Breaking News

ಯಡಿಯೂರಪ್ಪ ಮತ್ತು ಅನಂತಕುಮಾರ್ ನಡುವಿದ್ದ ಜಗಳ ಯಾವತ್ತೂ ಬೀದಿಗೆ ಬಂದಿರಲಿಲ್ಲ: ಡಿವಿ ಸದಾನಂದಗೌಡ

ಬೆಂಗಳೂರು: ಪಕ್ಷದ ರಾಜ್ಯಾಧ್ಯನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ಹೇಳಿದರು. ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ, ಇದು ಸರಿಯಲ್ಲ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷನಾಗಿ ಹೈಕಮಾಂಡ್ ಗೆ …

Read More »

ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ

ಕೊಪ್ಪಳ, ನವೆಂಬರ್ 28: ರಾಜ್ಯದ ಕೊಪ್ಪಳ, ರಾಯಚೂರು ಜಿಲ್ಲೆಗಳನ್ನು ಭತ್ತದ ಕಣಜ ಎಂದು ಕರೆಯುತ್ತಾರೆ. ತುಂಗಭದ್ರಾ ಜಲಾಶಯದ ನೀರನ್ನು ಬಳಸಿ ಬೆಳೆಯುವ ಈ ಭಾಗದ ಭತ್ತಕ್ಕೆ ಬಹಳ ಬೇಡಿಕೆ ಇತ್ತು. ಆದರೆ, ಈ ಬಾರಿ ಭತ್ತದ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದು, ಭತ್ತದ ಬೆಳೆಗಾರರನ್ನು ಕಂಗಾಲು ಮಾಡಿದೆ. ಇನ್ನೊಂದಡೆ ಭತ್ತ ಖರೀದಿ ಕೇಂದ್ರವೂ ಆರಂಭವಾಗಿಲ್ಲ. ಮಾರುಕಟ್ಟೆಯಲ್ಲಿ ದಿಢೀರನೆ ಕುಸಿದ ಭತ್ತದ ಬೆಲೆ ಕೊಪ್ಪಳ ಜಿಲ್ಲೆ, ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ರೈತರು ಬೆಳೆಯುವ ಪ್ರಮುಖ …

Read More »

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು. ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. …

Read More »

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..!

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..! ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ.. ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು.. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೋನಿಯಾ.. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ.. ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆ.. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಕರೆ ಮಾಡಿದ್ದ ಸ್ಪಾ ಮಾಲೀಕ.. …

Read More »

ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್​ ಮೇಲೆ ಮಾರಣಾಂತಿಕ ಹಲ್ಲೆ,

ಬೆಳಗಾವಿ, ನವೆಂಬರ್ 28: ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಅಕ್ಟೋಬರ್ 30ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃತ್ಯದ ಸಿಸಿಟಿವಿ ವಿಡಿಯೋ ಕೂಡ ಲಭ್ಯವಾಗಿದೆ. ಪಾಗಲ್ ಪ್ರೇಮಿ ಪ್ರಕಾಶ್ ಜಾಧವ್​​ ಎಂಬಾತ ಕೃತ್ಯ ಎಸಗಿದ್ದಾನೆ. ಏತನ್ಮಧ್ಯೆ, ಮಗಳ ಮೇಲಿನ ದಾಳಿಯಿಂದ ಮನನೊಂದ ಆಕೆಯ ತಂದೆ ಮೃತಪಟ್ಟಿದ್ದಾರೆ. ಘಟನೆಯ ಹಿನ್ನೆಲೆ ಪ್ರೀತಿಸುವಂತೆ ನರ್ಸ್ ಹಿಂದೆ ಬಿದ್ದಿದ್ದ ಆರೋಪಿ …

Read More »

ನವಜಾತ ಶಿಶುವನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್,

ನವಜಾತ ಶಿಶುವನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್, ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ಇಡೀ ಮಾನವ ಕುಲವೇ ತಲೆತಗ್ಗಿಸುವಂಥ ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ನಡೆದಿರುವುದು ತಿಳಿದುಬಂದಿದೆ. ನವಜಾತ ಶಿಶುವೊಂದನ್ನು ಟಾಯ್ಲೆಟ್​ಗೆ ಹಾಕಿ ಫ್ಲಶ್ ಮಾಡಿದ ವಿದ್ಯಮಾನ ಬೆಳಕಿಗೆ ಬಂದಿದ್ದು, ಘಟನೆ ಸಂಬಂಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರಾಮನಗರ, ನವೆಂಬರ್ 28: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ …

Read More »

ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್

ಕರ್ನಾಟಕ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೆಲಸಕ್ಕಾಗಿ ಹುಡುಕುತ್ತಿರುವ ಪದವೀಧರರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಬಹುದು. ಕರ್ನಾಟಕ ಬ್ಯಾಂಕ್ ಲಿಮಿಟೆಡ್ ನ ಖಾಲಿಯಿರುವ ಗ್ರಾಹಕ ಸೇವಾ ಸಹಾಯಕ ಹುದ್ದೆ, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಯ ಸ್ಥಳ ದೇಶಾದ್ಯಂತ ಇರುವ ಕರ್ನಾಟಕ ಬ್ಯಾಂಕ್ ಕಚೇರಿಗಳ ಶಾಖೆಯ ಯಾವುದೇ ಭಾಗದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ ರೂ. 24,050 ರಿಂದ ರೂ.64,480ರವರೆಗೆ …

Read More »

ಮಹಾರಾಷ್ಟ್ರದ ಸಿಎಂ ಯಾರೆಂದು ಫೈನಲ್ ಆಗುತ್ತಾ?ಬಿಜೆಪಿಯ ದೇವೇಂದ್ರ ಫಡ್ನವಿಸ್​​ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್​?

ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದ ಸರ್ಕಾರ ರಚನೆ ಕಗ್ಗಂಟು ಬಗೆಹರಿದಂತೆ ಆಗಿದ್ದು ದೇವೇಂದ್ರ ಫಡ್ನವೀಸ್​ಗೆ ಸಿಎಂ ಪಟ್ಟ ಕಟ್ಟಲು ನಿರ್ಧಾರ ಆಗಿದೆ ಎನ್ನಲಾಗಿದೆ. ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪಿರುವ ಏಕನಾಥ್ ಶಿಂಧೆ ಹಾಗೂ ಎನ್​ಸಿಪಿ ಅಜಿತ್ ಪವಾರ್ ಬಣ ಪ್ರಬಲ ಖಾತೆಗಳಿಗೆ ಡಿಮ್ಯಾಂಡ್ ಇಟ್ಟಿದ್ದು, ಇವತ್ತು ದೆಹಲಿಯಲ್ಲಿ ನಡೆಯಲಿರುವ ಮಹಾಯುತಿ ಸಭೆಯಲ್ಲಿ ಎಲ್ಲವೂ ಫೈನಲ್​ ಆಗಲಿದೆ. ಬಿಜೆಪಿಯ ದೇವೇಂದ್ರ ಫಡ್ನವಿಸ್​​ಗೆ ಸಿಎಂ ಪಟ್ಟ ಬಹುತೇಕ ಫಿಕ್ಸ್​? ಮಹಾರಾಷ್ಟ್ರ ಸಿಎಂ ಯಾರು ಎಂಬ …

Read More »

ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ?

ನವೆಂಬರ್ 28: ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ರಣೋತ್ಸಾಹದಲ್ಲಿದೆ. ಇದರ ನಡುವೆ ಕಾಂಗ್ರೆಸ್​ನಲ್ಲಿ ಸಂಪುಟ ಪುನಾರಚನೆ ಸುದ್ದಿ ಸದ್ದು ಮಾಡುತ್ತಿದೆ. ನಾಯಕರ ನಿಗೂಢ ನಡೆ ಇಂತಹದೊಂದು ಚರ್ಚೆಗೆ ಕಾರಣ ಆಗಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ಹೀಗಾಗಿ ಸಂಪುಟ ಸರ್ಜರಿಯ ಕುತೂಹಲ ಮತ್ತಷ್ಟು ಗರಿಗೆದರಿದೆ. ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ? ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ ಎನ್ನುವ ಮೂಲಕ …

Read More »

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ

ಬಾಗಲಕೋಟೆ: ನೇಕಾರರಿಗೆ ನಿವೇಶನ, ನೂರಾರು ಜನ ನೇಕಾರರಿಗೆ ಸಿಟಿಎಸ್ ಪಹಣಿ, 55 ವರ್ಷ ಮೇಲ್ಪಟ್ಟ ನೇಕಾರರಿಗೆ 5 ಸಾವಿರ ಮಾಸಾಶನ ನೀಡಲಾಗಿದೆ. ಕೆಹೆಚ್​ಡಿಸಿಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ‌‌ ಮಾಡಲಾಗಿದೆ. ರಬಕವಿಬನಹಟ್ಟಿ ನಗರದ ಬಾಂಗಿ ಸರ್ಕಲ್ ನಲ್ಲಿ ನೇಕಾರರ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಹೋರಾಟ‌ ನಡೆಸಲಾಗಿದೆ. ಇಂದು ಎಂಟನೇ ದಿನಕ್ಕೆ ಹೋರಾಟ ತಲುಪಿದೆ. ಯಾವುದೇ ಜನಪ್ರತಿನಿಧಿಗಳು, ಅಧಿಕಾರಿಗಳು …

Read More »