Breaking News

ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್

ಬೆಳಗಾವಿ: ಜನಪರ ಸೇವೆ ಮಾಡುತ್ತಿರುವ ಸರ್ವಲೋಕಾ ಸೇವಾ ಫೌಂಡೇಶನ್ ಸೇವೆಯನ್ನು ಪರಿಗಣಿಸಿ ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ ಅವರಿಗೆ ಸುಸಜ್ಜಿತವಾದ ಅಂಬ್ಯುಲೆನ್ಸ್ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೀರೇಶ್ ಬಸಯ್ಯ ಹಿರೇಮಠ, ಬೆಲ್ ಸಿಟಿ ಡೈಗ್ನೊಸ್ಟಿಸ್ಟಿಕ್ ಸೆಂಟರ್ ನವರು ಅಂಬ್ಯುಲೆನ್ಸ್ ಕೊಡುಗೆ ನೀಡಿದ್ದು, ನಮಗೆ ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಇವರು ಕೊಟ್ಟಿರುವ …

Read More »

ಕಾಗವಾಡದ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸೌರಕ್ಷಣೆ ನೀಡಲು ಪೊಲೀಸರಿಗೆ ಮನವಿ.

ಕಾಗವಾಡದ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೇ ವೈದ್ಯರು ಮತ್ತು ಸಿಬ್ಬಂದಿ ವರ್ಗ ಸೌರಕ್ಷಣೆ ನೀಡಲು ಪೊಲೀಸರಿಗೆ ಮನವಿ. ಕಾಗವಾಡ ತಾಲೂಕ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಉಪಚಾರ ಪಡೆಯಲು ಆಸ್ಪತ್ರೆಗೆ ಆಗಮಿಸಿದ ಕೆಲವರು ಬಯದು, ಕಿರ್ಕೊಳ ನೀಡುತ್ತಿದ್ದರಿಂದ ಎಲ್ಲಾ ಸಿಬ್ಬಂದಿ ವರ್ಗ ಹತಾಶಗೊಂಡ ಮೇಲಾಧಿಕಾರಿಗಳಿಗೆ ನಮಗೆ ಸೌರಕ್ಷಣೆ ನೀಡಿರಿ ಎಂದು ಕೇಳಿಕೊಂಡು ಬೆಳಗ್ಗೆ ಕೆಲ ಕಾಲ ಕೆಲಸ ಸ್ಥಗಿತಗೊಳಿಸಿದರು. ಸ್ಥಳಕ್ಕೆ ತಾಲೂಕ ವೈದ್ಯಾಧಿಕಾರಿ ಡಾ. ಬಸಗೌಡಾ ಕಾಗೆ, ಕಾಗವಾಡ ಪಿಎಸ್‌ಐ ರಾಘವೇಂದ್ರ …

Read More »

ಸ್ವಲ್ಪ ಮಾತನಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತಾಡಿ,:H.D.K.

ಬೆಂಗಳೂರು: ಸ್ವಲ ಮಾತಾಡಬೇಕಾದರೆ ಹದ್ದುಬಸ್ತಿನಲ್ಲಿ ಮಾತನಾಡಿ. ನನ್ನ ಬಗ್ಗೆ ನನ್ನ ಪಕ್ಷದ ಬಗ್ಗೆ ಚರ್ಚೆ ಮಾಡುವುದಕ್ಕೆ ನೀವು ಯಾರೂ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು. ಆರ್​ಎಸ್​ಎಸ್​ನ ಟೀಕೆ ಮಾಡಿ ಅಧಿಕಾರಕ್ಕಾಗಿ ಬಿಜೆಪಿಗೆ ಬೆಂಬಲ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಹೌದು ಟೀಕೆ ಮಾಡಿದ್ದೇನೆ. ಆರ್​ಎಸ್​ಎಸ್ ಅವರ ಕೆಲವು ವಿಷಯಗಳು, ಅವರ ನಡುವಳಿಕೆ ಬಗ್ಗೆ ಟೀಕೆ ಮಾಡಿದ್ದೇನೆ. …

Read More »

ಮೆಗ್ಗಾನ್ ಭೋಧನಾಸ್ಪತ್ರೆಯಲ್ಲಿ ಇ- ಫಾರ್ಮಸಿ ಅಳವಡಿಕೆ

ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೆಗ್ಗಾನ್ ಭೋದಾನಾಸ್ಪತ್ರೆಯನ್ನು ಮಧ್ಯ ಕರ್ನಾಟಕದ ಸಂಜೀವಿನಿ ಎಂದು ಕರೆಯಲಾಗುತ್ತಿದೆ. ಈ ಭೋಧನಾಸ್ಪತ್ರೆಯಲ್ಲಿ ಹೊಸದಾಗಿ ಇ- ಫಾರ್ಮಸ್ಸಿ ಜಾರಿಗೆ ತರಲಾಗಿದೆ. ಇದರಿಂದ ಆಸ್ಪತ್ರೆಯಲ್ಲಿನ ಔಷಧಗಳ ಸೋರಿಕೆ, ಹೊರ ರೋಗಿಗಳಿಗೆ ಹೊರಗಡೆ ಔಷಧಗಳನ್ನು ಬರೆದುಕೊಡುವುದಕ್ಕೆ ತಡೆ ಹಾಕಿದಂತೆ ಆಗಿದೆ. ಅಲ್ಲದೇ ಹೊರ ರೋಗಿಗಳಿಗೆ ಸುಲಭವಾಗಿ ಔಷಧ ಲಭ್ಯವಾಗುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾಸ್ಪತ್ರೆಯಲ್ಲಿ ನಿತ್ಯ ಎರಡೂವರೆ ಸಾವಿರಕ್ಕೂ ಅಧಿಕ ಹೊರ ರೋಗಿಗಳು ಬರುತ್ತಾರೆ. ಇಲ್ಲಿಗೆ ಶಿವಮೊಗ್ಗ ಸೇರಿದಂತೆ …

Read More »

30 ನಿಮಿಷಗಳಲ್ಲಿ ಅಪಹರಣಕಾರಳಿಂದ ಆರು ತಿಂಗಳ ಮಗು ರಕ್ಷಣೆ!

ಹುಬ್ಬಳ್ಳಿ: ತ್ವರಿತ ಹಾಗೂ ಸಂಘಟಿತ ಕಾರ್ಯಾಚರಣೆ ಮೂಲಕ ನೈಋತ್ಯ ರೈಲ್ವೆ ವ್ಯಾಪ್ತಿಯ ರೈಲ್ವೆ ಸಂರಕ್ಷಣಾ ಪಡೆ ಮೈಸೂರು, ಆರು ತಿಂಗಳ ಗಂಡು ಮಗುವನ್ನು ಅಪಹರಣಕಾರಳಿಂದ ಕೇವಲ 30 ನಿಮಿಷಗಳಲ್ಲಿ ರಕ್ಷಿಸಿ ಪೋಷಕರಿಗೆ ಒಪ್ಪಿಸಿದೆ. ಅಕ್ಟೋಬರ್ 22, 2025 ರಂದು ಬೆಳಗಿನ ಜಾವ 5:20ರ ಸುಮಾರಿಗೆ, ಆರ್.ಪಿ.ಎಫ್/ಮೈಸೂರು ಕಾನ್ಸ್​ಟೇಬಲ್​ ಸಿ.ಎಂ. ನಾಗರಾಜು ಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಮಗು ನಾಪತ್ತೆಯಾದ ಬಗ್ಗೆ ತಿಳಿಸಿ ಅಳುತ್ತಿದ್ದ ಮಹಿಳೆಯನ್ನು ಗಮನಿಸಿದರು. ತಕ್ಷಣ …

Read More »

ಮದುವೆ ಮಕ್ಕಳಾಟವಲ್ಲ, ರಾಜಿ, ಹೊಂದಾಣಿಕೆ ಇರಬೇಕು: ಹೈಕೋರ್ಟ್

ಬೆಂಗಳೂರು: ಮದುವೆ ಎಂಬುದು ಕೇವಲ ಮಕ್ಕಳಾಟವಲ್ಲ ಎಂದು ಒತ್ತಿ ಹೇಳಿರುವ ಹೈಕೋರ್ಟ್​, ವೈವಾಹಿಕ ಜೀವನದಲ್ಲಿ ಪತಿ – ಪತ್ನಿ ಒಬ್ಬರಿಗೊಬ್ಬರು ರಾಜಿ ಮತ್ತು ಹೊಂದಾಣಿಕೆ ಮಾಡಿಕೊಂಡು ಜೀವನ ಮುನ್ನಡೆಸಬೇಕಾಗುತ್ತದೆ ಎಂದು ತಿಳಿಸಿದೆ. ಪತ್ನಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್​​ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಉಮೇಶ್​​ ಎಂ. ಅಡಿಗ …

Read More »

ಸಿಎಂ ಬದಲಾವಣೆ ಚರ್ಚೆ: ಹೈಕಮಾಂಡ್​​ ನಿರ್ಧಾರ ಅಂತಿಮ:ಡಾ.ಜಿ.ಪರಮೇಶ್ವರ್

ಬೆಂಗಳೂರು: “ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್​​ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್​ಪಿ ಸಭೆ ಕರೆಯುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, “ಹೈಕಮಾಂಡ್​ ಸಂದರ್ಭ ಬಂದಾಗ ಸಿಎಲ್​ಪಿ ಕರೆಯುತ್ತಾರೆ. ಆಗ ಶಾಸಕರ ಅಭಿಪ್ರಾಯ ಪಡೆಯುತ್ತಾರೆ. ವೀಕ್ಷಕರು ಹೈಕಮಾಂಡ್​ಗೆ ವರದಿ ಕೊಡುತ್ತಾರೆ. ಆ ನಂತರ ಯಾರು?, ಏನು? ಎಂಬ ಘೋಷಣೆ ಆಗುತ್ತದೆ. ಇದು ನಮ್ಮಲ್ಲಿರುವ ಪದ್ಧತಿ. ಇದನ್ನು ಶಾರ್ಟ್ ಕಟ್ ಆಗಿ ಹೇಗೆ …

Read More »

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಆದೇಶ ಪಾಲಿಸದಿದ್ರೆ ಕಠಿಣ ಕ್ರಮ- ಪ್ರಲ್ಹಾದ್ ಜೋಶಿ

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ; ಆದೇಶ ಪಾಲಿಸದಿದ್ರೆ ಕಠಿಣ ಕ್ರಮ- ಪ್ರಲ್ಹಾದ್ ಜೋಶಿ ನವದೆಹಲಿ/ಹುಬ್ಬಳ್ಳಿ: ಖಾದ್ಯ ತೈಲ ವಲಯದಲ್ಲಿ ಹೆಚ್ಚಿನ ನಿಯಂತ್ರಣ, ಮೇಲ್ವಿಚಾರಣೆ ಮತ್ತು ಪಾರದರ್ಶಕತೆಗಾಗಿ ಕೇಂದ್ರ ಸರ್ಕಾರ 2011ರ VOPPA ಆದೇಶಕ್ಕೆ ತಿದ್ದುಪಡಿ ತಂದಿದ್ದು, ಪಾಲಿಸದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು. ತರಕಾರಿ ತೈಲ ಉತ್ಪನ್ನಗಳು, ಉತ್ಪಾದನೆ ಮತ್ತು ಲಭ್ಯತೆ (ನಿಯಂತ್ರಣ) ಆದೇಶ-2011 (VOPPA)ಕ್ಕೆ …

Read More »

ಸೂರ್ಯನಿಗೂ ಚಂದ್ರನಿಗೂ ಮತ್ತು ಅಮಾವಾಸ್ಯೆ – ಹುಣ್ಣಿಮೆಗೂ ವ್ಯತ್ಯಾಸ ತಿಳಿದು ಮಾತನಾಡಲಿ: ತೇಜಸ್ವಿ ಸೂರ್ಯ

ಬೆಂಗಳೂರು: “ಸೂರ್ಯನಿಗೂ ಚಂದ್ರನಿಗೂ, ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ತಿಳಿದುಕೊಂಡು ಸಿಎಂ ಮುಂದೆ ಆ ಥರ ಹೇಳಿಕೆ ಕೊಡಲಿ” ಎಂದು ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಹಲವು ಬಾರಿ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಅವರ ಸ್ಥಾನಕ್ಕೆ ಶೋಭೆ ತರದ ಹಾಗೆ ವೈಯಕ್ತಿಕ ಟೀಕೆ ಮಾಡ್ತಾರೆ. ಹಿಂದೆ ಚುನಾವಣೆ ವೇಳೆಯೂ ಟೀಕಿಸಿದ್ರು. ಅವರು ಹಿರಿಯರು, ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ …

Read More »

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲಿಗೆ ಬೀಗಮುದ್ರೆ ಈ ವರ್ಷ 25 ಲಕ್ಷಕ್ಕೂ ಅಧಿಕ ಭಕ್ತರಿಂದ ದರ್ಶನ

ಹಾಸನ: ಕಳೆದ 15 ದಿನಗಳಿಂದ ದರ್ಶನ ನೀಡಿದ ಹಾಸನದ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿಯ ಬಾಗಿಲನ್ನು ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಮ್ಮುಖದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಗರ್ಭಗುಡಿಯ ಬಾಗಿಲಿಗೆ ಬೀಗಮುದ್ರೆ ಹಾಕಲಾಯಿತು. ಈ ಕ್ಷಣಕ್ಕೆ ಸಾಕ್ಷಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ, ಶಾಸಕರುಗಳಾದ ಕೆ.ಎಂ. ಶಿವಲಿಂಗೇಗೌಡ, ಸಿಮೆಂಟ್ ಮಂಜು, ಸ್ವರೂಪ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ಮಾಜಿ …

Read More »