Breaking News

ಎಸ್‌ಐಆರ್ ಪ್ರಕ್ರಿಯೆಗೆ ಮರಾಠಿ ನಮೂನೆಗಳನ್ನೇ ಬಳಸಬೇಕು: ಕೊಂಕು ತೆಗೆದ ಎಂಇಎಸ್

ಬೆಳಗಾವಿ : ಜಿಲ್ಲೆಯ ಮರಾಠಿ ಭಾಷಿಕ ಪ್ರದೇಶಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಮರಾಠಿ ನಮೂನೆಗಳನ್ನೇ ಬಳಸಬೇಕು. ಮರಾಠಿ ಪ್ರತಿಗಳು ಲಭ್ಯವಾಗುವವರೆಗೂ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಎಂಇಎಸ್ ಸರ್ಕಾರ ಹಾಗೂ ಚುನಾವಣಾ ಆಯೋಗವನ್ನು  ಆಗ್ರಹಿಸಿದೆ. ಈ ಸಂಬಂಧ ಶುಕ್ರವಾರ ಮಹಾನಗರ ಪಾಲಿಕೆ ಎದುರು ಪ್ರತಿಭಟಿಸಿದ ಪಾಲಿಕೆಯ ಎಂಇಎಸ್ ಹಾಲಿ ಮತ್ತು ಮಾಜಿ ಸದಸ್ಯರು ಮತ್ತು ಮುಖಂಡರು, ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ದಕ್ಷಿಣ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಅನೇಕ ಕಡೆಗಳಲ್ಲಿ …

Read More »

ಸಹಕಾರ ಕ್ಷೇತ್ರದಿಂದ ಗುಣಮಟ್ಟದ ಸೇವೆ

ಸದೃಢ ಸಮಾಜ ನಿರ್ಮಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಗ್ರಾಮೀಣ ಪ್ರದೇಶದ ನಾಗರಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆರೋಗ್ಯ ಸೌಲಭ್ಯ ಒದಗಿಸುವಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮುಖ್ಯವಾಗಿದೆ ಎಂದು ಯುವ ನಾಯಕ ಉತ್ತಮ ಪಾಟೀಲ ಹೇಳಿದರು. ಪಟ್ಟಣದಲ್ಲಿ ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಗೊಂಡು 5 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಡಿಸಿಸಿ ಬ್ಯಾಂಕ್, ಅರಿಹಂತ ಉದ್ಯೋಗ ಸಮೂಹ, ಲಠ್ಠೆ ಶಿಕ್ಷಣ ಸಂಸ್ಥೆ, ಆಚಾರ್ಯ ದೇಶಭೂಷಣ ಆಯುರ್ವೇದ ಕಾಲೇಜು ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ …

Read More »

ಮಾದಕ ವ್ಯಸನದಿಂದ ದೂರವಿರಿ

ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಉಂಟುಮಾಡುವುದರ ಜತೆಗೆ ಅಪರಾಧ ಚಟುವಟಿಕೆಗಳಿಗೆ ದಾರಿಮಾಡಿಕೊಡುತ್ತದೆ ಎಂದು ರಾಮದುರ್ಗ ಉಪವಿಭಾಗದ ಡಿವೈಎಸ್ಪಿ ಚಿದಂಬರ ಮಡಿವಾಳರ ಹೇಳಿದರು. ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಮುರಗೋಡ ಪೊಲೀಸ್ ಆಶ್ರಯದಲ್ಲಿ ಶುಕ್ರವಾರ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರೋಧಿ ಜಾಗತಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಾರ್ವಜನಿಕರು, …

Read More »

ಮೂವರು ಅಪ್ರಾಪ್ತ ಮಕ್ಕಳಿಗೆ ವಿಷವಿಕ್ಕಿ ಮತ್ತು ಕತ್ತು ಹಿಸುಕಿ ಕೊಲೆ: ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ಚಂಡೀಗಢ: ಮಹಿಳೆಯೊಬ್ಬರು ತನ್ನ ಮೂವರು ಅಪ್ರಾಪ್ತ ಮಕ್ಕಳಿಗೆ ವಿಷವಿಕ್ಕಿ ಮತ್ತು ಕತ್ತು ಹಿಸುಕಿ ಕೊಂದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​ನ ಮಾನ್ಸಾ ಜಿಲ್ಲೆಯಲ್ಲಿ ನಡೆದಿದೆ ಎಂದು ಶುಕ್ರವಾರ(ಜು. 03) ವರದಿಯಾಗಿದೆ. ಗುರುವಾರ ಸಂಜೆ ಸಮಯದಲ್ಲಿ ಮಾನ್ಸಾದಲ್ಲಿ ಈ ಘಟನೆ ನಡೆದಿದೆ. ಬಾಡಿಗೆ ಮನೆಯ ನಿವಾಸಿಯಾಗಿದ್ದ 36 ವರ್ಷದ ಸಂದೀಪ್ ಕೌರ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅದಕ್ಕೂ ಮೊದಲು ತಮ್ಮ 12 ವರ್ಷದ ಹಿರಿಯ ಮಗಳು ಖುಷ್‌ಪ್ರೀತ್‌ಗೆ …

Read More »

ಬೆಳಗಾವಿಯ ಜಲಪಾತಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಲಯ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಜಲಪಾತಗಳಿಗೆ ಸಾರ್ವಜನಿಕರು ಭೇಟಿ ನೀಡುತ್ತಿರುವುದು ಕಂಡು ಬಂದಿದೆ. ಹೀಗಾಗಿ, ಅರಣ್ಯ ಪ್ರದೇಶದಲ್ಲಿ ಮತ್ತು ಬೆಳಗಾವಿ ಜಲಪಾತಗಳಿಗೆ ಸದ್ಯ ಸಾರ್ವಜನಿಕರ ಪ್ರವೇಶದ ನಿರ್ಭಂದವಿರುತ್ತದೆ. ಅರಣ್ಯ ಪ್ರದೇಶದ ಆಯಕಟ್ಟಿನ ಪ್ರದೇಶಗಳಲ್ಲಿ ಇಲಾಖಾ ಸಿಬ್ಬಂದಿಗಳನ್ನು ಸಾರ್ವಜನಿಕರ …

Read More »

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಹೆರಾಯಿನ್ ಸಾಗಿಸುತ್ತಿದ್ದ ಇಬ್ಬರ ಬಂಧನ

ಬೆಳಗಾವಿ: ಬೆಳಗಾವಿಯ ಸಿಸಿಬಿ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಳಗಾವಿ ನಗರದ ಕಂಗ್ರಾಳಿ ಕೆ ಹೆಚ್ ಗ್ರಾಮದ ಗಜಾನನ ಪಾಟೀಲ್ ಹಾಗೂ ರಾಮದೇವ ಗಲ್ಲಿಯ ವಿನಾಯಕ ಖಂಡಾಳೆ ಬಂಧಿತರು ಎಂದು ಗುರುತಿಸಲಾಗಿದೆ. ಆರೋಪಿಗಳಿಬ್ಬರು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಹಣ್ಣಿನ ಮಾರುಕಟ್ಟೆಯ ಕಾಂಪ್ಲೇಕ್ಸ್ ಬಳಿ ಹೆರಾಯಿನ್ ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ …

Read More »

ಮಳೆಗೆ ರಸ್ತೆಗೆ ಬಿದ್ದ ಮರಗಳು: ಪಾಲಿಕೆ ಸಿಬ್ಬಂದಿಯಿಂದ ತುರ್ತು ತೆರವು

ಬೆಳಗಾವಿ : ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು ಗಾಳಿ ಮಳೆಯ ರಭಸಕ್ಕೆ ನಗರದ ಹಲವು ಪ್ರದೇಶಗಳಲ್ಲಿ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಇದರಿಂದಾಗಿ ಕುಮಾರಸ್ವಾಮಿ ಬಡಾವಣೆ ಸೇರಿದಂತೆ ವಿವಿಧೆಡೆ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಯಿತು. ಸುದ್ದಿ ತಿಳಿದ ತಕ್ಷಣವೇ ಮಹಾನಗರ ಪಾಲಿಕೆಯ ವಿಪತ್ತು ನಿರ್ವಹಣಾ ಸಿಬ್ಬಂದಿಯ ತಂಡ ಸ್ಥಳಕ್ಕೆ ಆಗಮಿಸಿತು. ಪಾಲಿಕೆಯ ಪರಿಸರ ವಿಭಾಗದ ಅಭಿಯಂತರ ಹಣಮಂತ ಕಲಾದಗಿ ಅವರ ನೇತೃತ್ವದಲ್ಲಿ ಸಿಬ್ಬಂದಿಯು ತುರ್ತು ಕಾರ್ಯಾಚರಣೆ ನಡೆಸಿ ಯಂತ್ರೋಪಕರಣಗಳ …

Read More »

ಎಸ್ಐಆರ್: ಕಡ್ಡಾಯವಾಗಿ ಅವಧಿಯೊಳಗೆ ನಮೂನೆ ಹಿಂತಿರುಗಿಸಿ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ

ಬೆಳಗಾವಿ : ಮತಗಟ್ಟೆ ಅಧಿಕಾರಿಗಳು (ಬಿಎಲ್ಓ) ಈಗಾಗಲೇ  ಮನೆ ಮನೆಗೆ ತೆರಳಿ ಗಣತಿ ನಮೂನೆ ನೀಡುತ್ತಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನು ಸರಿಯಾದ ಮಾಹಿತಿ  ಭರ್ತಿ ಮಾಡಿ ಅವಧಿಯೊಳಗೆ ಅದನ್ನು ಹಿಂತಿರುಗಿಸುವುದು ಕಡ್ಡಾಯವಾಗಿದೆ ಎಂದು ಪಾಲಿಕೆ ಆಯುಕ್ತರು ಹಾಗೂ ಚುನಾವಣಾ ಅಧಿಕಾರಿಗಳಾಗಿರುವ ಕಾರ್ತಿಕ್ ಎಂ. ಅವರು ತಿಳಿಸಿದ್ದಾರೆ. ಶುಕ್ರವಾರ ಈ ಕುರಿತು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಮಾಹಿತಿ ನೀಡಿ ಮಾತನಾಡಿದ ಅವರು, ಚುನಾವಣಾ ಆಯೋಗದ ಆದೇಶ ಮತ್ತು ನಡಾವಳಿಗಳ ಪ್ರಕಾರ ಪಾಲಿಕೆಯ ವ್ಯಾಪ್ತಿಯಲ್ಲಿ …

Read More »

ಹುಸಿ ಬಾಂಬ್ ಕರೆಗಳು, ಇಮೇಲ್ ಪತ್ತೆ ಹಚ್ಚೋದು ಕಷ್ಟ- ಪ್ರಿಯಾಂಕ್ ಖರ್ಗೆ

ಬೆಂಗಳೂರು : ಹುಸಿ ಬಾಂಬ್ ಕರೆಗಳು , ಇಮೇಲ್‌ಗಳನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ತಿಳಿಸಿದ್ದಾರೆ. ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಗಾಗ ಇಂತಹ ಹುಸಿ ಬೆದರಿಕೆಗಳು ಬರುತ್ತದೆ. ವಿಮಾನ ನಿಲ್ದಾಣ ಇರಬಹುದು, ಥರ್ಮಲ್ ಪವರ್ ಪ್ಲ್ಯಾಂಟ್ ಇರಬಹುದು.‌ ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ ಎಂದರು. …

Read More »

ಮೌಲ್ವಿಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಬಂಧನ

ಹಾಸನ: ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪದ ಮೇಲೆ ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿಯವರನ್ನು  ಕುಮಾರಸ್ವಾಮಿ ಲೇಔಟ್ ಪೊಲೀಸರು  ಬಂಧಿಸಿದ್ದಾರೆ. ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆ ಎಂದು ಅಬ್ದುಲ್ ರಜಾಕ್ ಎಂಬವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ, ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ಅವರ ನಿವಾಸದ ಮೇಲೆ ಪೊಲೀಸರು ದಾಳಿ ಮಾಡಿ, ಬಂಧಿಸಿ ಕರೆದೊಯ್ದಿದ್ದಾರೆ. ಬಂಧನದ ವೇಳೆ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ. ನನಗೆ ಜೀವ ಬೆದರಿಕೆ ಇದೆ, …

Read More »