Breaking News

ಮನೆಗೆ ನುಗ್ಗಿದ ದರೋಡೆಕೋರರನ್ನು ಅಟ್ಟಾಡಿಸಿ ಹೊಡೆದ ತಾಯಿ-ಮಗಳು

ಹೈದರಾಬಾದ್‌ನಲ್ಲಿ (Hyderabad) ಅಚ್ಚರಿಯ ಘಟನೆಯೊಂದು ನಡೆದಿದೆ. ಕಳೆದ ಒಂದೆರಡು ದಿನಗಳಿಂದ ತೆಲುಗು ಜನರು ತಾಯಿ ಮತ್ತು ಮಗಳ ಧೈರ್ಯವನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಅಷ್ಟಕ್ಕೂ ಆ ತಾಯಿ ಮಗಳು ಮಾಡಿದ (Robbery case) ಸಾಹಸ ಅಂತಿದ್ದಲ್ಲ. ಹೌದು.. ಹೈದರಾಬಾದ್‌ನಲ್ಲಿ ಇಬ್ಬರು ದರೋಡೆಕೋರರನ್ನು ತಾಯಿ ಮತ್ತು ಮಗಳು ಮಟ್ಟ ಹಾಕಿದ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ದರೋಡೆಕೋರರನ್ನು ಧೈರ್ಯದಿಂದ ಹೊಡೆದೋಡಿಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ …

Read More »

ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದ;ಆಳ್ವಾಸ

ಬೆಳಗಾವಿ: ಮೂಡಿಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕೆಂದು ಆಳ್ವಾಸ್ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. 10ನೇ ತರಗತಿಯಲ್ಲಿ ಸಿಬಿಎಸ್ಸಿ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) …

Read More »

ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ

ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲಾಗದ ದುರ್ಬಲ ಸಿಎಂ ಸಿದ್ದರಾಮಯ್ಯ ಬೆಂಗಳೂರು,ಮಾ.23- ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲಾಗದೆ, 90ಕ್ಕೂ ಹೆಚ್ಚು ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ, ಗೂಟದ ಕಾರು ನೀಡಿ ಅವರನ್ನು ಸಮಾಧಾನಪಡಿಸಬೇಕಾದ ದಯನೀಯ ಸ್ಥಿತಿ ನಿಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಟ್ವೀಟ್ ಮಾಡಿರುವ ಅವರು, ತಾವು ಎಷ್ಟು ದುರ್ಬಲ ಮುಖ್ಯಮಂತ್ರಿ ಎಂದರೆ ಶಾಸಕರನ್ನು ಹಿಡಿತದಲ್ಲಿಡದೆ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ …

Read More »

25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ ಚುರುಮುರಿ ವ್ಯಾಪಾರಿ

ಚಿಕ್ಕಮಗಳೂರು,ಮಾ.23- ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದರು. ಕೋಟಾ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರು ತಾಲ್ಲೂಕಿನ ವಿವಿಧ ಭಾಗದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಹೊರವಲಯದ ತೇಗೂರು ಸರ್ಕಲ್‍ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾ ಶ್ರೀನಿವಾಸ್ ಪೂಜಾರಿಗೆ 25 …

Read More »

ರಾಜ್ಯದಲ್ಲಿ ಕಾಂಗ್ರೆಸ್ ಒಂದು ಕ್ಷೇತ್ರದಲ್ಲೂ ಕೂಡ ಗೆಲ್ಲಲ್ಲ : ವಿಜಯೇಂದ್ರ

ಬೆಂಗಳೂರು,ಮಾ.23- ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ರಾಜ್ಯದ ಯಾವುದೇ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.   ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿಜೀ ಅವರ ಜನಪ್ರಿಯತೆ …

Read More »

ಮುಸಾಫಿರ್ ಮತ್ತು ಹುಸೇನ್ ಶಬೀದ್ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿಗಳು

ನವದೆಹಲಿ,ಮಾ.23- ಕರ್ನಾಟಕದ ರಾಜಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದ ರೂವಾರಿಗಳು ಮುಸಾಫಿರ್ ಮತ್ತು ಹುಸೇನ್ ಶಬೀದ್ ಎಂಬುದು ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ತನಿಖೆಯಿಂದ ದೃಢಪಟ್ಟಿದೆ. ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿಗಳಾದ ಈ ಇಬ್ಬರು ಶಂಕಿತ ಉಗ್ರರು ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಎನ್‍ಐಎಯ ಹಿಟ್ ಲಿಸ್ಟ್‍ನಲ್ಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಐಸಿಸ್ ಉಗ್ರಗಾಮಿ ಸಂಘಟನೆಗೆ ನಿರ್ದಿಷ್ಟ ಸಮುದಾಯದ ವಿದ್ಯಾವಂತ ಮತ್ತು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಯುವಕರನ್ನು …

Read More »

ಗಣಿ ಇಲಾಖೆ ಡಿಡಿ ಹುದ್ದೆ ರದ್ದು

ಚಾಮರಾಜನಗರ, ಮಾರ್ಚ್‌, 23: ಉತ್ಕೃಷ್ಟ ಮಟ್ಟದ ಕರಿಕಲ್ಲಿಗೆ ಹೆಸರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ರಾಜಧನ, ಡಿಎಂಎಫ್ ಸಂಗ್ರಹಣೆ ನಿರೀಕ್ಷೆ ಮಟ್ಟದಲ್ಲಿರದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಹುದ್ದೆಯನ್ನು ರದ್ದು ಪಡಿಸಲಾಗಿದೆ. ಕಳೆದ ಮಾರ್ಚ್‌ 20ರಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಸುಮ ಗಣಿ ಇಲಾಖೆ ಉಪ ನಿರ್ದೇಶಕರ ಹುದ್ದೆ ನಿವಿಕರಿಸಿ ಹಿರಿಯ ಭೂ ವಿಜ್ಞಾನಿ ಹುದ್ದೆಯನ್ನಾಗಿ ಪರಿವರ್ತಿಸಲಾಗಿದೆ. ಕರ್ನಾಟಕ ಉಪ ಖನಿಜ ರಿಯಾಯಿತಿ …

Read More »

ಕಾಂಗ್ರೆಸ್ ಪ್ರಚಾರಕ್ಕೆ ನಟಿ ರಮ್ಯಾ ಎಂಟ್ರಿ

ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಲು ಸ್ಟಾರ್ ಕಾಂಪೈನರ್ ಗಳ ಲಿಸ್ಟ್ ರೆಡಿಯಾಗಿದೆ. ಈಗ ಸ್ಟಾರ್ ಕಾಂಪೈನರ್ ಗಳ ಪಟ್ಟಿಯಲ್ಲಿ ರಮ್ಯಾ ಹೆಸರೂ ಇದೆ ಎನ್ನಲಾಗಿದೆ. ನಟಿ ರಮ್ಯಾ ಈ ಹಿಂದೆ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿದ್ದವರು, ಸಂಸದರಾಗಿಯೂ ಆಯ್ಕೆಯಾಗಿದ್ದರು. ಆದರೆ ಅದಾದ ಬಳಿಕ ರಮ್ಯಾ ರಾಜಕೀಯ, ಸಿನಿಮಾದಿಂದ ದೂರವುಳಿದಿದ್ದರು. ಈ ನಡುವೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಸ್ಟಾರ್ ಪ್ರಚಾರಕಿಯಾಗಿದ್ದರು. ಇದೀಗ ರಮ್ಯಾರನ್ನು ಮಂಡ್ಯ …

Read More »

ಬಂಧನವಾದರೂ ಸಂತ್ರಸ್ತ ಬಾಲಕಿಯ ಫೋಟೊಗಳನ್ನು Instaದಿಂದ ಡಿಲೀಟ್ ಮಾಡದ ಸೋನು ಗೌಡ

ಬೆಂಗಳೂರು: ಬಾಲಕಿ ಒಬ್ಬರನ್ನು ಅಕ್ರಮವಾಗಿ ದತ್ತು ಪಡೆದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ಹರಿಬಿಟ್ಟ ಆರೋಪದಡಿ ರೀಲ್ಸ್ ಸ್ಟಾರ್ ಹಾಗೂ ಕಿರು ತೆರೆ ನಟಿ ಸೋನು ಶ್ರೀನಿವಾಸ್ ಗೌಡ ಅಲಿಯಾಸ್ ಶಾಂಭವಿ (29) ಅವರನ್ನು ನಿನ್ನೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಕ್ರಮ ದತ್ತು ಪಡೆದಿದ್ದಲ್ಲದೇ ಸಂತ್ರಸ್ತ ಬಾಲಕಿ ಜೊತೆ ರೀಲ್ಸ್ ವಿಡಿಯೊಗಳನ್ನು ಮಾಡಿ ಅವುಗಳನ್ನು ಸಾಮಾಜಿಕ ಜಾಲತಾಣಗಳಿಗೆ ಹಾಕಿರುವುದು ಅವರ ಮೇಲೆ ಇರುವ ಗಂಭೀರ ಆರೋಪ. ಆದರೆ, ಸೋನು …

Read More »

ಹಣಕ್ಕಾಗಿ ಮಗಳನ್ನು ಸೋನುಗೆ ದತ್ತು ಕೊಟ್ರಾ ಪೋಷಕರು?

ಬೆಂಗಳೂರು: ಬಾಲಕಿಯನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ಬಿಗ್​ಬಾಸ್​ ಒಟಿಟಿ ಸೀಸನ್​-1ರ ಸ್ಪರ್ಧಿ, ರೀಲ್ಸ್​ ಸ್ಟಾರ್​ ಸೋನು ಶ್ರೀನಿವಾಸ್​ ಗೌಡ ವಿರುದ್ಧ FIR ದಾಖಲಾಗಿದ್ದು, ಆಕೆಯನ್ನು ನಾಲ್ಕು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಪಡೆಯಲಾಗಿದೆ.   ಮಾರ್ಚ್​ 25ರಂದು ಸೋನು ಶ್ರೀನಿವಾಸ್​ ಗೌಡ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಬೇಕಿದೆ. ಅಲ್ಲಿಯವರೆಗೆ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದೊಯ್ದು ಪೊಲೀಸರು ತನಿಖೆ ನಡೆಸಲಿದ್ದಾರೆ. ಆದ್ದರಿಂದ ನ್ಯಾಯಾಲಯ ಅವರನ್ನು …

Read More »