Breaking News

ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿದ ದರ್ಶನ

ಬೆಂಗಳೂರು: ತಲೆ ದಿಂಬು, ಟಿವಿ ಆಯ್ತು ಈಗ ವಿಚಾರಣೆ ವೇಳೆ ನೇರ ಕೋರ್ಟ್ ಹಾಜರಾತಿಗೆ ನಟ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ತ್ವರಿತಗತಿಯಲ್ಲಿ ನಡೆಸುವಂತೆ, ಪ್ರತಿನಿತ್ಯ ವಿಚಾರಣೆ ನಡೆಸುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ, ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ನ್ಯಾಯಾಧೀಶರಿಗೆ ದರ್ಶನ್ ಧನ್ಯವಾದ ಹೇಳಿದರು. ಥ್ಯಾಂಕ್ಸ್ ಹೇಳಬಾರದು ನಮ್ಮ ಕೆಲಸ ಮಾತ್ರ ಮಾಡಿದ್ದೇವೆ, ಥ್ಯಾಂಕ್ಸ್ ಹೇಳುವ ಅಗತ್ಯವಿಲ್ಲ ಅಂತಾ ನ್ಯಾಯಾಧೀಶರು ತಿಳಿಸಿದರು. …

Read More »

ಆಸ್ತಿಗಾಗಿ ಮಗುವಿನ ಹಂತಕ ದೊಡ್ಡಪ್ಪನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆಳಗಾವಿ ಕೋರ್ಟ್

ಆಸ್ತಿಗಾಗಿ ಕಂದಮ್ಮನನ್ನೇ ಬಲಿಪಡೆದ ಕ್ರೂರದೊಡ್ಡಪ್ಪನಿಗೆ ಬೆಳಗಾವಿ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಪುಟ್ಟ ಮಕ್ಕಳ ಸಾಕ್ಷ್ಯವನ್ನೇ ಪ್ರಮುಖವಾಗಿ ಪರಿಗಣಿಸಿದ ನ್ಯಾಯಾಧೀಶರು, ಹಂತಕನಿಗೆ ಸಾಯುವವರೆಗೂ ಕಂಬಿ ಎಣಿಸುವಂತೆ ಆದೇಶ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ 2021ರಲ್ಲಿ ನಡೆದಿದ್ದ ಸಿದ್ಧಾರ್ಥ್ ಸಂಕನ್ನವರ ಎಂಬ ಆರು ವರ್ಷದ ಮಗುವಿನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ತನ್ನ ತಮ್ಮ …

Read More »

ಶಾಲೆಗಳ ಮೂಲಸೌಕರ್ಯಕ್ಕೆ ಶಾಸಕ ಆಸೀಫ್ ಸೇಠ್ ಕಾಯಕಲ್ಪ: ಮಾಲಿ ಗಲ್ಲಿಯ ಸರ್ಕಾರಿ ಶಾಲೆಗಳಿಗೆ ಭೇಟಿ

ಬೆಳಗಾವಿಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್ ಅವರು ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಇಂದು ಮಾಲಿ ಗಲ್ಲಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಅವರು, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವ ಮೂಲಕ ಶಿಕ್ಷಣದ ಗುಣಮಟ್ಟಕ್ಕೆ ಪೂರಕವಾದ ಪರಿಸರ ನಿರ್ಮಿಸುವ ಭರವಸೆ ನೀಡಿದರು. ಬೆಳಗಾವಿಯ ಮಾಳಿ ಗಲ್ಲಿಯಲ್ಲಿರುವ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 4, ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ. 2 ಮತ್ತು ಸರ್ಕಾರಿ ಕನ್ನಡ …

Read More »

ಮಾರ್ಚ 1 ರಿಂದ ಯಡೂರಿನಲ್ಲಿ ಮಹಾಕುಂಭಾಭಿಷೇಕ

ಚಿಕ್ಕೋಡಿ :ಯಡೂರು ಗ್ರಾಮದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆಯು ಮಾರ್ಚ 1ರಿಂದ 6 ರವರೆಗೆ ನಡೆಯಲಿದೆ ಯಡೂರ ಶ್ರೀವೀರಭದ್ರ ದೇವಸ್ಥಾನದ ಹಾಗೂ ಧರ್ಮಾಧಿಕಾರಿಗಳು ಶ್ರೀಶೈಲ್ ಜಗದ್ಗುರು ಡಾ! ಚನ್ನಸಿಧ್ದರಾಮ ಪಂಡಿತಾರಾಧ್ಯ ಮಹಾಸ್ವಾಮೀಜೀಯವರು ಹೇಳಿದರು. ಯಡೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ 1 ರಂದು ಸಂಜೆ 6 ಗಂಟೆಗೆ ಶ್ರೀ ಸಿದ್ಧಲಿಂಗ ಶಿವಾಚಾರ್ಯ ವೇದಾಗಮ ಸಂಸ್ಕೃತ ಪಾಠ ಶಾಲೆಯ 12 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜರುಗುವುದು. ಶ್ರೀಶೈಲ ಮತ್ತು ಕಾಶೀ …

Read More »

ಮ್ಯೂಸಿಕ್ ಮೈಲಾರಿಗೆ ಕೋರ್ಟ್‌ನಿಂದ ಜಾಮೀನು ಮಂಜೂರು

“ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಜೈಲು ಪಾಲಾಗಿದ್ದ ಖ್ಯಾತ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿಗೆ ನ್ಯಾಯಾಲಯದಿಂದ ಕೊನೆಗೂ ರಿಲೀಫ್ ಸಿಕ್ಕಿದೆ. ನ್ಯಾಯಾಧೀಶರಾದ ಪ್ರೀತಿ ಜೋಶಿ ಅವರು ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದ್ದು, ಗಾಯಕನ ಬಿಡುಗಡೆಗೆ ಹಾದಿ ಸುಗಮವಾಗಿದೆ.” ಕಳೆದ ಕೆಲವು ದಿನಗಳಿಂದ ಅತ್ಯಾಚಾರ ಪ್ರಕರಣದಡಿಯಲ್ಲಿ ಜೈಲು ಕಂಬಿ ಎಣಿಸುತ್ತಿದ್ದ ಮ್ಯೂಸಿಕ್ ಮೈಲಾರಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯದ ಆರೋಪದ ವಿಚಾರಣೆ …

Read More »

ಹುಬ್ಬಳ್ಳಿಯಲ್ಲಿ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಅವರಿಗೆ ಗೌರವ ಸನ್ಮಾನ

ಹುಬ್ಬಳ್ಳಿ ನಗರದ ಶತಮಾನೋತ್ಸವದ ಸ್ಮರಣಾರ್ಥ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಅವರಿಗೆ ‘ಶತಮಾನೋತ್ಸವದ ನೆನಪಿನ ನೀಡಿ ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸುನಿಲ್ ಜೋಶಿ ಅವರು ಭಾರತೀಯ ಕ್ರಿಕೆಟ್‌ಗೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖರಾದ ಅವಿನಾಶ್ ವೈದ್ಯ, ವೀರಣ್ಣ ಸವಡಿ, ಅಲ್ತಾಫ್ ಕಿತ್ತೂರು, ದಯಾನಂದ ಶೆಟ್ಟಿ ಹಾಗೂ ವಸಂತ ಮುರ್ಡೇಶ್ವರ ಉಪಸ್ಥಿತರಿದ್ದು, ಜೋಶಿ ಅವರ ಸಾಧನೆಯನ್ನು ಶ್ಲಾಘಿಸಿದರು. ಸ್ಥಳೀಯ …

Read More »

ಸಾವಿನಲ್ಲೂ ಒಂದಾದ ವೃದ್ಧ ದಂಪತಿ

ಅವ್ರು 58 ವರ್ಷದ ಹಿಂದೆ ಮದುವೆಯಾಗಿದ್ದ ವೃದ್ಧ ದಂಪತಿಗಳು. ಸತಿ-ಪತಿಯ ಪ್ರೀತಿಯ ದಾಂಪತ್ಯ ಬದುಕು ಆ ಗ್ರಾಮದ ಇತರರಿಗೆ ಮಾದರಿಯಾಗಿತ್ತು. ನಿನ್ನೆ ಎದೆ ನೂವು ಅಂತಾ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ರು.ಮನೆಗೆ ಮೃತನ ಶವ ತಂದು ಪೂಜೆ ಮಾಡ್ತಿದ್ದ ವೇಳೆ ಪತ್ನಿ ಕೂಡಾ ಕುಸಿದು ಬಿದ್ದು ಆಸ್ಪತ್ರೆ ತಲುಪುವಷ್ಠರಲ್ಲಿ ಸಾವನ್ನಪ್ಪಿದ್ದಾಳೆ. 58 ವರ್ಷದ ದಾಂಪತ್ಯ ಬದುಕಿಗೆ ವಿದಾಯ ಹೇಳಿದ ವೃದ್ಧ ದಂಪತಿಗಳು. ಮತ್ತೊಂದೆಡೆ ಸಾವಿನ್ನೂ ಒಂದಾಗಿ ಇಹಲೋಕ …

Read More »

ರಾಯಚೂರಿನಲ್ಲಿ ಅಕಾಲಿಕ ಮಳೆ – ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಹೆಚ್.ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆಹಾನಿಯಾಗಿದೆ. ಹೆಚ್.ಸಿದ್ದಾಪುರ ಗ್ರಾಮದ ರೈತ ಕೃಷ್ಣಾಗೆ ಸೇರಿದ 7 ಎಕರೆ ಸಜ್ಜೆ ಬೆಳೆ ಸಂಪೂರ್ಣ ನೆಲಕ್ಕಚ್ಚಿದೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆ ನಷ್ಟದಿಂದ ರೈತ ಕಂಗಾಲಾಗಿದ್ದಾರೆ. ನೆಲಕ್ಕಚ್ಚಿದ ಬೆಳೆಯನ್ನ ಎತ್ತಿನಿಲ್ಲಿಸಿ ಉಳಿಸಿಕೊಳ್ಳಲು …

Read More »

ನಮ್ಗೂ ಸಚಿವ ಸ್ಥಾನ ಕೊಡಿ – ಸಂಪುಟ‌ ಪುನಾರಚನೆಗೆ 24‌ ಎಂಎಲ್‌ಸಿಗಳಿಂದ ಪತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಸಚಿವ ಸಂಪುಟ‌ ಪುನಾರಚನೆಗೆ 31 ಶಾಸಕರು ಒತ್ತಾಯ ಮಾಡಿ ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ್ದರು. ಈ ಬೆನ್ನಲ್ಲೇ 24 ಮಂದಿ ವಿಧಾನ ಪರಿಷತ್‌ ಸದಸ್ಯರೂ  ಪತ್ರ ಬರೆದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್‌ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಎಂಎಲ್‌ಸಿಗಳು ಸಹಿ ಮಾಡಿದ ಪತ್ರವನ್ನ ಖರ್ಗೆ …

Read More »

ನಮ್ಮ ಸರ್ಕಾರ ಎಲ್ಲಾ ಹುದ್ದೆಗಳ ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳಕ್ಕೂ ಕ್ರಮವಹಿಸಿದೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನಮ್ಮ ಸರ್ಕಾರ ಎಲ್ಲಾ ಹುದ್ದೆ  ಭರ್ತಿಗೆ ಸಿದ್ಧ ಇದೆ, ವಯೋಮಿತಿ ಹೆಚ್ಚಳದ ಬಗ್ಗೆಯೂ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ  ತಿಳಿಸಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ  ಕುರಿತು ಬೆಂಗಳೂರಿನಲ್ಲಿ ಸಚಿವರು ಮಾತನಾಡಿದರು. ಸರ್ಕಾರ ಎಲ್ಲಾ ಹುದ್ದೆ ಭರ್ತಿಗೆ ಸಿದ್ದ ಇದೆ. ಯುವಕರ ಸಮಸ್ಯೆಗಳ ಅರಿವಿದೆ, ವಿಪಕ್ಷದಲ್ಲಿ ಇದ್ದಾಗಲೂ ನಾವು ಸ್ಪಂದಿಸಿದ್ದೇವೆ ಈಗಲೂ 35-40 ಸಾವಿರ ಹುದ್ದೆ ತುಂಬಿದ್ದೇವೆ. ಈಗಲೂ ಒಳ ಮೀಸಲಾತಿ ಸಮಸ್ಯೆ ಸ್ವಲ್ಪ ಇದೆ, …

Read More »