Breaking News

ವಕ್ಫ್​ ಆಸ್ತಿ ಕಬಳಿಕೆ ವಿಚಾರ: ನಾವು ದೇವಸ್ಥಾನ, ರೈತರ ಆಸ್ತಿ ಮುಟ್ಟಲ್ಲ. ರೈತರ ಆಸ್ತಿ ಮುಟ್ಟಿದ್ರೆ ನಾನೇ ಬಂದು ತೆಗಿಸುತ್ತೇನೆ

ಬೆಳಗಾವಿ: ಶೇ.95ರಷ್ಟು ವಕ್ಫ್ ಆಸ್ತಿಯಲ್ಲಿ ಒತ್ತುವರಿ ಮಾಡಿರುವುದು ಮುಸ್ಲಿಮರೇ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು‌. ವಿಧಾನಸಭೆಯಲ್ಲಿ ಇಂದು ನಿಯಮ 69 ಅಡಿಯಲ್ಲಿ ನಡೆದ ವಕ್ಫ್​ ನೋಟಿಸ್ ಚರ್ಚೆಗೆ ಉತ್ತರಿಸಿದ ಸಚಿವ ಜಮೀರ್, ವಿಜಯಪುರದಲ್ಲಿ ನಡೆದ ವಕ್ಫ್ ಅದಾಲತ್​​ಗೆ ಯತ್ನಾಳ್ ಬರಲಿಲ್ಲ. ಬಳಿಕ ಗೊಂದಲ ಶುರು ಮಾಡಿದ್ರು. ರೈತರ ಜಮೀನು ವಕ್ಫ್ ಹೆಸರಲ್ಲಿ ಮಾಡಿ ಅಂತ ನಾನು ಸೂಚನೆ ಕೊಡಲಿಲ್ಲ. ರಾಜ್ಯದಲ್ಲಿ 1.28 …

Read More »

ಸರ್ಕಾರಿ ಶಾಲೆ, ಹಿಂದೂ ರುದ್ರಭೂಮಿ, ದೇವಸ್ಥಾನ ಇದ್ದರೆ ಅಲ್ಲಿ ವಕ್ಫ್​​ ಆಸ್ತಿ ಎಂದು ತರಲೇಬಾರದೆಂದು ಸೂಚಿಸಲಾಗಿದೆ.

ಬೆಳಗಾವಿ: ”ನಮ್ಮ ಸರ್ಕಾರ ಮುಜರಾಯಿ ದೇವಸ್ಥಾನಗಳ 10,700 ಎಕರೆ ಜಮೀನು ಖಾತೆ ಬದಲಾಯಿಸಿ ಸಂರಕ್ಷಿಸಿದ್ದರೆ, ವಕ್ಫ್​​​ಗೆ ಕೇವಲ 600 ಎಕರೆ ಜಮೀನಿನ ಖಾತೆ ಬದಲಾವಣೆ ಮಾಡಿದ್ದೇವೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ವಕ್ಫ್ ನಿಲುವಳಿ ಸೂಚನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ”ಬಿಜೆಪಿ ವಕ್ಫ್ ವಿಚಾರವಾಗಿ ಸುಳ್ಳಿನ ಸರಮಾಲೆ ಹೇಳಿದೆ. 2004ರಿಂದೀಚೆಗೆ ರಾಜ್ಯದಲ್ಲಿ ಒಟ್ಟು 9,800 ವಕ್ಫ್ ಆಸ್ತಿ ಎಂದು ನಮೂದಾಗಿದೆ. ಇದರಲ್ಲಿ ಬಾಧಿತ ರೈತರ ಸಂಖ್ಯೆ …

Read More »

ಮಾಜಿ ಸಚಿವ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿಕೆ

ಬೆಳಗಾವಿ: “ಗ್ಯಾರಂಟಿ ಯೋಜನೆಗಳನ್ನು ನೀಡಿರುವುದೇ ತಪ್ಪು ಎಂಬಂತೆ ವಿರೋಧ ಪಕ್ಷಗಳು ಇವುಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸುತ್ತಿವೆ” ಎಂದು ಮಾಜಿ ಸಚಿವ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಿರೋಧ ಪಕ್ಷಗಳ ಟೀಕೆಯಿಂದ ನಮ್ಮ ಗ್ಯಾರಂಟಿ ಯೋಜನೆಗಳು ಪ್ರಚಾರ ಕಳೆದುಕೊಳ್ಳುತ್ತಿವೆ. ನಮ್ಮ ಸರ್ಕಾರದ ಯೋಜನೆಗಳಿಗೆ ಹೆಚ್ಚು ಪ್ರಚಾರ ದೊರೆಯುವ ಕೆಲಸವಾಗಬೇಕು. ಗ್ಯಾರಂಟಿಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದೆ‌. …

Read More »

ಶಿವರಾಜ್​ಕುಮಾರ್​ ತಮ್ಮ ಅನಾರೋಗ್ಯದ ಚಿಕಿತ್ಸೆಗಾಗಿ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ

ಕನ್ನಡ ಚಿತ್ರರಂಗದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ತಮ್ಮ ಅನಾರೋಗ್ಯದ ಚಿಕಿತ್ಸೆಗಾಗಿ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಿನಿಮಾ ಮೇಲಿನ ಒಲವು, ಪರಿಶ್ರಮ, ಅಮೋಘ ಅಭಿನಯದಿಂದ ಚಂದನವನದಲ್ಲಿ ತಮ್ಮದೇ ಆದ ಸ್ಟಾರ್​ಡಮ್​​ ಗಿಟ್ಟಿಸಿಕೊಂಡಿರುವ ನಟ ತಮ್ಮ ಎಲ್ಲಾ ಬದ್ಧತೆಗಳನ್ನು ಪೂರ್ಣಗೊಳಿಸಿ, ವಿದೇಶಕ್ಕೆ ತೆರಳುತ್ತಿದ್ದಾರೆ. ನಿಮಗೆ ಈಗಾಗಲೇ ತಿಳಿಸಿರುವಂತೆ, ಅನಾರೋಗ್ಯದ ಹಿನ್ನೆಲೆ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಡಿಸೆಂಬರ್ 24ರಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಸರ್ಜರಿ ಬಳಿಕ ವಿಶ್ರಾಂತಿ …

Read More »

ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: “ಇಂದು ಸುವರ್ಣಸೌಧ ವೀಕ್ಷಣೆಗೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಗೃಹಲಕ್ಷ್ಮಿಯರು ಬಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ‌ಹಾಗೂ ಉಪಮುಖ್ಯಮಂತ್ರಿ ಕಾರ್ಯ ವೈಖರಿಯನ್ನು ನೋಡಲು ಅವರನ್ನು ಸುವರ್ಣ ಸೌಧಕ್ಕೆ ಆಗಮಿಸಿ ಸಂತಸ ವ್ಯಕ್ತಪಡಿಸಿದ್ದಾರೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದ ಪ್ರತಿಯೊಬ್ಬ ಮಹಿಳೆಗೂ ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗಬೇಕು …

Read More »

ಲೋಕಸಭೆಯಲ್ಲಿ ಸುದೀರ್ಘವಾಗಿ ಕೆಲಸ ಮಾಡಿರುವ ನಿಮ್ಮಂತಹ ಹಿರಿಯರು ಸಭಾಧ್ಯಕ್ಷರ ಪೀಠದಲ್ಲಿ ಕೂರಬೇಕು”

ಲೋಕಸಭೆ ಮಾದರಿಯಲ್ಲಿ ಸದನ ನಡೆಸಬೇಕೆಂದರೆ ಲೋಕಸಭಾ ಸದಸ್ಯರಾಗಿ ಕೆಲಸ ಮಾಡಿರುವ ಕೆ.ಹೆಚ್.ಮುನಿಯಪ್ಪರಂಥವರು ಸ್ಪೀಕರ್ ಆದರೆ ಉತ್ತಮ” ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಇಂದು ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿ, ಲೋಕಸಭೆ ರೀತಿಯಲ್ಲಿ ಈ ಸದನ ಶಿಸ್ತಿನಿಂದ ನಡೆಯಬೇಕು. ಮೊದಲು ಪ್ರಶ್ನೋತ್ತರ ಆಗಬೇಕು. ನೀವು ಹೊಸ ಬದಲಾವಣೆ ಮಾಡಬೇಕು. ಸದನದಲ್ಲಿ ಶಿಸ್ತು ತನ್ನಿ, ಈಗ ಶಿಸ್ತು ಇಲ್ಲ. ಅರ್ಧ ಗಂಟೆಗೂ ಹೆಚ್ಚು …

Read More »

ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಷ್ಟೇ ಅಲ್ಲದೆ ರಾಜಕೀಯವಾಗಿಯೂ ಅನ್ಯಾಯ;ಯತ್ನಾಳ್‌

ಬೆಳಗಾವಿ: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಷ್ಟೇ ಅಲ್ಲದೆ ರಾಜಕೀಯವಾಗಿಯೂ ಅನ್ಯಾಯವಾಗಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಇಂದು ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾವು ದಕ್ಷಿಣ ಕರ್ನಾಟಕದ ವಿಚಾರವಾಗಿ ಅಸಹನೆ ವ್ಯಕ್ತಪಡಿಸುತ್ತಿಲ್ಲ. ಆದರೆ ಸಮಾನ ಅಭಿವೃದ್ಧಿ ಆಗಬೇಕು. ಗ್ಯಾರಂಟಿ ನೀಡುವ ಬದಲಾಗಿ ನೀರಾವರಿ ಕಲ್ಪಿಸಿ ಎಲ್ಲಾ ಕೈಗಳಿಗೆ ಉದ್ಯೋಗ ಕೊಡಿ. ಸಚಿವ ಸಂಪುಟ ಸಭೆಯಲ್ಲಿರುವ …

Read More »

ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ

ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಸಲಾಯಿತು. ಇಂದು ಬೆಳಗಾವಿಯ ಸುವರ್ಣ ಸೌಧದ ಎದುರುಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕಂಪ್ಲಿ ಶಾಸಕರು ಪ್ರತಿಭಟನಾಕಾರರ ಮನವಿಯನ್ನ ಸ್ವೀಕರಿಸಿದರು . ಪ್ರತಿಭಟನೆ ನೇತೃತ್ವ ವಹಿಸಿದ್ದ ಸ್ವಾಮೀಜಿಗಳು ಮಾತನಾಡಿ ಹಡಪದ ಸಮಾಜದ …

Read More »

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಗದ ಪರಿಣಾಮ ಕಾರಾಗೃಹದಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ನಾಗರಾಜ್, ಪ್ರದೂಷ್, ಲಕ್ಷ್ಮಣ್ ಬಿಡುಗಡೆಯಾಗಿದ್ದು, ಇನ್ನಿಬ್ಬರಾದ ಜಗದೀಶ್ ಹಾಗೂ ಅನುಕುಮಾರ್​ಗೆ ಯಾರೂ ಶ್ಯೂರಿಟಿ ನೀಡಲು ಮುಂದಾಗದೆ ಸೆರೆಮನೆಯಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಪೊಲೀಸರೆದುರು ಶರಣಾಗಿದ್ದ ಆರೋಪಿಗಳಾದ ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್‌ಗೆ ಶ್ಯೂರಿಟಿ ನೀಡಿದ್ದರಿಂದ ಸುಮಾರು 10 …

Read More »

ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಳಗಾವಿ: ರಾಜ್ಯ ಸರ್ಕಾರ ದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ಸುವರ್ಣಸೌಧದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ವಿವಿಧ ಗಣ್ಯರು ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಜಯಚಂದ್ರ ಅವರ ಸಮಯಪಾಲನೆ ಹಾಗೂ ಶಿಸ್ತುಬದ್ದ ಕಾರ್ಯ ನಿರ್ವಹಣೆ, ಕಲಾಪದಲ್ಲಿ …

Read More »