ಬೆಂಗಳೂರು : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಮಹಾಂತೇಶ ಶಿರೂರು ಜಾಮೀನು ಅರ್ಜಿ ಸಲ್ಲಿಸಿದ್ದ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಗೊಳಿಸಿತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರು ಆರೋಪಿಯ ಅರ್ಜಿ ವಜಾಗೊಳಿಸಿ ಅದೇಶಿಸಿದ್ದಾರೆ.ಹಳೆಯ ದ್ವೇಷದಿಂದ ಅರ್ಜಿದಾರ ಆರೋಪಿ ಚಂದ್ರಶೇಖರ ಗುರೂಜಿಯನ್ನು ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿರುವ ರೀತಿ ನೋಡಿದರೆ, ಗುರೂಜಿ ಮೇಲೆ ಆರೋಪಿ …
Read More »ಕಲಘಟಗಿ | ಬಿಡಾಡಿ ದನ, ನಾಯಿಗಳ ಹಾವಳಿ ಹೆಚ್ಚಳ
ಕಲಘಟಗಿ: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ತೊದರೆಯಾಗುತ್ತಿದೆ. ಪಟ್ಟಣದ ವ್ಯಾಪ್ತಿಯಲ್ಲಿ 17 ವಾರ್ಡ್ಗಳಿವೆ. ಗಾಂಧಿನಗರ, ಮಾರುಕಟ್ಟೆ, ಬಸ್ ನಿಲ್ದಾಣ, ಎಪಿಎಂಸಿ, ಆಂಜನೇಯ ವೃತ್ತ, ಜೋಳದ ಓಣಿ, ಯುವ ಶಕ್ತಿ ವೃತ್ತ ಸೇರಿದಂತೆ ಕೆಲವು ಸರ್ಕಾರಿ ಕಚೇರಿ ಆವರಣದಲ್ಲಿ ಬೀದಿ ನಾಯಿಗಳು ಹಾಗೂ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದೆ. ರಸ್ತೆ ಮಧ್ಯೆ ದನಗಳು ಸದಾ ಮಲಗಿರುತ್ತವೆ. ಹೀಗಾಗಿ ವಾಹನ ಸಂಚಾರಕ್ಕೆ …
Read More »ಹುಬ್ಬಳ್ಳಿ | ನೈರುತ್ಯ ರೈಲ್ವೆ: ಜುಲೈನಲ್ಲಿ ₹ 286.28 ಕೋಟಿ ಆದಾಯ
ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಕಳೆದ ಜುಲೈ ತಿಂಗಳಲ್ಲಿ ವಿವಿಧ ವಿಭಾಗಗಳಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಪ್ರಯಾಣಿಕರಿಂದ ₹ 286.28 ಕೋಟಿ ಆದಾಯ ಗಳಿಸಿದೆ. ಇದು ಹಿಂದಿನ ವರ್ಷದ ₹ 266.27 ಕೋಟಿಗೆ ಹೋಲಿಸಿದರೆ ಶೇ 7.51 ರಷ್ಟು ಹೆಚ್ಚಳವಾಗಿದೆ. ಪಾರ್ಸಲ್ ಆದಾಯವು ₹ 14.19 ಕೋಟಿಗೆ ತಲುಪಿದ್ದು, ಹಿಂದಿನ ವರ್ಷ ₹ 12.83 ಕೋಟಿ ಗಳಿಸಿತ್ತು. ಶೇ 10.60ರಷ್ಟು ಏರಿಕೆಯಾಗಿದೆ. ಹೆಚ್ಚುವರಿಯಾಗಿ, ಇತರ ಕೋಚಿಂಗ್ ಆದಾಯವು ಕಳೆದ ವರ್ಷದ ₹ …
Read More »ಹೆಚ್ಚು ನೀರು ಬೇಡುವ ಬೆಳೆ: ರೈತ ಕುಟುಂಬಕ್ಕೆ ‘ಸುಗಂಧರಾಜ’ ಆಸರೆ
ಉಪ್ಪಿನಬೆಟಗೇರಿ: ಧಾರವಾಡ ತಾಲ್ಲೂಕಿನ ಕನಕೂರ, ಚಂದನಮಟ್ಟಿ ಹಾಗೂ ತಲವಾಯಿ ಗ್ರಾಮಗಳ ಬಳಿ ಸಾಗಿದರೆ ಸುಗಂಧರಾಜ ಹೂವಿನ ಘಮಲು ಹಿತಾನುಭವ ನೀಡುತ್ತದೆ. ಇಲ್ಲಿನ ರೈತರು ಸುಗಂಧರಾಜ ಹೂವು ಬೆಳೆಯುವ ಮೂಲಕ, ಜೀವನ ನಿರ್ವಹಣೆ ಮಾರ್ಗ ಕಂಡುಕೊಂಡಿದ್ದಾರೆ. ಹತ್ತು ವರ್ಷಗಳಿಂದ ಸುಗಂಧರಾಜ ಹೂವಿನ ಕೃಷಿ ನಡೆಸುತ್ತಿರುವ ರೈತರು, ಈ ಭಾಗದ ಪುಷ್ಪಕೃಷಿಗೆ ಹೊಸ ಆಯಾಮ ನೀಡಿದ್ದಾರೆ. ಜಮೀನಿನ ಫಲವತ್ತತೆ ಕಾಪಾಡಲು ಸಗಣಿ ಗೊಬ್ಬರ ಬಳಸುತ್ತಾರೆ. ಇದರಿಂದ ಬೆಳೆ ಸಮೃದ್ಧವಾಗಿ, ಗಿಡದ ತುಂಬ ಹೂವು …
Read More »ಮಹಾರಾಷ್ಟ್ರದ ಗುಡ್ಡಾಪುರದಲ್ಲಿ ‘ಕರ್ನಾಟಕ ಭವನ’ ಲೋಕಾರ್ಪಣೆ
ಗುಡ್ಡಾಪುರ (ಮಹಾರಾಷ್ಟ್ರ): ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಗುಡ್ಡಾಪುರದಲ್ಲಿ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ₹10.96 ಕೋಟಿ ಅನುದಾನದಲ್ಲಿ ನಿರ್ಮಿಸಲಾಗಿರುವ ‘ಕರ್ನಾಟಕ ಭವನ’ವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. ‘ಕರ್ನಾಟಕ ಭವನ’ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, 12ನೇ ಶತಮಾನದಲ್ಲೇ ಬಸವಣ್ಣ ಮಹಿಳೆಯರಿಗೆ ಆದ್ಯತೆ ನೀಡಿದ್ದರು. ಅಕ್ಕಮಹಾದೇವಿ, ದಾನಮ್ಮ ದೇವಿ ಅವರಲ್ಲಿ ಮುಖ್ಯರಾಗಿದ್ದಾರೆ. ದಾನಮ್ಮ ದೇವಿ …
Read More »ಕರ್ಮ, ಅಕರ್ಮ, ವಿಕರ್ಮದ ಅರಿವಿರಲಿ: ಮೋಹನ್ ಭಾಗವತ್
ಬೆಳಗಾವಿ: ‘ಕರ್ಮ, ಅಕರ್ಮ ಮತ್ತು ವಿಕರ್ಮದ ಬಗ್ಗೆ ನಾವು ಸದಾ ಜಾಗೃತರಾಗಬೇಕು. ಯಾವ ಕರ್ಮ ಮಾಡಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು’ ಎಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು. ಇಲ್ಲಿನ ಅಕಾಡೆಮಿ ಆಫ್ ಕಂಪೇರೆಟಿವ್ ಫಿಲಾಸಫಿ ಆಯಂಡ್ ರಿಲೀಜನ್ (ಎಸಿಪಿಆರ್)ನ ಶತಮಾನೋತ್ಸವಕ್ಕೆ ಚಾಲನೆ ಹಾಗೂ ಗುರುದೇವ ರಾನಡೆ ರಚಿಸಿದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಬದುಕಿನಲ್ಲಿ ಪ್ರತಿಯೊಬ್ಬರಿಗೂ ಜ್ಞಾನ ಮತ್ತು ಭಕ್ತಿ ಅಗತ್ಯ. ರಾಮ ಮತ್ತು ರಾವಣ ಇಬ್ಬರಿಗೂ …
Read More »ಬೆಳಗಾವಿ | ಬೋಟ್ ಪಲ್ಟಿ: ತಪ್ಪಿದ ಅನಾಹುತ
ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್ಡಿಆರ್ಎಫ್ ತಂಡ ಬೋಟ್ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್ ಜಾಕೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ಇಲ್ಲಿರುವ ಜಾಕ್ವೆಲ್ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್ಡಿಆರ್ಎಫ್ ತಂಡದವರು ಬೋಟ್ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್ ನಿಯಂತ್ರಣ …
Read More »ಪ್ಯಾರಿಸ್ ಒಲಿಂಪಕ್ಸ್ನಲ್ಲಿ ಕಂಚು ಗೆದ್ದ ಸ್ವಪ್ನಿಲ್ ಹುಟ್ಟೂರಲ್ಲಿ ಸಂಭ್ರಮ
ನಿಪ್ಪಾಣಿ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕಾಂಬಳವಾಡಿ ಗ್ರಾಮದ ಸ್ವಪ್ನಿಲ್ ಕುಸಾಳೆ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಮೀಟರ್ ರೈಫಲ್-3 ಪೋಜಿಶನ್ನಲ್ಲಿ ಕಂಚಿನ ಪದಕ ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮ ಮೂಡಿದೆ. ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ತಾಲ್ಲೂಕಿನ ಚಿಕ್ಕ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಸ್ವಪ್ನಿಲ್ ಅವರು ಊರಿಗೆ ವಿಶ್ವ ಮಟ್ಟದಲ್ಲಿ ಕೀರ್ತಿ ತಂದಿದ್ದಾರೆ. ‘ಪ್ರಜಾವಾಣಿ’ ಜತೆಗೆ ಸಂತಸ ಹಂಚಿಕೊಂಡ ಸ್ವಪ್ನಿಲ್ ಅವರ ತಂದೆ, ಶಿಕ್ಷಕ ಸುರೇಶ ಕುಸಾಳೆ, ‘ನಾಸಿಕ್ನ ಭೋಸ್ಲಾ ಸೈನಿಕ …
Read More »ಬಂತು ನೋಡಿ ‘BSNL 5 G ಸಿಮ್’ ; ಅನ್ ಬಾಕ್ಸಿಂಗ್ ವಿಡಿಯೋ ವೈರಲ್
ಜಿಯೋ ಹಾಗೂ ಏರ್ ಟೆಲ್ ಗೆ ಟಕ್ಕರ್ ನೀಡಲು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಮುನ್ನುಗ್ಗುತ್ತಿದೆ.ಮುಂಬರುವ ವರ್ಷಗಳಲ್ಲಿ ರಾಷ್ಟ್ರವ್ಯಾಪಿ 5 ಜ ವಿಸ್ತರಿಸಲು ಬಿಎಸ್ ಎನ್ ಸಜ್ಜಾಗಿದೆ. ಇದರ ನಡುವೆ 5 ಜಿ ಸಿಮ್ ಅನ್ ಬಾಕ್ಸಿಂಗ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವರದಿಯ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳ ಗುಂಪು ಬಿಎಸ್ಎನ್ಎಲ್ ಇನ್ಫ್ರಾವನ್ನು ಬಳಸಿಕೊಂಡು ಸಾರ್ವಜನಿಕ ಬಳಕೆಗಾಗಿ 5 ಜಿ ಪ್ರಯೋಗಗಳನ್ನು ನೀಡಲು ಸಿದ್ಧವಾಗಿದೆ. …
Read More »BJP-JDS’ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ:ಗೃಹ ಸಚಿವ
ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಹಗರಣ ಸಂಬಂಧ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಹೌದು ಈ ಮೊದಲು ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದಿದ್ದ ಗೃಹ ಸಚಿವರು ಇದೀಗ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸರ್ಕಾರ ಇದೀಗ ಯೂಟರ್ನ್ ಹೊಡೆದಿದೆ.ಈ ಕುರಿತು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿ …
Read More »
Laxmi News 24×7