Breaking News

ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ

ಲೋಂಡಾದ ವಾಟರಾ ಬಳಿ ಟ್ರಕ್ ಪಲ್ಟಿ: ಜಾನುವಾರುಗಳನ್ನು ರಕ್ಷಿಸಿದ ಪೊಲೀಸರು ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಲೋಂಡಾ ರೇಲ್ವೆ ಗೇಟ್ ಬಳಿ, ಗೋವಾಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಟ್ರಕ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 11 ಜಾನುವಾರುಗಳು ಸಿಕ್ಕಿಹಾಕಿಕೊಂಡಿದ್ದವು. ಸ್ಥಳಕ್ಕೆ ತಕ್ಷಣವೇ ಲೋಂಡಾ ಪೊಲೀಸ್ ಪಡೆ ಧಾವಿಸಿ, ಜೆಸಿಪಿ ಯಂತ್ರದ ಸಹಾಯದಿಂದ ಎಲ್ಲ ಜಾನುವಾರುಗಳನ್ನು ಸುರಕ್ಷಿತವಾಗಿ ಹೊರತೆಗೆದು ರಕ್ಷಣೆ ಮಾಡಿದ್ದಾರೆ. ಈ ಅಪಘಾತದ ಕುರಿತು ಲೋಂಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಸಂತ ಮೀರಾ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ

ಸಂತ ಮೀರಾ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ ಅನಗೋಳದ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ ಶ್ರೀನಿವಾಸ್ ಜನಕಲ್ಯಾಣ ಸಂಸ್ಥೆ ಕಾರ್ಯದರ್ಶಿ ಸುಧೀರ್ ಗಾಡ್ಗೀಳರಿಂದ ಚಾಲನೆ ಅತಿಥಿಗಳಿಂದ ಭಾಷಣ ವಿದ್ಯಾರ್ಥಿಗಳ ಶಿಕ್ಷಕರ ಸನ್ಮಾನ ಅನಗೋಳದಲ್ಲಿರುವ ಸಂತ ಮೀರಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಗುರುಪೂರ್ಣಿಮೆ ಹಬ್ಬವನ್ನು ಅದ್ಧೂರಿಯಾಗಿ ಮತ್ತು ಭಕ್ತಿಭಾವದಿಂದ ಶಾಲೆಯ ಮಾಧವ ಸಭಾಂಗಣದಲ್ಲಿ ಈ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮಕ್ಕೆ ಅತಿಥಿಯಾಗಿ ಶ್ರೀನಿವಾಸ, ಜನಕಲ್ಯಾಣ ಟ್ರಸ್ಟ್‌ ಕಾರ್ಯದರ್ಶಿ ಸುಧೀರ್ ಗಾಡಗಿಳ್, …

Read More »

ಪಡಿತರ ಅಕ್ಕಿ ಕಳ್ಳಸಾಗಾಟಕ್ಕೆ ಅಧಿಕಾರಿಗಳ ಕೃಪಾ ಕಟಾಕ್ಷ?

ಪಡಿತರ ಅಕ್ಕಿ ಕಳ್ಳಸಾಗಾಟಕ್ಕೆ ಅಧಿಕಾರಿಗಳ ಕೃಪಾ ಕಟಾಕ್ಷ? ಬಾಗಲಕೋಟೆಯಲ್ಲಿ ಮತ್ತೇ ಅಕ್ರಮ ಪಡಿತರ ಅಕ್ಕಿ ದಂಧೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಮತ್ತೇ ಅಕ್ರಮ ಪಡಿತರ ಅಕ್ಕಿ ದಂಧೆ ಬಯಲಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಾರ್ಯವೈಖರಿ ಜನರಲ್ಲಿ ಶಂಕೆ ಮೂಡಿದೆ. ಗಡಿಪಾರಾದ ಆರೋಪಿ ರಾಘವೇಂದ್ರ ತೇಲಿ, ಈಗ ಮತ್ತೆ ಅಕ್ಕಿ ಅಕ್ರಮವಾಗಿ ದಂಧೆಯಲ್ಲಿ ಸಕ್ರಿಯನಾಗಿದ್ದಾನೆ. ರಿಜಿಸ್ಟ್ರೇಶನ್ ಇಲ್ಲದ ಲಾರಿ ಹಾಗೂ ಮಿನಿ ಟ್ರಕ್‌ನಲ್ಲಿ ಚೀಲ ಬದಲಿಸಿ ಚಿಕ್ಕೋಡಿ ಮಾರ್ಗವಾಗಿ …

Read More »

ಭಾರಿ ಮಳೆಗೆ ಬಾಗಲಕೋಟೆಯಲ್ಲಿ ಹೆಚ್ಚಿದ ಪ್ರವಾಹ ಭೀತಿ !!!

ಭಾರಿ ಮಳೆಗೆ ಬಾಗಲಕೋಟೆಯಲ್ಲಿ ಹೆಚ್ಚಿದ ಪ್ರವಾಹ ಭೀತಿ !!! ಮಹಾರಾಷ್ಟ್ರ ಹಾಗೂ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆ ಭೀತಿ ಹೆಚ್ಚುತ್ತಿದೆ. ಕೃಷ್ಣಾ ನದಿಗೆ ಈಗ 1 ಲಕ್ಷ 7 ಸಾವಿರ ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, ಆಲಮಟ್ಟಿಯ ಹಿನ್ನೀರು ಮಟ್ಟ ದಿನದಿಂದ ದಿನಕ್ಕೆ ಏರುತ್ತಿದೆ. ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತಿದೆ. ಘಟಪ್ರಭಾ ನದಿಗೂ ಈಗ 15 ಸಾವಿರ ಕ್ಯೂಸೆಕ್ಸ್ ನೀರು …

Read More »

ಎತ್ತುಗಳನ್ನು ಜಿಗಿಸಿ ಕರಿ ಹರಿದು ಕಾರಹುಣ್ಣಿಮೆ ಆಚರಣೆ… ಹುಕ್ಕೇರಿಯಲ್ಲಿ ಕಾರಹುಣ್ಣಿಮೆ ಸಡಗರ

ಎತ್ತುಗಳನ್ನು ಜಿಗಿಸಿ ಕರಿ ಹರಿದು ಕಾರಹುಣ್ಣಿಮೆ ಆಚರಣೆ… ಹುಕ್ಕೇರಿಯಲ್ಲಿ ಕಾರಹುಣ್ಣಿಮೆ ಸಡಗರ ಎತ್ತುಗಳ ಮೂಲಕ ಕರಿ ಹರಿಯುವ ಮೂಲಕ ಹುಕ್ಕೇರಿ ನಗರದಲ್ಲಿ ಕಾರ ಹುಣ್ಣಿಮೆಯನ್ನು ಆಚರಿಸಲಾಯಿತು. ಹುಕ್ಕೇರಿ ಪಟ್ಟಣದ ಹಳ್ಳದಕೇರಿ ಭಾಗದ ದುರದುಂಡಿ ನಾಯಿಕ ಇವರ ಮನೆಯಲ್ಲಿ ಎತ್ತಿಗೆ ಪೂಜೆ ಸಲ್ಲಿಸುವ ಮೂಲಕ ಕರಿ ಹಾಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಣ್ಣದಿಂದ ಅಲಂಕರಿಸಿದ ಎತ್ತುಗಳನ್ನು ರೈತರು ಗ್ರಾಮದ ವಿವಿಧ ಓಣಿಗಳಲ್ಲಿ ಓಡಿಸಿ ಮುಖ್ಯ ಬೀದಿಯಲ್ಲಿ ಬೃಹತ್ ಆಕಾರದ ಮುಳ್ಳು ,ಕಂಟಿ …

Read More »

5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ

5 ಗಾಂಜಾ ಮಾರಾಟ ಪ್ರಕರಣ ಬೇಧಿಸಿ 11 ಜನರ ಬಂಧನ 5 ಅಕ್ರಮ ಗಾಂಜಾ ಮಾರಾಟ ಪ್ರಕರಣಗಳನ್ನು ಬೇಧಿಸಿದ ಬೆಳಗಾವಿ ಪೊಲೀಸರು ಒಟ್ಟು 11 ಜನರನ್ನು ಬಂಧಿಸಿ ಒಟ್ಟು 1 ಲಕ್ಷ 3000 ರೂಪಾಯಿ ಮೌಲ್ಯದ 3 ಕಿಲೋ 132 ಗ್ರಾಂ. ಗಾಂಜಾ ಮತ್ತು 1 ಲಕ್ಷ 55 ಸಾವಿರ ಮೌಲ್ಯದ ಬೈಕ್’ಗಳನ್ನು ವಶಕ್ಕೆ ಪಡೆದಿದ್ದಾರೆ. ಬೈಲಹೊಂಗಲ ತಾಲೂಕಿನ ಮರಕಟ್ಟಿಯಲ್ಲಿ ಬೈಕ್’ನಲ್ಲಿ ಅನಧಿಕೃತವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಂಜುನಾಥ ಕುರೇರನನ್ನು …

Read More »

ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ

ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಆ16ರಂದು ಸಿಎಂ ರಿಂದ ಉದ್ಘಾಟನೆ ಸಂಗೋಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಅವರು ಖಾನಾಪೂರ ತಾಲೂಕಿನ ನಂದಗಡ ಮತ್ತು ಬೈಲಹೊಂಗಲ ತಾಲೂಕಿನ ಸಂಗೋಳಿ ಗಳಲ್ಲಿ ಉಳಿದಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸೌಂದರ್ಯೀಕರಣ ಕಾರ್ಯಗಳಿಗಾಗಿ ಸರ್ಕಾರ 28 ಕೋಟಿ ರೂ. ನಿಧಿಯನ್ನು ಅನುಮೋದಿಸಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸ್ ಸೌಧದಲ್ಲಿ ಅವರ ಅಧ್ಯಕ್ಷತೆಯಲ್ಲಿ ಸಂಗೋಳಿ ರಾಯಣ್ಣ …

Read More »

ಬೀದರ್ ಜಿಲ್ಲೆಯಲ್ಲಿ ಎರಡು ವರ್ಷದಲ್ಲಿ 132 ಮಂದಿ ರೈತರ ಆತ್ಮಹತ್ಯೆ

ಬೀದರ್​, ಜುಲೈ 09: ಬೀದರ್ (Farmers) ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೀದರ್‌ (Bidar) ಕೃಷಿ ಪ್ರಧಾನ ಜಿಲ್ಲೆಯಾಗಿದೆ. ಕಬ್ಬು, ಉದ್ದು, ಹಸಿರು ಕಾಳು, ಸೋಯಾಬಿನ್‌, ಶುಂಠಿ ಹೀಗೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತದೆ. ಜಿಲ್ಲೆಯ ಒಂದಷ್ಟು ಕಡೆ ನೀರಾವರಿಯ ಸೌಲಭ್ಯವೂ ಇದೆ. ಆದರೆ, ಜಿಲ್ಲೆಯಲ್ಲಿ ರೈತರು ಆತ್ಮಹತ್ಯೆ ಸಂಖ್ಯೆ ಮಾತ್ರ ಏರುತ್ತಲೇ ಇದೆ. ಎರಡೂವರೆ ವರ್ಷದಲ್ಲಿ ಬೀದರ್‌ ಜಿಲ್ಲೆಯೊಂದರಲ್ಲೇ ಬರೋಬ್ಬರಿ 132 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹುತೇಕ ರೈತರ ಆತ್ಮಹತ್ಯೆಗೆ …

Read More »

ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ

ಬೆಂಗಳೂರು, (ಜುಲೈ 09):  ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಹೇಳಿಕೊಂಡು ಗಾಳ ಹಾಕುತ್ತಿದ್ದ ಸವಿತಾ ಎನ್ನುವ ಮಹಿಳೆಯನ್ನು ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ …

Read More »

ಪಾಠ ಕೇಳುವಾಗಲೇ ಹೃದಯಾಘಾತದಿಂದ ಮೃತಪಟ್ಟ 4ನೇ ತರಗತಿ ವಿದ್ಯಾರ್ಥಿ

ಚಾಮರಾಜನಗರ, ಜುಲೈ 09: ಗುಂಡ್ಲುಪೇಟೆ (Gundupete) ತಾಲೂಕಿನ ಕುರಬರಗೇರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ಓರ್ವ ವಿದ್ಯಾರ್ಥಿಯು ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10) ಮೃತ ದುರ್ದೈವಿ. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಶಾಲೆಯಲ್ಲಿ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ​ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು ಎಂದು ತಿಳಿದುಬಂದಿದೆ.

Read More »