Breaking News

ದಸರಾಕ್ಕೆ ಸಕ್ರೆಬೈಲಿನ ಮೂರು ಆನೆಗಳಿಗೆ ವಿಶೇಷ ಆಹ್ವಾನ

ಮೈಸೂರು ಬಿಟ್ಟರೇ ಅದ್ದೂರಿ ದಸರಾ ನೋಡಲು ಸಿಗುವುದು ಶಿವಮೊಗ್ಗ ನಗರದಲ್ಲಿ. ದಶಕಗಳಿಂದ ಶಿವಮೊಗ್ಗದಲ್ಲಿ ದಸರಾ ಜಂಬೂ ಸವಾರಿಯು ಅದ್ಧೂರಿಯಾಗಿ ನಡೆಯುತ್ತಿದೆ. ಹೀಗಾಗಿ ಶಿವಮೊಗ್ಗ ದಸರಾ ಹಬ್ಬಕ್ಕಾಗಿ ಮೂರು ಆನೆಗಳಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಶಿವಮೊಗ್ಗದ ಜಂಬೂ ಸವಾರಿಗಾಗಿ ಸಕ್ರೆಬೈಲು ಆನೆ ಬಿಡಾರದಿಂದ ಆನೆಗಳು ಬರಲಿವೆ. ಶಿವಮೊಗ್ಗ, : ವಿಶ್ವವಿಖ್ಯಾತ ಮೈಸೂರು ದಸರಾ(Dasara)ಬಿಟ್ಟರೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಅದ್ಧೂರಿ ದಸರಾ ನಡೆಯಲಿದೆ. ದಸರಾ ಅಂದರೆ ಅಲ್ಲಿ ಆನೆಗಳು ಇರಲೇಬೇಕು. ಶಿವಮೊಗ್ಗ ದಸರಾಕ್ಕೆ ಈ …

Read More »

ಬೆಂಗಳೂರಿನ ಯಾವುದೇ ಪ್ರದೇಶದಿಂದ 699 ರೂ.ಗೆ ಏರ್​ಪೋರ್ಟ್​ಗೆ ಪ್ರಯಾಣಿಸಿ! ಇ ಟ್ಯಾಕ್ಸಿ ಸೇವೆಗೆ ಡಿಕೆ ಶಿವಕುಮಾರ್ ಚಾಲನೆ

ಬೆಂಗಳೂರು, ಅಕ್ಟೋಬರ್ 3: ಖಾಸಗಿ ಕಂಪನಿಯಾದ ‘ರೆಫೆಕ್ಸ್ ಇವೀಲ್ಜ್’ ನಿರ್ವಹಿಸುತ್ತಿರುವ ಹೊಸ ಎಲೆಕ್ಟ್ರಿಕ್ ಏರ್‌ಪೋರ್ಟ್ ಟ್ಯಾಕ್ಸಿ ಸೇವೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು. ಏರ್‌ಪೋರ್ಟ್ ಆಪರೇಟರ್‌ನ ಸಹಯೋಗದೊಂದಿಗೆ ‘ರೆಫೆಕ್ಸ್ ಇವೀಲ್ಜ್’ ಕಂಪನಿಯು ‘ಏರ್‌ಪೋರ್ಟ್ ಟ್ಯಾಕ್ಸಿ’ ಸೇವೆ ಒದಗಿಸುತ್ತಿದ್ದು, ಈಗಾಗಲೇ 200 ಎಲೆಕ್ಟ್ರಿಕ್ ಕಾರುಗಳು ಕಾರ್ಯಾಚರಿಸುತ್ತಿವೆ. ಇದೀಗ ಇನ್ನೂ 170 ಎಲೆಕ್ಟ್ರಿಕ್ ಕಾರುಗಳು ಸೇವೆಗೆ ಸೇರ್ಪಡೆಯಾದಂತಾಗಿದೆ. ಇ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ …

Read More »

ಇಡಿ, ಸಿಬಿಐ ದುರ್ಬಳಕೆ: ಮೃಣಾಲ್ ಹೆಬ್ಬಾಳಕರ್

ಹಿರೇಬಾಗೇವಾಡಿ: ‘ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದಾರೆ. ಇದು ಅವರಿಗೇ ತಿರುಗುಬಾಣ ಆಗುತ್ತಿದೆ’ ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹೇಳಿದರು.   ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರದಲ್ಲೂ ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಈ ಹಿಂದೆ ಡಿ.ಕೆ. ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ಬಲಿಷ್ಠ ನಾಯಕರನ್ನೇ ಗುರಿ …

Read More »

ಕಿವುಡ ಮಕ್ಕಳ ಶಾಲೆಯಲ್ಲಿ ಗಾಂಧಿ ಜಯಂತಿ

ಬೆಳಗಾವಿ: ಇಲ್ಲಿನ ಆಜಮ್‌ ನಗರದ ಸರ್ಕಾರಿ ಕಿವುಡ ಮಕ್ಕಳ ಶಾಲೆಯಲ್ಲಿ ಬುಧವಾರ ಗಾಂಧಿ ಜಯಂತಿಯನ್ನು ವಿಶೇಷವಾಗಿ ಆಚರಿಸಲಾಯಿತು. ಮಾತು ಬಾರದ ಹಾಗೂ ಕಿವಿ ಕೇಳದ ಮಕ್ಕಳೇ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಸಾಧನೆಗಳನ್ನು ಸಂಜ್ಞೆಯ ಬಿತ್ತರಿಸಿದರು. ವಿದ್ಯಾರ್ಥಿಗಳೇ ಸಂಪೂರ್ಣ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಜ್ಞೆಯ ಮೂಲಕವೇ ಭಾಷಣ ಮಾಡಿದರು. ನಿರೂಪಣೆ, ಸ್ವಾಗತ, ಮಾಲಾರ್ಪಣೆ, ವಂದನಾರ್ಪಣೆ ಎಲ್ಲವೂ ವಿದ್ಯಾರ್ಥಿನಿಯರೇ ಮಾಡಿ ಗಮನ ಸೆಳೆದರು. ಇದಕ್ಕೂ ಮುನ್ನ ಶ್ರಮದಾನದ ಮಾಡಿದ ಶಿಕ್ಷಕಿ …

Read More »

ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಚಾಲನೆ

ಹುಕ್ಕೇರಿ: ಪ್ರಸಕ್ತ ವರ್ಷದ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆಗೆ ಶಾಸಕ ನಿಖಿಲ್ ಕತ್ತಿ ಸೋಮವಾರ ಚಾಲನೆ ನೀಡಿದರು. ಪಟ್ಟಣದ ಹೊರವಲಯದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಹಿಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಿಸಿ ಅವರು ಮಾತನಾಡಿದರು. ಈ ಹಂಗಾಮಿಗೆ ಬೇಕಾದ ಗುಣಮಟ್ಟದ ಕಡಲೆ, ಜೋಳ ಬೀಜದ ದಾಸ್ತಾನು ಇದ್ದು, ಬೀಜಗಳ ವಿತರಣೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದರು.   ‘ಹುಕ್ಕೇರಿ, ಸಂಕೇಶ್ಚರ, ಯಮಕನಮರಡಿ ಹೋಬಳಿ …

Read More »

ಅಂಬಾ ಭವಾನಿ ನವರಾತ್ರಿ ಉತ್ಸವ ಇಂದಿನಿಂದ

ಮುನವಳ್ಳಿ: ಪಟ್ಟಣದ ಅಂಬಾ ಭವಾನಿ ದೇವಸ್ಥಾನದಲ್ಲಿ 16ನೇ ನವರಾತ್ರಿ ಉತ್ಸವ ಅ. 3 ರಿಂದ ಅ. 12 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೋಮಶೇಖರ ಮಠದ ಮುರುಘೇಂದ್ರ ಶ್ರೀ, ನರಗುಂದದ ಗುರುಸಿದ್ಧವೀರ ಶಿವಯೋಗಿ ಶಿವಾಚಾರ್ಯ ಶ್ರೀ ನೇತೃತ್ವದಲ್ಲಿ ನಡೆಯಲಿದೆ.   ಅ. 3ರಂದು ಘಟಸ್ಥಾಪನೆ, ಶ್ರೀದೇವಿ ಪುರಾಣ ಆರಂಭ ನಡೆಯಲಿದೆ. ಪ್ರತಿ ದಿನ ಸಂಜೆ 8ರಿಂದ 9ರವರೆಗೆ ಯಕ್ಕುಂಡಿಯ ಸಂಗಯ್ಯ ಹಿರೇಮಠ ಹಾಗೂ ಶ್ರೀನಿವಾಸ ಕುಲಕರ್ಣಿ ಅವರಿಂದ ಶ್ರೀ ದೇವಿ …

Read More »

ಚಿಪ್ಪು ಹಂದಿ ಮಾರಾಟ ಯತ್ನ: ಬಂಧನ

ಖಾನಾಪುರ: ಅಪರೂಪದ ಚಿಪ್ಪು ಹಂದಿ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ತಾಲ್ಲೂಕಿನ ಲೋಂಡಾ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ, ಚಿಪ್ಪು ಹಂದಿ ವಶಕ್ಕೆ ಪಡೆದಿದ್ದಾರೆ. ಸಹಚರರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಖಾನಾಪುರ- ಲೋಂಡಾ ರಾಷ್ಟ್ರೀಯ ಹೆದ್ದಾರಿಯ ವಾಟರೆ ರೈಲ್ವೆ ಗೇಟ್ ಬಳಿ ಬೈಕ್ ಸವಾರನನ್ನು ತಡೆದು ತಪಾಸಣೆ ನಡೆಸಿದ ಅಧಿಕಾರಿಗಳು, ಆತನ ಬಳಿಯಿದ್ದ ಚೀಲವೊಂದರಲ್ಲಿದ್ದ ನಾಲ್ಕು ಕಿಲೋ ತೂಕದ ಚಿಪ್ಪು ಹಂದಿ ಪತ್ತೆ ಹಚ್ಚಿದರು.   …

Read More »

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ, ಪದೇಪದೇ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ವಿಶೇಷ ಪೋಕ್ಸೊ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ. ಸವದತ್ತಿ ತಾಲ್ಲೂಕಿನ ಬಸರಗಿ ಗ್ರಾಮದ ಹನುಮಂತ ಪುಂಡಲೀಕ ಚಿ‍ಪ್ಪಲಕಟ್ಟಿ (21) ಶಿಕ್ಷೆಗೆ ಒಳಗಾದವ. ಬಾಲಕಿಯೊಬ್ಬಳನ್ನು ಪುಸಲಾಯಿಸಿ, ಅಪಹರಣ ಮಾಡಿಕೊಂಡು ಹೋಗಿ ಮೇಲಿಂದ ಮೇಲೆ ಅತ್ಯಾಚಾರ ಎಸಗಿದ್ದ. 2019ರ ನವಂಬರ್‌ 7ರಂದು …

Read More »

ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಗೆ ಅ. 3 ನಾಮಪತ್ರ …

Read More »

ಕಿತ್ತೂರು ಉತ್ಸವಕ್ಕೆ ಚಾಲನೆ ವೇಳೆ CM ಸಿದ್ದರಾಮಯ್ಯ ಬಟ್ಟೆಗೆ ತಾಕಿದ ಬೆಂಕಿ!

ಬೆಳಗಾವಿ: ಕಿತ್ತೂರು ವಿಜಯ ಜ್ಯೋತಿ ಯಾತ್ರೆ ರಥದ ಮುಂದೆ ಸಿಎಂ ಸಿದ್ದರಾಮಯ್ಯ ( CM Siddaramaiah) ದೀಪ ಬೆಳಗಿಸುವಾಗ ಆಕಸ್ಮಿಕವಾಗಿ ಸಣ್ಣ ಕಿಡಿ ಹಾರಿ ಸಿಎಂ ದೋತಿಗೆ ತಗುಲಿತು. ತಕ್ಷಣ ಭದ್ರತಾ ಸಿಬ್ಬಂದಿ ಕಿಡಿಯನ್ನು ನಂದಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ( CM ) ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದೆ. …

Read More »