ಕಾರವಾರ: ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕ್ರೂಸರ್ನಲ್ಲಿ ಇದ್ದ ಧಾರವಾಡದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ, ಅಕ್ಷಯ್ ಮಲ್ಲಣ್ಣನವರ್ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಗುರುತು ಪತ್ತೆಯಾಗಬೇಕಿದೆ. …
Read More »7 ಜಿಲ್ಲೆಯ 10 ಅಧಿಕಾರಿಗಳಿಗೆ ಸೇರಿದ 54 ಕಡೆ ಲೋಕಾ ದಾಳಿ – ಭ್ರಷ್ಟರ ಬಣ್ಣ ಬಯಲು
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಮೇಲೆ ನಡೆದ ಲೋಕಾಯುಕ್ತ ದಾಳಿ ಮುಕ್ತಾಯವಾಗಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಆಸ್ತಿ, ಚಿನ್ನ, ನಗದು ಪತ್ತೆಯಾಗಿದೆ. 7 ಜಿಲ್ಲೆಯ 10 ಅಧಿಕಾರಿಗಳಿಗೆ ಸೇರಿದಂತೆ 54 ಕಡೆ ನಡೆದಿದ್ದ ದಾಳಿಯಲ್ಲಿ ಆದಾಯಕ್ಕೂ ಮೀರಿದ ಆಸ್ತಿ ಪತ್ತೆಯಾದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. 1. ನರೇಂದ್ರ ಕುಮಾರ್ ಎಂ, ಸಹಾಯಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ವಿಭಾಗ-1, ಕೆ.ಆರ್. ಸರ್ಕಲ್, ಬೆಂಗಳೂರು ಒಟ್ಟು ಆಸ್ತಿ: 8.51 ಕೋಟಿ ರೂ. …
Read More »ಜು.10ರಿಂದ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟಿರುವ ಅನಾಥ ವಾಹನಗಳ ತೆರವು
ಬೆಂಗಳೂರು: ಜು.10ರಿಂದ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಬಿಟ್ಟಿರುವ ಅನಾಥ ವಾಹನಗಳ ತೆರವು ಹಾಗೂ ಹರಾಜು ಕಾರ್ಯ ಆರಂಭಿಸಲು ಜಿಬಿಎ ಸಜ್ಜಾಗಿದೆ. ರಸ್ತೆಗಳು, ತೆರೆದ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ದಿನಗಳಿಂದ ಅನಾಥವಾಗಿ ಬಿಡಲಾದ ವಾಹನಗಳನ್ನು 5 ನಗರ ಪಾಲಿಕೆಗಳಲ್ಲಿ ಗುರುತಿಸಿ ಸಂಚಾರಿ ಪೊಲೀಸರು ಹಾಗೂ ಜಿಬಿಎ ಜಂಟಿಯಾಗಿ ತೆರವು ಕಾರ್ಯ ನಡೆಸಲಿದೆ. ಮೊದಲು ಗುರುತಿಸಲಾದ ಅನಾಥ ವಾಹನಗಳಿಗೆ 7 ದಿನಗಳ ಕಾಲಾವಕಾಶ ನೀಡಿ, ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುವುದು. …
Read More »ಚಲಿಸುತ್ತಿದ್ದ ರೈಲಿನಲ್ಲಿ ಯಶಸ್ವಿ ಹೆರಿಗೆ – ತಾಯಿ, ಮಗುವಿನ ಪ್ರಾಣ ಉಳಿಸಿದ ಮೂವರು ಆಯುರ್ವೇದ ವೈದ್ಯೆಯರು
ಹಾಸನ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಮೂವರು ಆಯುರ್ವೇದ ವೈದ್ಯರು ಹೆರಿಗೆ ಮಾಡಿಸಿರುವ ಅಪರೂಪದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ನಗರದ ತಣ್ಣೀರುಹಳ್ಳದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಮಾನಸರೋಗ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿನಿಯರಾದ ಡಾ. ರಶ್ಮಿ ಬಿಳಗಿ, ಡಾ. ಲತಾಶ್ರೀ.ಎನ್. ಹಾಗೂ ಡಾ. ಶಾಹಿನ್.ಎಂ.ರವರು ರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಭಾಗವಹಿಸಲು ಹಾಸನದಿಂದ ವಾರಣಾಸಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ರೈಲಿನಲ್ಲಿ ಗರ್ಭಿಣಿ ಮಹಿಳೆ ಪ್ರಯಾಣಿಸುತ್ತಿದ್ದು, ಹೆರಿಗೆ ನೋವು …
Read More »ಚನ್ನಪಟ್ಟಣ ತಹಶೀಲ್ದಾರ್ಗೆ ಅಸಹಜ ಲೈಂಗಿಕ ಕಿರುಕುಳ, ವಿವಸ್ತ್ರಗೊಳಿಸಿ ಕೊಲೆ ಯತ್ನ – 10 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದವ ಅರೆಸ್ಟ್
ರಾಮನಗರ: ತಹಶೀಲ್ದಾರ್ ಅವರಿಗೆ ಸರ್ಕಾರಿ ನಿವಾಸದಲ್ಲೇ ಅಸಹಜ ಲೈಂಗಿಕ ಕಿರುಕುಳ ನೀಡಿ, ವಿವಸ್ತ್ರಗೊಳಿಸಿ ವಿಡಿಯೋ ಮಾಡಿ 10 ಲಕ್ಷ ರೂ. ಹಣಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆ ಚನ್ನಪಟ್ಟಣದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರಿಗೆ ಕಿರುಕುಳ ನೀಡಿದ್ದು, ಆರೋಪಿಯನ್ನು ಮೈಸೂರು ಮೂಲದ ಅನುಶ್ ಎಂದು ಗುರುತಿಸಲಾಗಿದೆ. ಆರೋಪಿ ಅನುಶ್ ಫೇಸ್ಬುಕ್ ಮೂಲಕ ತಹಶೀಲ್ದಾರ್ ಗಿರೀಶ್ಗೆ ಪರಿಚಯವಾಗಿದ್ದ. ಜೂನ್ 28ರಂದು ರಾತ್ರಿ ಅನುಶ್ ತನ್ನ ಸ್ನೇಹಿತರಾದ ಶೋಭರಾಜನ್ …
Read More »ಕೃಷ್ಣಾ ನದಿಗೆ 1.40 ಲಕ್ಷ ಕ್ಯೂಸೆಕ್ ನೀರಿನ ಹರಿವು; ಕುಡಚಿ-ಉಗಾರ ಸೇತುವೆ ಮುಳುಗಡೆ ಹಂತಕ್ಕೆ
ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕೃಷ್ಣಾ ನದಿಗೆ ನೀರಿನ ಒಳಹರಿವು ಹೆಚ್ಚುತ್ತಿದ್ದು, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ-ಉಗಾರಖುರ್ದ್ ಸಂಪರ್ಕಿಸುವ ಸೇತುವೆ ಮುಳುಗಡೆ ಹಂತಕ್ಕೆ ತಲುಪಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರವನ್ನು ಸಂಪರ್ಕಿಸುವ ಪ್ರಮುಖ ಸೇತುವೆಯಾಗಿರುವ ಕುಡಚಿ ಸೇತುವೆ ಮೇಲೆ ಈಗಾಗಲೇ ಸುಮಾರು ಒಂದು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ನಿತ್ಯ ನೂರಾರು ಬಸ್ ಹಾಗೂ ವಾಹನಗಳು ಸಂಚರಿಸುವ ಈ ಮಾರ್ಗದಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿದರೆ ವಾಹನಗಳ ಓಡಾಟ …
Read More »ಹಿರಿಯೂರು ಉಪಚುನಾವಣೆಗೆ ಸ್ಪರ್ಧೆ ಮಾಡಲ್ಲ – ಕುಮಾರಸ್ವಾಮಿ ಸ್ಪಷ್ಟನೆ
ಬೆಂಗಳೂರು: ಹಿರಿಯೂರು ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ ಮಾತನಾಡಿದ ಅವರು, ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಬೇಕು ಅಂತಿದೆ. ನಾನು ಹಿರಿಯೂರು ಉಪಚುನಾವಣೆಗೆ ನಿಲ್ಲೋದಿಲ್ಲ. ಉಪಚುನಾವಣೆಗೆ ನಿಲ್ಲೋದೇ ನನ್ನ ಕೆಲಸ ಅಲ್ಲ. ಕೇಂದ್ರದಲ್ಲಿ ಮಂತ್ರಿ ಆಗಿದ್ದೇನೆ. ಆ ಕೆಲಸ ಮಾಡಿಕೊಂಡು ಹೋಗ್ತಿನಿ.ನಾವು-ಬಿಜೆಪಿ ಒಟ್ಟಾಗಿ ಹೋಗ್ತೀವಿ. ಈಗಾಗಲೇ ಬಿಜೆಪಿ ಹೈಕಮಾಂಡ್ ಬಳಿ ರಿಕ್ವೆಸ್ಟ್ ಮಾಡಿದ್ದೇನೆ. ರಾಜ್ಯದಲ್ಲಿ ಇರುವ ಈ ಕೆಟ್ಟ …
Read More »ಭಾರೀ ಮಳೆಗೆ ಕೋಝಿಕ್ಕೋಡ್ ರೈಲು ನಿಲ್ದಾಣದ 137 ವರ್ಷ ಹಳೆಯ ಗಡಿಯಾರ ಗೋಪುರ ಕುಸಿತ
ತಿರುವನಂತಪುರಂ: ಐತಿಹಾಸಿಕ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಗುರುವಾರ ನವೀಕರಣ ಕಾರ್ಯ ನಡೆಯುತ್ತಿರುವಾಗ ಶತಮಾನಗಳಷ್ಟು ಹಳೆಯದಾದ ಗಡಿಯಾರ ಗೋಪುರ ಕುಸಿದು ಬಿದ್ದಿದ್ದು, ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೋಝಿಕ್ಕೋಡ್ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 2 ರಲ್ಲಿರುವ 137 ವರ್ಷದ ಹಳೆಯ ಗಡಿಯಾರ ಗೋಪುರದ ಇಂದು ಬೆಳಗ್ಗೆ 11:10 ಗಂಟೆಗೆ ಕುಸಿದಿದೆ. ಪರಿಣಾಮ ಹಲವು ರೈಲು ಸೇವೆಗಳ ವೇಳಾಪಟ್ಟಿ ಬದಲಾಗಿದೆ. ಹಳೆಯ ರಚನೆಯು, ನಿಲ್ದಾಣದ ನವೀಕರಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿ ಕಾರ್ಯ …
Read More »ಬೆಳಗಾವಿ – ರಾಯಚೂರ ಚತುಷ್ಪಥ ರಸ್ತೆಯ ಕಾಮಗಾರಿಗಾಗಿ ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಡಿ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿದ ಸಂಸದ ಶೆಟ್ಟರ
ಬೆಳಗಾವಿ (ಶೆಗಣಮಟ್ಟಿ)- ಹುನಗುಂದ-ರಾಯಚೂರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಚತುಷ್ಪಥ ರಸ್ತೆಯ ಕಾಮಗಾರಿಗನುಗುಣವಾಗಿ, ಈ ಮಾರ್ಗದಲ್ಲಿ ಸಂಪರ್ಕ ರಸ್ತೆ ನಿರ್ಮಾಣದ ಕೊರತೆಯಿಂದಾಗಿ ರೈತರು ಹಾಗೂ ಸಾರ್ವಜನಿಕರು ದಿನನಿತ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳು ಶ್ರೀ ಜಗದೀಶ ಶೆಟ್ಟರ, ಇವರು ಬೈಲಹೊಂಗಲ ತಾಲೂಕಿನ ವ್ಯಾಪ್ತಿಯಡಿ ಇರುವ ಮರಿಕಟ್ಟಿ ಕ್ರಾಸ್, ನಾಗನೂರ, ಮತ್ತು ಸವದತ್ತಿ ತಾಲೂಕಿನ ಇಂಚಲ್, ಮರಕುಂಬಿ ಗ್ರಾಮಗಳಿಗೆ …
Read More »ಪಂಡರಪುರ ದಿಂಡಿ ಪಾದಯಾತ್ರೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಆಷಾಢ ಏಕಾದಶಿ ಅಂಗವಾಗಿ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಗುರುವಾರ ಆಯೋಜಿಸಲಾದ ಶ್ರೀ ವಿಠ್ಠಲ–ರುಕ್ಮಾಯಿ ಪಂಡರಪುರ ದಿಂಡಿ ಪಾದಯಾತ್ರೆಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿ, ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಶುಭಾಶಯ ಕೋರಿದರು. ಶ್ರೀ ವಿಠ್ಠಲ ಮತ್ತು ರುಕ್ಮಾಯಿ ದೇವಿಯ ಭಜನೆ, ನಾಮಸ್ಮರಣೆ ಹಾಗೂ ಭಕ್ತಿಗೀತೆಗಳ ನಡುವೆ ಆರಂಭವಾದ ಪಾದಯಾತ್ರೆಯಲ್ಲಿ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಸಂಪ್ರದಾಯಬದ್ಧ ವೇಷಭೂಷಣ ಧರಿಸಿದ್ದ …
Read More »
Laxmi News 24×7