Breaking News

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಹಾಸನ: ಧರ್ಮಸ್ಥಳಕ್ಕೆ  ಪಾದಯಾತ್ರೆ  ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ  ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಕೃಷ್ಣ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಹಾಸನ ತಾಲೂಕಿನ, ಜಕ್ಕೇನಹಳ್ಳಿ ಗ್ರಾಮದ ಕೃಷ್ಣ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದರು. ಅವರ ಅಳಿಯ ದಿನೇಶ್ ಹಿಂದೆಯೇ ನಡೆದುಕೊಂಡು ಬರುತ್ತಿದ್ದು, ಬುಧವಾರ ರಾತ್ರಿ ಮೊದಲು ಚೀಕನಹಳ್ಳಿ ಗ್ರಾಮ ತಲುಪಿದ ಕೃಷ್ಣ ಅಳಿಯ ಅಲ್ಲಿಗೆ ಬರುವವರೆಗೂ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದಲ್ಲಿ …

Read More »

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

ಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ  37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 ರಲ್ಲಿ ಕೊಡಗಿನ ಪ್ರಾಕೃತಿಕ ವಿಕೋಪ ಯೋಜನೆ ಅಡಿಯಲ್ಲಿ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರ 180 ಕೋಟಿ ಹಣವನ್ನೂ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಆರ್.ಮಂಜುನಾಥ್ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ  ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಎರಡೂವರೆ ವರ್ಷಗಳಿಂದ ಯಾವುದೇ ಗುತ್ತಿಗೆ ಕೆಲಸಗಳನ್ನೂ ನೀಡುತ್ತಿಲ್ಲ. …

Read More »

ತಾಳಗುಪ್ಪ – ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

ಶಿವಮೊಗ್ಗ: ತಾಳಗುಪ್ಪದಿಂದ ಬೆಂಗಳೂರಿಗೆ  ತೆರಳುತ್ತಿದ್ದ ರೈಲಿನಲ್ಲಿ  ದರೋಡೆಕೋರನೊಬ್ಬ ತಲ್ವಾರ್ ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್​) ಹಳೆ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ (ಫೆ.10) ರಾತ್ರಿ 11 ಗಂಟೆ 50 ನಿಮಿಷಕ್ಕೆ ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲು ತಡವಾಗಿ ಆಗಮಿಸಿತ್ತು. ರೈಲು ವಿದ್ಯಾನಗರದ ಹಳೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಬೋಗಿಯೊಳಗೆ ನುಗ್ಗಿದ ಆಗಂತುಕ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪ್ರಯಾಣಿಕರನ್ನು ಹೆದರಿಸಿದ್ದಾನೆ. …

Read More »

ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ

ಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ ಬುಧವಾರ (ಫೆ.11) ಸಂಜೆ ಹಂಪಿಯ ತುಂಗಭದ್ರಾ ನದಿಯ ದಡದಲ್ಲಿ ಅದ್ಧೂರಿಯಾಗಿ ತುಂಗಭದ್ರಾ (Tunga Bhadra Arati) ಆರತಿ ನೆರೆವೇರಿಸಲಾಯಿತು. ಅರ್ಚಕರು ಸಾಲಾಗಿ ನಿಂತು, ಮಂತ್ರಘೋಷಗಳ ನಡುವೆ ದೊಡ್ಡದಾದ ಕಂಚಿನ ದೀಪಗಳಿಂದ ನದಿಗೆ ಆರತಿ ಬೆಳಗಿದರು. ನದಿಯ ನೀರಿನಲ್ಲಿ ಪ್ರತಿಫಲಿಸುವ ದೀಪದ ಬೆಳಕು, ಮಂತ್ರಗಳ ಪಠಣ ಮತ್ತು ಶಂಖನಾದವು ಭಕ್ತರಲ್ಲಿ ಹಾಗೂ ಪ್ರವಾಸಿಗರಲ್ಲಿ …

Read More »

2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ: ಜಮೀರ್‌

ಬಳ್ಳಾರಿ: ಸಿಎಂ ಪರವಾಗಿ ಯತೀಂದ್ರ  ಬ್ಯಾಟಿಂಗ್‌ ಮಾಡಿದ್ದರು. ಈಗ ಆಪ್ತ ಸಚಿವ ಜಮೀರ್‌ ಅಹ್ಮದ್‌ ಸಿದ್ದರಾಮಯ್ಯ ಪರ‌ ಮತ್ತೆ ಮಾತನಾಡಿದ್ದಾರೆ. 2028ರವರೆಗೆ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌  ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ  ಅವರು ಈಗ ಮುಖ್ಯಮಂತ್ರಿ ಖುರ್ಚಿಯಲ್ಲಿ ಕುಳಿತಿದ್ದಾರೆ. ಅವರ ಸಾರಥ್ಯದಲ್ಲಿ 2028ರ ಚುನಾವಣೆಗೆ ಹೋಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ  ನಮ್ಮದು ಹೈಕಮಾಂಡ್ ಪಕ್ಷ. ಮುಖ್ಯಮಂತ್ರಿ ಬದಲಾವಣೆ …

Read More »

ಜಮಖಂಡಿ ಆಸ್ಪತ್ರೆಗೆ ಡಿಸಿ ಸಂಗಪ್ಪ ದಿಢೀರ್ ಭೇಟಿ: ದೂರು ನೀಡಿದ್ದ ಸಾರ್ವಜನಿಕರ ಸಮ್ಮುಖದಲ್ಲೇ ಅಧಿಕಾರಿಗಳಿಗೆ ತರಾಟೆ!

ಬಾಗಲಕೋಟೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಇಂದು ಜಮಖಂಡಿ ಮತ್ತು ಮುಧೋಳ ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿ ಹಾಗೂ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ಆಪರೇಷನ್ ನಡೆಸಿದ ಡಿಸಿ, ಕರ್ತವ್ಯ ಲೋಪ ಎಸಗುವ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮಖಂಡಿ ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಜಮಖಂಡಿ ಎಸಿ …

Read More »

ದುರ್ಗಂಧದ ಗೂಡಾದ ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ಶಚಾಲಯ

ಬೆಳಗಾವಿಯ ಹೊಸ ನಗರ ಬಸ್ ನಿಲ್ದಾಣ ( CBT ) ಉದ್ಘಾಟನೆಯಾಗಿ ಇನ್ನೂ ಎರಡು ತಿಂಗಳು ಕೂಡ ಆಗಿಲ್ಲಾ, ಅಲ್ಲಿಯ ಶೌಚಾಲಯಗಳ ಪರಿಸ್ಥಿತಿ ನೋಡ್ರಿ. ಇಲ್ಲಿ ಎಲ್ಲೆಂದರಲ್ಲಿ ಕಸ, ನೀರು ಕೂಡ ಸರಿಯಾಗಿ ಇಲ್ಲಾ. ಈ ಶೌಚಾಲಯಗಳ ದುಸ್ಥಿತಿ ಕಂಡು ನಿಜಕ್ಕೂ ಬೇಸರವಾಯ್ತು. ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳು ಈ ಶೌಚಾಲಯಗಳ ಶುಚಿತ್ವಕ್ಕೆ ಆಧ್ಯತೆ ನೀಡಿ.

Read More »

ರಾಹುಲ್‌ ಸದಸ್ಯತ್ವ ರದ್ದುಗೊಳಿಸಿ – ಬಿಜೆಪಿಯಿಂದ ಪ್ರಸ್ತಾಪ ಸಲ್ಲಿಕೆ

ನವದೆಹಲಿ: ಅಮೆರಿಕ ಜೊತೆಗಿನ ವ್ಯಾಪಾರ ಒಪ್ಪಂದ  ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ  ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕೆಂದು ಆಗ್ರಹಿಸಿದೆ. ಸಂಸದ ನಿಶಿಕಾಂತ್‌ ದುಬೆ  ಅವರು, ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ನಾನು ಪ್ರಸ್ತಾವನೆ ಸಲ್ಲಿಸಿದ್ದೇನೆ. ಆಜೀವ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ಒತ್ತಾಯಿಸಿ ಅವರ ವಿರುದ್ಧ ಮಹತ್ವದ ನಿರ್ಣಯ ಮಂಡಿಸಿರುವುದಾಗಿ ಹೇಳಿದ್ದಾರೆ. ಇದು ವಿಶೇಷ ಹಕ್ಕುಚ್ಯುತಿ ನೋಟಿಸ್ ಅಲ್ಲ. ನಾನು …

Read More »

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್‌ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ  ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ 9.7 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಮೇತ ಪ್ರಯಾಣಿಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ಫೆ.7 ರಂದು ಸಹ ಕಸ್ಟಮ್ಸ್ …

Read More »

ಬಜೆಟ್ ಸಭೆ ಬಿಟ್ಟು ನಾಳೆ ಡಿಸಿಎಂ ಡಿಕೆಶಿ ದೆಹಲಿ ಪಯಾಣ!

ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಬೆಳವಣಿಗೆ ಸಂಭವಿಸಿದೆ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದರೆ, ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಮುಖ ಪೂರ್ವಭಾವಿ ಸಭೆ ಕೈಬಿಟ್ಟು ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ನಾಳೆ ನಡೆಯಲಿರುವ ಜಲಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಇಲಾಖೆಗಳ ಮಹತ್ವದ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಗೈರಾಗಲಿದ್ದಾರೆ. ಬೆಳಗ್ಗೆ 9.50ಕ್ಕೆ ಅವರು ದೆಹಲಿಗೆ ತೆರಳುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ನಾಳೆ ರಾತ್ರಿ ದೆಹಲಿಯಲ್ಲೇ …

Read More »