ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮತ್ತು ರಾಜ್ಯದಲ್ಲಿ ಎಸ್ಐಆರ್ ವಿಚಾರ ಸಂಬಂಧ ಬೆಂಗಳೂರಿಗೆ ಕೇಂದ್ರದ ವೀಕ್ಷಕರ ಮೊದಲ ತಂಡ ಆಗಮಿಸಿದೆ. ಬಿಜೆಪಿ ರಾಷ್ಟ್ರೀಯ ಜಂಟಿ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಬೆಂಗಳೂರಿಗ ಆಗಮಿಸಿದ್ದು, ಗುರುವಾರ ದಿನವಿಡೀ ರಾಜ್ಯ ಬಿಜೆಪಿ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹಾಗೆಯೇ ಎಸ್ಐಆರ್ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ನಾಯಕರ ಜೊತೆ ಸಭೆ …
Read More »ತುಮಕೂರಿನ ಚರಿತ್ರೆ ಅಳಿಸಿ ಹಾಕಲು ಹೊರಟಿದ್ದಾರೆ, ಇದರ ಹಿಂದೆ ರಿಯಲ್ ಎಸ್ಟೇಟ್ ಮಾಫಿಯಾ ಇದೆ: ಸುರೇಶ್ ಗೌಡ
ತುಮಕೂರು: ತುಂಬೆ ಊರನ್ನು, ತುಮಕೂರಿನ ಚರಿತ್ರೆ ಅಳಿಸಿ ಹಾಕಲು ಹೊರಟಿದ್ದಾರೆ. ಇದರ ಹಿಂದೆ ರಿಯಲ್ ಎಸ್ಟೇಟ್ ಮಾಫಿಯಾ ಇದೆ ಎಂದು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಕಿಡಿಕಾರಿದ್ದಾರೆ. ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಘೋಷಣೆ ಮಾಡುವ ವಿಚಾರದ ಕುರಿತು ಹೆಸರು ಬದಲಾವಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಮಕೂರನ್ನು ಬೆಂಗಳೂರು ಉತ್ತರ ಎಂದು ಘೋಷಣೆ ಮಾಡಲು ಜಿ.ಪರಮೇಶ್ವರ್ ಕೇಳಿಕೊಂಡಿದ್ದಾರೆ. ಕಾಂಗ್ರೆಸ್ …
Read More »ದೇಶಾದ್ಯಂತ ಇ-ಬಸ್, ಇ-ಟ್ರಕ್ ಬಳಕೆಗೆ ವೇಗ – ಬ್ಯಾಂಕ್, ಖಾಸಗಿ ಪಾಲುದಾರರ ಜೊತೆ ಹೆಚ್ಡಿಕೆ ಸಭೆ
ನವದೆಹಲಿ: ಭಾರತದ ಸರಕು ಸಾಗಣೆ ಕ್ಷೇತ್ರದಲ್ಲಿ ಮಾಲಿನ್ಯಮುಕ್ತ ಸ್ವಚ್ಚ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕರುಗಳು ಹಾಗೂ ಖಾಸಗಿ ವಲಯದ ವಾಣಿಜ್ಯ ವಾಹನಗಳ ಆಪರೇಟರ್ʼಗಳ ಜತೆ ಉನ್ನತ ಮಟ್ಟದ ಮಾತುಕತೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಪಿಎಂ ಇ ಡ್ರೈವ್ ಯೋಜನೆಯ ಮೂಲಕ ಎಲೆಕ್ಟ್ರಿಕ್ ಸರಕು ಸಾಗಣೆ ಹಾಗೂ ಪ್ರಯಾಣಿಕರ …
Read More »ಮಾಯಾವತಿ ಭೇಟಿಗೆ ಹೋದ ಕೈ ನಾಯಕರಿಗೆ ಮುಖಭಂಗ – ಮನೆಯ ಗೇಟ್ನಿಂದಲೇ ವಾಪಸ್
ನವದೆಹಲಿ: ಉತ್ತರ ಪ್ರದೇಶ ರಾಜಕೀಯದಲ್ಲಿ ಇಂದು ಅತ್ಯಂತ ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರನ್ನು ಭೇಟಿಯಾಗಲು ಲಕ್ನೋದ ಅವರ ನಿವಾಸಕ್ಕೆ ತೆರಳಿದ್ದ ಕಾಂಗ್ರೆಸ್ನ ಪ್ರಭಾವಿ ದಲಿತ ನಾಯಕರ ನಿಯೋಗಕ್ಕೆ ಭಾರಿ ಮುಖಭಂಗವಾಗಿದ್ದು ಭೇಟಿ ಸಿಗದೇ ಮನೆಯ ಗೇಟ್ನಿಂದಲೇ ವಾಪಸ್ ಬಂದಿದ್ದಾರೆ. 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ ಒಂದು ವರ್ಷ ಬಾಕಿ ಇರುವಾಗ ನಡೆದಿರುವ ಈ ‘ದಿಢೀರ್’ ಭೇಟಿಯ ರಾಜಕೀಯ ವಲಯದಲ್ಲಿ …
Read More »ಮಾಜಿ ಪ್ರಧಾನಿ ಹೆಚ್ಡಿಡಿ ಭೇಟಿಯಾದ ಗೋವಾ ಸಿಎಂ ಪ್ರಮೋದ್ ಸಾವಂತ್
ಬೆಂಗಳೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಅವರಿಂದು (ಮೇ 20) ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿ, ದೇವೇಗೌಡರನ್ನು ಭೇಟಿಯಾಗಿದ್ದಾರೆ. ಇದೇ ವೇಳೆ ದೇವೇಗೌಡರ ಆರೋಗ್ಯ ವಿಚಾರಿಸಿ, ಹುಟ್ಟುಹಬ್ಬದ ಶುಭ ಕೋರಿದ್ದಾರೆ.
Read More »ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದು 9 ವರ್ಷದ ಬಾಲಕ ದುರ್ಮರಣ
ಹುಬ್ಬಳ್ಳಿ: ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದು 9 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ವಿಜಯನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕೇಶ್ವಾಪುರದ ಆಜಾದ್ ನಗರ ನಿವಾಸಿ ಬಾಲಾಜಿ (9) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಬಾಲಕ ತನ್ನ ಸ್ನೇಹಿತರೊಂದಿಗೆ ಆಟ ಆಡವಾಡುತ್ತಾ ವಿಜಯನಗರಕ್ಕೆ ಬಂದಿದ್ದ. ಈ ವೇಳೆ ಕಾಂಪೌಂಡ್ವೊಂದರ ಒಳಗೆ ಬಿದ್ದಿದ್ದ ತೆಂಗಿನಕಾಯಿ ತೆಗೆದುಕೊಳ್ಳಲು ಮೃತ ಬಾಲಾಜಿ ಹೋಗಿದ್ದ. ಆಗ ಪಿಲ್ಲರ್ ಹಾಕಲು ತೋಡಿದ್ದ ಗುಂಡಿಗೆ ಬಿದ್ದಿದ್ದು, ಆಳಕ್ಕಿದ್ದರಿಂದ …
Read More »ಮುನವಳ್ಳಿಯಲ್ಲಿ ಅರ್ಹ ಫಲಾನುಭವಿಗಳಿಗೆ ವಿವಿಧ ವೈಯಕ್ತಿಕ ಸೌಲಭ್ಯಗಳ ವಿತರಣೆ.!!
ನಮ್ಮ ಸವದತ್ತಿ ಯಲ್ಲಮ್ಮ ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ಜನಕಲ್ಯಾಣ ಯೋಜನೆಗಳು ನೇರವಾಗಿ ತಲುಪಬೇಕು ಎನ್ನುವುದು ನಮ್ಮ ಪ್ರಮುಖ ಧ್ಯೇಯವಾಗಿದೆ. ಇಂದು ಮುನವಳ್ಳಿಯ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಗರೋತ್ಥಾನ ಹಾಗೂ ಎಸ್.ಎಫ್.ಸಿ. (SFC) ಯೋಜನೆಯಡಿಯಲ್ಲಿ ಮುನವಳ್ಳಿ ಪಟ್ಟಣದ ವಿವಿಧ ವೈಯಕ್ತಿಕ ಸೌಲಭ್ಯಗಳ ಅರ್ಹ ಫಲಾನುಭವಿಗಳಿಗೆ ಅಧಿಕೃತವಾಗಿ ಸೌಲಭ್ಯಗಳನ್ನು ವಿತರಿಸಲಾಯಿತು. ರಾಜ್ಯದ ಮಾನ್ಯ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಈ ಸೌಲಭ್ಯಗಳನ್ನು …
Read More »ಉದ್ಯಾನವನಗಳಿಗೆ ಹೊಸ ಸ್ಪರ್ಶ
ಬೆಳಗಾವಿ ನಗರದ ಸಾರ್ವಜನಿಕ ಉದ್ಯಾನವನಗಳನ್ನು ಸುಧಾರಿಸುವ ಮತ್ತು ಆಧುನೀಕರಿಸುವ ಕುರಿತು ಶಾಸಕ ಆಸಿಫ್ (ರಾಜು) ಸೆಟ ಶಿವಬಸವ ನಗರದಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು ಉದ್ಯಾನವನದೊಳಗೆ ಹಸಿರು, ನಡಿಗೆ ಪ್ರದೇಶಗಳು, ಆಸನ ವ್ಯವಸ್ಥೆ, ಬೆಳಕು ಮತ್ತು ಇತರೆ ಅಗತ್ಯ ಸೌಕರ್ಯಗಳನ್ನು ಹೆಚ್ಚಿಸುವ ಮೂಲಕ ನಿವಾಸಿಗಳಿಗೆ ಉತ್ತಮ ಮನರಂಜನಾ ಸ್ಥಳಗಳನ್ನು ಸೃಷ್ಟಿಸುವುದು ಕ್ರಮ ಕೈಗೊಳ್ಳಲಾಗುತ್ತಿದೆ. ಮಕ್ಕಳು ಮತ್ತು ಹಿರಿಯ ನಾಗರಿಕರಿಗೆ ಸ್ವಚ್ಛತಾ ಹಾಗೂ ಮೂಲಭೂತ ಸೌಕರ್ಯಗಳನ್ನು ಉದ್ಯಾನವನಗಳಿಗೆ ನೀಡಲಾಗುತ್ತಿದೆ ಈ …
Read More »ಕನ್ನಡ ಜಾಗೃತಿ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ನೇಮಕ
ಬೆಳಗಾವಿ ನಗರದಲ್ಲಿ ವಾಸಿಸುವ ಶ್ರೀ ಪ್ರವೀಣ ಪಾಟೀಲ ಅವರನ್ನು 33 ವರ್ಷ್ ಕನ್ನಡ ನಾಡು ನುಡಿಗಾಗಿ ಹೋರಾಟದಲ್ಲಿ ಇತಿಹಾಸವಿರುವ ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ ಮಂಜುನಾಥ್ ದೇವ ಅವರು ಕನ್ನಡ ಜಾಗೃತಿ ವೇದಿಕೆಯ ನೂತನ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಶ್ರೀ ಪ್ರವೀಣ ಪಾಟೀಲ ಅವರನ್ನು ಆಯ್ಕೆ ಮಾಡಿ ಅಭಿನಂದನೆಗಳು ಸಲ್ಲಿಸಿದ್ದಾರೆ. ಶ್ರೀ ಪ್ರವೀಣ ಪಾಟೀಲ ಅವರು ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಸುಮಾರು ವರ್ಷಗಳಿಂದ ಕನ್ನಡ ನಾಡು, ನುಡಿ, ಭಾಷೆಗಾಗಿ ಹೋರಾಟ …
Read More »ಬೆಳಗಾವಿ: ಕಂಗ್ರಾಳಿ ಬುದ್ರುಕ್ನಲ್ಲಿ ನಿಗೂಢ ಸಾವು; ಲಾರಿಯಲ್ಲೇ ಶವವಾಗಿ ಪತ್ತೆಯಾದ ಚಾಲಕ!
ಬೆಳಗಾವಿ ತಾಲೂಕಿನ ಕಂಗ್ರಾಳಿ ಬುದ್ರುಕ್ನಲ್ಲಿ ಸೋಮವಾರ ಮುಂಜಾನೆ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಮುಖ್ಯ ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಯೊಳಗೆ ಚಾಲಕನೊಬ್ಬ ಶವವಾಗಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಸದ್ಯ ಆತಂಕ ಹಾಗೂ ತೀವ್ರ ರಂಗಿನ ಕುತೂಹಲ ಮೂಡಿಸಿದೆ. ಮೃತರನ್ನು ಕಲಮೇಶ್ವರ ಗಲ್ಲಿಯ ನಿವಾಸಿ ಗಜಾನನ ವಾಮನ ಹುರುಡೆ (45 ವರ್ಷ) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಗಜಾನನ ಅವರು ಭಾನುವಾರ ರಾತ್ರಿ ತಮ್ಮ ಲಾರಿಯನ್ನು ಕಲಮೇಶ್ವರ ಸಹಕಾರಿ ಸಂಘದ ಮುಂಭಾಗದ …
Read More »
Laxmi News 24×7