ಬೆಂಗಳೂರು: ಎಸ್.ಆರ್ ವಿಶ್ವನಾಥ್ ಜೊತೆ ಜಟಾಪಟಿ ಮುಗಿದ ವಿಚಾರ. ಹೀಗಾಗಿ ಪಕ್ಷದ ಹಿತದೃಷ್ಟಿಯಿಂದ ಒಟ್ಟಿಗೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಸಂಸದ ಡಾ.ಸುಧಾಕರ್ ಅವರು ತಿಳಿಸಿದ್ದಾರೆ. ನಗರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರು ನಮ್ಮನ್ನು ಕರೆದಿದ್ದರು. ನಮ್ಮ ಭಾಗದಲ್ಲಿ ಅನ್ಯೋನ್ಯವಾಗಿ ಬಿಜೆಪಿಯನ್ನು ಸದೃಢವಾಗಿ ಕಟ್ಟಬೇಕು. ಪರಸ್ಪರ ಏನೇ ಭಿನ್ನಾಭಿಪ್ರಾವಿದ್ದರೂ ಅದು ಪಕ್ಷದ ಮೇಲೆ …
Read More »ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚನೆ; ಮಾಜಿ ಸಚಿವ ಜಾಲಪ್ಪ ಸೊಸೆಗೆ 5 ವರ್ಷ ಜೈಲು ಶಿಕ್ಷೆ
ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಮಾಜಿ ಸಚಿವ ಜಾಲಪ್ಪ ಅವರ ಸೊಸೆ ನಾಗವೇಣಿ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ದೋಷಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ್ ಕುಮಾರ್ ಯಾರಪ್ಪ ದೂರು ದಾಖಲಿಸಿದ್ದರು. ವೈದ್ಯಕೀಯ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ಕೋಟಾದಡಿ ಸೀಟು ಕೊಡಿಸುವುದಾಗಿ 45 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ …
Read More »ಅನ್ನಭಾಗ್ಯ ಅಕ್ಕಿಗೆ ಸ್ಪಲ್ಪ ಅರಿಶಿಣ ಬೆರೆಸಿ ಅಯೋಧ್ಯೆಯಿಂದ ತಂದಿರುವ ಪ್ರಸಾದ ಅಂದಿದ್ರು: ಬಿಜೆಪಿಗೆ ಡಿಕೆಶಿ ಟಾಂಗ್
ಬೆಳಗಾವಿ: ನಾವು ನೀಡಿದ್ದ ಅಕ್ಕಿಗೆ ಸ್ವಲ್ಪ ಅರಿಶಿನ ಬೆರೆಸಿ ಇದು ಅಯೋಧ್ಯೆಯಿಂದ ತಂದಿರುವ ಪ್ರಸಾದ್ ಅಂದಿದ್ರು ಎಂದು ಬಿಜೆಪಿಗೆ ಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನೀವು ಮಾಧ್ಯಮದಲ್ಲಿ ನೋಡ್ತಿದ್ದೀರಿ. ಅವರೇನು ಸುಳ್ಳು ಹೇಳ್ತಿಲ್ಲ. ದೇಶದ ಜನತೆಯ ನಂಬಿಕೆಗೆ ದ್ರೋಹ ಆಗಿದೆ ಎಂದು ರಾಮಮಂದಿರ ದೇಣಿಗೆ ಕಳ್ಳತನಕ್ಕೆ ಬೇಸರ ವ್ಯಕ್ತಪಡಿಸಿದರು. ಇವತ್ತು ಸುವರ್ಣಸೌಧದಲ್ಲಿ ಕಿತ್ತೂರು ಕರ್ನಾಟಕದ ಶಾಸಕರು …
Read More »ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಕೆ: ಸಿಎಂ ಘೋಷಣೆ
ಬೆಳಗಾವಿ: ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರದಲ್ಲಿ ನಮಗೆ ಬಹಳ ದೊಡ್ಡ ಅಗೌರವ ಬಂದಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ಆಗಿದೆ. ಹೀಗಾಗಿ, ಕರ್ನಾಟಕದ ಎಲ್ಲಾ ಮುಜರಾಯಿ ದೇವಸ್ಥಾನದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ದೇವಸ್ಥಾನದಲ್ಲಿ ಅಳವಡಿಸಿದ ಸಿಸಿಟಿವಿ ಕಂಟ್ರೋಲ್ ರೂಮ್ ಸ್ಥಾಪಿಸುತ್ತೇವೆ. ಪ್ರತಿಯೊಂದು ಹಣವನ್ನ ಸಿಸಿಟಿವಿ ಕ್ಯಾಮೆರಾದಲ್ಲಿ ಚಿತ್ರಣ ಆಗಬೇಕು …
Read More »13ರಂದು ಹಿಂಡಲಗಾ ಜೈಲು ಎದುರು ಪ್ರತಿಭಟನೆ
ಬೆಳಗಾವಿ: ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಮೂರು ತಿಂಗಳು ಜೈಲುವಾಸ ಅನುಭವಿಸಿದ್ದ ವೀರ ಸಾವರ್ಕರ್ ಐತಿಹಾಸಿಕ ಹಿನ್ನೆಲೆಯ ಸ್ಮರಣೆಗಾಗಿ ಜೈಲಿನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಳವಡಿಸಿದ್ದ ಫೋಟೋ ಮತ್ತಿತರ ದಾಖಲೆಗಳನ್ನು ಕಾಂಗ್ರೆಸ್ ಸರ್ಕಾರ ಬಂದ ಬಳಿಕ ತೆಗೆದು ಹಾಕಿದ್ದಾರೆ. ಇದನ್ನು ಖಂಡಿಸಿ ಜು.13ರಂದು ಹಿಂಡಲಗಾ ಕಾರಾಗೃಹದ ಎದುರು ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟಿಸಲಾಗುವುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿಭಟನೆಯಲ್ಲಿ ಬಿಜೆಪಿ …
Read More »ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಗೃಹಲಕ್ಷ್ಮಿ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ
ಬೆಳಗಾವಿ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ವಿಶ್ವದಲ್ಲೇ ಮಾದರಿಯಾಗಿದೆ. ಎನ್ಡಿಎ ಆಡಳಿತದ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಿರುವಾಗ ನಮ್ಮ ಈ ಯೋಜನೆ ಕುರಿತು ರಾಜ್ಯದಲ್ಲಿ ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ ಮೊದಲ ಸಲ ಬೆಳಗಾವಿಗೆ ಬಂದಿದ್ದಾರೆ. ಹೀಗಾಗಿ ಸಾಕಷ್ಟು …
Read More »ಎಸ್ಐಆರ್ ಬಡವರ ಮತದಾನದ ಹಕ್ಕು ಕಸಿಯದು
ಬೆಳಗಾವಿ : ಎಸ್ಐಆರ್ ಒಂದು ಸಹಜ ಪ್ರಕ್ರಿಯೆ. ಇದುವರೆಗೂ ಸುಮಾರು ಎಂಟು ಸಲ ದೇಶದಲ್ಲಿ ನಡೆದಿದೆ. ಎಲ್ಲೂ ಬಡವರ ಮತದಾನದ ಹಕ್ಕು ಕಸಿಯುವ ಪ್ರಯತ್ನವಾಗಿಲ್ಲ. ಇದು ಎಸ್ಐಆರ್ ನೀತಿ ಹಾಗೂ ಉದ್ದೇಶವೂ ಅಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸ್ಪಷ್ಟಪಡಿಸಿದರು. ಖಾಸಗಿ ಹೋಟೆಲ್ನಲ್ಲಿ ಗುರುವಾರ ಜರುಗಿದ ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಮಾತನಾಡಿದ ಅವರು, ಬಿಎಲ್ಒಗಳು ಪ್ರತಿ ಮನೆಗೆ ಹೋಗಿ ನೈಜ ಮತದಾರರಿಗೆ ಮತದಾನದ ಹಕ್ಕು ದೊರಕುವಂತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. …
Read More »ಬೆಳಗಾವಿ: ವಿಜ್ಞಾನ ವನಕ್ಕೆ ಸಚಿವ ಈಶ್ವರ ಖಂಡ್ರೆ ಭೇಟಿ
ಬೆಳಗಾವಿ: ಸುವರ್ಣಸೌಧದ ಆವರಣದಲ್ಲಿರುವ ‘ವಿಜ್ಞಾನ ವನ’ಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಈಶ್ವರ ಖಂಡ್ರೆ ಗುರುವಾರ ಭೇಟಿ ನೀಡಿ, ಮಕ್ಕಳಲ್ಲಿ ಆಟದ ಮೂಲಕ ವಿಜ್ಞಾನದ ಅರಿವು ಮೂಡಿಸುವ ವಿನೂತನ ಪರಿಕಲ್ಪನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜ್ಞಾನ ವನದಲ್ಲಿರುವ ವಿವಿಧ ವೈಜ್ಞಾನಿಕ ಪರಿಕರಗಳನ್ನು ವೀಕ್ಷಿಸಿದ ಸಚಿವರು, ಮಕ್ಕಳು ಹಾಗೂ ಸಾರ್ವಜನಿಕರು ಮನರಂಜನೆಯೊಂದಿಗೆ ವಿಜ್ಞಾನದ ಮೂಲತತ್ವಗಳನ್ನು ಸುಲಭವಾಗಿ ತಿಳಿದುಕೊಳ್ಳಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಬಳಿಕ ವಿಜ್ಞಾನ ವನದ ಆವರಣದಲ್ಲಿ ಸಸಿ ನೆಟ್ಟು …
Read More »ಮಹಾರಾಷ್ಟ್ರದ ಕನ್ನಡ ಶಿಕ್ಷಕರ ನೆರವಿಗೆ ಧಾವಿಸಲು ಕರವೇ ಆಗ್ರಹ
ಬೆಳಗಾವಿ : ಮಹಾರಾಷ್ಟ್ರದಲ್ಲಿ ಕನ್ನಡ ಶಿಕ್ಷಕರು ಕಡ್ಡಾಯವಾಗಿ ಮರಾಠಿ ಭಾಷೆಯಲ್ಲೇ ಟಿಇಟಿ ಪರೀಕ್ಷೆ ಬರೆಯುವಂತೆ ನಿಯಮ ಜಾರಿಗೊಳಿಸಿದ್ದರಿಂದ ಕನ್ನಡ ಬೋಧಕರಿಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಕರ್ನಾಟಕ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರಗೆ ಮನವಿ ಸಲ್ಲಿಸಿದೆ. ಸುವರ್ಣ ವಿಧಾನಸೌಧದಲ್ಲಿ ಅಹವಾಲು ಸಲ್ಲಿಸಿದ ಕರವೇ ಕಾರ್ಯಕರ್ತರು, ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರದ ಸಂಬಂಧಿತ ಇಲಾಖೆಗಳೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚಿಸಬೇಕು. ಮಹಾರಾಷ್ಟ್ರ ರಾಜ್ಯದ ಕನ್ನಡ ಮಾಧ್ಯಮ ಶಿಕ್ಷಕರಿಗೆ …
Read More »ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಪೂರಕ; ಮಳೆ ಕೊರತೆ ಎದುರಿಸಲು ಮುನ್ನೆಚ್ಚರಿಕೆ ವಹಿಸಿ: ಡಿಸಿಎಂ ಡಾ.ಜಿ. ಪರಮೇಶ್ವರ್
ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಈ ಬಾರಿ ಮಳೆಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ಹಾಗೂ ಮೇವಿನ ಕೊರತೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಹೊಸ ಆಲೋಚನೆಗಳೊಂದಿಗೆ ಆಡಳಿತ …
Read More »
Laxmi News 24×7