Breaking News

ಸಿಎಂ ಹುದ್ದೆ ಖಾಲಿ ಇಲ್ಲ, ಪಕ್ಷದಲ್ಲಿ ಅದರ ಚರ್ಚೆಯೇ ಇಲ್ಲ: C.M.

ನವದೆಹಲಿ/ಬೆಂಗಳೂರು : “ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯೇ ಇಲ್ಲ” ಎಂದು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ದೆಹಲಿ ಭೇಟಿಯಲ್ಲಿರುವ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದಾರೆ. ಹೀಗಾಗಿ, ಈ ಕುರಿತ ಚರ್ಚೆಯೇ ಇಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ನಾವಿಬ್ಬರೂ ಅದನ್ನು ಪಾಲಿಸುತ್ತೇವೆ. ಬದ್ಧರಾಗಿದ್ದೇವೆ” ಎಂದು ನಾಯಕತ್ವ ಬದಲಾವಣೆಯನ್ನು ನಿರಾಕರಿಸಿದರು. …

Read More »

ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡ್ತೀರಾ? ಹಾಗಾದರೆ ಕಿಸೆಯಲ್ಲಿರುವ ಮೊಬೈಲ್ ಜೋಪಾನ: 49 ಮೊಬೈಲ್ ಕಳ್ಳತನ ಮಾಡಿದ್ದ ಚೋರ ಅರೆಸ್ಟ್

ಬೆಂಗಳೂರು: ವಂದೇ ಭಾರತ್ ರೈಲುಗಳಲ್ಲಿ ಪ್ರಯಾಣಿಕರ ಗಮನ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಸೂರಜ್ ಪಾಸ್ವನ್ ಬಂಧಿತ ಆರೋಪಿ. ಈತನಿಂದ 28 ಲಕ್ಷ ಮೌಲ್ಯದ 13 ಐ-ಫೋನ್ ಸೇರಿದಂತೆ ವಿವಿಧ ಕಂಪನಿಗಳ 49 ಮೊಬೈಲ್​​ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಕೃತ್ಯದಲ್ಲಿ ಮೂವರು ಪ್ರಮುಖ ಆರೋಪಿಗಳು ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ಧಾರೆ. ಕಳೆದ …

Read More »

ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರ ನೇಮಕ

ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರ ನೇಮಕ   ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸ್ವಚ್ಛತೆ ಹಾಗೂ ಕಸದ ನಿರ್ವಹಣೆ ದೊಡ್ಡ ಸವಾಲಾಗಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಘನತ್ಯಾಜ್ಯ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರನ್ನು (ಕಮ್ಯುನಿಟಿ ಮೊಬೈಲೈಸರ್) ನೇಮಕ ಮಾಡಿಕೊಂಡಿದೆ. ಈ ಸಮುದಾಯ ನಿರ್ವಾಹಕರು ಜುಲೈ 15 ರಿಂದ ಕಾರ್ಯಾರಂಭ ಮಾಡಲಿದ್ದಾರೆ. ಸ್ವಚ್ಛ …

Read More »

ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮರಣೋತ್ತರ ವರದಿ ತಿರುಚಿ ನೀಡಿ ಎಂದು 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ಸೇರಿ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹಾವೇರಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಗುರುರಾಜ್ ಬಿರಾದಾರ ಹಾಗೂ ಮಧ್ಯವರ್ತಿ ಚನ್ನಬಸವಯ್ಯ ಕುಲಕರ್ಣಿ ಬಂಧಿತ ಆರೋಪಿಗಳು. ಹಾವೇರಿ ನಗರದ ಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ವಂದನಾ ತುಪ್ಪದ ಎಂಬ ಬಾಲಕಿ ಚಿಕಿತ್ಸೆ ಸಮಯದಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಹಾವೇರಿ ನಗರ ಠಾಣೆಯಲ್ಲಿ ದೂರು …

Read More »

ಸಿದ್ದರಾಮಯ್ಯ ಅವರ ಅನುಭವ ಹಂಚಿಕೊಳ್ಳಲು ರಾಷ್ಟ್ರ ರಾಜಕಾರಣಕ್ಕೆ ಆಯ್ಕೆ: ಸತೀಶ್ ಜಾರಕಿಹೊಳಿ

ಸಿಎಂ ಸಿದ್ದರಾಮಯ್ಯ ಅವರ ಅನುಭವವನ್ನ ಬಳಸಿಕೊಳ್ಳಲು ರಾಷ್ಟ್ರಮಟ್ಟದಲ್ಲಿ ಸಲಹೆಗಾರರಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನ ಯಾವ ಕಾರಣಕ್ಕೆ ಹಾಗೂ ಯಾವ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಓಬಿಸಿ ಸಲಹಾ ಸಮಿತಿಗೆ ಆಯ್ಕೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ಈ ಬಗ್ಗೆ ಹೈಕಮಾಂಡ್ ಅವರೇ ಉತ್ತರ ಕೊಡಬೇಕು. ಬಹುಶಃ ಅವರ ಅನುಭವವನ್ನ ರಾಷ್ಟ್ರ ಮಟ್ಟದಲ್ಲಿ ಬಳಕೆ …

Read More »

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮತ್ತೋರ್ವ ವೈದ್ಯ

ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾಸ್ಪತ್ರೆ ಸರ್ಜನ್ ಓರ್ವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಕ್ರಿಮ್ಸ್)ಯ ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ್ ಕುಡ್ತಲಕರ್ ಲೋಕಾಯುಕ್ತ ಬಲೆಗೆ ಬಿದ್ದವರು. ಆಸ್ಪತ್ರೆಯ ಹಾಸಿಗೆಗೆ ಬೆಡ್ ಶೀಟ್ ಪೂರೈಸಿದ್ದಕ್ಕೆ ಬಿಲ್ ಮೊತ್ತ 3.5 ಲಕ್ಷ ಹಣ ಪಾವತಿಸಲು 75 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರ ಮೊಹಸೀನ್ ಖಾನ್ ಅವರಿಂದ …

Read More »

ಮಗ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಹೃದಯಾಘಾತದಿಂದ ಸಾವನ್ನಪ್ಪಿದ ತಂದೆ

ಮಗ ಆತ್ಮಹತ್ಯೆಗೆ ಶರಣಾದ ಸುದ್ದಿ ಕೇಳಿ ಆಘಾತಗೊಂಡ ತಂದೆ ಕೂಡ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೆಹಬೂಬ್ ಆತ್ಮಹತ್ಯೆಗೆ ಶರಣಾದ ೨೨ ವರ್ಷದ ಮಗ. ಜಮೀನಿನ ದಾರಿ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳವಾಗಿ ಹಿರಿಯರು ನ್ಯಾಯಪಂಚಾಯಿತಿ ಮಾಡಿ ಬಗೆಹರಿಸಿದ್ದರು. ಆದರೆ ಕೆಲವರು ಯುವಕನ ವಿರುದ್ಧ ಜಾತಿ ನಿಂದನೆ ಮಾಡಿ ಜೈಲಿಗೆ ಕಳುಹಿಸುವುದಾಗಿ ಹೆದರಿಸಿದ್ದಾರೆ. ಇದರಿಂದ ಹೆದರಿದ ಯುವಕ …

Read More »

*ಯುವತಿಯರ ಫೋಟೋ ಕ್ಲಿಕ್ಕಿಸಿ ಅಸಭ್ಯವಾಗಿ ಕಾಣುವಂತೆ ಪೋಸ್ಟ್ ಮಾಡುತ್ತಿದ್ದ ಆರೋಪಿ ಅರೆಸ್ಟ್

ಯುವತಿಯರ, ಮಹಿಳೆಯರ ಫೋಟೋ ಕ್ಲಿಕ್ಕಿಸಿ, ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು ಅದನ್ನು ಅಸಭ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಂಧಿತನನ್ನು ಕೆ.ಆರ್.ಪುರಂ ನ ಗುರುದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಮುಗಿಸಿ ಕೆಲಸಕ್ಕಾಗಿ ಯತ್ನಿಸುತ್ತಿದ್ದ.ಇತ್ತೀಚೆಗೆ ಕಂಡ ಕಂಡ ಹುಡುಗಿಯರ ಫೋಟೋ ಕ್ಲಿಕ್ಕಿಸಿ ಅದನ್ನು ಅಸಭ್ಯವಾಗಿ ಎಡಿಟ್ ಮಾಡಿ ಇನ್ ಸ್ಟಾ …

Read More »

ಕಾಲೇಜು ಪ್ರಾಂಶುಪಾಲ ಹೃದಯಾಘಾತದಿಂದ ಸಾವು

ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಲೇಜು ಉಪ ಪ್ರಾಂಶುಪಾಲ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗುರುಬಸವಯ್ಯ ಸಾಲಿಮಠ (೫೧) ಹೃದಯಾಘಾತಕ್ಕೆ ಬಲಿಯಾದವರು. ಕಲಬುರಗಿಯ ಕೊಹಿನೂರ್ ಕಾಲೇಜಿನ ಉಪ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಲಬುರಗಿ ನಗರದ ಬಿದ್ದಾಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.ಬೆಳಿಗ್ಗೆ ವಾಕಿಂಗ್ ಮುಗಿಸಿ ಮನೆಗೆ ಬಂದವರು ಸ್ವಲ್ಪ ನೀರು ಕುಡಿದಿದ್ದಾರೆ. ನೀರು ಕುಡಿಯುತ್ತಿದ್ದಂತೆಯೇ ವಾಂತಿಯಾಗಿದೆ. ಹಠಾತ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Read More »

ಅಝಮ್ ನಗರ ಸರ್ಕಾರಿ ಉರ್ದು ಶಾಲೆಗೆ “ನಗರದ ಅತ್ಯುತ್ತಮ ಶಾಲೆ” ಪುರಸ್ಕಾರ

ಅಝಮ್ ನಗರ ಸರ್ಕಾರಿ ಉರ್ದು ಶಾಲೆಗೆ “ನಗರದ ಅತ್ಯುತ್ತಮ ಶಾಲೆ” ಪುರಸ್ಕಾರ ಬೆಳಗಾವಿ ನಗರದಲ್ಲಿರುವ ಅಝಮ್ ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ.11 ಇತ್ತೀಚೆಗೆ ಶಿಕ್ಷಣ ಇಲಾಖೆಯಿಂದ “ನಗರದ ಅತ್ಯುತ್ತಮ ಶಾಲೆ” ಎಂಬ ಪ್ರಶಸ್ತಿ ಪಡೆಯುವ ಮೂಲಕ ಹೆಮ್ಮೆಪಡುವಂತಹ ಸಾಧನೆ ಮಾಡಿದೆ. ಶಾಲೆಯ ಸರ್ವತೋಮುಖ ಅಭಿವೃದ್ಧಿಯು ಪ್ರಶಂಸನೀಯವಾಗಿದ್ದು, ಈ ಸಾಧನೆಗೆ ಶಿಕ್ಷಣ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಳಗಾವಿಯ ಉತ್ತರ ಶಾಸಕರಾದ ಆಸೀಫ್ …

Read More »