Breaking News

ಬೆಳಗಾವಿಯಲ್ಲಿನ ಆರ್‌ಎಸ್ಎಸ್ ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ: ಹರಿಪ್ರಸಾದ್

ಬೆಳಗಾವಿಯಲ್ಲಿ ಇಂದಿನಿಂದ  ಆರ್‌ಎಸ್‌ಎಸ್ ಪ್ರಮುಖ ವಾರ್ಷಿಕ ಸಭೆ ಆರಂಭಗೊಂಡಿದ್ದು, ಈ ಸಭೆಯ ಮುಕ್ತಾಯದ ನಂತರ ರಾಜ್ಯದಲ್ಲಿ ಅನಾಹುತಗಳು ಅಥವಾ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಸಂಘಟನೆಯು ಈ ಬಾರಿ ಬೆಳಗಾವಿಯನ್ನೇ ಗುರಿಯಾಗಿಸಿಕೊಂಡು ಸಭೆ ನಡೆಸುತ್ತಿರುವುದರ ಉದ್ದೇಶ ಏನೆಂಬುದು ತಿಳಿಯುತ್ತಿಲ್ಲ. ಇತಿಹಾಸದ ಪುಟಗಳನ್ನು ತಿರುವಿ ನೋಡಿದರೆ, ಹಿಂದೆಲ್ಲಾ ಇವರ ಪ್ರಮುಖ ಸಭೆಗಳು ಮುಗಿದ ತಕ್ಷಣ …

Read More »

ಮಂತ್ರಿಸ್ಥಾನ ಕೊಡಿ ಎಂದು ಚಿಕ್ಕಮಕ್ಕಳಂತೆ ಕೇಳುವುದಿಲ್ಲ: ಶಾಸಕ ಅಶೋಕ ಪಟ್ಟಣ

ಬೆಳಗಾವಿ:  ಮಂತ್ರಿಸ್ಥಾನ ಕೊಡಿ ಎಂದು ನಾನು ಪದೇ ಪದೇ ಚಿಕ್ಕಮಕ್ಕಳಂತೆ  ಕೇಳುವುದಿಲ್ಲ ಎಂದು ರಾಮದುರ್ಗ ಮತ ಕ್ಷೇತ್ರದ ಶಾಸಕ ಅಶೋಕ ಪಟ್ಟಣ ಅವರು ತಿಳಿಸಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿ ಹಿಂದೆ ಬೀಳಲ್ಲಾ. ನಮಗೂ ಗೌರವವಿದೆ, ಸ್ವಾಭಿಮಾನವಿದೆ. ಸಚಿವ ಸ್ಥಾನಕ್ಕಿಂತಲೂ ಸ್ವಾಭಿಮಾನ ದೊಡ್ಡದಾಗಿರುತ್ತೇ ಎಂದು ಹೇಳಿದರು. ಬೆಳಗಾವಿ ಜಿಲ್ಲೆಗೆ 3 ಸಚಿವ ಸ್ಥಾನ ಕೇಳಿದ್ದೇವೆ.ಸಿಎಂ ಅವರಿಗೆ ಗೊತ್ತಿದೆ ನಾವು ಎಷ್ಟು ಕೆಲಸ ಮಾಡಿದ್ದೇವೆ, …

Read More »

ಆರ್‌ಎಸ್ಎಸ್ ಸಭೆ: ಶತಾಬ್ದಿ ವರ್ಷದ ಕಾರ್ಯಕ್ರಮಗಳ ಯೋಜನೆ

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆಯು ಕರ್ನಾಟಕದ ಬೆಳಗಾವಿಯ ಅನಗೋಳದ ಸಂತ ಮೀರಾ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಾರಂಭವಾಯಿತು. ಈ ಸಭೆಯಲ್ಲಿ ಸಂಘದ ಸರಸಂಘಚಾಲಕರಾದ ಡಾ. ಮೋಹನ ಭಾಗವತ್ ಅವರು, ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆ ಎಲ್ಲ ಸಹಕಾರ್ಯವಾಹರು, ಅಖಿಲ ಭಾರತೀಯ ಕಾರ್ಯವಿಭಾಗದ ಪ್ರಮುಖರು, ಸಹ ಪ್ರಮುಖರು, ಕಾರ್ಯಕಾರಿಣಿ ಸದಸ್ಯರು, ಕ್ಷೇತ್ರ ಪ್ರಚಾರಕರು, ಸಹ ಕ್ಷೇತ್ರ ಪ್ರಚಾರಕರು, ಹಾಗೂ ಎಲ್ಲ 46 ಪ್ರಾಂತಗಳ ಪ್ರಾಂತ …

Read More »

KPTCLನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಜಾಗತಿಕ ‘ಝೀರೋ ಟ್ರಸ್ಟ್’ ಸೈಬರ್ ಭದ್ರತಾ ವ್ಯವಸ್ಥೆ ಅಳವಡಿಕೆ

ಬೆಂಗಳೂರು: ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಡಿಜಿಟಲ್ ಭದ್ರತೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ  ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ‘ಝೀರೋ ಟ್ರಸ್ಟ್ ಸೈಬರ್ ಸೆಕ್ಯುರಿಟಿ ಆರ್ಕಿಟೆಕ್ಚರ್’ ಅನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದೆ. ಇದರೊಂದಿಗೆ, ಈ ಅತ್ಯಾಧುನಿಕ ಸೈಬರ್ ಭದ್ರತಾ ವ್ಯವಸ್ಥೆಯನ್ನು ಅಳವಡಿಸಿಕೊಂಡ ದೇಶದ ಮೊದಲ ರಾಜ್ಯ ವಿದ್ಯುತ್ ಪ್ರಸರಣ ನಿಗಮ ಎಂಬ ಹೆಗ್ಗಳಿಕೆಗೆ ಕೆಪಿಟಿಸಿಎಲ್ ಪಾತ್ರವಾಗಿದೆ. ರಾಜ್ಯದ ವಿದ್ಯುತ್ ಪ್ರಸರಣ ವ್ಯವಸ್ಥೆಯನ್ನು ಸೈಬರ್ ದಾಳಿಗಳಿಂದ ರಕ್ಷಿಸುವ …

Read More »

ಕೇಂದ್ರ ಸಚಿವ ಹೆಚ್‌ಡಿಕೆ ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಅವರಿಂದು (ಜು.10) ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ  ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನಲ್ಲಿ ಭೇಟಿಯಾದ ಅವರು ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸಿದ್ದಾರೆ. ಇದೇ ವೇಳೆ ರೈತವಿರೋಧಿ, ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳು, ಮುಂಬರುವ ಚುನಾವಣಾ ಸವಾಲುಗಳನ್ನು ಮತ್ತಷ್ಟು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮೈತ್ರಿಯನ್ನು ಬಲಪಡಿಸಿ, …

Read More »

ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ; ಸೆಲ್ಫಿ ವಿಡಿಯೋ, ಡೆತ್‌ನೋಟ್ ಪತ್ತೆ

ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ  ಮಾಡಿ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗದಲ್ಲಿ ನಡೆದಿದೆ. ನಗರದ ಕರೆಮ್ಮಕಲ್ ಬಡಾವಣೆಯ ನಿವಾಸಿ ಸಂಪತ್ ದಂಡಗಿ (38) ಮೃತ ವ್ಯಕ್ತಿ. ಬಡ್ಡಿ ದಂಧೆಕೋರರ ಕಿರುಕುಳ ಮತ್ತು ಬೆದರಿಕೆಯಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಧರ್ಮಗೌಡ ಕರಿಯನಗೌಡ್ರ ಎಂಬಾತ ಹಣ ಮತ್ತು ಬಡ್ಡಿಗಾಗಿ ನಿರಂತರವಾಗಿ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಸಂಪತ್ ಪತ್ನಿಗೂ ಕರೆ …

Read More »

ಪತಿಗೆ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ – ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿ

ಹಾವೇರಿ: ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ನಗರದ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ. ಸೀಮಾ ಭಾನು ಕಂಬಳಿ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿ ಅಬ್ರಾರ ಕಂಬಳಿ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಅಲ್ಲದೇ ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣಿಗಾಗಿ ಮಹಿಳೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಿರುಕುಳ ತಾಳದೆ ಸೀಮಾ 10 …

Read More »

ಮಗು ಬೇಡವೆಂದು 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆಗೆ ಯತ್ನ; ಪತಿ ಅಂದರ್‌

ಬೆಂಗಳೂರು: ಮಗು ಬೇಡವೆಂಬ ಕಾರಣಕ್ಕೆ 8 ತಿಂಗಳ ಗರ್ಭಿಣಿ ಪತ್ನಿಯ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಪತಿಯನ್ನು( ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ  ಹೊರವಲಯದಲ್ಲಿ ನಡೆದಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮೃತಪಟ್ಟಿದ್ದಾಳೆ ಎಂದು ಭಾವಿಸಿದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೆಲ ಗಂಟೆಗಳ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ …

Read More »

ಬಾರ್ ಮೇಲೆಯೇ ಬಿಸಿಎಂ ಹಾಸ್ಟೆಲ್‌ – ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ

ಬೆಂಗಳೂರು: ವಿದ್ಯಾರ್ಥಿಗಳು ನೆಮ್ಮದಿಯಿಂದ ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕಾದ ಹಾಸ್ಟೆಲ್‌ನ ಕೆಳ ಮಹಡಿಯಲ್ಲೇ ಬಾರ್ ಅಂಡ್ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂ ನಲ್ಲಿ ಬೆಳಕಿಗೆ ಬಂದಿದೆ. ಕೆ.ಆರ್ ಪುರಂನ ಅವಲಹಳ್ಳಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದೇ ಕಟ್ಟಡದ ನೆಲ ಮಹಡಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಇದ್ದರೆ, ಮೇಲಿನ ಮಹಡಿಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸವಾಗಿದ್ದಾರೆ. …

Read More »

ಅಂಗಡಿ ದೋಚಿ ಮಾಲೀಕರಿಗೆ ವಿದ್ಯುತ್‌ ಶಾಕ್‌ ಹೊಡೆಸುವ ವಿಚಿತ್ರ ಕಳ್ಳ!

ಕಾರವಾರ: ಕಳ್ಳರು ಸಿಕ್ಕ ವಸ್ತುಗಳನ್ನ ದೋಚಿ ಹೋಗುತ್ತಾರೆ. ಆದರೆ ಉತ್ತರ ಕನ್ನಡ  ಜಿಲ್ಲೆಯ ಅಂಕೋಲ  ತಾಲೂಕಿನ ಕನಕನಹಳ್ಳಿಯಲ್ಲೊಬ್ಬ ಕಳ್ಳ, ತಾನು ಕಳ್ಳತನ ಮಾಡುವ ಅಂಗಡಿಗೆ ವಿದ್ಯುತ್ ಹರಿಸಿ ಮಾಲೀಕರು ಮಳಿಗೆಯ ಬಾಗಿಲು ತೆರೆದರೇ ಶಾಕ್ ಹೊಡೆಯುವಂತೆ ಮಾಡಿ ಹೋಗುತಿದ್ದ ವಿಚಿತ್ರ ಪ್ರಕರಣ ವರದಿಯಾಗಿದೆ. ಕನಕನಹಳ್ಳಿಯ ನಾರಾಯಣ ಸಿದ್ದಿ ಎಂಬಾತನೇ ಈ ಕೃತ್ಯ ಎಸಗುತ್ತಿದ್ದ ಕಳ್ಳ. ಈತ ತಮ್ಮ ಊರಿನ ಅಂಗಡಿಗಳನ್ನೇ ಟಾರ್ಗೆಟ್ ಮಾಡಿ, ಒಂದೇ ಅಂಗಡಿಯಲ್ಲಿ ನಾಲ್ಕೈದು ಬಾರಿ ಕಳ್ಳತನ …

Read More »