ಹುಬ್ಬಳ್ಳಿ: ಸಾರ್ವಜನಿಕರ ಅನುಕೂಲ ಹಾಗೂ ಸುಗಮ ಆಡಳಿತದ ಹಿತದೃಷ್ಟಿಯಿಂದ ಹುಬ್ಬಳ್ಳಿ- ಧಾರವಾಡ ನಗರಗಳಿಗೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ವೀರೇಶ ಧೂಪದಮಠ ಮನವಿ ಮಾಡಿದ್ದಾರೆ. ಸದ್ಯ ಎರಡೂ ನಗರಗಳನ್ನು ಒಳಗೊಂಡಂತೆ ಒಂದೇ ಮಹಾನಗರ ಪಾಲಿಕೆ ಇದೆ. ಆದರೆ ಹುಬ್ಬಳ್ಳಿ ಹಾಗೂ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಿದರೆ ಸಾರ್ವಜನಿಕರು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಕಚೇರಿಗೆ ತೆರಳಿ ಕೆಲಸ, ಕಾರ್ಯಗಳನ್ನು ಬೇಗ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದಿದ್ದಾರೆ. ಸರ್ಕಾರದ …
Read More »ತಿರುಪತಿ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು: ಕಠಿಣ ಶಿಕ್ಷೆಯಾಗಲಿ-ಗುಣಧರನಂದಿ ಮಹಾರಾಜ
ಹುಬ್ಬಳ್ಳಿ: ‘ತಿರುಪತಿ ಸರ್ವಧರ್ಮಗಳ ಶಕ್ತಿ ಕೇಂದ್ರ. ಅಲ್ಲಿ ನೀಡುವ ಪ್ರಸಾದವಾದ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಇರುವ ತುಪ್ಪ ಬಳಕೆ ಮಾಡಿರುವುದು ಸರಿಯಲ್ಲ’ ಎಂದು ಹುಬ್ಬಳ್ಳಿ ತಾಲ್ಲೂಕು ವರೂರಿನ ನವಗ್ರಹತೀರ್ಥ ಕ್ಷೇತ್ರದ ಗುಣಧರನಂದಿ ಮಹಾರಾಜರು ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರಾದರೂ ಪ್ರಸಾದದ ಮೂಲಕ ಮಾಂಸಾಹಾರ ಸೇವನೆ ಮಾಡಿಸುವ ದುಷ್ಟ ಪ್ರಯತ್ನ ಮಾಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಅವರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ …
Read More »2ಎ ಮೀಸಲಾತಿ ಹೋರಾಟ: ಪಂಚಮಸಾಲಿ ವಕೀಲರ ರಾಜ್ಯಮಟ್ಟದ ಸಮಾವೇಶ ಯಶಸ್ವಿ
ಬೆಳಗಾವಿ: ‘ಪಂಚಮಸಾಲಿ ಸಮಾಜವನ್ನು ಎಲ್ಲರೂ ಬಳಸಿಕೊಂಡರು, ಬೆಳೆದರು. ಆದರೆ, ಸಮಾಜವನ್ನು ಹಿಂದಕ್ಕೆ ತಳ್ಳಿದರು. ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವವರೆಗೂ ನಾವು ವಿಶ್ರಮಿಸಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊನೆಯ ಅವಕಾಶ ಕೊಡುತ್ತಿದ್ದೇವೆ’ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ, ಲಿಂಗಾಯತ ಒಳಪಂಗಡಗಳಿಗೆ ಒಬಿಸಿ ನೀಡಬೇಕು ಎಂದು ಆಗ್ರಹಿಸಿ, ಇಲ್ಲಿನ ಗಾಂಧಿ ಭವನದಲ್ಲಿ ಭಾನುವಾರ ನಡೆದ ಪಂಚಮಸಾಲಿ ಸಮಾಜದ ವಕೀಲರ ರಾಜ್ಯಮಟ್ಟದ ಪರಿಷತ್ನಲ್ಲಿ ಮಾತನಾಡಿದ …
Read More »ರಾಯಣ್ಣ-ಚೆನ್ನಮ್ಮ’ ಬ್ರಿಗೇಡ್ ಸ್ಥಾಪನೆಗೆ ಮುನ್ನುಡಿ ಬರೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ!
ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು. ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ. ಹೌದು ಈ ವಿಚಾರವಾಗಿ …
Read More »ಕೃಷಿ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಬೇಕು: ಪ್ರಲ್ಹಾದ ಜೋಶಿ
ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು. ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ ಎಂದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ …
Read More »ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 15ರಂದು ಚರ್ಚೆಗೆ ಆಹ್ವಾನಿಸಿದರು. ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು. ಇಡೀ …
Read More »ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್-ಮಿಲಾದ್ ಹಬ್ಬದ ಮೆರವಣಿಗೆ
ಬೆಳಗಾವಿ: ಮಳೆ ಮಧ್ಯೆಯೂ ನಗರದಲ್ಲಿ ಭಾನುವಾರ ಈದ್-ಮಿಲಾದ್ ಹಬ್ಬದ ಮೆರವಣಿಗೆ ಸಂಭ್ರಮದಿಂದ ನೆರವೇರಿತು. ಮುಸ್ಲಿಮರೊಂದಿಗೆ ಹಿಂದೂಗಳೂ ಭಾಗವಹಿಸಿ ಭಾವೈಕ್ಯತೆ ಮೆರೆದರು. ನಗರದಲ್ಲಿ ಸೆ.16ರಂದೇ ಈದ್-ಮಿಲಾದ್ ಹಬ್ಬವನ್ನು ಮುಸ್ಲಿಮರು ಆಚರಿಸಿದ್ದಾರೆ. ಅಂದೇ ಬೆಳಿಗ್ಗೆ ಈದ್-ಮಿಲಾದ್ ಮೆರವಣಿಗೆ ನಡೆಯಬೇಕಿತ್ತು. ಆದರೆ, ಅದರ ಮಾರನೇ ದಿನವೇ( ಸೆ.17) ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಇತ್ತು. ಹಾಗಾಗಿ ಗಣೇಶನ ಮೆರವಣಿಗೆ ಮೊದಲು ಅದ್ದೂರಿಯಾಗಿ ನಡೆಯಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೂ ಅನುಕೂಲವಾಗಲೆಂದು ಮುಸ್ಲಿಮರು …
Read More »ಸಿಡಿಲು ಬಡಿದು ರೈತ ಸಾವು
ಧಾರವಾಡ: ತಾಲ್ಲೂಕಿನ ಹನುಮನಾಳ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ರೈತ ಭೀಮನಗೌಡ ಮಲ್ಲನಗೌಡ ಪಾಟೀಲ (65) ಮೃತಪಟ್ಟಿದ್ಧಾರೆ. ಅವರು ಮಧ್ಯಾಹ್ನ ಹೊಲದಿಂದ ವಾಪಸ್ಸಾಗುವಾಗ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ಧಾರೆ. ಧಾರವಾಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಕುಂದಗೋಳ, ಧಾರವಾಡ, ಉಪ್ಪಿನಬೆಟಗೇರಿ ಹುಬ್ಬಳ್ಳಿ ಭಾಗದಲ್ಲಿಯೂ ಗುಡುಗಿನ ಆರ್ಭಟ ಸಹಿತ ಮಳೆಯಾಗಿದೆ. ಕಾರವಾರ ವರದಿ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗ ಸೇರಿ ಕೆಲವೆಡೆ ಆಗಾಗ ಬಿರುಸಿನ ಮಳೆಯಾಗಿದೆ. ಕರಾವಳಿ ಭಾಗದಲ್ಲಿ …
Read More »ಚಿಕ್ಕೋಡಿ: ಹೆಚ್ಚುವರಿ ಜಿಲ್ಲಾಧಿಕಾರಿ ನೇಮಕಕ್ಕೆ ವಿರೋಧ
ಚಿಕ್ಕೋಡಿ: ಸರ್ಕಾರ ಚಿಕ್ಕೋಡಿಗೆ ಪ್ರತ್ಯೇಕವಾಗಿ ಅಪರ ಜಿಲ್ಲಾಧಿಕಾರಿ ನೇಮಿಸುವ ಬದಲಾಗಿ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿ ಜಿಲ್ಲಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ತಹಶೀಲ್ದಾರ್ ಚಿದಂಬರ ಕುಲಕರ್ಣಿ ಅವರಿಗೆ ಶನಿವಾರ ಮನವಿ ಸಲ್ಲಿಸಿತು. ಕಳೆದ ಕೆಲವು ದಿನಗಳ ಹಿಂದೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಬೆಳಗಾವಿಗೆ ಭೇಟಿ ನೀಡಿ ಸಭೆ ನಡೆಸಿ, ಚಿಕ್ಕೋಡಿಗೆ ಅಪರ ಜಿಲ್ಲಾಧಿಕಾರಿಯೊಬ್ಬರನ್ನು ನೇಮಕ ಮಾಡುವಂತೆ ಈ …
Read More »ಬೆಂಗಳೂರಿನಲ್ಲಿ ಮಹಿಳೆಯ ಹತ್ಯೆ ಕೇಸ್ : ಮಹಾಲಕ್ಷ್ಮಿ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ ಎಂದ ಪತಿ!
ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಾಲಕ್ಷ್ಮೀಯ ಸ್ನೇಹಿತ ಅಶ್ರಫ್ ಮೇಲೆ ನನಗೆ ಅನುಮಾನ ಇದೆ ಎಂದು ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೊಲೆಯಾದ ಮಹಾಲಕ್ಷ್ಮಿ ಪತಿ ಹೇಮಂತ್ ದಾಸ್, ನನಗೆ ಮಹಾಲಕ್ಷ್ಮೀ ಸ್ನೇಹಿತ ಅಶ್ರಫ್ ಮೇಲೆ ಅನುಮಾನ ಇದೆ. ಅಶ್ರಫ್ ಉತ್ತರಾಖಂಡ ಮೂಲದವನು. ಈ ಹಿಂದೆ ನಾನು ನೆಲಮಂಗಲದಲ್ಲಿ ಅಶ್ರಫ್ ವಿರುದ್ಧ ದೂರು ಕೊಟ್ಟಿದ್ದೆ ಎಂದು ಸ್ಪೋಟಕ …
Read More »