ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರ ಭೂಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳುವ ಕುರಿತಂತೆ ಒಪ್ಪಂದದ ಐತೀರ್ಪು ರಚಿಸಲು ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಲಮಟ್ಟಿ ಜಲಾಶಯ ಎತ್ತರವನ್ನು 519.60 ಮೀಟರ್ನಿಂದ 524.256 ಮೀಟರ್ವರೆಗೆ ಎತ್ತರಿಸಲು ಅನುಮತಿ ನೀಡಲಾಗಿದೆ. ಇದರಿಂದ ಹಿನ್ನೀರಿನಲ್ಲಿ 75,563 ಎಕರೆ ಭೂಮಿ ಮುಳುಗಡೆಯಾಗಲಿದೆ. ಈ ಭೂಮಿಗೆ ಒಂದೇ ಹಂತದಲ್ಲಿ ಒಪ್ಪಂದದ ದರ ಅಥವಾ ಭೂ ಖರೀದಿ ಮೂಲಕ ಭೂಸ್ವಾಧೀನ ಮಾಡಲು …
Read More »ಶಾಸಕ ಕೆ.ಸಿ.ವಿರೇಂದ್ರ ಪಪ್ಪಿಗೆ ಸೇರಿದ 50.33 ಕೋಟಿ ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿ ವಶ: ಇಡಿ
ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮುಂದುವರಿಸಿದ್ದಾರೆ. ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ ಪಪ್ಪಿಗೆ ಸೇರಿ ಎರಡು ಲಾಕರ್ಗಳನ್ನು ಜಪ್ತಿ ಮಾಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಿದ್ದಾರೆ. ಈ ಹಿಂದೆ 150 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು ಮತ್ತು 21 ಕೆ.ಜಿ. ಚಿನ್ನಗಳನ್ನು …
Read More »ಚಿಕ್ಕೋಡಿ ಆಸ್ತಿ ವಿವಾದ, ಗಂಡ ಓಡಿಸುತ್ತಿದ್ದ ಕಾರಿಗೆ ಬೆಂಕಿ ಇಟ್ಟ ಪತ್ನಿ
ಚಿಕ್ಕೋಡಿ: ಆಸ್ತಿ ವಿವಾದ ಹಿನ್ನೆಲೆ ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಪತ್ನಿ ಬೆಂಕಿ ಇಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೋಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವನಗೌಡ ಪಾಟೀಲ್ ಮತ್ತು ಪತ್ನಿ ಸಾವಿತ್ರಿ ಪಾಟೀಲ್ ನಡುವೆ ಕೌಟುಂಬಿಕ ಕಲಹ ಇತ್ತು. ಒಂದೇ ಮನೆಯಲ್ಲಿದ್ರೂ ಆಸ್ತಿ ಹಣಕ್ಕಾಗಿ ಗಂಡ ಹೆಂಡತಿ ಕಿತ್ತಾಟ ನಡೆಸುತಿದ್ರು. ಇಂದು ಇಬ್ಬರ ನಡುವಿನ ಕಿತ್ತಾಟ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿಗೆ ಪತ್ನಿ ಗಂಡನ ಕಾರಿಗೆ ಬೆಂಕಿ ಇಟ್ಟಿದ್ದಾಳೆ. ಪೆಟ್ರೋಲ್ …
Read More »ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ
ಕತ್ತಿ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ : ಹುಕ್ಕೇರಿ ವಿದ್ಯುತ್ ಸಂಘದ ಚುನಾವಣೆ ಹಾಗೂ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಮ್ಮ ವಿರುದ್ಧ ರಮೇಶ್ ಕತ್ತಿ ಸಾಕಷ್ಟು ಅಪಪ್ರಚಾರ ಮಾಡಿದ್ದಾರೆ. ನಾವು ಆ ಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಯಾವ ಹೋರಾಟ ಮಾಡಬೇಕು ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ. ದೀಪಾವಳಿ ಹಬ್ಬ ಮುಗಿದ ನಂತರ ಕಾನೂನು ಹೋರಾಟದ ಮುಖಾಂತರ ಉತ್ತರಿಸುತ್ತೇನೆ ಎಂದು ಹರಿಹಾಯ್ದರು.
Read More »ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನ ಭೇಟಿ
ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಹಿನ್ನೆಲೆ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ನೂತನ ಅಧ್ಯಕ್ಷ ರಾಜೇಂದ್ರ ಪಾಟೀಲ
Read More »ಬಿಗ್ ಬಾಸ್ ದೊಡ್ಡ ಫ್ಯಾಕ್ಟರಿ ಏನಲ್ಲ, ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ಬೆಂಗಳೂರು: ಬಿಗ್ ಬಾಸ್ ದೊಡ್ಡ ಫ್ಯಾಕ್ಟರಿ ಏನಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಬಗೆಹರಿಸಿಕೊಳ್ಳಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಬಿಗ್ ಬಾಸ್ ಬಗ್ಗೆ ರಾತ್ರಿನೇ ಡಿಸಿಗೆ ಫೋನ್ ಮಾಡಿ ಅವರಿಗೊಂದು ಅವಕಾಶ ಕೊಡಿ ಎಂದು ಹೇಳಿದ್ದೇನೆ. ನಿನ್ನೆ ಯಾರೋ ಬಂದಿದ್ರು, ಅವರಿಗೂ ಅದನ್ನೇ ಹೇಳಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮದ ಪ್ರಕಾರವೇ ಆಗಬೇಕಿದ್ದು, ಅದಕ್ಕೆ ಮಾರ್ಗಸೂಚಿ ಇದೆ ಎಂದರು. ಸಿಎಂ ಡಿನ್ನರ್ ಮೀಟಿಂಗ್ …
Read More »ಪತ್ನಿ ಕೊಂದು ಎರಡು ರಾತ್ರಿ ಶವದ ಜೊತೆಗೆ ಕಳೆದ ಪತಿ: ವಾಸನೆ ಬರುತ್ತಿದ್ದಂತೆ ಆರೋಪಿ ಪರಾರಿ, ಕೊಲೆ ಕೇಸ್ ದಾಖಲು
ಬೆಳಗಾವಿ : ಪತ್ನಿಯನ್ನ ಕೊಲೆ ಮಾಡಿದ ಪತಿರಾಯ ಎರಡು ದಿನಗಳ ಕಾಲ ಶವದ ಜೊತೆಗೆ ಕಳೆದು ದುರ್ವಾಸನೆ ಬರುತ್ತಿದ್ದಂತೆ ಊರು ಬಿಟ್ಟಿ ಪರಾರಿಯಾಗಿರುವ ಘಟನೆ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸಾಕ್ಷಿ ಕಂಬಾರ ಕೊಲೆಯಾದ ದುರ್ದೈವಿ. ಆಕಾಶ ಕಂಬಾರ ಕೊಲೆ ಆರೋಪಿ. ಮೇ. 24ರಂದು ಅದ್ದೂರಿಯಾಗಿ ಆಕಾಶ್ ಸಾಕ್ಷಿ ಅವರನ್ನು ಮದುವೆಯಾಗಿದ್ದ. ಹುಬ್ಬಳ್ಳಿಯಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಕಾಶ ಒಂದು ಲಕ್ಷಕ್ಕಿಂತ ಹೆಚ್ಚು ಸಂಬಳ ಇದೆ ಅಂತಾ ಸುಳ್ಳು …
Read More »ಅನ್ನಭಾಗ್ಯ ಯೋಜನೆಯ 5 ಕೆಜಿ ಅಕ್ಕಿಗೆ ಕತ್ತರಿ: ಇಂದಿರಾ ಆಹಾರ ಕಿಟ್ ಭಾಗ್ಯ,
ಬೆಂಗಳೂರು, ಅಕ್ಟೋಬರ್ 09: ಉಚಿತ ಅನ್ನಭಾಗ್ಯ ಯೋಜನೆ ಮೂಲಕ ಮನೆಮಾತಾಗಿರುವ ಕರ್ನಾಟಕ ಸರ್ಕಾರ ಇದೀಗ ಅನ್ನಭಾಗ್ಯ ಯೋಜನೆಯಡಿ (anna bhagya) ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಇಂದಿರಾ ಕಿಟ್ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಇಂದಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆ ಮೂಲಕ ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ ಧಾನ್ಯಗಳ ವಿತರಣೆ ಮಾಡಲಾಗುತ್ತದೆ.ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 5 ಕೆಜೆ …
Read More »ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?
ಬೆಂಗಳೂರು, ಅಕ್ಟೋಬರ್ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ ಟೀಕೆಗೆ ಗ್ರಾಸವಾಗಿತ್ತು. ಕೈದಿಗಳಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದವು. ಈ ವಿಷಯ ಮಾಸುವ ಮುನ್ನವೇ ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ದುಡ್ಡು ಕೊಟ್ಟರೆ ಜೈಲಿನಲ್ಲಿ ಏನು ಬೇಕಾದರೂ ಸಿಗುತ್ತೆ ಎಂಬ ವಿಚಾರಕ್ಕೆ ಮತ್ತಷ್ಟು ಸಾಕ್ಷಿಗಳು ಸಿಕ್ಕಿದ್ದು, ಫೈವ್ ಸ್ಟಾರ್ ಹೋಟೆಲ್ ರೀತಿ ವಿಚಾರಣಾಧೀನ ಕೈದಿಗಳಿಗೆ ರಾಜಾತಿಥ್ಯದ …
Read More »ಕೋರ್ಟ್ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೆ ಆರೋಪಿ ಸಾವು
ಬೆಂಗಳೂರು, ಅಕ್ಟೋಬರ್ 09: ವಿಚಾರಣೆಗೆ ಕರೆತಂದಿದ್ದ ವೇಳೆ ನ್ಯಾಯಾಲಯದ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪೋಕ್ಸೋ ಪ್ರಕರಣದ ಆರೋಪಿ ಸಾವನ್ನಪ್ಪಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಮೃತ ವ್ಯಕ್ತಿಯನ್ನು ಗೌತಮ್ (35) ಎಂದು ಗುರುತಿಸಲಾಗಿದೆ. ನಗರದ ಸಿಟಿ ಸಿವಿಲ್ ಕೋರ್ಟ್ಗೆ ಆರೋಪಿಯನ್ನು ಪ್ರಕರಣದ ವಿಚಾರಣೆಗೆಂದು ಪೊಲೀಸರು ಕರೆತಂದಿದ್ದರು. ಈ ವೇಳೆ ಮಹಡಿಯಿಂದ ಹಾರಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸಿಲ್ಲ.ಕಳೆದ ಏಪ್ರಿಲ್ನಲ್ಲಿ ಆರೋಪಿ ಗೌತಮ್ ವಿರುದ್ಧ ಬೆಂಗಳೂರಿನ ಆಡುಗೋಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ …
Read More »
Laxmi News 24×7