ಬೆಂಗಳೂರು: ಡ್ರಗ್ ಪೆಡ್ಲರ್ನನ್ನು ಬಂಧಿಸಲು ತೆರಳಿದ್ದ ಬ್ಯಾಟರಾಯನಪುರ ಪೊಲೀಸರಿಗೆ ಶಾಕ್ ಎದುರಾಗಿದ್ದು. ಆರೋಪಿ ಮನೆಯ ಮೇಲೆ ದಾಳಿ ನಡೆಸಿದ ವೇಳೆ 17 ಮಾರಕಾಸ್ತ್ರಗಳು, 230 ಕಳವು ಮೊಬೈಲ್ಗಳು ಹಾಗೂ 600-700 ಗ್ರಾಂ ಗಾಂಜಾ ಪತ್ತೆಯಾಗಿದೆ. ಜುಲೈ 1ರಂದು ರಾತ್ರಿ ಸುಮಾರು 10.50ಕ್ಕೆ ಬ್ಯಾಟರಾಯನಪುರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 37 ವರ್ಷದ ಅಕ್ಬರ್ ಶರೀಫ್ನನ್ನು ಗಸ್ತಿನಲ್ಲಿದ್ದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಕ್ಬರ್ ನೀಡಿದ …
Read More »ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಸಾಧ್ಯ; ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ
ಬೆಂಗಳೂರು: ಎಲ್ ನಿನೊ ಪರಿಣಾಮದಿಂದ ಜಲವಿದ್ಯುತ್ ಉತ್ಪಾದನೆ ಕುಸಿಯುವ ಸಾಧ್ಯತೆ ಇರುವುದನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ತುರ್ತು ಕಾರ್ಯಯೋಜನೆ ರೂಪಿಸಬೇಕು. ಜೊತೆಗೆ ವಿದ್ಯುತ್ ಸಂಗ್ರಹಣೆ ಹಾಗೂ ಇತರೆ ಮೂಲಗಳಿಂದ ಉತ್ಪಾದನೆ ಹೆಚ್ಚಿಸಲು ತುರ್ತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಮೊದಲ ಬಾರಿಗೆ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ, ಬರಗಾಲದ ಪರಿಸ್ಥಿತಿ ಎದುರಿಸಲು ಇಲಾಖೆ ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ …
Read More »ಸ್ವಂತ ಖರ್ಚಿನಲ್ಲಿ ಮೋಡ ಬಿತ್ತನೆಗೆ ಸಜ್ಜಾದ ಶಾಸಕರು
ಹಾವೇರಿ: ರಾಜ್ಯದಲ್ಲೀಗ ಎಲ್ಲೆಲ್ಲೂ ಬರಗಾಲದ ಛಾಯೆ ಆವರಿಸಿದೆ. ರೈತರ ಜಮೀನಿನಲ್ಲಿ ಬಿತ್ತನೆ ಮಾಡಿದ ಬೀಜ ಮಳೆರಾಯನ ಅವಕೃಪೆಯಿಂದ ಮೊಳಕೆ ಒಡೆಯುತ್ತಿಲ್ಲ. ಕೆಲವೆಡೆ ಮೊಳಕೆಯೊಡೆದ ಬೀಜ ಇನ್ನೇನೂ ಚಿಗುರಬೇಕು ಎನ್ನುವಾಗಲೇ ಒಣಗಿ ಹೋಗ್ತಿದೆ. ರೈತರು ಮಳೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ಇದೀಗ ರೈತರ ಸಮಸ್ಯೆ ಬಗೆಹರಿಸಲು ಹಾವೇರಿಯ ವಿವಿಧ ಕ್ಷೇತ್ರಗಳ ಶಾಸಕರು ಮುಂದಾಗಿದ್ದಾರೆ. ಮಂಗಳವಾರದಿಂದಲೇ ಮೋಡ ಬಿತ್ತನೆ ನಡೆಯಲಿದೆ. ಹಾವೇರಿ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ. ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಕೃಷಿಯೇ ಪ್ರಧಾನವಾಗಿದೆ. …
Read More »ಮಲೆನಾಡಿನಲ್ಲಿ ಮಳೆಯ ಕೊರತೆ – ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಗಿಲ್ಲ ಭದ್ರಾ ಡ್ಯಾಂ ನೀರು!
ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ 1.05 ಹೆಕ್ಟೇರ್ ಪ್ರದೇಶದ ರೈತರಿಗೆ ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದೆ. ಪ್ರಸ್ತುತ ಸನ್ನಿವೇಶದಲ್ಲಿ ಈ ಬಾರಿ ಮುಂಗಾರು ಹಂಗಾಮಿಗೆ ಸತತವಾಗಿ ನಾಲೆಗಳ ಮೂಲಕ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಹಲವು ವರ್ಷಗಳಿಂದ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆ ಬೆಳೆದು ಸಂತೃಪ್ತರಾಗಿದ್ದರು ಆದರೆ, ಈ ವರ್ಷ ಭತ್ತದ ಬೆಳೆಗೆ ಅಗತ್ಯವಿರುವ …
Read More »ಬೈಕ್ ಸಮೇತ ಸುಟ್ಟು ಕರಕಲಾಗಿದ್ದ ಯುವಕನ ಗುರುತು ಪತ್ತೆ
ಬೆಂಗಳೂರು: ಆನೇಕಲ್ನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೈಕ್ ಜೊತೆಗೆ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಯುವಕನ ಗುರುತು ಪತ್ತೆಯಾಗಿದೆ. ಮೃತನನ್ನು ಆಂಧ್ರಪ್ರದೇಶದ ಗುಂಟೂರು ಮೂಲದ 26 ವರ್ಷದ ವಂಶಿಕೃಷ್ಣ ಎಂದು ಗುರುತಿಸಲಾಗಿದೆ. ಈ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ಸಂಜೆ ಬಿಕ್ಕನಹಳ್ಳಿ ರಸ್ತೆಯ ಬಳಿ ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು …
Read More »ಕೈಕೊಟ್ಟ ಮಳೆ – ಪೂರ್ವ ಮುಂಗಾರು ನಂಬಿ ಬಿತ್ತನೆ ಮಾಡಿದ್ದ ಬೆಳೆ ಉಳಿಸಿಕೊಳ್ಳಲು ರೈತರ ಪರದಾಟ
ಬಳ್ಳಾರಿ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯನಗರ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೂರ್ವ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ಬೆಳೆ ಇದೀಗ ಒಣಗಲಾರಂಭಿಸಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಮಳೆ ಬರದ ಕಾರಣ ಬೆಳೆ ಒಣಗದಂತೆ ಕಾಪಾಡಲು ರೈತರು ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದ ಬೆಳೆ ಕೈತಪ್ಪುವ ಆತಂಕದಲ್ಲಿ ಅನ್ನದಾತರು ದಿನ ಕಳೆಯುತ್ತಿದ್ದಾರೆ. ವಿಜಯನಗರ ಜಿಲ್ಲೆಯ …
Read More »ಟೀ ಕುಡಿಯುವಾಗಲೇ ಕುಸಿದುಬಿದ್ದು ಟ್ರಕ್ ಚಾಲಕ ದುರ್ಮರಣ
ಹಾಸನ: ಟೀ ಕುಡಿಯುವಾಗಲೇ ಟ್ರಕ್ ಚಾಲಕನೊಬ್ಬ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಕಲೇಶಪುರದ ಬಾಳುಪೇಟೆಯಲ್ಲಿ ನಡೆದಿದೆ. ಉತ್ತರಪ್ರದೇಶದ ಬರೇಲಿ ಮೂಲದ ಅಮರ್ ಸಿಂಗ್ ಪೈ (50) ಸಾವನ್ನಪ್ಪಿದ ಟ್ರಕ್ ಚಾಲಕ. ಟ್ರಕ್ ಮಂಗಳೂರು ಕಡೆಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಟೀ ಕುಡಿಯಲು ಚಾಲಕ ಟ್ರಕ್ ನಿಲ್ಲಿಸಿದ್ದರು. ಈ ವೇಳೆ ಟೀ ಕುಡಿಯುವಾಗಲೇ ಕುಸಿದುಬಿದ್ದು ಅವರು ಸಾವನ್ನಪ್ಪಿದ್ದಾರೆ. ಅಮರ್ ಸಿಂಗ್ ಕುಸಿದು ಬೀಳುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಅವರು …
Read More »ಸಿಎಂ ತಮ್ಮ ಮನೆಗೆ ಡಿಸಿ ಕರೆಸಿ ಎಸ್ಐಆರ್ ನಡೆಸಿದ್ರಲ್ಲ, ಅದೇ ಅಕ್ರಮದ ಮೊದಲ ಪೂಜೆ: ಹೆಚ್ಡಿಕೆ
ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಕಾಂಗ್ರೆಸ್ ಸರ್ಕಾರ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅಕ್ರಮಗಳ ವಿರುದ್ಧ ಚುನಾವಣಾ ಆಯೋಗಕ್ಕೆ ವಿಡಿಯೋ ಸಾಕ್ಷ್ಯ ಹಾಗೂ ದಾಖಲೆ ಸಮೇತ ದೂರು ನೀಡುವುದಾಗಿ ತಿಳಿಸಿದ್ದಾರೆ. ಅಕ್ರಮವಾಗಿ ಹೆಸರು ಸೇರ್ಪಡೆ ರಾಜ್ಯದ ಹಲವು ಭಾಗಗಳಿಂದ ತಮಗೆ ಅಕ್ರಮದ ಬಗ್ಗೆ ಮಾಹಿತಿ …
Read More »ಮನೆಗೆ ನುಗ್ಗಿ ಯುವತಿಗೆ ಚಾಕು ಇರಿತ – ಮೂವರು ಅರೆಸ್ಟ್, ಪ್ರಮುಖ ಆರೋಪಿಗಳಿಗಾಗಿ ಶೋಧ
ಚಿಕ್ಕಬಳ್ಳಾಪುರ: ಯುವತಿಯೊಬ್ಬಳ ಮನೆಗೆ ನುಗ್ಗಿ ಆಕೆಗೆ ಚಾಕು ಇರಿದಿದ್ದ ಮೂವರು ದುಷ್ಕರ್ಮಿಗಳನ್ನು ಚಿಂತಾಮಣಿ ನಗರ ಪೊಲೀಸರುಬಂಧಿಸಿದ್ದಾರೆ. ಲಕ್ಷ್ಮೀ, ಮಂಜುನಾಥ ಹಾಗೂ ಜಬಿವುಲ್ಲಾ ಬಂಧಿತ ಆರೋಪಿಗಳು. ಪ್ರಮುಖ ಆರೋಪಿಗಳಾದ ಕಾರ್ತಿಕ್ ಹಾಗೂ ವಿನೋದ್ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಚಿಂತಾಮಣಿ ನಗರದ ಆಶ್ರಯ ಬಡಾವಣೆಯಲ್ಲಿ ಮೇಘನಾ ಎಂಬ ಯುವತಿಗೆ ಆರೋಪಿಗಳು ಚುಡಾಯಿಸಿದ್ದರು. ಈ ವೇಳೆ ಸಿಟ್ಟಿಗೆದ್ದ ಯುವತಿ ಆರೋಪಿಗಳ ಕೆನ್ನೆಗೆ ಬಾರಿಸಿದ್ದಳು. ಇದೇ ಕಾರಣಕ್ಕೆ ಆರೋಪಿಗಳು, ಯುವತಿಯ ಮನೆಗೆ …
Read More »ದೆಹಲಿಯಲ್ಲಿ ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್ನಲ್ಲೇ ಪ್ರೆಸ್ಮೀಟ್ ಮಾಡ್ತೀನಿ: ನಿಖಿಲ್ ಕಿಡಿ
ರಾಮನಗರ: ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ದೆಹಲಿಯಲ್ಲಿ ಕುಳಿತು ವೋಟ್ ಚೋರಿ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಬಂದು ನೋಡಲಿ. ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್ನಲ್ಲೇ ಪ್ರೆಸ್ಮೀಟ್ ಮಾಡುತ್ತೇನೆ ಎಂದು ಸವಾಲು ಹಾಕಿದರು. ಮೂರು ದಿನಗಳ ಹಿಂದೆ ನಮ್ಮ ಬಿಎಲ್ಎ-2 ಗಳನ್ನು ಕರೆಸಿ …
Read More »
Laxmi News 24×7