ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜಿಲೆಟಿನ್ ಹಾಗೂ ಡಿಟೊನೇಟರ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ. ಗಣೇಶ್, ಶಿವ ಹಾಗೂ ಮುನಿಯಪ್ಪ ಬಂಧಿತ ಆರೋಪಿಗಳು. ಜುಲೈ 23ರಂದು ಮಧ್ಯಾಹ್ನ ಕಲಾಸಿಪಾಳ್ಯದ ಶೌಚಾಲಯದ ಬಳಿ ಜಿಲೆಟಿನ್, ಡಿಟೊನೇಟರ್ ಪತ್ತೆಯಾಗಿದ್ದವು. ಸ್ಥಳ ಪರಿಶೀಲನೆ ನಡೆಸಿದ್ದ ಪೊಲೀಸರು 6 (ಆರ್.ಇ.ಎಕ್ಸ್ – 90) ಜಿಲೆಟಿನ್ ಜೆಲ್, 12 ಎಲೆಕ್ಟ್ರಿಕ್ ಡಿಟೋನೇಟರ್ಗಳನ್ನ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಆರೋಪಿಗಳ ಪತ್ತೆಗಾಗಿ 5 ಪ್ರತ್ಯೇಕ ತಂಡಗಳನ್ನ ರಚಿಸಲಾಗಿತ್ತು. …
Read More »ಬೆಳಗಾವಿ – ಗೋವಾ ಹೆದ್ದಾರಿಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಆರೋಪ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಕರ್ನಾಟಕ – ಗೋವಾ ಗಡಿಭಾಗದಲ್ಲಿ ಹಾದು ಹೋಗುವ ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿ-748ರಲ್ಲಿ ಖಾನಾಪುರ ತಾಲೂಕಿನ ಗಣೇಬೈಲ್ ಟೋಲ್ ನಾಕಾದಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹ ಮಾಡುತ್ತಿರುವುದನ್ನು ವಿರೋಧಿಸಿ ಸಲ್ಲಿಸಲಾದ ಅರ್ಜಿ ಕುರಿತು ಹೈಕೋರ್ಟ್ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ವಿಚಾರವಾಗಿ ಸ್ಥಳೀಯ ಗ್ರಾಮಸ್ಥರಾದ ಕೃಷ್ಣಾಜಿ ಪಾಟೀಲ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ …
Read More »ಒಂಟಿ ವೃದ್ದೆಯನ್ನ ಯುವಕರ ಗ್ಯಾಂಗ್ವೊಂದು ಕೊಲೆಗೈದು ಚಿನ್ನಾಭರಣ ದೋಚಿ ಎಸ್ಕೇಪ್
ಕಲಬುರಗಿ : ಒಂಟಿ ವೃದ್ದೆಯನ್ನ ಯುವಕರ ಗ್ಯಾಂಗ್ವೊಂದು ಕೊಲೆಗೈದು ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದ ಪ್ರಕರಣವನ್ನು ಪೊಲೀಸ್ ಪಡೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿಯೂ ಭೇದಿಸಿ ಹಂತಕರನ್ನು ಜೈಲಿಗಟ್ಟಿದೆ. ವೃದ್ದೆ ಮರ್ಡರ್ ಹಾಗೂ ಅರೆಸ್ಟ್ನ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ. ತಾನಾಜಿ (25) ವಿಜಯಕುಮಾರ್ (23) ಲಕ್ಷ್ಮಣ (24) ಹಾಗೂ ಸಂಜೀವಕುಮಾರ್ (24) ಇವರೇ 78 ವರ್ಷದ ಜಗದೇವಿ ಎಂಬ ವೃದ್ದೆಯನ್ನ ಕತ್ತು ಹಿಸುಕಿ ಕೊಲೆ ಮಾಡಿ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಹಂತಕರು. …
Read More »ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿ
. ದೆಹಲಿಯಲ್ಲಿಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಶ್ರೀ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರದ ಕೊರತೆ ಕುರಿತು ಚರ್ಚಿಸಿದೆವು. ಚರ್ಚೆಯ ಸಂದರ್ಭದಲ್ಲಿ, ಕೇಂದ್ರ ಸರ್ಕಾರವು ಈಗಾಗಲೇ ರಾಜ್ಯಕ್ಕೆ ಹೆಚ್ಚುವರಿ ರಸಗೊಬ್ಬರವನ್ನು ಒದಗಿಸಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜೊತೆಗೆ, ರಾಜ್ಯಕ್ಕೆ ಮತ್ತಷ್ಟು ರಸಗೊಬ್ಬರದ ಅವಶ್ಯಕತೆ ಇದ್ದರೆ, ಅದನ್ನು ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಚಿವರು ತಿಳಿಸಿದರು. …
Read More »ಕಾಂಗ್ರೆಸ್ ಕಚೇರಿಯಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ ನಗರದಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಳಗಾವಿ ನಗರ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು, ಯುವಕರನ್ನು ಉದ್ದೇಶಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಾತಮಾಡಿದರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಲು ಮತ್ತು ಅವರ ಮಾರ್ಗದರ್ಶನದಂತೆ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕರೆ ನೀಡಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ …
Read More »ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್ ರವರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ
ದಿನಾಂಕ: 28.07.2025 ರಂದು ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್ ರವರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತದ ನಂತರ ಕೈಗಾರಿಕಾ ಪ್ರದೇಶಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಈ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಎಸ್.ಎಲ್.ಎ.ಒ. ಹಾಗೂ ಕರ್ನಾಟಕ ಇಂಡಸ್ಟ್ರಿಯಲ್ ಏರಿಯಾಸ್ ಡೆವಲಪ್ಮೆಂಟ್ ಬೋರ್ಡ್ ( KIADB ) ನ ಮುಖ್ಯ …
Read More »ಬೆಳಗಾವಿಯಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ 91 ಅಸಂಘಟಿತ ಕಾರ್ಮಿಕ ವಲಯವನ್ನು ಸರ್ಕಾರ ಗುರುತು ಮಾಡಿದೆ
ಬೆಳಗಾವಿಯಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ 91 ಅಸಂಘಟಿತ ಕಾರ್ಮಿಕ ವಲಯವನ್ನು ಸರ್ಕಾರ ಗುರುತು ಮಾಡಿದೆ ಬೆಳಗಾವಿಯಲ್ಲಿ ಸ್ಮಾರ್ಟ್ ಕಾರ್ಡ್ ಇಂದು ವಿತರಣೆ ಮಾಡ್ತಿವಿ ಹೊರ ಗುತ್ತಿಗೆ ಮೊದಲಿನಿಂದಲೂ ಇದೆ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನಾವು ನೀಡ್ತಿವಿ ರಾಜ್ಯದಲ್ಲಿ 20 ಲಕ್ಷ ನಕಲಿ ಕಾರ್ಡ್ ಕಮ್ಮಿ ಮಾಡಿದ್ದೇವೆ ಅಂಬೇಡ್ಕರ್ ಸೇವೆ ಕೇಂದ್ರ ಶೀಘ್ರದಲ್ಲೇ ಆರಂಭವಾಗಲಿದೆ ನಮ್ಮ ಅರ್ಜಿ ಹಾಕ್ತಾರೆ ಅವರ ಮನೆಗೆ ಹೋಗಿ ಮಾಹಿತಿ ಸಂಗ್ರಹ ಮಾಡ್ತಾವೆ ಇದರಿಂದ …
Read More »MRPಗಿಂತ ಅಧಿಕ ಬೆಲೆಗೆ ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು ರಸಗೊಬ್ಬರ ಮಾರಾಟ ಮಾಡಿದ ಆರೋಪದ ಮೇಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್ ರದ್ದು
ಕಲಬುರಗಿ: ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು MRPಗಿಂತ ಅಧಿಕ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್ ರದ್ದುಪಡಿಸಿದ್ದಾರೆ. “DAP ಗೊಬ್ಬರದ ದರ 1,350 ಇದ್ದರೆ 1,600, 1,800ಕ್ಕೆ ರೂಪಾಯಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಯುರಿಯಾ ರಸಗೊಬ್ಬರ 266 ರೂಪಾಯಿ ಇದ್ದರೆ 900 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ದೂರಿದ್ದರು. ನಿಗದಿತ ಬೆಲೆಗಿಂತ ಹೆಚ್ಚಿನ …
Read More »ಡೇಟಿಂಗ್ ಆ್ಯಪ್ನ ಮೂಲಕ ಪರಿಚಯವಾದವನನ್ನು ಭೇಟಿಗೆಂದು ಕರೆಸಿಕೊಂಡು ಸುಲಿಗೆಗೈದಿದ್ದ ಮಹಿಳೆ ಸಹಿತ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಡೇಟಿಂಗ್ ಆ್ಯಪ್ನ ಮೂಲಕ ಪರಿಚಯವಾದವನನ್ನು ಭೇಟಿಗೆ ಆಹ್ವಾನಿಸಿ ಸುಲಿಗೆ ಮಾಡಿದ್ದ ಮಹಿಳೆ ಸಹಿತ 6 ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ 41 ವರ್ಷದ ಬೋಯಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಉದ್ಯೋಗಿಯೊಬ್ಬರು ನೀಡಿದ್ದ ದೂರಿನನ್ವಯ ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ (21), ಅಭಿಷೇಕ್ (19), ಶ್ಯಾಮ್ ಸುಂದರ್ ಪಾಂಡೆ (20), ರಾಜು ಮಾನೆ (34) ಹಾಗೂ ಶರಣಬಸಪ್ಪ ಬಾಳಿಗೆರ್ (50) ಎಂಬುವರನ್ನು ಬಂಧಿಸಲಾಗಿದೆ ಎಂದು …
Read More »ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ
ಬೆಂಗಳೂರು, ಜುಲೈ 28: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC ST) ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್ಸಿಎಸ್ಪಿ-ಟಿಎಸ್ಪಿ (ಪರಿಶಿಷ್ಟ ಜಾತಿ ಉಪ ಯಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. …
Read More »