Breaking News

ಬೆಳಗಾವಿಯಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ಕಿತ್ತಾಡಿಕೊಂಡ ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಇಂದು ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಕಾರ್ಯಕ್ರಮವನ್ನು ಪ್ರೊಟೋಕಾಲ್ ಪ್ರಕಾರ ನಡೆಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಈ ವಿಚಾರವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ನಂತರ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಹಿರಿಯರು ಮಧ್ಯಪ್ರವೇಶಿಸಿ ಎರಡೂ …

Read More »

ಮುಖ್ಯಮಂತ್ರಿಗಳ ಬೆಳಗಾವಿ ಪ್ರವಾಸದಲ್ಲಿ ಬದಲಾವಣೆ

ಬೆಂಗಳೂರು: ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಗುರುವಾರ (ಜುಲೈ 9) ಬೆಳಗಾವಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಹೊರಡಲಿರುವ ಅವರು 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11 ಗಂಟೆಗೆ ಸುವರ್ಣ ವಿಧಾನಸೌಧ ತಲುಪಿ ಬೆಳಗಾವಿ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಸೌಥ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಶನ್ …

Read More »

ರೈತರ ಕುಟುಂಬಗಳ ಸಂಕಷ್ಟಕ್ಕೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್: ಪರಿಹಾರದ ಚೆಕ್ ವಿತರಣೆ, ಸಾಂತ್ವನ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಾಗೂ ಆಕಸ್ಮಿಕವಾಗಿ ಸಾವನ್ನಪ್ಪಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಮಂಜೂರಾಗಿರುವ ಪರಿಹಾರಧನದ ಚೆಕ್‌ಗಳನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ವಿತರಿಸಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸರ್ಕಾರದ ಪರಿಹಾರ ಸೌಲಭ್ಯವನ್ನು ಶೀಘ್ರವಾಗಿ ಸಂತ್ರಸ್ತ ಕುಟುಂಬಗಳಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿದ ಅವರು, ಕುಟುಂಬದ …

Read More »

ಬೆಳಗಾವಿಯ ಆರ್‌ಟಿಓ ಸರ್ಕಲ್ ಬಳಿ ಆಟೋ ಮೇಲೆ ಬಿದ್ದ ಮರ

ಬೆಳಗಾವಿ: ಬೆಳಗಾವಿ ನಗರದ ಆರ್ ಟಿ ಓ ವೃತ್ತದ ಬಳಿ ಭಾರಿ ಗಾತ್ರದ ನೀಲಗಿರಿ ಮರವೊಂದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಆಟೋ ಮೇಲೆ ಧರೆಗುರುಳಿದ ಘಟನೆ ನಡೆದಿದೆ. ಆಟೋ ಮೇಲೆ ಮರ ಬಿದಿದ್ದರಿಂದ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಭಾರಿ ಗಾತ್ರದ ಮರ ಮತ್ತು ಅದರ ಕೊಂಬೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಈ ಭಾಗದಲ್ಲಿ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಸದ್ಯಕ್ಕೆ ವರದಿಯಾಗಿಲ್ಲ. ಸ್ಥಳದಲ್ಲಿ …

Read More »

ಬೆಳಗಾವಿಯಲ್ಲಿ ಎಲ್ ಆ್ಯಂಡ್ ಟಿ ಆಕ್ಸಿಜನ್ ಘಟಕ ಕಾರ್ಯಾರಂಭ

ಬೆಳಗಾವಿ-  ಬೆಳಗಾವಿಯಲ್ಲಿ ಆಮ್ಲಜನಕ ಕೊರತೆಯನ್ನು ಗಮನಿಸಿದ ಶಾಸಕ, ಅಭಯ ಪಾಟೀಲ ಆಮ್ಲಜನಕ ತಯಾರಿಕಾ ಘಟವನ್ನು ಸ್ಥಾಪಿಸುವಂತೆ ಎಲ್&ಟಿ ಕಂಪನಿಗೆ ವೈಯಕ್ತಿಕವಾಗಿ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿ, ಪ್ರತಿ ನಿಮಿಷಕ್ಕೆ 700 ಲಿಟರ್ ಅಂದರೆ (50 ರಿಂದ 60 ಹಾಸಿಗೆಗಳಿಗೆ 24 ಗಂಟೆಗಳ ಕಾಲ) ಆಮ್ಲಜನಕ ಪೂರೈಕೆ ಮಾಡುವಂತ ಘಟಕ ಸ್ಥಾಪನೆ ಮಾಡಿದ್ದಾರೆ.  ಘಟಕ ಶನಿವಾರದಿಂದ ಕಾರ್ಯಾರಂಭ ಮಾಡಿತು. ಕರ್ನಾಟಕದಲ್ಲಿ ಮೊದಲನೆಯ ಭಾರಿಗೆ ಸಿಎಸ್ಆರ್ ಅನುದಾನ ಉಪಯೋಗಿಸಿ, ಎಲ್&ಟಿ ಕಂಪನಿಯ   ಆಮ್ಲಜನಕ …

Read More »

ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು

ಬೆಳಗಾವಿ: ಖಾನಾಪುರ ತಾಲೂಕಿನ ಲಾಲವಾಡಿ ಗ್ರಾಮದ ನಿವಾಸಿ ಜ್ಯೋತಿಬಾ ಉತ್ತೂರಕರ್ ಅವರ ಪುತ್ರಿ ಭಾಗ್ಯಶ್ರೀ ಅವರ ತುರ್ತು ಆರೋಗ್ಯ ಚಿಕಿತ್ಸೆಗೆ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೆರವಿನ ಚೆಕ್‌ ಅನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.   ಈ …

Read More »

ಕೆಎಲ್ಇ ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಡಾ. ಸುನೀಲ ಜಲಾಲಪುರೆ ಆಯ್ಕೆ

ಬೆಳಗಾವಿ : ಕೆ.ಎಲ್.ಇ. ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (ಕಾಹೇರ್)ನ ಕೆ.ಎಲ್.ಇ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರು ಹಾಗೂ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾಗಿದ್ದ ಪ್ರೊ. (ಡಾ.) ಸುನೀಲ ಎಸ್. ಜಲಾಲಪುರೆ ಅವರು ಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. 1998ರಿಂದ ಕೆ.ಎಲ್.ಇ. ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅವರು 2013ರಿಂದ ಆಜೀವ ಸದಸ್ಯರಾಗಿದ್ದಾರೆ. ಬೋಧನೆ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತ ಕ್ಷೇತ್ರಗಳಲ್ಲಿ 28 ವರ್ಷಗಳ ಅನುಭವ ಹೊಂದಿರುವ ಡಾ. …

Read More »

ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ

ಬೆಳಗಾವಿ : ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 3 ತಾಲೂಕುಗಳ ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ. ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ …

Read More »

ಬೆಳಗಾವಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಬೆಳಗಾವಿ ಬಿಲ್ಲೆಯ ನಿಪ್ಪಾಣಿ ಸಮೀಪದ ಸ್ಥವನಿಧಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ದುರ್ಮಣ ಹೊಂದಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಳಿದ ಇಬ್ಬರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರನ್ನು …

Read More »

ಮುಂಬೈನಲ್ಲಿ ಮಳೆಯ ರೌದ್ರನರ್ತನ; ಒಟ್ಟು 10 ಸಾವು; ಇಂದು ಕೂಡ 43 ರೈಲು ಸಂಚಾರ ರದ್ದು

ಮುಂಬೈ: ಕಳೆದ ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಮತ್ತು ದೈನಂದಿನ ಬದುಕಿನ ಮೇಲೆ ಮಳೆಯ ಪರಿಣಾಮ ತೀವ್ರವಾಗಿದೆ. ಈ ದುರ್ಘಟನೆಗಳ ನಡುವೆ ಭಿವಂಡಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ 13 ವರ್ಷದ ಬಾಲಕ ಮುಹಮ್ಮದ್ ಅಬೂಝರ್ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ ನೀರಿನ ರಭಸಕ್ಕೆ ಸಿಲುಕಿ …

Read More »