Breaking News

ಬೆಳಗಾವಿಯಲ್ಲಿ ಸಂಭ್ರಮದ ಫಲಪುಷ್ಪ ಪ್ರದರ್ಶನ…. ಕೈಬೀಸಿ ಕರೆಯುತ್ತಿವೆ ನಾಡಿದ ದಿಟ್ಟ ಮಹಿಳೆಯರ ಕಲಾಕೃತಿಗಳು

ಬೆಳಗಾವಿಯಲ್ಲಿ ಸಂಭ್ರಮದ ಫಲಪುಷ್ಪ ಪ್ರದರ್ಶನ…. ಕೈಬೀಸಿ ಕರೆಯುತ್ತಿವೆ ನಾಡಿದ ದಿಟ್ಟ ಮಹಿಳೆಯರ ಕಲಾಕೃತಿಗಳು ಬೆಳಗಾವಿಯಲ್ಲಿ ಆಯೋಜಿಸಿರುವ ಫಲ ಮತ್ತು ಪುಷ್ಪ ಪ್ರದರ್ಶನಕ್ಕೆ ಜನರಿಂದ ಅತ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಈ ಬಾರಿ ನಾಡಿನ ದಿಟ್ಟ ಮಹಿಳೆಯರ ಇತಿಹಾಸ ದರ್ಶನವು ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಬೆಳಗಾವಿಯ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆಯ ಹ್ಯೂಮ್ ಪಾರ್ಕ್’ನಲ್ಲಿ ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಬೆಳಗಾವಿ ಜಿಲ್ಲಾ ತೋಟಗಾರಿಕೆ ಸಂಘ ಹಾಗೂ …

Read More »

ಧಾರವಾಡ ಮಾರ್ಗದ ಮುಂದವಾಡ ಕ್ರಾಸ್ ಬಳಿ ವ್ಯಾಗನಾರ್ ಕಾರು ಮರಕ್ಕೆ ಡಿಕ್ಕಿ ಚಾಲಕ ಸ್ಥಳದಲ್ಲೇ ಸಾವು,

ರಾಮನಗರ -ಧಾರವಾಡ ಮಾರ್ಗದ ಮುಂದವಾಡ ಕ್ರಾಸ್ ಬಳಿ ವ್ಯಾಗನಾರ್ ಕಾರು ಮರಕ್ಕೆ ಡಿಕ್ಕಿ ಚಾಲಕ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರವಾಗಿ ಗಾಯಗೊಂಡು ಘಟನೆ ನಡೆದಿದೆ ರಾಮನಗರ -ಧಾರವಾಡ ಮಾರ್ಗದ ಮುಂದವಾಡ ಕ್ರಾಸ್ ಸಮೀಪ ವ್ಯಾಗನಾರ್ ಕಾರು ರಸ್ತೆ ಬದಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಈ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ ಗೋವಾ ಪಣಜಿ ನಗರದಿಂದ ಅಳ್ನಾವರ ಕಡೆಗೆ ತೆರಳುತ್ತಿದ್ದ …

Read More »

ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಸಂಜೆ ನಿಧನರಾದರು. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜೂನ್ 16, 1931ರಲ್ಲಿ ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದರು. ಹಲವು ಮುಖ್ಯಮಂತ್ರಿಗಳ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶಾಮನೂರು ಅವರು ಅಖಿಲ ಭಾರತೀಯ ವೀರಶೈವ …

Read More »

ಚುನಾವಣೆಗೆ 6 ತಿಂಗಳು ಬಾಕಿ ಇರುವಾಗ BJP ನಾಯಕರು ನನ್ನನ್ನು ಹುಡುಕ್ತಾರೆ: ಯತ್ನಾಳ್

ಚಿಕ್ಕೋಡಿ(ಬೆಳಗಾವಿ): ಚುನಾವಣೆಗೆ ಆರು ತಿಂಗಳು ಬಾಕಿಯಿರುವಾಗ ಯತ್ನಾಳ್ ಎಲ್ಲಿ ಎಂದು ಬಿಜೆಪಿ ನಾಯಕರು ಹುಡುಕುತ್ತಾರೆ. ನಾನು ಈ ಬಾರಿ ಉಚಿತವಾಗಿ ಭಾಷಣ ಮಾಡುವುದಿಲ್ಲ, ಜೆಸಿಬಿ ಪಕ್ಷ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಅಥಣಿ ಪಟ್ಟಣದಲ್ಲಿಂದು ಮರಾಠ ಸಮುದಾಯದ ವತಿಯಿಂದ ನಿರ್ಮಾಣವಾಗಿರುವ 45 ಅಡಿ ಎತ್ತರದ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿ, ಕಟುಕನೋರ್ವ ಗೋ ಹತ್ಯೆ ಮಾಡುವುದನ್ನು ನೋಡಿದ ಶಿವಾಜಿ ಮಹಾರಾಜರು, …

Read More »

ಸ್ವಯಂಕೃತವಾಗಿ ಮತಕಳ್ಳತನ ಮಾಡುವವರ ಮೇಲೆ ಪ್ರಧಾನಿ ಮೋದಿ ಅಂಕುಶ: ಕೇಂದ್ರ ಸಚಿವ ಸಿಂಧಿಯಾ

ಚಿಕ್ಕೋಡಿ: ದೇಶದಲ್ಲಿ ಸ್ವಯಂಕೃತವಾಗಿ ಮತಕಳ್ಳತನ ಮಾಡುವವರ ಮೇಲೆ ಪ್ರಧಾನಿ ಮೋದಿ ಅಂಕುಶ ಹಾಕುವ ಕೆಲಸ ಮಾಡಿದ್ದಾರೆ.‌ ಹೀಗಾಗಿ ಕಾಂಗ್ರೆಸ್ ವೋಟ್ ಚೋರಿ ಅನ್ನುತ್ತಿದೆ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಿಡಿಕಾರಿದರು. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಇಂದು ಅಶ್ವರೋಡ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್​ಐಆರ್ ಪ್ರಕ್ರಿಯೆಯಿಂದ ಮತಗಳ್ಳತನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಗೃಹ ಸಚಿವರಿಂದ ಕೆಲಸ ಆಗುತ್ತಿದೆ. …

Read More »

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪತ್ನಿ ಯತ್ನಿಸಿದ ಪತಿ

ಬೇಡವೆಂದರೂ ಪತ್ನಿಯನ್ನು ತವರಿಗೆ ಕರೆದೊಯ್ದ ತವರಿನವರು ಪತ್ನಿ ಸೇರಿದಂತೆ ತವರು ಮನೆಯವರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪತಿ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಘಟನೆ ಪತಿಯ ಮನೆಯಲ್ಲಿ ಜಗಳಕ್ಕೆ ಬೇಸತ್ತು ತವರು ಮನೆಗೆ ಹೋದ ಪತ್ನಿ ಹಾಗೂ ಆಕೆಯ ಕುಟುಂಬಸ್ಥರನ್ನು ಪತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಡಿ.10 ರಂದು …

Read More »

ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ

ವಿದ್ಯಾರ್ಥಿನಿಯರನ್ನು ಸ್ವಂತಖರ್ಚಲ್ಲಿ ಸಂಸತ್ ಕಲಾಪ ವೀಕ್ಷಣೆಗೆ ಕರೆದೊಯ್ಯುವ ಸಂಸದೆ (ಬೆಳಗಾವಿ ಜಿಲ್ಲೆ): ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯ ಶಾಲಾ, ಕಾಲೇಜುಗಳ 15 ವಿದ್ಯಾರ್ಥಿನಿಯರನ್ನು ಸಂಸತ್ ಕಲಾಪ ವೀಕ್ಷಣೆಗಾಗಿ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ಕರೆದೊಯ್ಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಡಿಸೆಂಬರ್ 15ರಂದು ಬೆಳಿಗ್ಗೆ 8.45ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಸಂಸದೆ ಪ್ರಿಯಾಂಕಾ ಮತ್ತು ಎಲ್ಲ ಮಕ್ಕಳು ನವದೆಹಲಿಗೆ ಪ್ರಯಾಣ ಬೆಳೆಸುವರು. 2024-25ನೇ ಸಾಲಿನ …

Read More »

ಪಕ್ಷದ ಹೈಕಮಾಂಡ್‌ಗೆ ತಮ್ಮ ಬದ್ಧತೆಯನ್ನು ತಿಳಿಸುವ ಮೂಲಕ ಸಿಎಂ ಬದಲಾವಣೆ ಕುರಿತ ಚರ್ಚೆಗಳಿಗೆ ಮತ್ತೊಮ್ಮೆ ಸ್ಪಷ್ಟನೆ

ಗದಗ : ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಇಕ್ಬಾಲ್ ಹುಸೇನ್ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿ ಮಾತನಾಡಿ, ಪಕ್ಷದ ಒಳಗಿನ ಯಾವುದೇ ಗೊಂದಲಕ್ಕೂ ತಾವು ಕಾರಣರಲ್ಲ ಎಂದ ಸ್ಪಷ್ಟಪಡಿಸಿದರು. ಪಕ್ಷದ ಒಗ್ಗಟ್ಟು ಮತ್ತು ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ಯಾವಾಗಲೂ ಬದ್ಧನಿದ್ದೇನೆ ಎಂದು ತಿಳಿಸಿದ್ದಾರೆ. …

Read More »

ಜನವರಿಯಲ್ಲಿ‌ ದರ್ಶನ್​ಗೆ ಬೇಲ್‌ ಸಿಗುವ ನಿರೀಕ್ಷೆಯಿದೆ: ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌

ಹಾವೇರಿ: ಜನವರಿಯಲ್ಲಿ ದರ್ಶನ್‌ಗೆ ಬೇಲ್ ಸಿಗುವ ನಿರೀಕ್ಷೆ ಇದೆ. ಒಂದು ವೇಳೆ ಅವರು ಜೈಲಿನಿಂದ ಬಿಡುಗಡೆಯಾಗದಿದ್ದರೇ ನಾನೇ ವೈಯಕ್ತಿಕವಾಗಿ ಜೈಲ್‌ಗೆ ಹೋಗಿ ದರ್ಶನ್​ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದು ನಟ ಹಾಗೂ ಸಚಿವ ಜಮೀರ್‌ ಪುತ್ರ ಝೈದ್‌ ಖಾನ್‌ ತಿಳಿಸಿದರು. ಹಾವೇರಿಯಲ್ಲಿ ಕಲ್ಟ್‌ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಚಿತ್ರಮಂದಿರಗಳಲ್ಲಿ ದರ್ಶನ್​ ಅಭಿನಯದ ಡೆವಿಲ್ ಚಿತ್ರ ಪ್ರದರ್ಶನ ಕಾಣುತ್ತಿದೆ. ನಮ್ಮ ಕಲ್ಟ್ ಚಿತ್ರ ಜನವರಿ 23 …

Read More »

2ನೇ ವಿಮಾನ ನಿಲ್ದಾಣದ ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ …

Read More »