Breaking News

ಪಹಣಿಯಲ್ಲಿ ‘ವಕ್ಫ್‌’: ವಿಎಚ್‌ಪಿ-ಬಜರಂಗದಳ ಪ್ರತಿಭಟನೆ

ಹುಬ್ಬಳ್ಳಿ: ‘ರಾಜ್ಯ ಸರ್ಕಾರ ವಕ್ಫ್‌ ಹೆಸರಲ್ಲಿ ರೈತರ ಜಮೀನನ್ನು ಕಬಳಿಸುತ್ತಿದ್ದು, ತಕ್ಷಣ ವಕ್ಫ್‌ ಹೆಸರು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್‌ ಬಜರಂಗದಳದ ಕಾರ್ಯಕರ್ತರು ಸೋಮವಾರ ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಬೈರಿದೇವರಕೊಪ್ಪದ ಶಿವಾನಂದ ಮಠದ ಎದುರು, ವಿದ್ಯಾನಗರದ ಕೋತಂಬ್ರಿ ಕಾಲೇಜು ಎದುರು, ಗೋಕುಲ ರಸ್ತೆ ಅಕ್ಷಯ ಪಾರ್ಕ್‌ ವೃತ್ತ, ಹಳೇಹುಬ್ಬಳ್ಳಿ ಇಂಡಿಪಂಪ್‌ ವೃತ್ತ, ಬಂಕಾಪುರ ಚೌಕ, ಗದಗ ರಸ್ತೆಯ ರಲ್ವೆ ಬ್ರಿಡ್ಜ್‌ ಮತ್ತು ಕೇಶ್ವಾಪುರದ ಸರ್ವೋದಯ ವೃತ್ತದ ಬಳಿ ‘ನಮ್ಮ …

Read More »

ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಯುವಕ?

ಬೆಳಗಾವಿ: ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಸೋಮವಾರ (ನ.11ರಂದು) ಬೆಳಗಿನ ಜಾವ ಯುವಕನೋರ್ವ ಗುಂಡಿನ ದಾಳಿಗೆ ಬಲಿಯಾಗಿದ್ದು ಕೊಲೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಹಲಶಿ ಗ್ರಾಮದ ಅಲ್ತಾಫ್ ಮಕಾನದಾರ(30) ಎಂಬ ಯುವಕ ಬಂದೂಕಿನ ಗುಂಡಿಗೆ ಬಲಿಯಾಗಿದ್ದಾನೆ. ಮೃತದೇಹವನ್ನು ಈತನ ಮನೆಗೆ ತೆಗೆದುಕೊಂಡು ಹೋಗಿರುವುದು ಸಂಶಯಕ್ಕೆ ಕಾರಣವಾಗಿದ್ದು ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ. ಅಲ್ತಾಫ್ ಕೆಲವು ಜನರೊಂದಿಗೆ ಮರಳು ತೆಗೆಯಲು ಹೋಗಿದ್ದನು. ಈ ವೇಳೆ …

Read More »

ಬೆಂಗಳೂರಿನ ಶೆಡ್ ನಲ್ಲಿ ‘ಡಬಲ್ ಮರ್ಡರ್’

ಬೆಂಗಳೂರು : ಬೆಂಗಳೂರಿನ ಶೆಡ್ ನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಸಿಂಗಹಳ್ಳಿ ಗ್ರಾಮದಲ್ಲಿ ಎಸ್.ಆರ್. ಎಸ್ ಟ್ರಾವೆಲ್ಸ್ ಬಸ್ ಗಳನ್ನು ನಿಲ್ಲಿಸುವ ಜಾಗದಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಕೊಲೆ ಮಾಡಿದ ಆರೋಪಿ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಬಸ್ ಸರ್ವಿಸ್ ಶೆಡ್ ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ನನ್ನು ಬಂಧಿಸಲಾಗಿದ್ದು, ಕೊಲೆ ಹಿಂದಿನ ಕಾರಣ ತಿಳಿದು ಬಂದಿಲ್ಲ. ಎಸ್.ಆರ್.ಎಸ್ ಟ್ರಾವೆಲ್ಸ್ …

Read More »

ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ ಆರಂಭ

ಬೆಂಗಳೂರು : ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.   ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು …

Read More »

ಗೃಹಲಕ್ಷ್ಮಿ ಹಣದಿಂದ ಪತಿಗಾಗಿ ಸ್ಕೂಟರ್‌ ಖರೀದಿಸಿದ ಪತ್ನಿ !

ಪುತ್ತೂರು: ತನ್ನ ಪತಿ ಕೆಲಸಕ್ಕೆ ತೆರಳಲು ಅನುಕೂಲವಾಗಲೆಂದು ಪತ್ನಿಯು ಗೃಹಲಕ್ಷ್ಮಿ ಯೋಜನೆಯ ಮೂಲಕ ತಿಂಗಳು ತಿಂಗಳು ದೊರೆಯುವ ಹಣದಿಂದ ಸ್ಕೂಟರ್‌ ಖರೀದಿಸಿ ನೆರವಾಗಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ತನ್ನ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪೈಂಟರ್‌ ಕೆಲಸಕ್ಕೆ ತೆರಳುತ್ತಿರುವ ತನ್ನ ಪತಿ ಸಲೀಂಗೆ ಅನುಕೂಲವಾಗಲೆಂದು ಸ್ಕೂಟರ್‌ ಅನ್ನು ಖರೀದಿ ಮಾಡಿದ್ದಾರೆ.   ಸಲೀಂ ಅವರು ನಿತ್ಯ ದೂರದ ಊರುಗಳಿಗೆ ಪೈಂಟಿಂಗ್‌ ಕೆಲಸಕ್ಕೆ ಹೋಗುತ್ತಾರೆ. ಅವರಿಗೆ ವಾಹನ ಆವಶ್ಯವಿರುವ …

Read More »

ಆತ್ಮಹ*ತ್ಯೆ ಪ್ರಕರಣ: ಆರ್ಥಿಕ ಮುಗ್ಗಟ್ಟು, ಶೋಕಿ ಜೀವನವೇ ಮುಳುವಾಯಿತೇ?

ಕಿನ್ನಿಗೋಳಿ: ಆರ್ಥಿಕ ಮುಗ್ಗಟ್ಟು ಮತ್ತು ಶೋಕಿ ಜೀವನವೇ ಪಕ್ಷಿಕೆರೆಯ ಕಾರ್ತಿಕ್‌ ಭಟ್‌ ಕುಟುಂಬದ ಅಂತ್ಯಕ್ಕೆ ಕಾರಣವಾಯಿತೇ ಎಂಬ ಸಂಶಯ ಬಲಗೊಳ್ಳುತ್ತಿದೆ. ಕಳೆದ ಸುಮಾರು ಸಮಯದಿಂದ ಕೆಲಸ ಇಲ್ಲದಿದ್ದರೂ ಶೋಕಿ ಜೀವನದಲ್ಲಿಯೇ ಕಾಲ ಕಳೆಯುತ್ತಿದ್ದ ಕಾರ್ತಿಕ್‌ ಭಟ್‌ (32) ಆರ್ಥಿಕ ಸಮಸ್ಯೆಯಿಂದ ಮೇಲೆ ಬರಲಾರದೆ ಪತ್ನಿ ಪ್ರಿಯಾಂಕಾ (28) ಮತ್ತು ಪುಟ್ಟ ಮಗ ಹೃದಯ್‌ (4) ನನ್ನು ನಿರ್ದಯವಾಗಿ ಕೊಲೆ ಮಾಡಿ ಬಳಿಕ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತೆ ಇಡೀ ಪ್ರಕರಣ …

Read More »

ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

ಬೆಂಗಳೂರು/ಹುಬ್ಬಳ್ಳಿ: ಮಹಾರಾಷ್ಟ್ರ, ಝಾರ್ಖಂಡ್‌ ವಿಧಾನಸಭಾ ಚುನಾವಣೆ ಕಾವು ಕರ್ನಾಟಕವನ್ನೂ ಆವರಿಸಿದ್ದು, ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕರ್ನಾಟಕ ಸರಕಾರವು ಮದ್ಯ ಉದ್ಯಮಿಗಳಿಂದ 700 ಕೋಟಿ ರೂ. ಲೂಟಿ ಮಾಡಿ ಆ ಹಣವನ್ನು ಮಹಾರಾಷ್ಟ್ರ ಚುನಾವಣೆಗೆ ಬಳಸುತ್ತಿದೆ ಎಂಬ ಪ್ರಧಾನಿ ಮೋದಿ ಅವರ ಆರೋಪದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಹಿತ ರಾಜ್ಯ ಕಾಂಗ್ರೆಸ್‌ನ ಹಲವು ನಾಯಕರು ಮುಗಿಬಿದ್ದಿದ್ದಾರೆ. ಆರೋಪ ಸಾಬೀತುಪಡಿಸಿ ಇಲ್ಲವೇ ರಾಜಕೀಯ ನಿವೃತ್ತಿ ಪಡೆಯಿರಿ ಎಂದು ಪ್ರಧಾನಿಗೆ …

Read More »

ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ

ರಾಮನಗರ: ರಾಜ್ಯ ಸರಕಾರ ದಿವಾಳಿಯಾಗಿದ್ದು ಉಪ ಚುನಾವಣೆ ಮುಗಿದ ಬಳಿಕ ಗೃಹಲಕ್ಷ್ಮಿ ಗ್ಯಾರಂಟಿಯನ್ನು ಸ್ಥಗಿತಗೊಳಿಸುತ್ತಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು. ಚನ್ನಪಟ್ಟಣದಲ್ಲಿ 5ನೇ ದಿನ ತಮ್ಮ ಮೊಮ್ಮಗ ನಿಖೀಲ್‌ ಪರವಾಗಿ ಚುನಾವಣ ಪ್ರಚಾರ ನಡೆಸಿ, 5 ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದು ಕೊಳ್ಳಲಿದ್ದು ಇದೀಗ ಉಪಚುನಾವಣೆ ಎಂಬ ಕಾರಣಕ್ಕೆ ಚನ್ನಪಟ್ಟಣ ಕ್ಷೇತ್ರದ ಮಹಿಳೆ ಯರ ಬ್ಯಾಂಕ್‌ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿ ದ್ದಾರೆ. ರಾಜ್ಯ ಸರಕಾರ ದಿವಾಳಿ ಯಾಗಿದೆ. ಚುನಾವಣೆ ಮುಗಿದ ಮೇಲೆ ಹಣ …

Read More »

ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

ಬಳ್ಳಾರಿ: ಗಣಿಬಾಧಿತ ಸಂಡೂರು ಕ್ಷೇತ್ರಕ್ಕೆ ನಡೆಯುತ್ತಿರುವ ಉಪಚುನಾವಣೆ ಕಣ ಕಾವೇರಿದೆ. ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಉಭಯ ಪಕ್ಷಗಳ ಸಚಿವರು, ಶಾಸಕರು, ಮುಖಂಡರು ಕ್ಷೇತ್ರದಲ್ಲೇ ಬಿಡಾರ ಹೂಡಿ ಮತಬೇಟೆ ನಡೆಸಿದ್ದಾರೆ. ಕಾಂಗ್ರೆಸ್‌ ಕ್ಷೇತ್ರ ಉಳಿಸಿಕೊಳ್ಳುವ ತವಕದಲ್ಲಿದ್ದರೆ, ಬಿಜೆಪಿ ಕ್ಷೇತ್ರವನ್ನು ಕಸಿದುಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ.   ಕಾಂಗ್ರೆಸ್‌ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಿದೆ ಎಂಬುದೇ ಬಿಜೆಪಿಗೆ ಅಸ್ತ್ರವಾದರೆ, ಕಾಂಗ್ರೆಸ್‌ಗೆ ಬಿಜೆಪಿ ಅಭ್ಯರ್ಥಿ ಸ್ಥಳೀಯರಲ್ಲ, ಹೊರಗಿನವರು ಎಂಬುದು ಪ್ರತ್ಯಸ್ತ್ರವಾಗಿದೆ. ಸಂಡೂರು ಎಸ್‌ಟಿ …

Read More »

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ ರದ್ದುಪಡಿಸುವಂತೆ ಹೊರಡಿಸಿದ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಲಾಗಿದೆ.   ಸೊರಬದಲ್ಲಿ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಈ ಬಗ್ಗೆ ಒತ್ತಾಯಿಸಿದ್ದಾರೆ. ದಿನದ …

Read More »