗಾಟದ ಸಂದರ್ಭದಲ್ಲಿ ಪೊಲೀಸರು ವಶಪಡಿಸಿದ ಗೋವುಗಳನ್ನು ನ್ಯಾಯಲಯಗಳು ಸರ್ಕಾರದ ಪರವಾಗಿ ಸಾಕುವಂತೆ ಗೋಶಾಲೆಗಳಿಗೆ …

Read More »

ಅಡ್ಡ ಹಾಕಿದರು ಗಾಡಿ ನಿಲ್ಲ ದತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್….

ಚಿಕ್ಕಮಗಳೂರು: ಪೊಲೀಸರು ಅಡ್ಡ ಹಾಕಿದರು ಗಾಡಿ ನಿಲ್ಲಸದೆ ಮೂಡಿಗೆರೆ ತಾಲೂಕಿನ ಬಣಕಲ್‍ಗೆ ಬಂದು ಹಿಂದಿರುಗಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿಯನ್ನು ಬಣಕಲ್ ಪೊಲೀಸರು ಸೀಜ್ ತಂದು ಠಾಣೆಯಲ್ಲಿ ನಿಲ್ಲಿಸಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಆತಂಕದಲ್ಲಿ ಮಂಗಳೂರು ರೆಡ್ ಝೋನ್‍ನಲ್ಲಿದೆ. ಮಂಗಳೂರಿನಿಂದ ಚಾರ್ಮಾಡಿ ಮೂಲಕ ಚಿಕ್ಕಮಗಳೂರಿಗೆ …

Read More »

ಆಸ್ಪತ್ರೆಯಿಂದ ಚೇತರಿಸಿಕೊಳ್ಳುತ್ತಿರುವ ಕೋರೋನಾ ಸೋಂಕಿತ ರೋಗಿಗಳು ನೀಡಿದ ಮಾಹಿತಿ .

ಆಸ್ಪತ್ರೆಯಿಂದ ಚೇತರಿಸಿಕೊಳ್ಳುತ್ತಿರುವ ಕೋರೋನಾ ಸೋಂಕಿತ ರೋಗಿಗಳು ನೀಡಿದ ಮಾಹಿತಿ … ನಾವು ಪ್ರತಿದಿನ ನಾವು ಹೀಗೆ ಮಾಡಿದ್ದೇವೆ : 1. ವಿಟ್ ಸಿ -1000 ಮಿಗ್ರಾಂ ತಿನ್ನಿರಿ 2. ವಿಟಮಿನ್ ಇ 3. 10:00 – 11:00 ಸೂರ್ಯನ ಮಾನ್ಯತೆ 30 ನಿಮಿಷಗಳು. 4. ದಿನಕ್ಕೆ ಒಂದು ಮೊಟ್ಟೆ ತಿನ್ನಿರಿ. 5. 8 ಗಂಟೆಗಳ ಕಾಲ ನಿದ್ರೆ ಮಾಡಿ. 6. ಪ್ರತಿದಿನ 7 ಲೀಟರ್ ನೀರು ಕುಡಿಯಿರಿ. 8. ಯಾವುದೇ …

Read More »

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಣೇಬೆನ್ನೂರು ಶಾಸಕ ಅರುಣ್‍ಕುಮಾರ ಪೂಜಾರ್ ಅವರು 16 ಲಕ್ಷ ರೂ. ದೇಣಿಗೆ

ಹಾವೇರಿ: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಣೇಬೆನ್ನೂರು ಶಾಸಕ ಅರುಣ್‍ಕುಮಾರ ಪೂಜಾರ್ ಅವರು 16 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಶಾಸಕ ಅರುಣ್‍ಕುಮಾರ್ ಅವರು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 16.47 ಲಕ್ಷ ರೂ. ಚೆಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪರಿಹಾರ ನಿಧಿಗೆ ಚೆಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ …

Read More »

ಉಡುಪಿ:ಮೀನು ಸಿಗುವ ಮೀನಿನಂಗಡಿಯಲ್ಲಿ ಈಗ ಕಿಲೋ ಮೀಟರ್‌ಗಟ್ಟಲೇ ಉದ್ದದ ಕ್ಯೂ

ಉಡುಪಿ: ಕೊರೊನಾ ವೈರಸ್ ಲಾಕ್‍ಡೌನ್‍ನಿಂದಾಗಿ ಜನರು ಮನೆಯಲ್ಲಿಯೇ ಬಂಧಿಯಾಗಿದ್ದಾರೆ. ಈ ಟೈಮ್‍ನಲ್ಲಿ ನಾನ್‍ವೆಜ್ ಪ್ರಿಯರ ಪಾಡು ಕೇಳುವುದೇ ಬೇಡ. ಅದರಲ್ಲೂ ಮೀನಿನೂಟ ಇಲ್ಲದೇ ಬಹುತೇಕ ಕರಾವಳಿಯವರಿಗೆ ಊಟ ಸಪ್ಪೆ ಸಪ್ಪೆ. ಈಗ ಲಾಕ್‍ಡೌನ್ ಎಫೆಕ್ಟ್ ಇರುವ ಹಿನ್ನೆಲೆಯಲ್ಲಿ ಮೀನು ಸಿಗುವುದೆ ಅಪರೂಪ. ಮೀನು ಸಿಗುವ ಮೀನಿನಂಗಡಿಯಲ್ಲಿ ಈಗ ಕಿಲೋ ಮೀಟರ್‌ಗಟ್ಟಲೇ ಉದ್ದದ ಕ್ಯೂ ಇರುತ್ತದೆ. ಹೆಬ್ರಿ ಮುದ್ರಾಡಿಯ ಮೀನಿನಂಗಡಿಯಲ್ಲಿ ಪ್ರತಿನಿತ್ಯವೂ ಜನ ಮೀನುಕೊಳ್ಳಲು ಸೋಷಿಯಲ್ ಡಿಸ್ಟೆನ್ಸ್‌ನಲ್ಲಿ ಕಿಲೋ ಮೀಟರ್‌ಗಟ್ಟಲೇ ಕ್ಯೂ …

Read More »

ಕೋಲಾರ:ಸ್ವತಃ ಹೆಗಲ ಮೇಲೆ ಪೈಪ್‍ಗಳನ್ನು ಹೊತ್ತು ಸಾಗಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಾಮಾನ್ಯರಂತೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಕೊರೊನಾ ವೈರಸ್‍ನಿಂದಾಗಿ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಹೀಗಾಗಿ ಅನೇಕ ರಾಜಕಾರಣಿಗಳು ಮನೆಯಲ್ಲೇ ಕಳೆಯುತ್ತಿದ್ದರೆ, ಕೆಲವರು ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಆದರೆ ರಮೇಶ್ ಕುಮಾರ್ ಅವರು ತಮ್ಮ ತೋಟದಲ್ಲಿ ಕೆಲಸ ಮಾಡುವ ಮೂಲಕ ಲಾಕ್‍ಡೌನ್‍ನಲ್ಲಿ ಕಾಲ ಕಳೆಯುತ್ತಿದ್ದಾರೆ. ಕಾಂಗ್ರೆಸ್‍ನ ಟಾಸ್ಕ್ ಪೋರ್ಸ್ ಕಮಿಟಿ ಅಧ್ಯಕ್ಷ ರಮೇಶ್ ಕುಮಾರ್ ಅವರು ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ …

Read More »

ರಾಜ್ಯದಲ್ಲಿ ಕೊರೊನಾ ಕರಾಳತೆ – ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್

ಲಾಕ್‍ಡೌನ್ ನಿಯಮಾವಳಿ ಕಂಪ್ಲೀಟ್ ಬದಲು.! – ನಿಯಂತ್ರಿತ ವಲಯದಲ್ಲಿ ಸೀಲ್‍ಡೌನ್ ರೂಲ್ಸ್ ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್ ಅಷ್ಟೇ ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಹಿನ್ನೆಯಲ್ಲಿ ಲಾಕ್‍ಡೌನ್ ನಿಯಮಾವಳಿ ಕಂಪ್ಲೀಟ್ ಬದಲು ಮಾಡಿ ರಾಜ್ಯ ಸರ್ಕಾರ ನಿಯಮಗಳ ಆದೇಶ ಹೊರಡಿಸಿದೆ. ಕೊರೊನಾ ಹಾಟ್‍ಸ್ಪಾಟ್‍ನಲ್ಲಿ ಲಾಕ್‍ಡೌನ್ ಟಫ್ ರೂಲ್ಸ್ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು …

Read More »

ಬೆಂಗ್ಳೂರಿನಲ್ಲಿ ಕಂಟ್ರೋಲ್‍ಗೆ ಬಾರದ ಡೆಡ್ಲಿ ವೈರಸ್………

ಬೆಂಗಳೂರು: ರೆಡ್‍ ಝೋನ್‍ನಲ್ಲಿರೋ ಬೆಂಗಳೂರಿನಲ್ಲಿ 86 ಜನ ಸೋಂಕಿತರಿದ್ದಾರೆ. ಈ ಪೈಕಿ ಬೆಂಗಳೂರು ದಕ್ಷಿಣ 18, ಪೂರ್ವ 16, ಮಹದೇವಪುರ 10, ಬೊಮ್ಮನಹಳ್ಳಿ 4, ಆರ್ ಆರ್. ನಗರ 3 ಮತ್ತು ಯಲಹಂಕ 2 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಶ್ಚಿಮ ವಿಭಾಗದಲ್ಲಿ ಬರೋಬ್ಬರಿ 22 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಶ್ಚಿಮ ವಿಭಾಗದ 10 ಕಿಲೋ ಮೀಟರ್ ಸುತ್ತಮುತ್ತಲೇ ಕೊರೊನಾ ಡೇಂಜರ್ ಹಾಟ್‍ಸ್ಪಾಟ್ ಆಗಿದೆ. ಟಿಪ್ಪುನಗರದ ಮೃತ ವೃದ್ಧನಿಂದ …

Read More »

ಮಸ್ತಿ – ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಮೂವರು

ಬಳ್ಳಾರಿ: ಲಾಕ್‍ಡೌನ್ ಹಿನ್ನೆಲೆ ಸರಣಿ ರಜೆ ಇರೋದರಿಂದ ನದಿಯಲ್ಲಿ ಈಜಲು ತೆರೆಳಿದ್ದ ಮೂವರು ಕಾರ್ಮಿಕರು ನೀರುಪಾಲಾದ ಘಟನೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋವೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಇಂದು ಮಧ್ಯಾಹ್ನ ಈಜಾಡಲು ಹೋಗಿದ್ದ ಮೂವರು ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ. ನದಿಯಲ್ಲಿ ಈಜಾಡಲು ಐದು ಮಂದಿ ತೆರಳಿದ್ದು, ಈ ಪೈಕಿ ಮೂವರು ನೀರು ಪಾಲಾದರೆ, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋವೇನಹಳ್ಳಿ ಗ್ರಾಮದ ನಿವಾಸಿ …

Read More »