Breaking News

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ?

ಬೆಳಗಾವಿ: ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಬಾಂಬ್ ಇಟ್ಟು ಸ್ಫೋಟ ಮಾಡುವುದಾಗಿ ಇ ಮೇಲ್ ಮೂಲಕ‌ ಸಂದೇಶ ಕಳಿಸಲಾಗಿದೆ. ಇದರಿಂದ ಎಚ್ಚೆತ್ತ ಅಧಿಕಾರಿಗಳು‌ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ. ವಿಮಾನ ನಿಲ್ದಾಣದ‌ ನಿರ್ದೇಶಕ ತ್ಯಾಗರಾಜ್ ಅವರ ಇಮೇಲ್‌ಗೆ ಚೈನ್ನೈನಿಂದ ಅಪರಿಚಿತರಿಂದ ಬೆದರಿಕೆ ಪತ್ರದ‌ ಮೇಲ್ ಬಂದಿದೆ.   ಶ್ವಾನದಳ, ಬಾಂಬ್ ಸ್ಕ್ವಾಡನಿಂದ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತು. ಈ ಬಗ್ಗೆ ತ್ಯಾಗರಾಜ ಅವರು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More »

ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ

ನೇಸರಗಿ(: ಸಮೀಪದ ಕೊಳದೂರ ಹಳ್ಳದಲ್ಲಿ ಬುಧವಾರ ತೇಲಿಹೋಗಿದ್ದ ಯುವಕನ ಮೃತದೇಹ ಭಾನುವಾರ ಪತ್ತೆಯಾಗಿದೆ. ಬೆಳಗಾವಿ ತಾಲ್ಲೂಕಿನ ಕರಡಿಗುದ್ದಿ ಗ್ರಾಮದ ನಿವಾಸಿ ಯಲ್ಲಪ್ಪ ಬೋರನ್ನವರ(34) ಮೃತರು. ಸತತ ಮಳೆಯಿಂದಾಗಿ ಬುಧವಾರ ಈ ಹಳ್ಳ ಉಕ್ಕಿ ಹರಿಯುತ್ತಿತ್ತು. ಆದರೆ, ನೀರಿನ ರಭಸವನ್ನೂ ಲೆಕ್ಕಸದೆ ಯಲ್ಲಪ್ಪ ದಾಟುತ್ತಿದ್ದಾಗ, ಬೈಕ್ ಸಮೇತವಾಗಿ ತೇಲಿಹೋಗಿದ್ದರು. ಅವರ ಮೃತದೇಹ ಪತ್ತೆಗಾಗಿ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್‌ ಸಿಬ್ಬಂದಿ ಮತ್ತು ನೇಸರಗಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಗ್ರಾಮದ ಜೋಡಗುಡಿ ದೇವಸ್ಥಾನಕ್ಕೆ ಸಂಪರ್ಕ …

Read More »

ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಮರುಪರಿಶೀಲಿಸಬೇಕು: ಮಹಾಂತೇಶ ಕವಟಗಿಮಠ

ಬೆಳಗಾವಿ: ‘ಎಚ್‌.ಕಾಂತರಾಜ ಆಯೋಗ ಕೈಗೊಂಡ 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಅದನ್ನು ಮರುಪರಿಶೀಲಿಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘‌ಜಾತಿ ಗಣತಿ ಮಾಡಬೇಕಾದರೆ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು. ಆದರೆ, ಕಾಂತರಾಜ ಆಯೋಗವು ಮನೆ-ಮನೆಗೆ ತೆರಳದೆ, ಸಾಮೂಹಿಕವಾಗಿ ಕೆಲವೇ ಜನರ ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ಕೈಗೊಂಡಿದೆ. ಈ ವರದಿ …

Read More »

ಕಾಗವಾಡ ಪಟ್ಟಣದ ಐಸಿಐಸಿಐ ಬ್ಯಾಂಕಿನಿಂದ ಕೃಷ್ಣ ನದಿಯವರೆಗೆ ಹೋಗುವ ರಸ್ತೆ ಹದಗೆಟ್ಟಿದ್ದರಿಂದ ತಹಶೀಲ್ದಾರರನ್ನು ಸ್ಥಳಕ್ಕೆ ಕರೆದು ಒಯದ ರೈತರು.

ಕಾಗವಾಡ ಪಟ್ಟಣದ ಐಸಿಐಸಿಐ ಬ್ಯಾಂಕಿನಿಂದ ಕೃಷ್ಣ ನದಿಯವರೆಗೆ ಹೋಗುವ ರಸ್ತೆ ಹದಗೆಟ್ಟಿದ್ದರಿಂದ ತಹಶೀಲ್ದಾರರನ್ನು ಸ್ಥಳಕ್ಕೆ ಕರೆದು ಒಯದ ರೈತರು. ನಿರಂತರವಾಗಿ ಸುರಿದ ಮಳೆಯಿಂದ ಆನೇಕ ರಸ್ತೆಗಳು ಹದಗೆಟ್ಟು ಹೋಗಿವೆ ಆದರೊಂದಿಗೆ ಕಾಗವಾಡ ಪಟ್ಟಣದ ಐಸಿಐಸಿಐ ಬ್ಯಾಂಕಿನಿಂದ ಹಿಡಿದು ಕಲಕೇರಿ ಕೆರಿ ಮುಖಾಂತರ ಕೃμÁ್ಣ ನದಿಯವರೆಗೆ ಸಂಪರ್ಕಿಸುವ ರಸ್ತೆ ಹದಿಗೆಟ್ಟು ಹೋಗಿದ್ದು, ಅನೇಕ ರೈತರಿಗೆ ಸಂಚಾರಿಸಲು ಸಾಧ್ಯವಾಗದೇ ಇದ್ದಿದ್ದರಿಂದ ರೈತರು ಒಂದುಗೂಡಿ ಕಾಗವಾಡ ತಹಸಿಲ್ದಾರ್ ರಾಜೇಶ್ ಬುರ್ಲಿ ಹಾಗೂ ಪಟ್ಟಣ ಪಂಚಾಯಿತಿಯ …

Read More »

ಮುಡಾ ಕಚೇರಿಯಲ್ಲಿ ED ದಾಳಿ ಅಂತ್ಯ: ಸತತ 29 ಗಂಟೆಗಳ ಕಾಲ ಶೋಧ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿನ ದಾಳಿ ಮುಕ್ತಾಯವಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮುಡಾ ಕಚೇರಿಯಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಸತತ 29 ಗಂಟೆಗಳ ಕಾಲ ಶೋಧ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದು, ದಾಳಿ ಅಂತ್ಯಗೊಳಿಸಿದ್ದಾರೆ. ಅ.18ರಂದು ಮೊದಲ ದಿನ 12 ಗಂಟೆಗಳ ಕಾಲ ಹಾಗೂ ಅ.19ರಂದು ಎರಡನೇ ದಿನ 17 ಗಂಟೆಗಳ ಕಾಲ ಶೋಧ ನಡೆಸಿದ …

Read More »

ತೀವ್ರ ಬೆನ್ನು ನೋವಿನಿಂದ ನಟ ದರ್ಶನ್ ನರಳಾಟ

ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ. ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ …

Read More »

DK ಶಿವಕುಮಾರ್ ರನ್ನು `CM’ ಮಾಡಿ ತೋರಿಸುತ್ತೇವೆ : ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ!

ಗದಗ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ಇದೇ ಜಾಗಕ್ಕೆ ಕರೆತಂದು ಪೂಜೆ …

Read More »

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಆಸ್ತಿ ನೋಂದಣಿ ಮಸೂದೆ’ಗೆ ರಾಷ್ಟ್ರಪತಿ ಅಂಕಿತ!

ಬೆಂಗಳೂರು: ಉಪ-ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡದೆಯೇ ಆಸ್ತಿ ನೋಂದಣಿಗೆ ಅವಕಾಶ ಕಲ್ಪಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ’ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಆಸ್ತಿ ನೋಂದಣಿ ಮಾಡಬಹುದು.   ಆಸ್ತಿ ನೋಂದಣಿ ಮಸೂದೆಗೆ ವಿಧಾನಮಂಡಲವು ಇದೇ ಫೆಬ್ರುವರಿಯಲ್ಲಿ ಅನುಮೋದನೆ ನೀಡಿತ್ತು. ಅದನ್ನು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರ ಅನುಮೋದನೆಗೆ ಕಳುಹಿಸಲಾಗಿತ್ತು. ಆದರೆ, ಅವರು ಕೆಲವು ಸ್ಪಷ್ಟನೆಗಳನ್ನು ಕೇಳಿ ಮಸೂದೆಯನ್ನು ಸರ್ಕಾರಕ್ಕೆ ಮರಳಿಸಿದ್ದರು. ಸ್ಪಷ್ಟನೆ ದೊರೆತ …

Read More »

ಕಿಚ್ಚನಿಗೆ ಮಾತೃ ವಿಯೋಗ

ಬೆಂಗಳೂರು: ನಟ, ನಿರೂಪಕ ಕಿಚ್ಚ ಸುದೀಪ್‌ ಅವರ ತಾಯಿ ಸರೋಜಾ ಸಂಜೀವ್‌ ಅವರು ಅಸುನೀಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ (ಅ.20) ನಿಧನರಾಗಿದ್ದಾರೆ. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ …

Read More »

ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

ವಿಜಯಪುರ: ವಿಚಿತ್ರವಾದ ಆಕಳು ಕರುವೊಂದು ಜನಿಸಿರುವ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ನಡೆದಿದೆ. ಈ ಕರುವಿಗೆ ಒಂದು ಮುಖ, ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳು ಇವೆ. ರೈತ ಮಹಿಳೆ ಸಾವಿತ್ರಿ ನಾಗೂರಿ ಎಂಬುವರ ತೋಟದ ಮನೆಯಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡಿದೆ. ಈ ಕರುವಿಗೆ ಎರಡು, ನಾಲಿಗೆ, ಮೂರು ಕಣ್ಣು ಇರುವುದನ್ನು ಕಂಡು ಕುಟುಂಬಸ್ಥರು ಮತ್ತು ಗ್ರಾಮಸ್ಥರಿಗೆ ಆಶ್ಚರ್ಯವಾಗಿದೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಹ …

Read More »