ಬೆಂಗಳೂರು: ಕಾನೂನು ರಕ್ಷಿಸುವವನೇ ರಾಕ್ಷಸನಾಗಿ ಬದಲಾಗಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಉದ್ಯಮಿಯೊಬ್ಬರಿಗೆ 50 ಲಕ್ಷ ರೂ. ಬೇಡಿಕೆಯಿಟ್ಟು ಲೋಕಾಯುಕ್ತ ಟ್ರ್ಯಾಪ್ಗೆ ಒಳಗಾಗಿ ಸಸ್ಪೆಂಡ್ ಆಗಿದ್ದ ಪಿಎಸ್ಐ ಇದೀಗ ಪತ್ನಿ ಮತ್ತು ಮಾವನ ಮೇಲೆಯೇ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪಿಎಸ್ಐ ಬೈರಪ್ಪ ವಿರುದ್ಧ ವಕೀಲೆಯಾಗಿರುವ ಪತ್ನಿ ಗಂಭೀರ ಆರೋಪಗಳನ್ನು ಮಾಡಿದ್ದು, ನಗರ ಪೊಲೀಸ್ ಆಯುಕ್ತರು ಹಾಗೂ ಡಿಜಿಗೆ ದೂರು ನೀಡಲು ಮುಂದಾಗಿದ್ದಾ ಐದು ವರ್ಷದ …
Read More »ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್ಗೆ ಕೊಟ್ಟ ಭರವಸೆಯಂತೆ ಟೌನ್ಶಿಪ್ – ಡಿಕೆಶಿ ವಿರುದ್ಧ ಹೆಚ್ಡಿಡಿ ಸ್ಫೋಟಕ ಆರೋಪ
ಬೆಂಗಳೂರು: ಸಿದ್ದರಾಮಯ್ಯ ಇಳಿಸಲು ಹೈಕಮಾಂಡ್ಗೆ ಕೊಟ್ಟ ಭರವಸೆ ಈಡೇರಿಸಲು ಸಿಎಂ ಡಿಕೆ ಶಿವಕುಮಾರ್ ಬಿಡದಿ ಟೌನ್ಶಿಪ್ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಸ್ಫೋಟಕ ಆರೋಪ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಮೇಲಿನ ದೌರ್ಜನ್ಯ ಹಾಗೂ ಜೆಎಂಸಿ ಸರ್ವೆ ವಿವಾದ ಈಗ ರಾಜಕೀಯವಾಗಿ ಭಾರೀ ಸ್ಫೋಟಗೊಂಡಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಂದು ಜೆಪಿ ಭವನದಲ್ಲಿ …
Read More »ಕಲಾದಗಿಗೆ ಮೋಹನ್ ಭಾಗವತ್ ಭೇಟಿ- ಯುವ ಕಾರ್ಯಕರ್ತನ ಮನೆಯಲ್ಲಿ ಚಹಾ ಸೇವನೆ
ಬಾಗಲಕೋಟೆ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ್ ಭಾಗವತ್ ಅವರು ಇಂದು ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಗಡಿಭಾಗದ ಬೆಳಗಾವಿಯಿಂದ ವಿಜಯಪುರಕ್ಕೆ ಪ್ರಯಾಣಿಸುತ್ತಿದ್ದ ಮಾರ್ಗಮಧ್ಯೆ ಅವರು ಕಲಾದಗಿಯ ಸಂಘದ ಯುವ ಕಾರ್ಯಕರ್ತ ಡಾ. ಪ್ರವೀಣ್ ಭಜಂತ್ರಿ ಅವರ ಮನೆಗೆ ಭೇಟಿ ನೀಡಿ ಗಮನ ಸೆಳೆದರು. ದೇಶದ ಅತ್ಯುನ್ನತ ಝೆಡ್ ಪ್ಲಸ್ (Z+) ಭದ್ರತಾ ಚೌಕಟ್ಟನ್ನು ಹೊಂದಿರುವ ಮೋಹನ್ ಭಾಗವತ್ ಅವರು ಕಲಾದಗಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಬಿಗಿ ಪೊಲೀಸ್ ಬಂದೋಬಸ್ತ್ …
Read More »CWMA ಸಭೆ ಬಳಿಕ ನಾಲೆಗಳಿಗೆ ನೀರು; ಈ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ
ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡಬೇಕು ಎಂಬ ರೈತರ ಬೇಡಿಕೆ ನ್ಯಾಯಯುತವಾಗಿದೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ರೈತರ ಹಿತ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಆದರೆ ಜಲಾಶಯಗಳಲ್ಲಿ ನೀರಿನ ಕೊರತೆ ಇರುವ ಕಾರಣ ಕುಡಿಯುವ ನೀರಿಗೂ ಆದ್ಯತೆ ನೀಡಬೇಕಾದ ಪರಿಸ್ಥಿತಿ ಇದೆ ಎಂದರು. ಜಿಲ್ಲೆಯ ಎಲ್ಲಾ ಶಾಸಕರು ಈಗಾಗಲೇ ಮುಖ್ಯಮಂತ್ರಿ ಜೊತೆ ಈ ಕುರಿತು ಚರ್ಚೆ ನಡೆಸಿದ್ದಾರೆ. …
Read More »ಮದರಸಾ ಜಾಗದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಶಾಲೆಗೆ ನುಗ್ಗಿ ದಾಂಧಲೆ
ಬೆಂಗಳೂರು: ಮದರಸಾ ಜಾಗದ ವಿಚಾರಕ್ಕೆ ಶಾಲೆಗೆ ನುಗ್ಗಿ ಪುಂಡರು ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ನಾರಾಯಣಪುರದಲ್ಲಿ ನಡೆದಿದೆ. ಸಾಮರ್ ಇಂಟರ್ನ್ಯಾಷನಲ್ ಸ್ಕೂಲ್ಗೆ ನುಗ್ಗಿದ ಕೆಲವರು, ಕಿಟಕಿ ಗಾಜುಗಳನ್ನು ಒಡೆದು ಒಳನುಗ್ಗೋಕೆ ಪ್ರಯತ್ನಿಸಿದ್ದಾರೆ. ಈ ವೇಳೆ ಒಳಗಿದ್ದ ಕೆಲ ವಿದ್ಯಾರ್ಥಿಗಳು, ಸಿಬ್ಬಂದಿ ಖಾರದ ಪುಡಿ ಬೆರಸಿದ ನೀರು ಎರಚಿ ಅವರನ್ನು ಹಿಮ್ಮೆಟ್ಟಿಸೋ ಕೆಲಸ ಮಾಡಿದ್ದಾರೆ. ನೋಡು ನೋಡುತ್ತಿದ್ದಂತೆ ಇಡೀ ಕಾಲೇಜು ರಣರಂಗವಾಗಿ ಮಾರ್ಪಟ್ಟಿದೆ. ಮಸೀ ಅಹಮದ್ ಎಂಬುವವರು 1988ರಲ್ಲಿ ಮದರಸಾಗೆ …
Read More »ತೆಲಂಗಾಣದಲ್ಲಿ 6 ಜನರನ್ನು ಕಗ್ಗೊಲೆ ಮಾಡಿದ್ದ ಪೋಕ್ಸೋ ಆರೋಪಿ ಆತ್ಮಹತ್ಯೆ
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಪತ್ನಿ ಮತ್ತು ಮಕ್ಕಳು, ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆ ಸೇರಿದಂತೆ 6 ಜನರನ್ನು ಹತ್ಯೆ ಮಾಡಿದ್ದ ಪೋಕ್ಸೋ ಆರೋಪಿ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜು.10 ರಂದು ಆರೋಪಿ ರಾಜ್ಕುಮಾರ್ ತನ್ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಆತನ ಮೇಲೆ ಅತ್ಯಾಚಾರ ಕೇಸ್ ದಾಖಲಿಸಿದ್ದ ಅಪ್ರಾಪ್ತೆ ಹಾಗೂ ಆಕೆಯ ಅಜ್ಜಿ ಮತ್ತು ತಾಯಿಯನ್ನು ಕೊಲೆಗೈದಿದ್ದ. ಬಳಿಕ ಅಲ್ಲಿಂದ ಪರಾರಿಯಾಗಿದ್ದ. ಆತನ ಪತ್ತೆಗೆ 12 ತಂಡಗಳನ್ನು ಮಾಡಿ …
Read More »ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್ಐಆರ್
ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಭೂಮಾಪನ ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಂದಾಯ ಅಧಿಕಾರಿಗಳು ನೀಡಿದ ಅಧಿಕೃತ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಿಡದಿ …
Read More »ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಅಗತ್ಯ; ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ
ನವದೆಹಲಿ: ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಪ್ರತಿಯೊಂದು ಭ್ರಷ್ಟಾಚಾರ ಪ್ರಕರಣದಲ್ಲೂ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ. ಆದರೆ, ಮೂಲ ಮಾಹಿತಿ ಅಪೂರ್ಣವಾಗಿದ್ದರೆ ಅಥವಾ ಆರೋಪಗಳಿಗೆ ಸಾಕಷ್ಟು …
Read More »ಟೌನ್ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆಟೌನ್ಶಿಪ್ ಗಲಾಟೆಯಿಂದ ಸರ್ವೆ ಕಾರ್ಯ ಸ್ಥಗಿತ, ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ: ಎಸ್ಪಿ ಶ್ರೀನಿವಾಸ್ ಗೌಡ ಎಚ್ಚರಿಕೆ
ರಾಮನಗರ: ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದ ಗಲಾಟೆ ಬಳಿಕ ಇಂದಿನ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ. ಮಂಡಲಹಳ್ಳಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಬಳಿಕ ಮಾತನಾಡಿದ ಎಸ್ಪಿ ಶ್ರೀನಿವಾಸ್ ಗೌಡ, ಇಂದು ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ನಾಳೆ ಸರ್ವೆ ಮುಂದುವರಿಸಲು …
Read More »10,000 ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ – ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ.
ಬೆಂಗಳೂರು: ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿಕೆ ಶಿವಕುಮಾರ್ ಅವರು ಮೊದಲು ಘೋಷಣೆ ಮಾಡಿದಂತೆ ರಾಜ್ಯಾದ್ಯಂತ 10 ಸಾವಿರ ʻಭಾರತ್ ಜೋಡೋ ಯುವ ಸಂಘಗಳʼ ಸ್ಥಾಪನೆಗೆ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ಗ್ರಾ.ಪಂ ವ್ಯಾಪ್ತಿಯಲ್ಲಿ 6,000 ಸಂಘಗಳು, ನಗರ ವಾರ್ಡ್ಗಳ ವ್ಯಾಪ್ತಿಯಲ್ಲಿ 4,000 ಸಂಘಗಳ ಸ್ಥಾಪನೆಗೆ ಆದೇಶಿಸಿದೆ. ಪ್ರತಿ ಸಂಘಕ್ಕೆ ಪ್ರತಿ ವರ್ಷ ತಲಾ 10 ಲಕ್ಷ ರೂ. ನಂತೆ 1,000 ಕೋಟಿ ರೂ. ಅನುದಾನ ನೀಡುವುದಾಗಿಯೂ …
Read More »
Laxmi News 24×7