ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದ ಶ್ರೀ ಹನುಮಂತ ದೇವರ ಹಾಗೂ ಶ್ರೀ ಹಾಲಸಿದ್ದೇಶ್ವರ ದೇವರ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆ
ಮೂಡಲಗಿ- ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಿದ್ದರಿಂದ ಉಭಯ …
Read More »ಹೆಂಡ್ತಿ ರೀಲ್ಸ್ ಹುಚ್ಚಾಟ ನೋಡಲಾಗದೇ ಹೊಡೆದು ಕೊಂದ ಗಂಡ
ಉಡುಪಿ, (ಆಗಸ್ಟ್ 23): ಸೋಶಿಯಲ್ ಮೀಡಿಯಾ ಮಿತವಾಗಿ ಬಳಸಿದ್ರೆ ಒಳ್ಳೆಯದು. ಅದರ ಬಳಕೆ ಅತಿಯಾದ್ರೆ ಸಂಸಾರದಲ್ಲಿ ಯಾವ ರೀತಿ ವಿರಸ ಮೂಡಿ, ಅದು ಮಹಾ ಅನಾಹುತಕ್ಕೆ ಕಾರಣ ಆಗುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಉಡುಪಿಯಲ್ಲಿ ಗಂಡನೊಬ್ಬ ಹೆಂಡತಿಯನ್ನು ಹೊಡೆದು ಕೊಂದಿದ್ದಾನೆ. ಕಾರಣ ಆಕೆಯ ಸೋಶಿಯಲ್ ಮೀಡಿಯಾ ಹುಚ್ಚು. ಅದರಲ್ಲೂ ಇನ್ಸ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಆಕೆ ಹೆಚ್ಚು ಸಮಯ ಕಳೆಯುತ್ತಿದ್ದಳು ಎನ್ನುವ ಕ್ಷುಲ್ಲಕ ಕಾರಣ. ಇನ್ಸ್ಸ್ಟಾಗ್ರಾಮ್ನಲ್ಲಿ ಕೇವಲ 16 ಫಾಲೋವರ್ಸ್ ಹೊಂದಿದ್ದ ಪತ್ನಿ ರೀಲ್ಸ್ …
Read More »ಕಲ್ಲಿನ ಪರ್ಸಿಗಳನ್ನ ತುಂಬಿದ್ದ ಲಾರಿ ಪಲ್ಟಿ
ಕಲಬುರಗಿ, ಆ.23: ಕಲ್ಲಿನ ಪರ್ಸಿಗಳನ್ನ(ನೆಲಹಾಸು) ತುಂಬಿದ್ದ ಲಾರಿ ಪಲ್ಟಿಯಾಗಿದ್ದು, 13 ಜನರಿಗೆ ಗಂಭೀರ ಗಾಯವಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ(Chincholi) ತಾಲ್ಲೂಕಿನ ಮಿರಿಯಾಣ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರ ಗಾಯಗೊಂಡವರನ್ನ ಕಲಬುರಗಿಗೆ ರವಾನೆ ಮಾಡಲಾಗಿದೆ. ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾಗಿದೆ. ಈ ಕುರಿತು ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ರಾಜ್ಯ ಸರ್ಕಾರದಿಂದ ಬ್ಲ್ಯಾಕ್ ಮೇಲ್ ತಂತ್ರ: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಹಳೆಯ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಲ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಮನೋಭಾವ ಕಾಂಗ್ರೆಸ್ನದ್ದಾಗಿದೆ ಎಂದು ಹರಿಹಾಯ್ದರು. ಕುಮಾರಸ್ವಾಮಿ ವಿರುದ್ಧ ಗಣಿ ಪರವಾನಿಗೆ ಪ್ರಕರಣ 2008ರದ್ದು. …
Read More »BSY ವಿರುದ್ದ ದಾಖಲೆ ಸಂಗ್ರಹಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ: ವಿಜಯೇಂದ್ರ ಆರೋಪ
ಹುಬ್ಬಳ್ಳಿ: ಸಿಎಂ ತಮ್ಮ ಮೇಲಿನ ಮುಡಾ ಹಗರಣದಿಂದ ನುಣುಚಿಕೊಳ್ಳಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ 15ಕ್ಕೂ ಹೆಚ್ಚು ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂತಹ ಯಾವುದೇ ಗೊಡ್ಡು ಬೆದರಿಕೆಗಳಿಗೆ ನಾವು ಹೆದರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹರಿಹಾಯ್ದರು. ಶುಕ್ರವಾರ ಶಾಸಕ ಅರವಿಂದ ಬೆಲ್ಲದ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಇವರು ದಾಖಲೆಗಳಿದ್ದರೆ ಬಿಡುಗಡೆ …
Read More »ಮನೆಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ**
ಮನೆಯಲ್ಲಿ ಸಿಲಿಂಡರ್ ಸ್ಪೋಟ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ** ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದರೆ, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ದುರ್ದೈವಿ ಮಹಾರಾಷ್ಟ್ರದ ಬೀಡ್ ಮೂಲದ ಸೂರ್ಯಕಾಂತ ಸೆಳಕೆ (55) ಎಂಬ ಕೂಲಿ ಕಾರ್ಮಿಕರಾಗಿದ್ದು, ಸಿಲಿಂಡರ್ ಸ್ಪೋಟದ ತೀವ್ರತೆಗೆ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಮತ್ತೋರ್ವ ಕಾರ್ಮಿಕ ಜ್ಞಾನೋದಯಗೆ ಗಂಭೀರ ಗಾಯಗಳಾಗಿದ್ದು, …
Read More »ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ಮುದಿಗೂಬೆ,
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ಮುದಿಗೂಬೆ ಅರೆಸ್ಟ್ ! ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಅಸೀಫ್ ಭಾಗವಾನ್ ಎಂಬ ವೃದ್ಧ, 10 ರೂ. ಆಮಿಷ ತೋರಿಸಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ. ಆರೋಪಿಯು ಬಾಲಕಿಯ ಅಂಗಾಂಗಗಳನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ ಘಟನೆ ನಂತರ, …
Read More »ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್
ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್ ಸರ್ವೆ’ “ಡಿಮಾಂಡ್ ಸರ್ವೆ” ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ಏರ್ಪೋರ್ಟ್ ಅಧಿಕಾರಿಗಳ ಸಭೆ ನಡೆಸಿದ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಇವರು ಬೆಳಗಾವಿ ಜಿಲ್ಲಾಧಿಕಾರಿಗಳು ದಿನಾಂಕ 21-08-2024 ರಂದು ನಡೆಸಿದ …
Read More »11 ದಿನಗಳ ಮುಷ್ಕರ ಹಿಂಪಡೆದ ಭಾರತೀಯ ವೈದ್ಯಕೀಯ ಸಂಘ
ನವದೆಹಲಿ: ಅಖಿಲ ಭಾರತ ವೈದ್ಯಕೀಯ ಸಂಘದ ಒಕ್ಕೂಟವು 11 ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಹಿಂತೆಗೆದುಕೊಂಡಿದೆ. ಕೋಲ್ಕತ್ತಾದಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕರೆ ನೀಡಲಾಗಿದ್ದ 11 ದಿನಗಳ ಮುಷ್ಕರವನ್ನು ಸುಪ್ರೀಂ ಕೋರ್ಟ್ನ ಸಕಾರಾತ್ಮಕ ನಿರ್ದೇಶನಗಳನ್ನು ಅನುಸರಿಸಿ ಕೊನೆಗೊಳಿಸಲು ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಶನ್(ಎಫ್ಐಎಂಎ) ಗುರುವಾರ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಪ್ರತಿಭಟನಾನಿರತ ವೈದ್ಯರಿಗೆ ಕೆಲಸವನ್ನು ಪುನರಾರಂಭಿಸಲು ಕೇಳಿಕೊಂಡಿತು. ಯಾವುದೇ ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿತು.
Read More »