ಹಾಸನ: ಜಿಲ್ಲೆಯಲ್ಲಿ ವರಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಬಾರಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಇತ್ತ ಪಕ್ಕದ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ. ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ …
Read More »ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಗಣನೀಯ ಏರಿಕೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ, ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಡ್ಯಾಂಗೆ ಸದ್ಯ 7,531 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನಿನ್ನೆ ಬೆಳಗ್ಗೆ ಕೇವಲ 5,734 ಕ್ಯೂಸೆಕ್ ಇದ್ದ ಒಳಹರಿವು, …
Read More »ಮೇವು ತರಲು ಹೋಗಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಕೋಲಾರ: ಹೊಲಕ್ಕೆ ಹಸುಗಳಿಗೆ ಮೇವು ತರಲು ತೆರಳಿದ್ದ 70 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಹತ್ಯೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚಾಕರಸನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವೃದ್ಧೆ ಎಂದಿನಂತೆ ಹಸುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದ ವೇಳೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ವೇಮಗಲ್ …
Read More »ಅಂಬೋಲಿ ಫಾಲ್ಸ್ ಬಳಿ ಗುಡ್ಡ ಕುಸಿತ – ರಸ್ತೆಗೆ ಉರುಳಿದ 4 ಬೃಹತ್ ಬಂಡೆಗಳು, ತಪ್ಪಿದ ಅನಾಹುತ
ಬೆಳಗಾವಿ: ಭಾರೀ ಮಳೆಯ ಪರಿಣಾಮ ಕರ್ನಾಟಕಕ್ಕೆ ಹೊಂದಿಕೊಂಡಿರುವ ಅಂಬೋಲಿ ಫಾಲ್ಸ್ ಬಳಿ ಭಾರೀ ಪ್ರಮಾಣದ ಗುಡ್ಡ ಕುಸಿತವಾಗಿದೆ. ಮಹಾರಾಷ್ಟ್ರದ ಸಾವಂತವಾಡಿ ತಾಲೂಕಿನಲ್ಲಿರುವ ಅಂಬೋಲಿ ಫಾಲ್ಸ್ ಬಳಿ ಘಟನೆ ನಡೆದಿದೆ. ತಡರಾತ್ರಿ ಗುಡ್ಡದ ಮೇಲಿಂದ ಬೃಹತ್ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿದೆ. ರಸ್ತೆ ಮೇಲೆಯೇ ನಾಲ್ಕು ಬೃಹತ್ ಬಂಡೆಗಳು ಉರುಳಿ ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ. ಘಟನೆಯ ಪರಿಣಾಮ ಮಧ್ಯರಾತ್ರಿ ಕೆಲಹೊತ್ತು ಬೆಳಗಾವಿ-ಸಿಂಧದುರ್ಗ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿತ್ತು. ಮಧ್ಯರಾತ್ರಿಯಿಂದಲೇ ಚಂದಗಡ ಅಗ್ನಿಶಾಮಕ …
Read More »ಕರ್ನಾಟಕದ ಅಡಿಕೆ ವಾಹನಗಳಿಗಿಲ್ಲ ಮಹಾರಾಷ್ಟ್ರದಲ್ಲಿ ತಡೆ
ನವದೆಹಲಿ: ಕರ್ನಾಟಕದ ಅಡಿಕೆ ಬೆಳೆಗಾರರ ಬೆನ್ನಿಗೆ ನಿಂತಿರುವ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಮಹಾರಾಷ್ಟ್ರದಲ್ಲಿ ತಡೆಹಿಡಿದಿದ್ದ ಅಡಿಕೆ ಸರಕುಳ್ಳ ವಾಹನಗಳ ಬಿಡುಗಡೆಗಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಜತೆ ಯಶಸ್ವಿ ಮಾತುಕತೆ ನಡೆಸಿದ್ದಾರೆ. ರಾಜ್ಯ ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಧಾವಿಸಿದ ಜೋಶಿ, ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸರಕುಳ್ಳ ಲಾರಿಗಳನ್ನು ತಡೆಹಿಡಿದಿರುವ ಬಗ್ಗೆ ಅಲ್ಲಿನ ಸಿಎಂ ದೇವೇಂದ್ರ ಫಡ್ನವೀಸ್ ಜತೆ ಚರ್ಚಿಸಿ ಬಿಡುಗಡೆಗೆ ಮನವೊಲಿಸಿದರು. ಈ …
Read More »ಆಲಮಟ್ಟಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು – 2 ಟಿಎಂಸಿ ಇದ್ದ ನೀರು ಈಗ 25ಕ್ಕೆ ಏರಿಕೆ
ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕರ್ನಾಟಕಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆ ವಿಜಯಪುರದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯಾಗುವ ಮುನ್ನ ಆಲಮಟ್ಟಿಯ ಲಾಲಬಾಹ್ದೂರ ಶಾಸ್ತ್ರಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ನೀರಿತ್ತು. ಇದೀಗ ಉತ್ತಮ ಮಳೆಯಾಗಿ ನೀರು ಹರಿದು ಬರುತ್ತಿದ್ದು, 123.081 ಟಿಎಂಸಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 25.536 ಟಿಎಂಸಿ ನೀರಿದೆ. ಸದ್ಯ ಜಲಾಶಯದಲ್ಲಿ 80,445 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನೀರು ಹರಿದು …
Read More »ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ನ್ಯೂಸ್
ಬೆಂಗಳೂರು: ಬಾಡಿಗೆದಾರರಾಗಿರುವ ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರ ಸಿಹಿಸುದ್ದಿ ಕೊಟ್ಟಿದೆ. ಅಗ್ರಿಮೆಂಟ್ ಕಾಪಿ ಇಲ್ಲದಿದ್ದರೂ ಬಾಡಿಗೆದಾರರು ಗೃಹಜ್ಯೋತಿಗೆ ಅರ್ಜಿ ಸಲ್ಲಿಸಬಹುದು ಅಂತ ಇಂಧನ ಇಲಾಖೆ ಹೇಳಿದೆ. ಬಾಡಿಗೆ ಅಗ್ರಿಮೆಂಟ್ ಪ್ರತಿ ಇಲ್ಲದಿದ್ದರೆ ಬೆಸ್ಕಾಂ ಅಧಿಕಾರಿಗಳು ಕೊಡುವ ಒಂದು ಫಾರಂಗೆ ಬಾಡಿಗೆದಾರರು ಮತ್ತು ಮಾಲೀಕರು ಸಹಿ ಹಾಕಿ ಕೊಡಬೇಕು. ಇದಕ್ಕಾಗಿ ಇಂಧನ ಇಲಾಖೆ ಹೊಸ ಫಾರಂ ಸಿದ್ಧಪಡಿಸಿದೆ. ಗ್ರಾಮಾಂತರ ಭಾಗಗಳಲ್ಲಿ ಅಗ್ರಿಮೆಂಟ್ ಕಾಪಿ ಇಲ್ಲದೇ ಅರ್ಜಿ ಸಲ್ಲಿಕೆ ಕಷ್ಟ ಆಗಿ ಇದೀಗ ಹೊಸ …
Read More »ಇನ್ಮುಂದೆ ಕರ್ನಾಟಕದಲ್ಲಿ ಸಿಗಲಿದೆ ಶಾಶ್ವತ ನಿವಾಸ ಪ್ರಮಾಣ ಪತ್ರ
ಬೆಂಗಳೂರು: ಕರ್ನಾಟಕದಲ್ಲಿ ಇನ್ನು ಮುಂದೆ ಶಾಶ್ವತ ನಿವಾಸ ಪ್ರಮಾಣ ಪತ್ರ ಸಿಗಲಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದ್ದು, ಮಾರ್ಗಸೂಚಿಗಳನ್ನೂ ಸಹ ಬಿಡುಗಡೆ ಮಾಡಿದೆ. ಸತತ ಕನಿಷ್ಠ 10 ವರ್ಷ ಕರ್ನಾಟಕದಲ್ಲಿ ವಾಸವಿದ್ದವರಿಗೆ ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ಸರ್ಕಾರ ಮುಂದಾಗಿದ್ದು, ಕೆಲ ಅರ್ಹತೆಗಳನ್ನು ಸಹ ಒಳಗೊಂಡಿರಬೇಕು. ಪ್ರಮಾಣ ಪತ್ರ ನೀಡುವ …
Read More »ರಸ್ತೆ ಬದಿ ಪತ್ತೆಯಾದ ನವಜಾತ ಗಂಡು ಶಿಶು: ಕುರಿಗಾಹಿಗಳಿಂದ ರಕ್ಷಣೆ
ಬೆಳಗಾವಿ: ರಸ್ತೆ ಬದಿ ಬಿಸಾಡಿದ್ದ ನವಜಾತ ಗಂಡು ಶಿಶುವನ್ನು ಕುರಿಗಾಹಿಗಳು, ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ರೈತರು ರಕ್ಷಿಸಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಹತ್ತಿರವಿರುವ ಕಿತ್ತೂರು ಬಸವನಕಟ್ಟಿ ಬ್ರಿಡ್ಜ್ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ಮಗು ಅಳುವ ಸದ್ದು ಕೇಳಿ ಅಲ್ಲಿ ಕುರಿ ಮೇಯಿಸುತ್ತಿದ್ದ ಕುರಿ ಕಾಯಿಗಳು ಬಟ್ಟೆಯಲ್ಲಿ ಸುತ್ತಿ ನೆಲದ ಮೇಲೆ ಬಿಟ್ಟಿದ್ದ ಮಗುವನ್ನು ಕಂಡ ಕೂಡಲೇ ರಕ್ಷಿಸಿದ್ದಾರೆ. ಯಾರೋ ದುರುಳರು ರಸ್ತೆಗೆ …
Read More »ಅಪ್ರಾಪ್ತರಿಗೆ ಬೈಕ್ ಕೊಟ್ಟವರಿಗೆ ದಂಡ ವಿಧಿಸಿದ ಕೋರ್ಟ್
ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ಚಲಾಯಿಸಲು ಅವಕಾಶ ನೀಡಿದ ಪಾಲಕರಿಗೆ ಪ್ರತ್ಯೇಕ ಪ್ರಕರಣದಲ್ಲಿ ಕಾಗವಾಡ ಹಾಗೂ ನಿಪ್ಪಾಣಿಯ JMFC ನ್ಯಾಯಾಲಯವು ಭಾರಿ ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಬಳಸುತ್ತಿರುವ ಆಧುನಿಕ ಎ.ಎನ್.ಪಿ.ಆರ್ ತಂತ್ರಜ್ಞಾನವು ಇಂದು ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧದ ಕಠಿಣ ಕಾನೂನು ಜಾರಿಗೆ ಪ್ರಬಲ ಅಸ್ತ್ರವಾಗಿ ಪರಿಣಮಿಸಿದೆ. ಇತ್ತೀಚೆಗೆ ನಡೆದ ಸಂಚಾರ ನಿಯಮ …
Read More »
Laxmi News 24×7