Breaking News

ರಾಜ್ಯ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿನ 3 ಹಾಗೂ ಫೈವ್​ ಸ್ಟಾರ್ ಹೋಟೆಲ್​ಗಳಲ್ಲಿ ಆಹಾರ ಮಾದರಿಗಳ ಪರಿಶೀಲನೆ

ಬೆಂಗಳೂರು: ರಾಜ್ಯ ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿನ 3 ಹಾಗೂ ಫೈವ್​ ಸ್ಟಾರ್ ಹೋಟೆಲ್​ಗಳಲ್ಲಿ ಆಹಾರ ಮಾದರಿಗಳ ಪರಿಶೀಲನೆಯನ್ನು ಮುಂದುವರಿಸಿದ್ದು, ಕೆಜಿಗಟ್ಟಲೇ ಕೊಳೆತ ಮಾಂಸ, ತರಕಾರಿಗಳು ಪತ್ತೆಯಾಗಿವೆ. ಅದುವೆ ಐಷಾರಾಮಿ ಹೋಟೆಲ್​ಗಳಲ್ಲಿ ಎಂಬುದು ಆಘಾತಕಾರಿ ಸಂಗತಿ. ಈಗಾಗಲೇ ನಿಯಮ ಉಲ್ಲಂಘನೆಯ ಮೇರೆಗೆ ವಶಪಡಿಸಿಕೊಂಡಿರುವ ಪದಾರ್ಥಗಳು ಟೆಸ್ಟಿಂಗ್​ ಸಲುವಾಗಿ ಲ್ಯಾಬ್​ಗೆ ರವಾನೆಗೊಂಡಿದೆ. 3 ಹಾಗೂ ಫೈವ್ ಸ್ಟಾರ್​ನಂತಹ ಲಕ್ಸುರಿ ಹೋಟೆಲ್​ಗಳಲ್ಲಿ ಶುಚಿ-ರುಚಿ ಜೊತೆಗೆ ಶುದ್ಧವಾದ …

Read More »

ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳ ಆಪ್ತರ ಭೇಟಿ: ಹಿರಿಯ ಜೀವಗಳಿಗೆ ಆತ್ಮೀಯ ಸಾಂತ್ವನ

ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳ ಆಪ್ತರ ಭೇಟಿ: ಹಿರಿಯ ಜೀವಗಳಿಗೆ ಆತ್ಮೀಯ ಸಾಂತ್ವನ ಬೆಳಗಾವಿಯ ಶಾಂತಾಯಿ ಚೈಲ್ಡ್‌ಹುಡ್ ವೃದ್ಧಾಶ್ರಮಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳ ಆಪ್ತ ಮಂಗೇಶ್ ಚಿವಟೆ ಭೇಟಿ ನೀಡಿದ್ದಾರೆ. ಅಲ್ಲಿನ ಆಶ್ರಮವಾಸಿಗಳೊಂದಿಗೆ ಸಮಯ ಕಳೆದು, ಅವರ ಯೋಗಕ್ಷೇಮ ವಿಚಾರಿಸಿದ ಅವರು ಸಂಸ್ಥೆಯ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಬೆಳಗಾವಿಯ ಶಾಂತಾಯಿ ಆಶ್ರಯಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ (OSD) ಹಾಗೂ ವೈದ್ಯಕೀಯ ನೆರವು ಕೋಶದ ಜವಾಬ್ದಾರಿ ಹೊತ್ತಿರುವ ಮಂಗೇಶ್ ಚಿವಟೆ …

Read More »

40 ವರ್ಷಗಳ ದಾಸ್ಯಾಳ ಗ್ರಾಮದ ಕನಸು ನನಸು; ಸಚಿವ ಎಂ.ಬಿ. ಪಾಟೀಲ್ ಪ್ರಯತ್ನದಿಂದ ಬಸ್ ಸಂಚಾರ ಆರಂಭ

40 ವರ್ಷಗಳ ದಾಸ್ಯಾಳ ಗ್ರಾಮದ ಕನಸು ನನಸು; ಸಚಿವ ಎಂ.ಬಿ. ಪಾಟೀಲ್ ಪ್ರಯತ್ನದಿಂದ ಬಸ್ ಸಂಚಾರ ಆರಂಭ 40 ವರ್ಷಗಳ ದಾಸ್ಯಾಳ ಗ್ರಾಮದ ಕನಸು ಕೊನೆಗೂ ನನಸಾಗಿದೆ. ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಇದೀಗ ಸ್ಪಂದನೆ ಸಿಕ್ಕಿದ್ದು, ಸಚಿವ ಎಂ.ಬಿ. ಪಾಟೀಲ್ ಅವರ ಪ್ರಯತ್ನದಿಂದ ವಿಜಯಪುರ ಜಿಲ್ಲೆಯ ದಾಸ್ಯಾಳ ಗ್ರಾಮಕ್ಕೆ ಬಸ್ ಸಂಚಾರ ಆರಂಭವಾಗಿದೆ. ವಿಜಯಪುರ ಜಿಲ್ಲೆಯ ದಾಸ್ಯಾಳ ಗ್ರಾಮದ ಜನರ 40 ವರ್ಷಗಳ ಕನಸಿಗೆ …

Read More »

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ -ಗಾನ ವಿದೂಷಿ ಪಾವನಿ ಕಾಶೀನಾಥ ವಚನಗಳಲ್ಲಿ ಅಡಗಿರುವ ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ ಎಂದು ತೋರಿಸುವುದರ ಜೊತೆಗೆ 12ನೇ ಶತಮಾನದ ಶರಣರ ವಿಶೇಷ ವಚನಗಳನ್ನು ರಾಗ ತಾಳ ಸಂಯೋಜನೆಯೊಂದಿಗೆ ಸಂಗೀತ ರೂಪದಲ್ಲಿ ಪ್ರಸ್ತುತಪಡಿಸಿ ಸರ್ವರನ್ನು ಭಕ್ತಿಯ ಸಾಗರದಲ್ಲಿ ತೇಲುವಂತೆ ಮಾಡಿದ ಸಂಗೀತ ಕಾರ್ಯಕ್ರಮ ಬೆಳಗಾವಿ ನಗರದ ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ …

Read More »

ಖಾನಾಪುರ ತಾಲೂಕಿನ ಗರ್ಲಗುಂಜಿ, ಸಿಂಗಿನಕೊಪ್ಪ ಶಾಲೆಯಲ್ಲಿ ಶೈಕ್ಷಣಿಕ ಸಾಮಗ್ರಿ ವಿತರಣೆ

ಖಾನಾಪುರ ತಾಲೂಕಿನ ಗರ್ಲಗುಂಜಿ, ಸಿಂಗಿನಕೊಪ್ಪ ಶಾಲೆಯಲ್ಲಿ ಶೈಕ್ಷಣಿಕ ಸಾಮಗ್ರಿ ವಿತರಣೆ ಖಾನಾಪುರ ತಾಲೂಕಿನ ಗರ್ಲಗುಂಜಿ ಮತ್ತು ಸಿಂಗಿನಕೊಪ್ಪ ಗ್ರಾಮಗಳ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು. ಮಹಾರಾಷ್ಟ್ರ ಏಕೀಕರಣ ಯುವ ಸಮಿತಿ ಹಾಗೂ ರಾಜ್ಯ ಮರಾಠಿ ವಿಕಾಸ ಸಂಸ್ಥೆ, ಮುಂಬೈ ಇವುಗಳ ಜಂಟಿ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಳೆದ ಒಂಬತ್ತು ವರ್ಷಗಳಿಂದ ಗಡಿಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ಈ ಉಪಕ್ರಮವನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಗರ್ಲಗುಂಜಿ ಶಾಲೆಯಲ್ಲಿ …

Read More »

ಬರದ ಹೊಡೆತಕ್ಕೆ ಅನ್ನದಾತ ಕಂಗಾಲು; ಪರಿಹಾರದ ಭರವಸೆ ನೀಡಿದ ಸಚಿವ ಎಂ.ಬಿ. ಪಾಟೀಲ

ಬರದ ಹೊಡೆತಕ್ಕೆ ಅನ್ನದಾತ ಕಂಗಾಲು; ಪರಿಹಾರದ ಭರವಸೆ ನೀಡಿದ ಸಚಿವ ಎಂ.ಬಿ. ಪಾಟೀಲ ವಿಜಯಪುರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿತ್ತನೆಯಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ. ಈ ನಡುವೆ ರವಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ರೈತರ ಜಮೀನುಗಳಲ್ಲಿ ಬೆಳೆ ಹಾನಿ ಪರಿಶೀಲಿಸಿದ್ದಾರೆ. ರೈತರಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸುವುದಾಗಿ …

Read More »

ನೆಹರು ಕಾಲದಿಂದ ನಾಗೇಂದ್ರ ಕಾಲದವರೆಗೆ ಕಾಂಗ್ರೆಸ್’ನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ

ನೆಹರು ಕಾಲದಿಂದ ನಾಗೇಂದ್ರ ಕಾಲದವರೆಗೆ ಕಾಂಗ್ರೆಸ್’ನಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ: ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ಸಚಿವ ನಾಗೇಂದ್ರ ಅವರನ್ನು ಮತ್ತೆ ಮಂತ್ರಿ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದನ್ನು ಖಂಡಿಸಿ ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ನಲ್ಲಿ ನೆಹರು ಕಾಲದಿಂದ ಆರಂಭವಾದ ಭ್ರಷ್ಟಾಚಾರ ಇಂದು ರಾಹುಲ್ ಮತ್ತು ಪ್ರಿಯಾಂಕಾ ಕಾಲದವರೆಗೂ ನದಿಯಂತೆ ಹರಿಯುತ್ತಿದೆ ಎಂದು ಅವರು ಆರೋಪಿಸಿದರು. ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಯಳ್ಳೂರು ಕೇಬಲ್ ಕಾರ್ ಯೋಜನೆ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಅಭಯ್ ಪಾಟೀಲ್ ಮನವಿ

ಯಳ್ಳೂರು ಕೇಬಲ್ ಕಾರ್ ಯೋಜನೆ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಅಭಯ್ ಪಾಟೀಲ್ ಮನವಿ ಬೆಳಗಾವಿಯ ಬಹುನಿರೀಕ್ಷಿತ ಯಳ್ಳೂರು ಕೇಬಲ್ ಕಾರ್ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರು ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ …

Read More »

ಜನಸೇವೆ ನಮ್ಮ ಸಂಕಲ್ಪ – ಸರ್ವರ ಸಬಲೀಕರಣ ನಮ್ಮ ಗುರಿ.

ಸಬಲೀಕರಣದ ಹೆಜ್ಜೆಯಾಗಿ ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಗೋಕಾಕ ನಗರದ ಗೃಹ ಕಚೇರಿಯಲ್ಲಿ ಇಂದು ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿಶೇಷಚೇತನರಿಗಾಗಿ ಶಾಸಕರ ಅನುದಾನದಡಿ ಮಂಜೂರಾದ 33 ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ವಿತರಿಸಿದರು ವಿಶೇಷಚೇತನರ ಸ್ವಾವಲಂಬನೆ, ಸುಗಮ ಸಂಚಾರ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಪುಟ್ಟ ನೆರವು ಮಹತ್ವದ ಹೆಜ್ಜೆಯಾಗಿದೆ. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಗೌರವ ಮತ್ತು ಸ್ವಾವಲಂಬನೆಯ ಬದುಕು ದೊರೆಯಬೇಕು …

Read More »

ವಾಶಿಂನಲ್ಲಿ 7 ತಿಂಗಳ ಗರ್ಭಿಣಿ ಪತ್ನಿ ಸಾವು: ಸೇನಾ ಯೋಧನ ವಿರುದ್ಧ ಕೊಲೆ ಆರೋಪ

ವಾಶಿಂನಲ್ಲಿ 7 ತಿಂಗಳ ಗರ್ಭಿಣಿ ಪತ್ನಿ ಸಾವು: ಸೇನಾ ಯೋಧನ ವಿರುದ್ಧ ಕೊಲೆ ಆರೋಪ ಮಹಾರಾಷ್ಟ್ರದ ವಾಶಿಂ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಏಳು ತಿಂಗಳ ಗರ್ಭಿಣಿಯಾಗಿದ್ದ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬ ಆರೋಪ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ವಿರುದ್ಧ ಕೇಳಿಬಂದಿದೆ. ಪೊಲೀಸರ ಪ್ರಕಾರ, ಕಾರಂಜಾ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ಸೇನಾ ಯೋಧ ಜ್ಞಾನೇಶ್ವರ ಮಡ್ನೆ ವಿರುದ್ಧ ಪ್ರಕರಣ ದಾಖಲಾಗಿದೆ. …

Read More »