Breaking News

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ

ಕುರುಬಗಟ್ಟಿ ಗ್ರಾಮದಲ್ಲಿ ನೂತನವಾಗಿ ಸ್ಥಾಪಿಸಲಾದ ‘ಹಾಲು ಉತ್ಪಾದಕರ ಸಹಕಾರಿ ಸಂಘ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಉದ್ಘಾಟನೆ ನೆರವೇರಿಸಲಾಯಿತು. ಈ ಸುಂದರ ಸಂದರ್ಭದಲ್ಲಿ ಗ್ರಾಮಸ್ಥರು ಮತ್ತು ಸಂಘದ ವತಿಯಿಂದ ನೀಡಿದ ಆತ್ಮೀಯ ಗೌರವ ಸನ್ಮಾನವನ್ನು ಸ್ವೀಕರಿಸಿದೆ. ರೈತರ ಏಳಿಗೆಗಾಗಿ ಈ ಸಂಘವು ಸದಾ ಶ್ರಮಿಸಲಿ. ಹೈನುಗಾರರ ಮತ್ತು ರೈತರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸುತ್ತೇನೆ. ಈ ವೇಳೆ ಸಂಘ’ದ ಅಧ್ಯಕ್ಷರು, ಸರ್ವ ಸದಸ್ಯರು, ಸ್ಥಳೀಯ …

Read More »

12 ಅಧಿವೇಶನಗಳಲ್ಲಿ ಉತ್ತರ ಕರ್ನಾಟಕದ ಬಗ್ಗೆ ಇಂತಿಂಥ ವಿಷಯಗಳು ಚರ್ಚೆಯಾಗಿ, ಅನುಷ್ಠಾನಕ್ಕೆ ತರಲಾಗಿದೆ ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರು ಬಹಿರಂಗಪಡಿಸಬೇಕು ಎಂದು ಅಶೋಕ ಚಂದರಗಿ ಆಗ್ರಹಿಸಿದ್ದಾರೆ.

ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನಕ್ಕೆ ಇನ್ನೇನು ಆರು ದಿನ ಮಾತ್ರ ಬಾಕಿ ಉಳಿದಿವೆ. ಪ್ರತಿವರ್ಷದಂತೆ ರಾಜ್ಯ ಸರ್ಕಾರ ಪ್ರವಾಸಕ್ಕೆ ಬಂದಂತೆ ಬಂದು ಹೋಗಬಾರದು. ಕಾಟಾಚಾರದ ಅಧಿವೇಶನ ಅವಶ್ಯಕತೆ ಇಲ್ಲ. ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಮಾತ್ರ ಚರ್ಚಿಸಿ, ಇದೇ ಅಧಿವೇಶನದಲ್ಲಿ ಅದನ್ನು ಅನುಷ್ಠಾ‌ನಕ್ಕೆ ತರುವ ನಿರ್ಣಯ ಕೈಗೊಳ್ಳಬೇಕು. ಜೊತೆಗೆ ಇಲ್ಲಿಯವರೆಗೆ ಕೈಗೊಂಡ ನಿರ್ಣಯಗಳ ವರದಿ ಮಂಡಿಸಬೇಕು ಎಂದು ಇಲ್ಲಿನ ಜನರು ಆಗ್ರಹಿಸುತ್ತಿದ್ದಾರೆ. ಹೌದು, 2006ರಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಪರಾಕಾಷ್ಠೆಗೆ …

Read More »

ಸಿಎಂ‌ – ಡಿಸಿಎಂ ಎರಡನೇ ಬ್ರೇಕ್ ಫಾಸ್ಟ್​ಗೂ ನನ್ನನ್ನು ಕರೆದಿಲ್ಲ ಎಂದು ಸಚಿವ ಜಿ ಪರಮೇಶ್ವರ್

ಬೆಂಗಳೂರು: ಅಗತ್ಯ ಬಿದ್ದರೆ ನಮ್ಮ ಮನೆಗೂ ಬ್ರೇಕ್ ಫಾಸ್ಟ್​ಗೆ ಕರೆಯುತ್ತೇನೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಮನೆಯಲ್ಲಿ ಸಿಎಂ ಬ್ರೇಕ್ ಫಾಸ್ಟ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪಕ್ಷದಲ್ಲಿ ಎಲ್ಲವೂ ತಿಳಿಯಾಗಿದೆ. ಈಗ ಸಂತೋಷದ ವಾತಾವರಣವಿದೆ. ಸಿಎಂ‌-ಡಿಸಿಎಂ ಎರಡನೇ ಬ್ರೇಕ್ ಫಾಸ್ಟ್​ಗೂ ನನ್ನನ್ನು ಕರೆದಿಲ್ಲ. ಸದ್ಯಕ್ಕೆ ಅವರು ಇಬ್ಬರೇ ತಿಂಡಿ ತಿನ್ನುತ್ತಿದ್ದಾರೆ. ನಮ್ಮನ್ನೂ ಕರೆದರೆ ನಾವೂ ತಿಂಡಿ ತಿನ್ನಲು ಹೋಗುತ್ತೇವೆ. ಅಗತ್ಯ ಬಿದ್ದರೆ …

Read More »

ಬ್ಲೇಡ್​ನಿಂದ ಮಹಿಳೆ ಕುತ್ತಿಗೆ ಮೇಲೆ ದಾಳಿ ಮಾಡಿ ಚಿನ್ನಾಭರಣ, ನಗದು ಕದ್ದು ಪರಾರಿ

ಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು ಬ್ಲೇಡ್​ನಿಂದ ದಾಳಿ ಮಾಡಿ ಕೊರಳಲ್ಲಿದ್ದ ಚಿನ್ನಾಭರಣ ಹಾಗೂ ಮನೆಯಲ್ಲಿದ್ದ ನಗದು ದೋಚಿ ಪರಾರಿಯಾದ ಘಟನೆ ನಡೆದಿದೆ. ಅಮೀರ್ ಬಿ. ಪಟೇಲ್ ದುಷ್ಕರ್ಮಿಗಳ ದಾಳಿಗೆ ಒಳಗಾದ ಮಹಿಳೆ. ತೀವ್ರ ರಕ್ತಸ್ರಾವದಿಂದ ಬಳಲಿದ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮೀರ್ ಬಿ ಪಟೇಲ್ ಅವರ ಮಗ ಹೈದರಾಬಾದ್​ನಲ್ಲಿ ಕೆಲಸ ಮಾಡುವ …

Read More »

ಹುಬ್ಬಳ್ಳಿ: ಇಡಿ ಅಧಿಕಾರಿಗಳೆಂದು ಹೇಳಿಕೊಂಡು ಬಂಗಾರ, ಹಣ ದೋಚಿದ ಆರೋಪಿಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ಹುಬ್ಬಳ್ಳಿ: ಕಳೆದ ಒಂದು ವಾರದ ಹಿಂದೆ (ನವೆಂಬರ್ 19 ) ಇಡಿ ಅಧಿಕಾರಿಗಳೆಂದು ಹೇಳಿಕೊಂಡು, ಮೂರು ಕೋಟಿ ರೂಪಾಯಿಗೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಆರೋಪಿಗಳನ್ನು ಜಿಲ್ಲೆಯ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಐದಾರು ಅಪರಿಚಿತರು ಬಂದು ಚಿನ್ನದ ವ್ಯಾಪಾರಿಯೊಂದಿಗೆ ನಾವು ಇಡಿ ಅಧಿಕಾರಿಗಳೆಂದು ಹೇಳಿಕೊಂಡಿದ್ದಲ್ಲದೇ, ಅವರನ್ನು ಕಿಡ್ನ್ಯಾಪ್​ ಮಾಡಿ, ಬೆಳಗಾವಿಯತ್ತ ಕರೆದೊಯ್ದಿದ್ದಾರೆ. ನಂತರ ಚಿನ್ನದ ವ್ಯಾಪಾರಿಯಿಂದ 2.942 ಕೆಜಿ ಚಿನ್ನದ ಆಭರಣ, 2 …

Read More »

ಬೀಡಿ – ಸಿಗರೇಟ್ ಅಕ್ರಮ ಮಾರಾಟ ಬಂದ್ ಮಾಡಿದ ಜೈಲಾಧಿಕಾರಿಗಳ ವಿರುದ್ಧ ಕೈದಿಗಳ ಪ್ರತಿಭಟನೆ

ಬೆಂಗಳೂರು: ರಾಜ್ಯದ ಅತಿದೊಡ್ಡ ಜೈಲಾಗಿರುವ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅವ್ಯಾಹತವಾಗಿ ಬಳಕೆಯಾಗುತ್ತಿದ್ದ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನ ವಶಕ್ಕೆ ಪಡೆದುಕೊಂಡಿದ್ದ ಜೈಲಧಿಕಾರಿಗಳು, ಇದೀಗ ಅಕ್ರಮವಾಗಿ ಬೀಡಿ ಹಾಗೂ ಸಿಗರೇಟ್ ಮಾರಾಟವನ್ನು ಬಂದ್​ ಮಾಡಿರುವುದನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಜೈಲಿನ ಕೈಪಿಡಿ ಅನುಸಾರ ಬೀಡಿ ಹಾಗೂ ಸಿಗರೇಟ್ ವ್ಯಾಪಾರ ಮಾಡುವುದು ಕಾನೂನುಬಾಹಿರ. ಜೈಲು ಸಿಬ್ಬಂದಿ ಅದಕ್ಷತೆ ಹಾಗೂ ಕುಮ್ಮಕ್ಕಿನಿಂದ ಬಂಧಿಗಳು ಅಕ್ರಮವಾಗಿ ನಿಷೇಧಿತ ವಸ್ತುಗಳನ್ನ ಮಾರಾಟ ಮಾಡುತ್ತಿದ್ದರು. …

Read More »

ಸರಕು ಸಾಗಣೆ, ಜನರ ಪ್ರಯಾಣ: ನವೆಂಬರ್​​ ತಿಂಗಳ ಆದಾಯದಲ್ಲಿ ನೈಋತ್ಯ ರೈಲ್ವೆ ಹೊಸ ದಾಖಲೆ

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿ, ಪ್ರಮುಖ ಕಾರ್ಯಾಚರಣ ಕ್ಷೇತ್ರಗಳಲ್ಲಿ ತನ್ನ ಸಕಾರಾತ್ಮಕ ಸಾಧನೆಯ ವೇಗವನ್ನು ಮುಂದುವರೆಸಿದೆ. ಈ ತಿಂಗಳು ನೈಋತ್ಯ ವಲಯವು 4.469 ಮಿಲಿಯನ್ ಟನ್ ಮೂಲ ಸರಕು ಸಾಗಣೆಯನ್ನು ನಿರ್ವಹಿಸಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ ಸಾಧಿಸಿದ 3.941 ಮಿಲಿಯನ್ ಟನ್‌ಗಿಂತ ಶೇ.13.4ರಷ್ಟು ಹೆಚ್ಚಾಗಿದೆ. ಸ್ಟೀಲ್ ಕಾರ್ಖಾನೆಗೆ ಕಚ್ಚಾ ಸಾಮಗ್ರಿ (RMSP), ಪಿಗ್ ಐರನ್ ಮತ್ತು ಉಕ್ಕು, ಕಬ್ಬಿಣದ …

Read More »

ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್

ಮೈಸೂರು: ಹೆಣ್ಣು ಭ್ರೂಣ ಹತ್ಯೆಯಿಂದ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ಇಂದು ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮೈಸೂರು ವಿಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಲಿಂಗಾನುಪಾತದ ಆಧಾರದ ಮೇಲೆ ಲೆಕ್ಕ ಹಾಕುವುದರ ಬದಲು, ಏಪ್ರಿಲ್​ನಿಂದ ಅಕ್ಟೋಬರ್ ಮಾಹೆಯವರೆಗೆ ಜನನವಾದ ಮಕ್ಕಳಲ್ಲಿ ಗಂಡು …

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

ಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್. ವಿ. ದೇಶಪಾಂಡೆ ಸ್ಪಷ್ಟಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹೊಟ್ಟೆ ತುಂಬಾ ಉಪಹಾರ ಸೇವನೆ …

Read More »

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

ಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಯಿತು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ ಬದಲಾಗಿ ಇಂದಿರಾ ಆಹಾರ ಕಿಟ್ …

Read More »