Breaking News

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಮೊಬೈಲ್ ರಿಪೇರಿ, ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಹೊಲಿಗೆಯಂತ್ರ ವಿತರಣೆ, ಕುಶಲಕರ್ಮಿಗಳಿಗೆ ಬ್ಯಾಂಕ್ ಸಾಲದ ಮೇಲೆ ವಿಧಿಸುವ ಬಡ್ತಿ ಮೊತ್ತದ ಮೇಲೆ ಬಡ್ಡಿ ಸಹಾಯಧನ ಹಾಗೂ ಟೈಲರಿಂಗ್, ಹ್ಯಾಂಡ್ ಎಂಬ್ರಾಯಡರಿ, ಡೊಮೆಸ್ಟಿಕ್ ಎಲಕ್ಟ್ರಿಷಿಯನ್, ಮೋಟಾರ್ ರೀವೈಂಡಿಂಗ್, ಮೊಬೈಲ್ ರಿಪೇರಿ, ಬ್ಯೂಟಿ ಥೆರಪಿಸ್ಟ್, ಕಂಪ್ಯೂಟರ್, ಎಫ್.ಟಿ.ಸಿ.ಪಿ. ತರಬೇತಿ ನೀಡಿ ಉಚಿತವಾಗಿ 5,000 ರೂ. ಮೌಲ್ಯದ ಉಪಕರಣಗಳ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಗ್ರಾಮೀಣ ಅಭ್ಯರ್ಥಿಗಳು ಆಕ್ಟೋಬರ್ 24 ರೊಳಗೆ davanagere.nic.in ವೆಬ್‍ಸೈಟ್ ಮೂಲಕ ಅರ್ಜಿ …

Read More »

70,000 ಮಂದಿಗೆ ಬಿಸಿಯೂಟ ಸಿದ್ಧಪಡಿಸುವ ಅಡುಗೆ ಮನೆಗೆ ಚಾಲನೆ, ಎಲ್ಲಿ?

ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಲು ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ಚಿಕ್ಕಜಾಲದಲ್ಲಿ ಹೊಸ ಅಡುಗೆ ಮನೆ ಇಂದು ಉದ್ಘಾಟನೆಗೊಂಡಿದೆ. ಅಕ್ಷಯ ಪಾತ್ರ ಫೌಂಡೇಶನ್ ಹಾಗೂ ರಾಜ್ಯ ಸರ್ಕಾರ ಸಹಯೋಗದಲ್ಲಿ ನಿರ್ಮಿಸಿರುವ ಈ ವಿಶಾಲ ಹಾಗೂ ಸುಸಜ್ಜಿತ ಅಡುಗೆ ಮನೆಗೆ ಸಚಿವ ಕೃಷ್ಣಬೈರೇಗೌಡ ಅವರು ಚಾಲನೆ ನೀಡಿದರು. ಇದು ಅಕ್ಷಯ ಪಾತ್ರ ಫೌಂಡೇಷನ್ ಆರಂಭಿಸಿರುವ 75ನೇ ಅಡಿಗೆ ಮನೆ. ಈ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣಬೈರೇಗೌಡ, ಇದೀಗ ಬ್ಯಾಟರಾಯನಪುರ ಕ್ಷೇತ್ರದಲ್ಲಿ …

Read More »

ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆಸಿಎಂ ಕುರಿತು ಶೆಟ್ಟರ್‌ ಮಾತು

ಹುಬ್ಬಳ್ಳಿ: ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು.‌ ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು. ಸಿಎಂ ದಸರಾ ಉದ್ಘಾಟನೆ ವಿಚಾರವಾಗಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎನ್ನುವ, ನೈತಿಕತೆ ಬಗ್ಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯನವರು ಇನ್ನು ಮೇಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಕುಟುಕಿದರು.   ಯಡಿಯೂರಪ್ಪನವರ ಮೇಲೆ ಎಫ್‌ಐಆರ್ ಆದಾಗ ಏನು ಮಾತನಾಡಿದ್ದರು. ಪ್ರಕರಣದ …

Read More »

ಮಹಿಳಾ ಟಿ20 ವಿಶ್ವಕಪ್; ಅಕ್ಟೋಬರ್ 4ರಂದು ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿ

ಪುರುಷರ ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಸಂಭ್ರಮಿಸಿದ್ದು, ಇದೀಗ ಮಹಿಳಾ ಟಿ20 ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದೆ. ಇದೆ ಅಕ್ಟೋಬರ್ ಮೂರರಂದು ಮಹಿಳಾ ಟಿ20 ವಿಶ್ವಕಪ್ ಪ್ರಾರಂಭವಾಗಲಿದ್ದು, ಅಕ್ಟೋಬರ್ 4ಕ್ಕೆ ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಗೆ ಮಹಿಳೆಯರೇ ರೆಫ್ರಿ-ಅಂಪೈರ್ಸ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.ಮಹಿಳಾ ಭಾರತ ತಂಡ; ಹರ್ಮನ್‌ಪ್ರೀತ್ ಕೌರ್ [ನಾಯಕಿ], ಯಾಸ್ತಿಕಾ ಭಾಟಿಯಾ , ಪೂಜಾ ವಸ್ತ್ರಾಕರ್, ಅರುಂಧತಿ …

Read More »

ಮುಡಾ’ ಹಗರಣದಲ್ಲಿ CM ಸಿದ್ದರಾಮಯ್ಯ ವಿರುದ್ಧ ‘ED’ ಪ್ರಕರಣ ದಾಖಲು ಸಾಧ್ಯತೆ : ವರದಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಕಳೆದ ವಾರ ದಾಖಲಿಸಿರುವ ಎಫ್‌ಐಆರ್ ದಾಖಲಿಸಿದ್ದಾರೆ.   ವರದಿಯ ಪ್ರಕಾರ, ಕೇಂದ್ರ ಸಂಸ್ಥೆ ತನ್ನ …

Read More »

ಡಿಸೆಂಬರ್ ನಲ್ಲಿ ಸಿದ್ದರಾಮಯ್ಯರನ್ನು ಕಾಂಗ್ರೆಸ್ ನವರೇ ಕೆಳಗಿಳಿಸುತ್ತಾರೆ : ಶಾಸಕ ಸುರೇಶ್ ಗೌಡ ಭವಿಷ್ಯ!

ತುಮಕೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಂದಿನಿಂದ ಲೋಕಾಯುಕ್ತ ಅಧಿಕಾರಿಗಳು ತಮ್ಮ ನಾಲ್ಕು ತಂಡಗಳ ಜೊತೆಗೆ ತನಿಖೆಯನ್ನು ಆರಂಭಿಸಿವೆ. ಇದರ ಬೆನ್ನಲ್ಲೇ ಬಿಜೆಪಿಯ ಶಾಸಕ ಸುರೇಶ್ ಗೌಡ ಡಿಸೆಂಬರ್ ನಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನವರೇ ಸಿಎಂ ಸ್ಥಾನದಿಂದ ಕೆಳಗಿಳಿಸಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.   ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಡಿಸೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಇಳಿಸುತ್ತಾರೆ. ಕಾಂಗ್ರೆಸ್ ನವರೇ ಸಿದ್ದರಾಮಯ್ಯ ಅವರನ್ನು …

Read More »

ಪಾಲಿಕೆ ಆವರಣದಲ್ಲಿ ವಡ್ಡರ ಯಲ್ಲಣ್ಣ ಪ್ರತಿಮೆ ಸ್ಥಾಪಿಸಲು ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ‌ ಪಾಲಿಕೆ ಆವರಣದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ವಡ್ಡರ ಯಲ್ಲಣ್ಣ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ರಾಜ್ಯ ಭೋವಿ(ವಡ್ಡರ) ಮಹಾಸಭಾ ಸಂಘಟನೆ ಸದಸ್ಯರು ಸೋಮವಾರ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.   ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಭೋಜಗಾರ ಮತ್ತು ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಲಲಿತಾ ಭೋಜಗಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮೇಯರ್ ರಾಮಪ್ಪ ಬಡಿಗೇರ ಮತ್ತು ಆಯುಕ್ತ ಈಶ್ವರ ಉಳ್ಳಾಗಡ್ಡಿ …

Read More »

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಮೊಬೈಲ್ ಆಯಪ್ ಗಳಲ್ಲಿ ವಿವರ ಅಪ್ ಲೋಡ್ ಮಾಡುವಂತೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿದ್ದಾರೆ. ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್, ಡೇಟಾ ನೀಡಬೇಕು. ಮೇಜು, ಕುರ್ಚಿ, ಅಲ್ಮೆರಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಸಬಾ …

Read More »

500 ರೂ.ನೋಟಿನಲ್ಲಿ ಗಾಂಧೀಜಿ ಬದಲು ‘ಅನುಪಮ್ ಖೇರ್’ ಫೋಟೋ ; 1.60 ಕೋಟಿ ಮೌಲ್ಯದ ನಕಲಿ ನೋಟು ಜಪ್ತಿ..!

500 ರೂ.ಗಳ ಹೊಸ ಕರೆನ್ಸಿ ನೋಟುಗಳು ಅಸ್ತಿತ್ವಕ್ಕೆ ಬಂದು ಸುಮಾರು ಎಂಟು ವರ್ಷಗಳಾಗಿವೆ. ಹೊಸ ಕರೆನ್ಸಿ ನೋಟುಗಳನ್ನು ಪರಿಚಯಿಸಿದಾಗ, ನಕಲಿ ಕರೆನ್ಸಿ ನೋಟುಗಳನ್ನು ವ್ಯವಸ್ಥೆಯಿಂದ ತೆಗೆದುಹಾಕಲಾಯಿತು. ಈಗ, ನಕಲಿ ಕರೆನ್ಸಿ ನೋಟುಗಳು ಮತ್ತೆ ಭಾರತದ ಮೂಲೆ ಮೂಲೆಗಳಿಗೆ ತಲುಪುತ್ತಿವೆ. ಗುಜರಾತ್ ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 1.60 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ನಕಲಿ ನೋಟುಗಳಲ್ಲಿ ಮಹಾತ್ಮ ಗಾಂಧಿ ಬದಲಿಗೆ ನಟ ಅನುಪಮ್ ಖೇರ್ ಅವರ ಮುಖವಿತ್ತು. ಪೊಲೀಸ್ …

Read More »

ಮಹಾರಾಷ್ಟ್ರ: ಗುಡ್ಡಾಪುರದಲ್ಲಿ ಹೊರನಾಡ ಕನ್ನಡಿಗರ ಸಮಾವೇಶಕ್ಕೆ ಚಾಲನೆ

ಗುಡ್ಡಾಪುರ (ಮಹಾರಾಷ್ಟ್ರ): ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜಯಪುರ ಜಿಲ್ಲಾಡಳಿತದ ಸಹಯೋಗದೊಂದಿಗೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕಿನ ಗುಡ್ಡಾಪುರ ಶ್ರೀ ದಾನಮ್ಮ ದೇವಿ ಸುಕ್ಷೇತ್ರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಆಯೋಜಿಸಿರುವ ಹೊರನಾಡ ಕನ್ನಡಿಗರ ಸಮಾವೇಶ ಹಾಗೂ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸೋಮವಾರ ಅದ್ಧೂರಿ ಚಾಲನೆ ಲಭಿಸಿತು.   ದಾನಮ್ಮ ದೇವಿ ದೇವಸ್ಥಾನದ ಆವರಣದಿಂದ ಕರ್ನಾಟಕ ಭವನದ …

Read More »