Breaking News

ಡಿ.ಕೆ.ಶಿವಕುಮಾರ್​ ದೆಹಲಿ ಪ್ರವಾಸ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರ ಸಚಿವ ಸತೀಶ್​ ಜಾರಕಿಹೊಳಿ

ಚಿಕ್ಕೋಡಿ: ನಮ್ಮನ್ನು ಯಾರಾದರೂ ದೆಹಲಿಗೆ ಕರೆದರೆ ನಾವು ಹೋಗುವುದಕ್ಕೆ ಸಿದ್ಧರಿದ್ದೇವೆ. ಆದರೆ ಯಾರಾದರೂ ಕರೆಯಬೇಕಲ್ಲವೇ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿಂದು ಡಿ.ಕೆ.ಶಿವಕುಮಾರ್​ ದೆಹಲಿ ಪ್ರವಾಸ ಮಾಡುತ್ತಿದ್ದಾರೆ, ತಾವೂ ಹೋಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮನ್ನು ಕರೆದರೆ ನಾವು ರೆಡಿ ಇದ್ದೇವೆ, ಯಾರಾದ್ರೂ ಕರೆಯಬೇಕಲ್ಲವೇ? ಎಂದು ಕೇಳಿದರು. ಇವತ್ತು ಚಿಕ್ಕೋಡಿ ನ್ಯಾಯಾಲಯದ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮವಿತ್ತು. …

Read More »

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ ಬೆಳಗಾವಿ: ರಾಜ್ಯದೆಲ್ಲೆಡೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕೆಯ ಅಭಿಯಾನಕ್ಕೆ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚಾಲನೆ ನೀಡಿದರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ …

Read More »

ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.90 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಬೆಳಗಾವಿ: ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದ್ದು, ಇದಕ್ಕಾಗಿ 1.90 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ನಿಲಜಿ ಗ್ರಾಮದ ಶ್ರೀ ಮಹಾಲಕ್ಷ್ಮಿ …

Read More »

ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು…

ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು… ಇದು ಕಳ್ಳರ ತಿರುಬೊಬ್ಬೆ ಎಂದ ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಕರ್ನಾಟಕಕ್ಕೆ ಪ್ರವೇಶ ನೀಡದೇ ಸಂಸತ್ ಹಕ್ಕು ಭಂಗದ ಆರೋಪ ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು ಕ್ರಮಕೈಗೊಳ್ಳಬೇಕೆಂದು ಸಭಾಪತಿಗಳಿಗೆ ಮನವಿ ‘ಬೆಳಗಾವಿಯಲ್ಲಿ ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ನನಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ …

Read More »

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ ಚಂದ್ರಯ್ಯಾ ಬಸಲಿಂಗಯ್ಯಾ ಮಠಪತಿ ವಯಸ್ಸು (65) ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲಕ ಜಮೀನು ಹೋಲುತಿದ್ದ ಸಂದರ್ಭದಲ್ಲಿ ಅಚಾನಕ್ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರೈತನು ಚಕ್ರದ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದ ರೈತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ …

Read More »

ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ.

ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ. ಗೋಕಾಕ : ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿ ಗೋಕಾಕ ತಾಲೂಕು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಭಸ್ಮೆ, ಜಿಲ್ಲಾ …

Read More »

ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು. ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿ ಗೋಕಾಕ ತಾಲೂಕು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿಗಳಾದ ರವಿಂದ್ರ ಅಂಟಿನ ಸೇರಿದಂತೆ …

Read More »

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ ಅನಾವರಣ

ಚಿಕ್ಕೋಡಿ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ ಇಲಾಖೆ, ಬೆಳಗಾವಿ, ಲೋಕೋಪಯೋಗಿ ಇಲಾಖೆ (ಚಿಕ್ಕೋಡಿ ವಿಭಾಗ) ಹಾಗೂ ಬಾರ್ ಅಸೋಸಿಯೇಷನ್, ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ, ಬಾರ್ ಅಸೋಸಿಯೇಷನ್ ಕಟ್ಟಡದ ಉದ್ಘಾಟನೆ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನವನ್ನು ಹಸ್ತಾಂತರಿಸುತ್ತಿರುವ ಚಿತ್ರಣವಿರುವ ಗೋಡೆಯ ಮೇಲಿನ ಮ್ಯುರಲ್ ಅನ್ನು ಇಂದು ಮಾನ್ಯ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಶ್ರೀ ಪ್ರಸನ್ನ ಬಿ. ವರಾಳೆ ಅವರ‌ ಜೊತೆಗೆ …

Read More »

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

ಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಕೊಟ್ಟರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿರುವ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾ‌ಪಂಚಾಯತ್​ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ, ಬಾಗಲಕೋಟೆ, …

Read More »

ಗ್ಲಾಂಡರ್ಸ್‌ ಸೋಂಕಿಗೆ ರೇಸ್‌ಕೋರ್ಸ್‌ನ ಕುದುರೆ ಬಲಿ; ಮೃಗಾಲಯದಲ್ಲಿ ಕಟ್ಟೆಚ್ಚರ

ಮೈಸೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ರೇಸ್‌ಕೋರ್ಸ್‌ನಲ್ಲಿ ಮಾರಕ ಗ್ಲಾಂಡರ್ಸ್‌ ಸೋಂಕಿನಿಂದ ಕುದುರೆಯೊಂದು ಮೃತಪಟ್ಟಿದೆ. ಈ ಹಿನ್ನೆಲೆಯಲ್ಲಿ, ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 17ರಂದು ಎರಡು ವರ್ಷದ ಗಂಡು ಕುದುರೆ ಗ್ಲಾಂಡರ್ಸ್‌ ಸೋಂಕಿಗೆ ಬಲಿಯಾಗಿದೆ. ಈ ಸೋಂಕು ಮಾರಕವಾಗಿದ್ದು, ಎರಡು ಕಿ.ಮೀ ವ್ಯಾಪ್ತಿಯವರೆಗೂ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮೃಗಾಲಯದಲ್ಲಿ ಎಲ್ಲ ಪ್ರಾಣಿಗಳ ಮೇಲೆ ನಿಗಾವಹಿಸಿ, ಮುಂಜಾಗ್ರತಾ ಕ್ರಮ‌ ಕೈಗೊಳ್ಳಲಾಗಿದೆ. ಸೋಂಕು ಮೃಗಾಲಯದಲ್ಲಿರುವ ಜೀಬ್ರಾ …

Read More »